ವಿಷಯಕ್ಕೆ ಹೋಗಿ

ಕರ್ತವ್ಯ ನಿರ್ವಹಿಸಿದ ಹುಳಿಯಾರು ಪೊಲೀಸರು

ಹುಳಿಯಾರು:ರಾಜ್ಯಾದ್ಯಂತ ತೀವ್ರ ಕುತೂಹಲ ಕೆರಳಿದ್ದ ಜೂ.೪ ರ ಪೊಲೀಸರ ಪ್ರತಿಭಟನೆಯ ಬಗ್ಗೆ ಶನಿವಾರದಂದು ಪಟ್ಟಣದ ಠಾಣೆಯಲ್ಲಿ ಯಾವುದೇ ಪ್ರತಿಕ್ರಿಯೆ ಕಂಡುಬಾರದೆ,ಪ್ರತಿಭಟೆನೆಯ ಸೊಲ್ಲು ಕೇಳದಂತೆ ಠಾಣೆಯಲ್ಲಿ ಎಂದಿಗಿಂತಲೂ ಹೆಚ್ಚಿನ ಹಾಜರಾತಿ ಕಾಣುವುದರ ಮೂಲಕ ಪೊಲೀಸರು ಕರ್ತವ್ಯ ನಿರ್ವಹಿಸಿದರು.

        ಠಾಣೆಯ ಎಲ್ಲಾ ೨೬ ಮಂದಿ ಪೊಲೀಸರು ಹಾಜರಾಗಿ ಮುಂಜಾನೆಯಿಂದ ಸಂಜೆಯವರೆಗೂ ಠಾಣೆಯೆಲ್ಲಿಯೇ ಕಾರ್ಯನಿರ್ವಹಿಸಿದ್ದಲ್ಲದೆ ,ಒಟ್ಟಿಗೆ ಸೇರಿದ ಸಂಭ್ರಮಕ್ಕೆ ತಿಂಡಿ ಊಟ ಕೂಡ ಅಲ್ಲೇ ಸೇವಿಸಿದರು.

             ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಸಾಮೂಹಿಕ ರಜೆ ಹಾಕಿ ಪ್ರತಿಭಟಿಸುವುದಾಗಿ ಹೇಳಿದ್ದ ಪೊಲೀಸರು ಎಸ್ಮಾ ಭೀತಿಯಿದಲೋ ಎನೋ ಈ ಬಗ್ಗೆ ಮಾತೆ ಎತ್ತದಿದ್ದು ಅಚ್ಚರಿಗೆ ಕಾರಣವಾಯಿತು.ಪೊಲೀಸ್ ಠಾಣೆಯ ಬಳಿಯಿರುವ ವಸತಿ ಗೃಹಗಳಲ್ಲೂ ಪೊಲೀಸ್ ಕುಟುಂಬದವರಿಂದ ಯಾವುದೇ ಪ್ರತಿಭಟನೆಯ ಮಾತು ಕೇಳಿಬರಲಿಲ್ಲ.ಠಾಣೆಯಲ್ಲಾಗಲಿ .ಸಿಬ್ಬಂದಿ ವಸತಿ ಗೃಹಗಳ ಬಳಿಯಲ್ಲಾಗಲಿ ಎಲ್ಲೂ ಪ್ರತಿಭಟನೆಯ ವಾತಾವರಣವೆ ಕಂಡುಬರಲಿಲ್ಲ.
ಹುಳಿಯಾರು ಠಾಣೆಯಲ್ಲಿ ಯಾವುದೇ ಪ್ರತಿಭಟನೆಯ ವಾತವಾರಣ ಕಂದು ಬಾರದೆ ಪೊಲೀಸರು ಠಾಣೆಯೆಲ್ಲಿಯೇ ಕಾರ್ಯನಿರ್ವಹಿಸಿದ್ದಲ್ಲದೆ ,ಒಟ್ಟಿಗೆ ಸೇರಿದ ಸಂಭ್ರಮಕ್ಕೆ ತಿಂಡಿ ಊಟ ಕೂಡ ಅಲ್ಲೇ ಸೇವಿಸಿದರು.

              ಈ ಬಗ್ಗೆ ಪತ್ರಿಕೆಯ ಪ್ರಶ್ನೆಗಳಿಗೆ ಉತ್ತರಿಸಿದ ಪಿಎಸೈ ಪ್ರವೀಣ್ ಕುಮಾರ್ ಪೊಲೀಸ್ ಇಲಾಖೆ ಶಿಸ್ತಿಗೆ ಒಳಪಟ್ಟಿದ್ದು ಯಾರೊಬ್ಬರೂ ಕಾನೂನು ಸುವ್ಯವಸ್ಥೆಗೆ ಭಂಗತರುವಂತಿಲ್ಲ. ನಮ್ಮ ಠಾಣೆಯಲ್ಲಿ ಇದುವರೆಗೂ ಯಾವೊಬ್ಬ ಪೊಲೀಸರಿಂದಲೂ ರಜೆಗಾಗಿ ಅರ್ಜಿ ಬಂದಿಲ್ಲ,ಇಲ್ಲಿನ ವಸತಿಗೃಹದ ಸಮಸ್ಯೆ ಬಗ್ಗೆ ಈ ಹಿಂದೆಯೇ ನಿರ್ಧಾರವಾದಂತೆ ವಸತಿ ಸಮುಚ್ಚಯ ಕಾಮಗಾರಿ ನಡೆಯಲಿದೆ,ಪೊಲೀಸ್ ಸಿಬ್ಬಂದಿ ನೇಮಕಾತಿ ಕೂಡ ನಡೆಯಲಿದೆ, ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಠಾಣೆಯಲ್ಲಿ ಸಿಬ್ಬಂದಿಗಳಿಗೆ ಯಾವುದೇ ಸಮಸ್ಯೆ ಕಂಡುಬಂದಿಲ್ಲ ಎಂದರು.

          ಈ ಮುಂಚೆ ಇಲಾಖೆಯಲ್ಲಿನ ವೇತನತಾರತಮ್ಯ, ರಜೆ ಸಮಸ್ಯೆ,ವಸತಿ ಗೃಹದ ಸಮಸ್ಯೆ, ಮೇಲಾಧಿಕಾರಿಗಳ ವರ್ತನೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಜೂನ್‌ 4ರಂದು ಕರ್ತವ್ಯಕ್ಕೆ ಸಾಮೂಹಿಕವಾಗಿ ಗೈರುಹಾಜರಾಗುವ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದ ಸಿಬ್ಬಂದಿ ಕೂಡ ಸರ್ಕಾರದ ಎಸ್ಮಾ ಜಾರಿ ನೀತಿ ಹಾಗೂ ಇಲಾಖೆಯ ಶಿಸ್ತುಜಾರಿ ಕ್ರಮದ ಮಾಡಿರುವದರಿಂದಲೋ ಎನೋ ಪ್ರತಿಭಟನೆಯಿಂದ ಹಿಂದೆಸರಿದಂತೆ ಕಂಡುಬಂತು.


                 ಠಾಣೆಯಲ್ಲೇ ನಡೆದ ಊಟ ತಿಂಡಿ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲವೆಂದ ಸಿಬ್ಬಂದಿ ಇಂದು ಪಟ್ಟಣದಲ್ಲಿ ದೇವಾಲಯದ ಮೆರವಣಿಗೆಯಿದ್ದು ಸರಿಯಾದ ಸಮಯಕ್ಕೆ ಸಿಬ್ಬಂದಿ ಹಾಜರಾಗಲು ಇಲ್ಲೇ ಊಟೋಪಚಾರದ ವ್ಯವಸ್ಥೆ ಮಾಡಲಾಗಿದೆ ಎಂದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...