ವಿಷಯಕ್ಕೆ ಹೋಗಿ

ಏಕಾಗ್ರತೆಗೆ ಪ್ರಾಣಾಯಾಮ ಸಹಕಾರಿ

ಇಂದ್ರೀಯಗಳ ಮೇಲೆ ನಿಯಂತ್ರಣ ಸಾಧಿಸುವುದೇ ಯೋಗ :ತಿಪ್ಪಾರೆಡ್ಡಿ ಗುರೂಜಿ
----------------------------
ಹುಳಿಯಾರು:ಮನಸ್ಸಿನ ಒತ್ತಡಗಳೇ ಎಲ್ಲಾ ರೋಗಗಳ ಮೂಲಬ್ವಾಗಿದ್ದು ಧ್ಯಾನ ಪ್ರಾಣಾಯಾಮ ಮಾಡುವುದರಿಂದ ಒತ್ತಡ ನಿವಾರಣೆಯಾಗುವುದಲ್ಲದೆ ಮನಸ್ಸಿನ ಏಕಾಗ್ರತೆಯನ್ನು ಸಾಧಿಸಿಕೊಳ್ಳಬಹುದು.ಜೊತೆಗೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಕೊಳ್ಳಲು ಕೂಡ ಸಹಕಾರಿಯಾಗುವುದು ಎಂದು ಋಷಿ ಸಂಸ್ಕೃತಿ ವಿದ್ಯಾಕೇಂದ್ರದ ಧಾರವಾಡ ವಿಭಾಗದ ತಿಪ್ಪಾರೆಡ್ಡಿ ಗುರೂಜಿ ಹೇಳಿದರು.

         ಪೂಜ್ಯ ಋಷಿ ಪ್ರಭಾಕರ್ ಗುರೂಜಿಯವರ ಋಷಿ ಸಂಸ್ಕೃತಿ ವಿದ್ಯಾಕೇಂದ್ರದ ಸಹಯೋಗದೊಂದಿಗೆ ಹುಳಿಯಾರಿನ ಹೊಸಹಳ್ಳಿ ಕೈಮರದಲ್ಲಿರುವ ಸಿದ್ಧಶ್ರೀ ಭವನದಲ್ಲಿ ಸಿದ್ಧಿಸಮಾಧಿ ಯೋಗ (SSY)ಶಿಬಿರ ಉದ್ದೇಶಿಸಿ ಅವರು ಮಾತನಾಡಿದರು.

                 ಮನುಷ್ಯ ಯಾವಾಗಲೂ ಉತ್ತಮ ಆಲೋಚನೆಗಳನ್ನು ಮಾಡಬೇಕು. ನಾನು ಚೆನ್ನಾಗಿದ್ದೇನೆ,ಎಲ್ಲರೂ ಚೆನ್ನಾಗಿದ್ದಾರೆ,ಎಲ್ಲವೂ ಸರಿಯಾಗಿದೆ ಎಂದು ತಿಳಿಯಪಡಿಸುವುದೇ ಸಿದ್ಧಿಸಮಾಧಿ ಯೋಗದ ಸಂದೇಶ.ಧ್ಯಾನ ಮಾರ್ಗ ವ್ಯಕ್ತಿಯ ಆಂತರಿಕ ಪ್ರಯಾಣಕ್ಕೆ ರಹದಾರಿಯಗಿದೆ. ಕೆಟ್ಟ ಆಲೋಚನೆಗಳಿಂದ ಮನಸ್ಸು ಸಂಕುಚಿತವಾಗುವುದರ ಜೊತೆ ದೇಹದ ಆರೋಗ್ಯಕ್ಕೂ ಮಾರಕವಾಗುತ್ತದೆ. ನಿಯಮಿತವಾಗಿ ಉತ್ತಮ ಆಹಾರ ಸೇವನೆಯಿಂದ ರೋಗಗಳನ್ನು ತಡೆಯಬಹುದು ಎಂದರು.

           ವಿಜ್ಞಾನ ಮುಂದುವರಿದಂತೆ ಸುತ್ತಲಿನ ಪರಿಸರ ಹದಗೆಡುತ್ತಿದೆ.ನಾವು ಸೇವಿಸುವ ಆಹಾರ,ನೀರು ಕಲ್ಮಶವಾಗುತ್ತಿದ್ದು ಅವುಗಳ ಸೇವನೆಯಿಂದ ನಮ್ಮ ಆಯುಸ್ಸು ಕ್ಷೀಣಿಸುತ್ತಿದೆ.ಸದ್ಯ ಶುದ್ಧ ಕುಡಿಯುವ ನೀರು ಬೇಕೆಂದು ಬಾಟಲ್ ನಲ್ಲಿ ನೀರುನ್ನು ಹೇಗೆ ಒಯ್ಯುತ್ತಿದ್ದೇವೊ ಹಾಗೆಯೇ ಮುಂದೊಂದು ದಿನ ಶುದ್ಧಗಾಳಿ ಸೇವನೆಗೆ ಆಕ್ಸಿಜನ್ ಒಯ್ಯಬೇಕಾಗಬಹುದೆಂದರು.

         ಇಂದ್ರೀಯಗಳ ಮೇಲೆ ನಿಯಂತ್ರಣ ಸಾಧಿಸುವುದೇ ಯೋಗ.ಬರಿಯ ಯೋಗಾಸನವನ್ನು ರೂಢಿಸಿಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ.ಆಟ,ಧ್ಯಾನ,ಯೋಗ,ಸಂಗೀತದಿಂದ ಮನಸ್ಸು ಉಲ್ಲಾಸಿತವಾಗಿ ಮನುಷ್ಯ ಲವಲವಿಕೆಯಿಂದಿರಲೂ ಸಾಧ್ಯವೆಂದರು.

         ಅನುಭವಪೂರ್ವಕವಾಗಿ ಪಡೆದಿದ್ದು ಸದಾ ನೆನಪಿನಲ್ಲಿ ಉಳಿಯುವುದಿದ್ದು ಸ್ಥಿರವಾದ ಬುದ್ಧಿಯೇ ಯೋಗವೆಂದರು.ಸಿಕ್ಕ ಜ್ಞಾನವನ್ನು ಹಂಚಿಕೊಳ್ಳುಅಬೇಕು.ಗುರು ಸ್ಥಾನದ ಅರ್ಹತೆ ಯೆಂದರೆ ನಮಗೆ ಸಿಕ್ಕಿದ್ದನು ಇನ್ನೊಬ್ಬರಿಗೆ ಕೊಡುವುದು.ನಮ್ಮಲ್ಲಿನ ವಿಶೇಷ ವ್ಯಕ್ತಿಯನ್ನು ನಮಗೆ ನಾವೇ ತಿಳಿಯಪಡಿಸುವುದೇ ಸಿದ್ಧಿಸಮಾಧಿ ಯೋಗದ ಉದ್ದೇಶ ಎಂದರು.ಪ್ರತಿಯೊಬ್ಬರಿಗೂ ನೆಮ್ಮದಿಯೊಂದಿಗೆ ಅರೋಗ್ಯ ಪೂರ್ಣ ಜೀವನ ನಡೆಸುವ ಹಂಬಲವಿರುತ್ತದೆ.ಆದರೆ ಅದು ಸಿದ್ಧಿ ಸಮಾಧಿ ಯೋಗದ ಪ್ರಕಾರಗಳಿಂದ ಮಾತ್ರ ಸಾಧ್ಯ .ಸಮಯವಿಲ್ಲ ಎನ್ನುವ ಬದಲು ಸಿಕ್ಕ ಸಮಯವನ್ನೇ ಬಳಸಿಕೊಂಡು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಆಹಾರ ಪದ್ಧತಿ, ಯೋಗ, ಧ್ಯಾನ, ಪ್ರಾಣಾಯಾಮ ಸೇರಿದಂತೆ ವ್ಯಕ್ತಿತ್ವ ವಿಕಸನ ಶಿಬಿರಗಳ ಪ್ರಯೋಜನ ಪಡೆಯಬೇಕೆಂದು ಕರೆ ನೀಡಿದರು.

           ಮಾಜಿ ತಾಪಂ ಸದಸ್ಯ ಮಲ್ಲಿಕಾರ್ಜುನಯ್ಯ,ಸಿಆರ್ಪಿ ಪ್ರೇಮಲೀಲಾ,ಪಂಡಿತ ಬಸವರಾಜು,ಶಿಕ್ಷಕ ಮಲ್ಲಿಕಾರ್ಜುನಯ್ಯ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.