ವಿಷಯಕ್ಕೆ ಹೋಗಿ

ಇಲಾಖೆ ರೈತರ ಮನೆ ಬಾಗಿಲಿಗೆ ತೆರಳಿ ಕೃಷಿ ಸವಲತ್ತುಗಳ ಬಗ್ಗೆ ಮಾಹಿತಿನೀಡಬೇಕು

ಹುಳಿಯಾರು ಹೋಬಳಿ ಯಳನಾದು ಪಂಚಾಯ್ತಿಯ ಕೆರೆಸೂರಗೊಂಡನಹಳ್ಳಿಯಲ್ಲಿ ಕೃಷಿ ಇಲಾಖೆಯಿಂದ ಏರ್ಪಡಿಸಿದ್ದ ರಾಗಿಬೆಳೆಯ ಪ್ರಾತ್ಯಕ್ಷಿಕೆ ಹಾಗೂ ಸಲಕರಣೆಗಳ ವಿತರಣಾ ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ವೈ.ಸಿ.ಸಿದ್ಧರಾಮಯ್ಯ ಮಾತನಾಡಿದರು.
ಹುಳಿಯಾರು: ಸರ್ಕಾರ ರೈತರ ಅನುಕೂಲಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು ಇಲಾಖೆಯವರು ತಮ್ಮಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಹಳ್ಳಿಗಳಿಗೆ ತೆರಳಿ ಪ್ರಚಾರ ಮಾಡಿ ಅರ್ಹ ಫಲಾನುಭವಿಗಳಿಗೆ ತಲುಪಿಸಿದಾಗ ಮಾತ್ರವೇ ಸರ್ಕರದ ಉದ್ದೇಶ ಸಾರ್ಥಕವಾಗುವುದು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ವೈ.ಸಿ.ಸಿದ್ಧರಾಮಯ್ಯ ಸಲಹೆ ನೀಡಿದರು.

                        ಸಮೀಪದ ಕೆರೆಸೂರಗೊಂಡನಹಳ್ಳಿಯಲ್ಲಿ ಕೃಷಿ ಇಲಾಖೆಯಿಂದ ಏರ್ಪಡಿಸಿದ್ದ ೨೦೧೬-೧೭ ನೇ ಸಾಲಿನ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ರಾಗಿ ಏಕ ಬೆಳೆಯ ಪ್ರಾತ್ಯಕ್ಷಿಕೆ ಹಾಗೂ ಸಲಕರಣೆಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಈ ಯೋಜನೆಯಡಿಯಲ್ಲಿ ನೀಡಲಾಗುತ್ತಿರುವ ಉಚಿತ ಬೀಜ ಹಾಗೂ ಗೊಬ್ಬರವನ್ನು ಸದುಪಯೋಗ ಪಡಿಸಿಕೊಂಡು ಅಧಿಕ ಬೆಳೆ ಬೆಳೆಯಬೇಕೆಂದರು.

                              ಈ ಭಾಗದಲ್ಲಿ ಉತ್ತಮ ಮಳೆಯಾಗಿದ್ದು ಇಲಾಖೆಯವರು ಬೀಜ ಹಾಗೂ ಗೊಬ್ಬರಕ್ಕಾಗಿ ರೈತರನ್ನು ಅಲೆಯುವಂತೆ ಮಾಡಬಾರದು.ದಾಳಿಂಬೆ,ತೆಂಗು ಮತ್ತಿತರ ಬೆಳಗಳ ಬಗ್ಗೆ ತೋಟಗಾರಿಕೆ ಇಲಾಖೆಯವರು ಹಾಗೂ ,ಜಾನುವಾರುಗಳಿಗೆ ಹಾಕಬೇಕಾದ ಲಸಿಕೆಗಳ ಬಗ್ಗೆ ಪಶುಪಾಲನ ಇಲಾಖೆಯವರು ಆಯಾ ಪಂಚಾಯ್ತಿ ಪಂಚಾಯ್ತಿ ವ್ಯಾಪ್ತಿಯ ಪ್ರತಿ ಹಳ್ಳಿಗಳಿಗೂ ತೆರಳಿ ಇಲಾಖೆಯ ಸವಲತ್ತುಗಳನ್ನು ರೈತರಿಗೆ ತಲುಪಿಸುವ ಕೆಲಸ ಮಾಡಬೇಕೆಂದರು.ಕೇವಲ ಸವಲತ್ತು ಕೊಟ್ಟು ಜವಬ್ದಾರಿ ಮುಗಿಯಿತೆಂದು ಕಛೇರಿಯಲ್ಲಿ ಕೂರದೆ ಆಗಾಗ್ಗೆ ಹಳ್ಳಿಗಳಿಗೆ ತೆರಳಿ ಸೂಕ್ತ ಮಾರ್ಗದರ್ಶನ ಮಾಡಬೇಕೆಂದರು.
ಹುಳಿಯಾರು ಹೋಬಳಿ ಯಳನಾದು ಪಂಚಾಯ್ತಿಯ ಕೆರೆಸೂರಗೊಂಡನಹಳ್ಳಿಯಲ್ಲಿ ಕೃಷಿ ಇಲಾಖೆಯಿಂದ ಏರ್ಪಡಿಸಿದ್ದ ರಾಗಿಬೆಳೆಯ ಪ್ರಾತ್ಯಕ್ಷಿಕೆ ಕಾರ್ಯಕ್ರಮದಲ್ಲಿ ಅರ್ಹ ರೈತರಿಗೆ ಉಚಿತವಾಗಿ ರಾಗಿ ಬೀಜ,ಗೊಬ್ಬರವನ್ನು ಜಿಪಂ ಸದಸ್ಯ ವೈ.ಸಿ.ಸಿದ್ಧರಾಮಯ್ಯ ವಿತರಿಸಿದರು.ಕೃಷಿ ಅಧಿಕಾರಿ ಕೆ.ಬಿ.ಉಮಾಶಂಕರ್,ಯಳನಾಡು ಗ್ರಾಪಂ ಅಧ್ಯಕ್ಷ ಬಸವರಾಜು ,ತಾ.ಪಂ.ಸದಸ್ಯ ಯತೀಶ್,ಗ್ರಾಪಂ ಸದಸ್ಯ ರಮೇಶ್ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 
                  ಕೃಷಿ ಅಧಿಕಾರಿ ಕೆ.ಬಿ.ಉಮಾಶಂಕರ್ ಮಾತನಾಡಿ ಎಂಎಲ್ ೩೬೫ ವಿಶಿಷ್ಟ ತಳಿಯಾಗಿದ್ದು ಬರ ನಿರೋಧಕ ತಳಿಯಾಗಿರುವ ಈ ರಾಗಿ ಬೆಳೆಯನ್ನು ವರ್ಷದ ೩೬೫ ದಿನದಲ್ಲಿ ಯಾವಾಗಾ ಬೇಕಾದರೂ ಬಿತ್ತನೆ ಮಾಡಬಹುದೆಂದರು.ಪ್ರಾತ್ಯಕ್ಷಿಕೆಗೆ ಯಳನಾಡಿನ ಕೆರೆಸೂರಗೊಂದನಹಳ್ಳಿಯನ್ನು ಆಯ್ಕೆ ಮಾಡಿಕೊಳ್ಳಲಾಗಿದ್ದು ಇಲಾಖೆ ಮಾರ್ಗದರ್ಶನದಲ್ಲಿ ಬೆಳೆ ಬೆಳಯಬೇಕೆಂದರು ಈ ರಾಗಿ ಬೆಳೆಯುವ ತಾಂತ್ರಿಕತೆ ಬಗ್ಗೆ ಇಲಾಖೆಯವರೇ ಮನೆ ಬಾಗಿಲಿಗೆ ಬಂದು ಬೆಳೆಯುವ ಬಗ್ಗೆ ಮೇಲುಸ್ತುವಾರಿ ಮಾಡಲಿದ್ದು ರೈತರು ಇಲಾಖೆಯೊಂದಿಗೆ ಕೈ ಜೋಡಿಸಿದಾಗ ಮಾತ್ರವೇ ಸಮರ್ಪಕ ಬೆಳೆ ಬೆಳಯಬಹುದೆಂದರು.

                ಯಳನಾಡು ಗ್ರಾಪಂ ಅಧ್ಯಕ್ಷ ಬಸವರಾಜು ,ತಾ.ಪಂ.ಸದಸ್ಯ ಯತೀಶ್ ಮಾತನಾಡಿ ರೈತರಿಗಾಗಿರುವ ಅನೇಕ ಯೋಜನೆಗಳ ಬಗ್ಗೆ ಅಧಿಕಾರಿಗಳು ಹಳ್ಳಿಗಳಲ್ಲಿ ಕೃಷಿ ಅರಿವು ಕಾರ್ಯಕ್ರಮ ಏರ್ಪಡಿಸಿ ಸರ್ಕಾರದ ಯೋಜನೆಗಳನ್ನು ತಿಳಿಹೇಳಬೇಕಿದೆ ಎಂದರು.
                  ಸಹಾಯಕ ಕೃಷಿ ಅಧಿಕಾರಿ ಹೆಚ್.ಬಿ.ಕರಿಬಸವಯ್ಯ ಯೋಜನೆ ಬಗ್ಗೆ ರೈತರಿಗೆ ವಿವರವಾದ ಮಾಹಿತಿ ನೀಡಿದರು.
               ಈ ಸಂದರ್ಭದಲ್ಲಿ ರೈತ ಫಲಾನುಭವಿಗಳಿಗೆ ಉಚಿತವಾಗಿ ರಾಗಿ ಬಿತ್ತನೆ ಬೀಜ, ಜಿಪ್ಸಮ್,ಜಿಂಕ್, ಬೊರಾಕ್ಸ್,  ಟ್ರೈಕೋಡರ್ಮ,ಎನ್.ಪಿ.ಕೆ ವಿತರಿಸಲಾಯಿತು.

          ಯಳನಾಡು ಗ್ರಾಮಪಂಚಾಯ್ತಿ ಸದಸ್ಯ ರಮೇಶ್ ,ಸಹಾಯಕ ಕೃಷಿ ಅಧಿಕಾರಿ ನೂರುಲ್ಲಾ, ಕೆ.ಟಿ.ತಿಪ್ಪೇಸ್ವಾಮಿ, ರೈತ ಅನುವುಗಾರರಾದ ಜಯಣ್ಣ, ಬಸವರಾಜು,ಮಂಜುನಾಥ್,ಎಟಿಎಂ ಲತಾಮಣಿ ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...