ವಿಷಯಕ್ಕೆ ಹೋಗಿ

ಸಹಕಾರ ಸಂಘದ ಕಟ್ಟಡದಲ್ಲಿನ ಬಾರ್ ತೆರವುಗೊಳಿಸಲು ಗಡುವು

ಸಾರ್ವಜನಿಕರಿಗೆ ಸಮಸ್ಯೆಯಾಗಿರುವ ಬಾರ್ ನವೀಕರಿಸದಿರಲು ಜಿಲ್ಲಾಧಿಕಾರಿಗಳಿಗೆ ಮನವಿ
----------------
ಹುಳಿಯಾರು:ಜನನಿಬೀಡ ಪ್ರದೇಶದಲ್ಲಿರುವ ಹಾಗೂ ಅಬ್ಕಾರಿ ನಿಯಮ ಉಲ್ಲಂಘಿಸಿ ನಿಯಮಬಾಹಿರವಾಗಿ ನಡೆಯುತ್ತಿರುವ ರಂಗನಾಥ ಲಿಕ್ಕರ್ ಶಾಪ್ ಮದ್ಯದಂಗಡಿಯ ಸನ್ನದ್ದನ್ನು ರದ್ದು ಮಾಡಿ ೨೦೧೬-೧೭ನೇ ಸಾಲಿಗೆ ಪುನರ್ ನವೀಕರಣ ಮಾಡದಂತೆ ಪಟ್ಟಣದ ವಿವಿಧ ಸಂಘಸಂಸ್ಥೆಗಳು ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು.
                   ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿ ಪಟ್ಟಣದ ಟೌನ್ ಕೋ ಆಪರೇಟಿವ್ ಕಟ್ಟಡದಲ್ಲಿ ನಡೆಯುತ್ತಿರುವ ರಂಗನಾಥ ಲಿಕ್ಕರ್ ಶಾಪ್ ಅನ್ನು ಸದರಿ ಸ್ಥಳದಿಂದ ತೆರವು ಮಾಡಿಸುವ ಕುರಿತಂತೆ ತಾಲ್ಲೂಕ್ ರೈತಸಂಘದ ನೇತೃತ್ವದಲ್ಲಿ ಹೋಬಳಿ ರೈತಸಂಘ,ಸೃಜನಾ ಸ್ತ್ರೀಶಕ್ತಿ ಮಹಿಳಾ ಒಕ್ಕೂಟ,ಕರ್ನಾಟಕ ರಕ್ಷಣ ವೇದಿಕೆ,ಜಯಕರ್ನಾಟಕ ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

                ರಾಷ್ಟ್ರೀಯ ಹೆದ್ದಾರಿಗೆ ೧೧೬ ಮೀಟರ್ ಅಂತರದಲ್ಲಿ ಮಧ್ಯದಂಗಡಿಯಿದ್ದು ಸುಪ್ರೀಮ್ ಕೋರ್ಟ್ ಮಾರ್ಗಸೂಚಿಯಂತೆ ಹೆದ್ದಾರಿ ಸಮೀಪದಲ್ಲಿ ಮದ್ಯದಂಗಡಿ ನಡೆಸುವದಕ್ಕೆ ಅವಕಾಶವಿಲ್ಲದಿದ್ದರೂ ಕೂಡ ಅವಕಾಶ ಮಾಡಿರುವುದು ಸರಿಯಲ್ಲ .ಅಲ್ಲದೆ ಮುಜುರಾಯಿ ಇಲಾಖೆಯ ಲಕ್ಷ್ಮಿ ರಂಗನಾಥ ಸ್ವಾಮಿ ದೇವಾಲಯಕ್ಕೂ ಕೂಡ ಅತಿ ಸಮೀಪವಿರುವುದರಿಂದ ಮುಜುರಾಯಿ ಇಲಾಖೆಯ ಮಾರ್ಗಸೂಚಿಯಂತೆ ದೇವಾಲಯಕ್ಕೆ ಸಮೀಪ ಮದ್ಯದಂಗಡಿ ನಡೆಸುವದಕ್ಕೆ ಅವಕಾಶವಿಲ್ಲ.ಇದಕ್ಕೂ ಮೀರಿ ಸಹಕಾರಿ ಸಂಘದ ನಿಯಮಾನುಸಾರ ಸಹಕಾರಿ ಕಟ್ಟಡದಲ್ಲಿ ಮದ್ಯದಂಗಡಿಗೆ ಅವಕಾಶ ಕಲ್ಪಿಸುವ ಹಾಗಿಲ್ಲ.
                     ಇಷ್ಟೆಲ್ಲಾ ನೀತಿ ನಿಯಮಗಳಿದ್ದರೂ ಸಹ ಅಬ್ಕಾರಿ ಇಲಾಖೆ ನಿಯಮಬಾಹಿರವಾಗಿ ಮದ್ಯದಂಗಡಿಗೆ ಲೈಸನ್ಸ್ ನೀಡುತ್ತಿದ್ದು ಪುನಃ ಈ ಸಾಲಿಗೇನಾದರೂ ಮತ್ತೆ ನವೀಕರಿಸಿದಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಸಿದರು.

              ಸಿ.ಎಲ್.೨ ಲೈಸನ್ಸ್ ಪ್ರಕಾರ ಸ್ಥಳದಲ್ಲಿ ಕೇವಲ ಮಧ್ಯ ಮಾರಾಟ ಮಾಡಲು ಅವಕಾಶವಿದ್ದು ಇದನ್ನು ಉಲ್ಲಂಘಿಸಿ ಸ್ಥಳದಲ್ಲಿ ಕುಡಿಯಲು ಅವಕಾಶ ಮಾಡಿರುವ್ದನ್ನು ಗಮನಕ್ಕೆ ತಂದರೂ ಇದುವರೆಗೂ ಕ್ರಮಕೈಗೊಳ್ಳದ ಇಲಾಖೆ ಮಧ್ಯದಂಗಡಿ ಮಾಲೀಕರ ಪರವಾಗಿ ವರ್ತಿಸುತ್ತಿದ್ದು ಮದ್ಯದಂಗಡಿಯನ್ನು ಸ್ಥಳಾಂತರಿಸದಿದ್ದರೆ ಪಟ್ಟಣದ ಎಲ್ಲಾ ಸಂಘಸಂಸ್ಥಗಳು ಬಾರ್ ಹಠಾವೋ ಚಳುವಳಿ ಮಾಡಿಯೆ ಸಿದ್ದ ಎಂದು ಎಚ್ಚರಿಸಿದರು.
               ರೈತಸಂಘದ ರಾಜ್ಯ ಸಂಚಾಲಕ ಕೆಂಕೆರೆ ಸತೀಶ್,ತಾಲ್ಲೂಕ್ ರೈತಸಂಘದ ಉಪಾಧ್ಯಕ್ಷ ತಮ್ಮಡಿಹಳ್ಳಿ ಮಲ್ಲೀಕಣ್ಣ,ಹೋಬಳಿ ರೈತ ಸಂಘದ ಅಧ್ಯಕ್ಷ ಚನ್ನಬಸವಯ್ಯ,ಗ್ರಾಪಂ ಸದಸ್ಯ ಹಾಗೂ ಕರ್ನಾಟಕ ರಕ್ಷಣ ವೇದಿಕೆಯ ಕೋಳಿ ಶ್ರೀನಿವಾಸ್,ಜಯಕರ್ನಾಟಕ ಸಂಘಟನೆಯ ಮೋಹನ್ ಕುಮಾರ್,ಜಯಲಕ್ಷಮ್ಮ, ಹೂವಿನ ರಘು,ಗಂಗಣ್ಣ,ಶಿವಣ್ಣ ಮತ್ತಿತರರಿದ್ದರು.
----------------------------

ಸಹಕಾರ ಸಂಘದ ಕೊಠಡಿಗಳನ್ನು ಬಾರ್ ಅಂಡ್ ರೆಸ್ಟೊರೆಂಟ್ ಗಾಗಿ ಬಾಡಿಗೆ ನೀಡುವುದು ಸಹಕಾರ ಸಂಘದ ತತ್ವಕ್ಕೆ ವಿರುದ್ಧವಾಗಿದ್ದು ಆಡಳಿತ ಮಂಡಳಿಯು ಸದರಿ ಬಾಡಿಗೆದರರಿಂದ ಮಳಿಗೆ ತೆರವು ಮಾಡಿಸದಿದ್ದಲ್ಲಿ ಸೊಸೈಟಿಗೆ ಬೀಗ ಜಡಿಯಲಾಗುವುದು :ಜಯಲಕ್ಷಮ್ಮ, ಸೃಜನ ಮಹಿಳಾ ಒಕ್ಕೂಟದ ಅಧ್ಯಕ್ಷೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.