ವಿಷಯಕ್ಕೆ ಹೋಗಿ

ಸಹಕಾರ ಸಂಘದ ಕಟ್ಟಡದಲ್ಲಿನ ಬಾರ್ ತೆರವುಗೊಳಿಸಲು ಗಡುವು

ಸಾರ್ವಜನಿಕರಿಗೆ ಸಮಸ್ಯೆಯಾಗಿರುವ ಬಾರ್ ನವೀಕರಿಸದಿರಲು ಜಿಲ್ಲಾಧಿಕಾರಿಗಳಿಗೆ ಮನವಿ
----------------
ಹುಳಿಯಾರು:ಜನನಿಬೀಡ ಪ್ರದೇಶದಲ್ಲಿರುವ ಹಾಗೂ ಅಬ್ಕಾರಿ ನಿಯಮ ಉಲ್ಲಂಘಿಸಿ ನಿಯಮಬಾಹಿರವಾಗಿ ನಡೆಯುತ್ತಿರುವ ರಂಗನಾಥ ಲಿಕ್ಕರ್ ಶಾಪ್ ಮದ್ಯದಂಗಡಿಯ ಸನ್ನದ್ದನ್ನು ರದ್ದು ಮಾಡಿ ೨೦೧೬-೧೭ನೇ ಸಾಲಿಗೆ ಪುನರ್ ನವೀಕರಣ ಮಾಡದಂತೆ ಪಟ್ಟಣದ ವಿವಿಧ ಸಂಘಸಂಸ್ಥೆಗಳು ಪತ್ರಿಕಾಗೋಷ್ಟಿಯಲ್ಲಿ ಒತ್ತಾಯಿಸಿದರು.
                   ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಹಿತಾಸಕ್ತಿಗೆ ವಿರುದ್ಧವಾಗಿ ಪಟ್ಟಣದ ಟೌನ್ ಕೋ ಆಪರೇಟಿವ್ ಕಟ್ಟಡದಲ್ಲಿ ನಡೆಯುತ್ತಿರುವ ರಂಗನಾಥ ಲಿಕ್ಕರ್ ಶಾಪ್ ಅನ್ನು ಸದರಿ ಸ್ಥಳದಿಂದ ತೆರವು ಮಾಡಿಸುವ ಕುರಿತಂತೆ ತಾಲ್ಲೂಕ್ ರೈತಸಂಘದ ನೇತೃತ್ವದಲ್ಲಿ ಹೋಬಳಿ ರೈತಸಂಘ,ಸೃಜನಾ ಸ್ತ್ರೀಶಕ್ತಿ ಮಹಿಳಾ ಒಕ್ಕೂಟ,ಕರ್ನಾಟಕ ರಕ್ಷಣ ವೇದಿಕೆ,ಜಯಕರ್ನಾಟಕ ಸಂಘದ ಪದಾಧಿಕಾರಿಗಳು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

                ರಾಷ್ಟ್ರೀಯ ಹೆದ್ದಾರಿಗೆ ೧೧೬ ಮೀಟರ್ ಅಂತರದಲ್ಲಿ ಮಧ್ಯದಂಗಡಿಯಿದ್ದು ಸುಪ್ರೀಮ್ ಕೋರ್ಟ್ ಮಾರ್ಗಸೂಚಿಯಂತೆ ಹೆದ್ದಾರಿ ಸಮೀಪದಲ್ಲಿ ಮದ್ಯದಂಗಡಿ ನಡೆಸುವದಕ್ಕೆ ಅವಕಾಶವಿಲ್ಲದಿದ್ದರೂ ಕೂಡ ಅವಕಾಶ ಮಾಡಿರುವುದು ಸರಿಯಲ್ಲ .ಅಲ್ಲದೆ ಮುಜುರಾಯಿ ಇಲಾಖೆಯ ಲಕ್ಷ್ಮಿ ರಂಗನಾಥ ಸ್ವಾಮಿ ದೇವಾಲಯಕ್ಕೂ ಕೂಡ ಅತಿ ಸಮೀಪವಿರುವುದರಿಂದ ಮುಜುರಾಯಿ ಇಲಾಖೆಯ ಮಾರ್ಗಸೂಚಿಯಂತೆ ದೇವಾಲಯಕ್ಕೆ ಸಮೀಪ ಮದ್ಯದಂಗಡಿ ನಡೆಸುವದಕ್ಕೆ ಅವಕಾಶವಿಲ್ಲ.ಇದಕ್ಕೂ ಮೀರಿ ಸಹಕಾರಿ ಸಂಘದ ನಿಯಮಾನುಸಾರ ಸಹಕಾರಿ ಕಟ್ಟಡದಲ್ಲಿ ಮದ್ಯದಂಗಡಿಗೆ ಅವಕಾಶ ಕಲ್ಪಿಸುವ ಹಾಗಿಲ್ಲ.
                     ಇಷ್ಟೆಲ್ಲಾ ನೀತಿ ನಿಯಮಗಳಿದ್ದರೂ ಸಹ ಅಬ್ಕಾರಿ ಇಲಾಖೆ ನಿಯಮಬಾಹಿರವಾಗಿ ಮದ್ಯದಂಗಡಿಗೆ ಲೈಸನ್ಸ್ ನೀಡುತ್ತಿದ್ದು ಪುನಃ ಈ ಸಾಲಿಗೇನಾದರೂ ಮತ್ತೆ ನವೀಕರಿಸಿದಲ್ಲಿ ಅಹೋರಾತ್ರಿ ಧರಣಿ ನಡೆಸುವುದಾಗಿ ಎಚ್ಚರಿಸಿದರು.

              ಸಿ.ಎಲ್.೨ ಲೈಸನ್ಸ್ ಪ್ರಕಾರ ಸ್ಥಳದಲ್ಲಿ ಕೇವಲ ಮಧ್ಯ ಮಾರಾಟ ಮಾಡಲು ಅವಕಾಶವಿದ್ದು ಇದನ್ನು ಉಲ್ಲಂಘಿಸಿ ಸ್ಥಳದಲ್ಲಿ ಕುಡಿಯಲು ಅವಕಾಶ ಮಾಡಿರುವ್ದನ್ನು ಗಮನಕ್ಕೆ ತಂದರೂ ಇದುವರೆಗೂ ಕ್ರಮಕೈಗೊಳ್ಳದ ಇಲಾಖೆ ಮಧ್ಯದಂಗಡಿ ಮಾಲೀಕರ ಪರವಾಗಿ ವರ್ತಿಸುತ್ತಿದ್ದು ಮದ್ಯದಂಗಡಿಯನ್ನು ಸ್ಥಳಾಂತರಿಸದಿದ್ದರೆ ಪಟ್ಟಣದ ಎಲ್ಲಾ ಸಂಘಸಂಸ್ಥಗಳು ಬಾರ್ ಹಠಾವೋ ಚಳುವಳಿ ಮಾಡಿಯೆ ಸಿದ್ದ ಎಂದು ಎಚ್ಚರಿಸಿದರು.
               ರೈತಸಂಘದ ರಾಜ್ಯ ಸಂಚಾಲಕ ಕೆಂಕೆರೆ ಸತೀಶ್,ತಾಲ್ಲೂಕ್ ರೈತಸಂಘದ ಉಪಾಧ್ಯಕ್ಷ ತಮ್ಮಡಿಹಳ್ಳಿ ಮಲ್ಲೀಕಣ್ಣ,ಹೋಬಳಿ ರೈತ ಸಂಘದ ಅಧ್ಯಕ್ಷ ಚನ್ನಬಸವಯ್ಯ,ಗ್ರಾಪಂ ಸದಸ್ಯ ಹಾಗೂ ಕರ್ನಾಟಕ ರಕ್ಷಣ ವೇದಿಕೆಯ ಕೋಳಿ ಶ್ರೀನಿವಾಸ್,ಜಯಕರ್ನಾಟಕ ಸಂಘಟನೆಯ ಮೋಹನ್ ಕುಮಾರ್,ಜಯಲಕ್ಷಮ್ಮ, ಹೂವಿನ ರಘು,ಗಂಗಣ್ಣ,ಶಿವಣ್ಣ ಮತ್ತಿತರರಿದ್ದರು.
----------------------------

ಸಹಕಾರ ಸಂಘದ ಕೊಠಡಿಗಳನ್ನು ಬಾರ್ ಅಂಡ್ ರೆಸ್ಟೊರೆಂಟ್ ಗಾಗಿ ಬಾಡಿಗೆ ನೀಡುವುದು ಸಹಕಾರ ಸಂಘದ ತತ್ವಕ್ಕೆ ವಿರುದ್ಧವಾಗಿದ್ದು ಆಡಳಿತ ಮಂಡಳಿಯು ಸದರಿ ಬಾಡಿಗೆದರರಿಂದ ಮಳಿಗೆ ತೆರವು ಮಾಡಿಸದಿದ್ದಲ್ಲಿ ಸೊಸೈಟಿಗೆ ಬೀಗ ಜಡಿಯಲಾಗುವುದು :ಜಯಲಕ್ಷಮ್ಮ, ಸೃಜನ ಮಹಿಳಾ ಒಕ್ಕೂಟದ ಅಧ್ಯಕ್ಷೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...