ವಿಷಯಕ್ಕೆ ಹೋಗಿ

ಅಧಿಕಾರಿಗಳ ಅಜಾಗರೂಕತೆಯಿಂದ ಬೇರೊಬ್ಬರ ಖಾತೆಗೆ ರಾಗಿ ಹಣ

ಬಳಸಿಕೊಂಡ ಹಣವನ್ನು ಕೂಡಲೇ ಕಟ್ಟಲು ತಾಕೀತು : ಕಾಲಾವಕಾಶಕ್ಕೆ ರೈತನ ಮೊರೆ
-----------------
          ತನ್ನ ಖಾತೆಯಲ್ಲಿ ಅಧಿಕಾರಿಗಳ ಅಜಾಗರೂಕತೆಯಿಂದ ಹೆಚ್ಚುವರಿಯಾಗಿ ಬಂದಿರುವ ಹಣದ ಬಗ್ಗೆ ಅರಿಯದ ರೈತ ತನ್ನ ಖಾತೆಯಲ್ಲಿನ ಹಣವನ್ನು ಜಮೀನಿನಲ್ಲಿನ ಬೋರ್ ವೆಲ್ ಗೆ ವಿದ್ಯುತ್ ಸಂಪರ್ಕಕ್ಕಾಗಿ ಟಿಸಿ ತರಲು ಬಳಸಿಕೊಂಡಿದ್ದೆ ಆತನಿಗೆ ಉರುಳಾಗಿ ಪರಿಣಮಿಸಿದ್ದು ಹಣ ಹೊಂದಿಸಲು ರೈತ ಪರದಾಡುವಂತಾಗಿದೆ.

       ಹೌದು..ರಾಗಿ ಮಾರಿದ್ದ ರೈತನ ಖಾತೆಗೆ ಆತನ ಹಣವೂ ಸೇರಿ ಬೇರೊಬ್ಬರ ಹಣವೂ ಬಂದಿದ್ದು ಹೆಚ್ಚುವರಿಯಾಗಿ ಖಾತೆಗೆ ಜಮೆಯಾಗಿರುವ ಹಣವನ್ನು ಈ ಕೂಡಲೇ ಕಟ್ಟಬೇಕೆಂದು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳು ರೈತನಿಗೆ ತಾಕೀತು ಮಾಡಿರುವುದಲ್ಲದೆ ರೈತನ ಬ್ಯಾಂಕ್ ಖಾತೆಯನ್ನು ವಹಿವಾಟು ನಡೆಸದಂತೆ ತಡೆಹಿಡಿದಿರುವುದು ಸಮಸ್ಯೆಗೆ ಕಾರಣವಾಗಿದೆ.

ನಡೆದಿದ್ದೇನು: ದೊಡ್ಡಬಿದರೆ ಗ್ರಾಮದ ದೇವರಾಜಪ್ಪ ಎಂಬಾತ ಹುಳಿಯಾರಿನ ರಾಗಿ ಖರೀದಿ ಕೇಂದ್ರದಲ್ಲಿ ೮ ಕ್ವಿಂಟಾಲ್ ರಾಗಿ ಮಾರಾಟ ಮಾಡಿದ್ದು ಈ ಬಾಬ್ತು ಆತನ ಭಾರತೀಯ ಸ್ಟೇಟ್ ಬ್ಯಾಂಕ್ ಖಾತೆಗೆ ಮಾರ್ಚ್ ೨೨ ರಂದು ೧೬೮೦೦ ಹಣ ಜಮೆಯಾಗಿದೆ.ನಂತರ ಏಪ್ರಿಲ್ ೨೯ ರಂದು ಅಧಿಕಾರಿಗಳ ಅಜಾಗರೂಕತೆಯಿಂದಾಗಿ ಪುನಃ ೮ ಕ್ವಿಂಟಾಲ್ ರಾಗಿಯ ಹಣವಾಗಿ ೧೬೮೦೦ ಹಣ ಜಮೆಯಾಗಿದೆ.
ಇತ್ತೀಚೆಗಷ್ಟೆ ದೇವರಾಜಪ್ಪ ತನ್ನ ಜಮೀನಿಗೆ ಕಲ್ಲು ಕಂಬ ಹಾಕಲು ಹಾಗೂ ವಿದ್ಯುಚ್ಛಕ್ತಿಗಾಗಿ ಟಿಸಿ ತರಲು ಹಣದ ಅವಶ್ಯಕತೆ ಕಂಡು ಬಂದು ಹಿನ್ನೆಲೆಯಲ್ಲಿ ತನ್ನ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಡ್ರಾ ಮಾಡಿಕೊಂಡು ಬಳಸಿಕೊಂಡಿದ್ದಾನೆ.

              ಪುನಃ ಹಣ ಬೇಕಾದ ಹಿನ್ನಲೆಯಲ್ಲಿ ಡ್ರಾ ಮಾಡಲು ಬ್ಯಾಂಕಿಗೆ ಹೋದಾಗ ಆತನ ಬ್ಯಾಂಕ್ ಖಾತೆ ಸ್ಥಗಿತಗೊಂಡಿರುವುದಾಗಿ ಹೇಳಿದ ಬ್ಯಾಂಕ್ ವ್ಯವಸ್ಥಾಪಕರು ಆತನನ್ನು ಹಿಂದಕ್ಕೆ ಕಳುಹಿಸಿದ್ದಾರೆ. ಅದೇ ಸಮಯಕ್ಕೆ ಆಹಾರ ಮತ್ತು ನಾಗರೀಕ ಇಲಾಖೆಯ ಖರೀದಿ ಅಧಿಕಾರಿಗಳು ರೈತ ದೇವರಾಜಪ್ಪನಿಗೆ ಫೋನ್ ಮಾಡಿ ಎರಡು ಬಾರಿ ನಿಮ್ಮ ಖಾತೆಗೆ ಹಣ ಜಮೆಯಾಗಿದ್ದು ಸರ್ಕಾರದ ಹಣ ಬಳಸಿಕೊಂಡಿರುವ ಹಿನ್ನಲೆಯಲ್ಲಿ ನೀವೀಗ ಪೂರಾ ಹಣವನ್ನು ತತ್ ಕ್ಷಣವೇ ಜಮೆ ಮಾಡಬೇಕೆಂದು ಎಚ್ಚರಿಸಿದ್ದಾರೆ.

          ಈ ಬಗ್ಗೆ ಏನೊಂದು ಅರಿಯದ ಮುಗ್ಧ ದೇವರಾಜಪ್ಪ ಬ್ಯಾಂಕ್ ಹಾಗೂ ಎಪಿಎಂಸಿಗೆ ಎಡೆತಾಕಿದಾಗ ಈತನ ಖಾತೆಗೆ ಎರಡು ಬಾರಿ ರಾಗಿಯ ಹಣವನ್ನು ಜಮೆಮಾಡಿರುವುದಾಗಿ ತಿಳಿಸಿದ್ದಾರೆ.ಕುಣಿಗಲ್ ನ ದೇವಿರಮ್ಮ ಎಂಬುವವರ ಹಣವನ್ನು ಸಹ ಈತನ ಖಾತೆಗೆ ಜಮೆ ಮಾಡಿರುವುದಾಗಿ ಖರೀದಿ ಅಧಿಕಾರಿಗಳಿಂದ ತಿಳಿದುಬಂದಿದೆ.
            ಹಣಹೊಂದಿಸುವ ಚಿಂತೆಗೆ ಬಿದ್ದ ದೇವರಾಜಪ್ಪನಿಗೆ ಖರೀದಿ ಅಧಿಕಾರಿಗಳು ಮನೆಬಾಗಿಲಿಗೆ ಬಂದಿದ್ದು ಇನ್ನಷ್ಟು ದಿಗಿಲು ಹುಟ್ಟಿಸಿದೆ.ಹಣ ಜಮೆಮಾಡದಿದ್ದಲ್ಲಿ ಸಮಸ್ಯೆಯುಂಟಾಗುತ್ತದೆಂದು ಭಯಭೀತನಾದ ದೇವರಾಜಪ್ಪ ಹಣ ಹೊಂದಿಸಲಾಗದೆ ಕಾಲಾವಕಾಶ ಕೋರಿದ್ದಾನೆ.ಹೇಗಾದರೂ ಸರಿ ಸಾಲಾಮಾಡಿಯಾದರೂ ಹಣ ಕಟ್ಟುವುದಾಗಿ ಹೇಳಿದ್ದಾನೆ.ಈ ಬಗ್ಗೆ ಜಿಲ್ಲಾ ವ್ಯವಸ್ಥಾಪಕರಿಗೆ ಮನವಿಪತ್ರದ ಮೂಲಕ ಸಮಯ ಕೊಡಲು ವಿನಂತಿಸಿದರೂ ಸಹ ಒಪ್ಪದ ಅಧಿಕಾರಿಗಳ ನಿಲುವಿನಿಂದ ರೈತಸಂಘದ ಮೊರೆಹೊಕ್ಕಿದ್ದಾನೆ.

                ಸಧ್ಯ ರೈತನ ಖಾತೆಗೆ ಅಧಿಕಾರಿಗಳ ಬೇಜವಬ್ದಾರಿತನದಿಂದ ಹಣ ಹೆಚ್ಚುವರಿಯಾಗಿ ಜಮೆಯಾಗಿದ್ದು ಈ ಬಗ್ಗೆ ಅಧಿಕಾರಿಗಳೆ ಹೊಣೆಹೊರಬೇಕೆಂದು ರೈತಸಂಘದವರ ನಿಲುವಾಗಿದ್ದು ಕಟ್ಟಲು ದುಡ್ಡಿಲ್ಲದ ರೈತನ ಹಣ ಮನ್ನಾವಾಗುವುದೋ ಅಥವಾ ಕಾಲವಕಾಶ ನೀಡುವರೋ ಕಾದು ನೋಡಬೇಕಿದೆ.
---------------------------------------
ನಿಮ್ಮ ಹಣ ನನಗೆ ಬೇಡ,ಸಧ್ಯ ಬರಗಾಲವಿದ್ದು ನಿತ್ಯದ ದಿನಸಿ ತರುವುದೇ ದುಸ್ತರವಾಗಿದೆ.ನೀವು ಮೂರ್ನಾಲ್ಕು ತಿಂಗಳು ಕಾಲಾವಕಾಶ ನೀಡಿದಲ್ಲಿ ಕೊಬ್ಬರಿ ಸುಲಿಸಿ ಹಣ ಪಾವತಿಸುವೆ : ರೈತ ದೇವರಾಜಪ್ಪ.
-------------------------------------
ಇಲಾಖೆಯ ಅಧಿಕಾರಿಗಳ ಬೇಜವಬ್ದಾರಿತನದಿಂದ ಸಮಸ್ಯೆ ಉಂಟಾಗಿದ್ದು ರೈತನಿಗೆ ಒತ್ತಡ ತಂದಲ್ಲಿ ಪರಿಸ್ಥಿತಿ ನೆಟ್ಟಗಿರುವುದಿಲ್ಲ.ಆಹಾರ ಮತ್ತು ನಾಗರೀಕ ಇಲಾಖೆಯ ಜಿಲ್ಲಾ ವ್ಯವಸ್ಥಾಪಕರು ಬರಗಾಲ ಮುಗಿಯುವವರೆಗೂ ರೈತನಿಗೆ ಕಾಲಾವಕಾಶ ಕೊಡಬೇಕು ಹಾಗೂ ಸ್ಥಗಿತಗೊಂಡಿರುವ ಬ್ಯಾಂಕ್ ಖಾತೆಯನ್ನು ಚಾಲನೆ ನೀಡಬೇಕು.ಇಲ್ಲದಿದ್ದಲ್ಲಿ ಹೋರಾಟ ಮಾಡುವುದು ಅನಿವಾರ್ಯ.: ಕೆಂಕೆರೆ ಸತೀಶ್- ರೈತ ಸಂಘದ ರಾಜ್ಯಕಾರ್ಯದರ್ಶಿ

----------------------------------------------------- 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.