ವಿಷಯಕ್ಕೆ ಹೋಗಿ

ಕರ್ತವ್ಯ ನಿರ್ವಹಿಸಿದ ಹುಳಿಯಾರು ಪೊಲೀಸರು

ಹುಳಿಯಾರು:ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿದ್ದ ಜೂ.೪ ರ ಪೊಲೀಸರ ಪ್ರತಿಭಟನೆಯ ಬಗ್ಗೆ ಶನಿವಾರದಂದು ಪಟ್ಟಣದ ಠಾಣೆಯಲ್ಲಿ ಯಾವುದೇ ಪ್ರತಿಕ್ರಿಯೆ ಕಂಡುಬಾರದೆ,ಪ್ರತಿಭಟೆನೆಯ ಸೊಲ್ಲು ಕೇಳದಂತೆ ಠಾಣೆಯಲ್ಲಿ ಎಂದಿಗಿಂತಲೂ ಹೆಚ್ಚಿನ ಹಾಜರಾತಿ ಕಾಣುವುದರ ಮೂಲಕ ಪೊಲೀಸರು ಕರ್ತವ್ಯ ನಿರ್ವಹಿಸಿದರು.

        ಠಾಣೆಯ ಎಲ್ಲಾ ೨೬ ಮಂದಿ ಪೊಲೀಸರು ಹಾಜರಾಗಿ ಮುಂಜಾನೆಯಿಂದ ಸಂಜೆಯವರೆಗೂ ಠಾಣೆಯೆಲ್ಲಿಯೇ ಕಾರ್ಯನಿರ್ವಹಿಸಿದ್ದಲ್ಲದೆ ,ಒಟ್ಟಿಗೆ ಸೇರಿದ ಸಂಭ್ರಮಕ್ಕೆ ತಿಂಡಿ ಊಟ ಕೂಡ ಅಲ್ಲೇ ಸೇವಿಸಿದರು.

             ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಾಮೂಹಿಕ ರಜೆ ಹಾಕಿ ಪ್ರತಿಭಟಿಸುವುದಾಗಿ ಹೇಳಿದ್ದ ಪೊಲೀಸರು ಎಸ್ಮಾ ಭೀತಿಯಿದಲೋ ಎನೋ ಈ ಬಗ್ಗೆ ಮಾತೆ ಎತ್ತದಿದ್ದು ಅಚ್ಚರಿಗೆ ಕಾರಣವಾಯಿತು.ಪೊಲೀಸ್ ಠಾಣೆಯ ಬಳಿಯಿರುವ ವಸತಿ ಗೃಹಗಳಲ್ಲೂ ಪೊಲೀಸ್ ಕುಟುಂಬದವರಿಂದ ಯಾವುದೇ ಪ್ರತಿಭಟನೆಯ ಮಾತು ಕೇಳಿಬರಲಿಲ್ಲ.ಠಾಣೆಯಲ್ಲಾಗಲಿ .ಸಿಬ್ಬಂದಿ ವಸತಿ ಗೃಹಗಳ ಬಳಿಯಲ್ಲಾಗಲಿ ಎಲ್ಲೂ ಪ್ರತಿಭಟನೆಯ ವಾತಾವರಣವೆ ಕಂಡುಬರಲಿಲ್ಲ.
ಹುಳಿಯಾರು ಠಾಣೆಯಲ್ಲಿ ಯಾವುದೇ ಪ್ರತಿಭಟನೆಯ ವಾತವಾರಣ ಕಂದು ಬಾರದೆ ಪೊಲೀಸರು ಠಾಣೆಯೆಲ್ಲಿಯೇ ಕಾರ್ಯನಿರ್ವಹಿಸಿದ್ದಲ್ಲದೆ ,ಒಟ್ಟಿಗೆ ಸೇರಿದ ಸಂಭ್ರಮಕ್ಕೆ ತಿಂಡಿ ಊಟ ಕೂಡ ಅಲ್ಲೇ ಸೇವಿಸಿದರು.

              ಈ ಬಗ್ಗೆ ಪತ್ರಿಕೆಯ ಪ್ರಶ್ನೆಗಳಿಗೆ ಉತ್ತರಿಸಿದ ಪಿಎಸೈ ಪ್ರವೀಣ್ ಕುಮಾರ್ ಪೊಲೀಸ್ ಇಲಾಖೆ ಶಿಸ್ತಿಗೆ ಒಳಪಟ್ಟಿದ್ದು ಯಾರೊಬ್ಬರೂ ಕಾನೂನು ಸುವ್ಯವಸ್ಥೆಗೆ ಭಂಗತರುವಂತಿಲ್ಲ. ನಮ್ಮ ಠಾಣೆಯಲ್ಲಿ ಇದುವರೆಗೂ ಯಾವೊಬ್ಬ ಪೊಲೀಸರಿಂದಲೂ ರಜೆಗಾಗಿ ಅರ್ಜಿ ಬಂದಿಲ್ಲ,ಇಲ್ಲಿನ ವಸತಿಗೃಹದ ಸಮಸ್ಯೆ ಬಗ್ಗೆ ಈ ಹಿಂದೆಯೇ ನಿರ್ಧಾರವಾದಂತೆ ವಸತಿ ಸಮುಚ್ಚಯ ಕಾಮಗಾರಿ ನಡೆಯಲಿದೆ,ಪೊಲೀಸ್ ಸಿಬ್ಬಂದಿ ನೇಮಕಾತಿ ಕೂಡ ನಡೆಯಲಿದೆ, ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಠಾಣೆಯಲ್ಲಿ ಸಿಬ್ಬಂದಿಗಳಿಗೆ ಯಾವುದೇ ಸಮಸ್ಯೆ ಕಂಡುಬಂದಿಲ್ಲ ಎಂದರು.

          ಈ ಮುಂಚೆ ಇಲಾಖೆಯಲ್ಲಿನ ವೇತನತಾರತಮ್ಯ, ರಜೆ ಸಮಸ್ಯೆ,ವಸತಿ ಗೃಹದ ಸಮಸ್ಯೆ, ಮೇಲಾಧಿಕಾರಿಗಳ ವರ್ತನೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಜೂನ್‌ 4ರಂದು ಕರ್ತವ್ಯಕ್ಕೆ ಸಾಮೂಹಿಕವಾಗಿ ಗೈರುಹಾಜರಾಗುವ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದ ಸಿಬ್ಬಂದಿ ಕೂಡ ಸರ್ಕಾರದ ಎಸ್ಮಾ ಜಾರಿ ನೀತಿ ಹಾಗೂ ಇಲಾಖೆಯ ಶಿಸ್ತುಜಾರಿ ಕ್ರಮದ ಮಾಡಿರುವದರಿಂದಲೋ ಎನೋ ಪ್ರತಿಭಟನೆಯಿಂದ ಹಿಂದೆಸರಿದಂತೆ ಕಂಡುಬಂತು.


                 ಠಾಣೆಯಲ್ಲೇ ನಡೆದ ಊಟ ತಿಂಡಿ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲವೆಂದ ಸಿಬ್ಬಂದಿ ಇಂದು ಪಟ್ಟಣದಲ್ಲಿ ದೇವಾಲಯದ ಮೆರವಣಿಗೆಯಿದ್ದು ಸರಿಯಾದ ಸಮಯಕ್ಕೆ ಸಿಬ್ಬಂದಿ ಹಾಜರಾಗಲು ಇಲ್ಲೇ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ ಎಂದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...