ವಿಷಯಕ್ಕೆ ಹೋಗಿ

ಏಕಾಗ್ರತೆಗೆ ಪ್ರಾಣಾಯಾಮ ಸಹಕಾರಿ

ಇಂದ್ರೀಯಗಳ ಮೇಲೆ ನಿಯಂತ್ರಣ ಸಾಧಿಸುವುದೇ ಯೋಗ :ತಿಪ್ಪಾರೆಡ್ಡಿ ಗುರೂಜಿ
----------------------------
ಹುಳಿಯಾರು:ಮನಸ್ಸಿನ ಒತ್ತಡಗಳೇ ಎಲ್ಲಾ ರೋಗಗಳ ಮೂಲಬ್ವಾಗಿದ್ದು ಧ್ಯಾನ ಪ್ರಾಣಾಯಾಮ ಮಾಡುವುದರಿಂದ ಒತ್ತಡ ನಿವಾರಣೆಯಾಗುವುದಲ್ಲದೆ ಮನಸ್ಸಿನ ಏಕಾಗ್ರತೆಯನ್ನು ಸಾಧಿಸಿಕೊಳ್ಳಬಹುದು.ಜೊತೆಗೆ ಜ್ಞಾಪಕ ಶಕ್ತಿಯನ್ನು ಹೆಚ್ಚಿಸಕೊಳ್ಳಲು ಕೂಡ ಸಹಕಾರಿಯಾಗುವುದು ಎಂದು ಋಷಿ ಸಂಸ್ಕೃತಿ ವಿದ್ಯಾಕೇಂದ್ರದ ಧಾರವಾಡ ವಿಭಾಗದ ತಿಪ್ಪಾರೆಡ್ಡಿ ಗುರೂಜಿ ಹೇಳಿದರು.

         ಪೂಜ್ಯ ಋಷಿ ಪ್ರಭಾಕರ್ ಗುರೂಜಿಯವರ ಋಷಿ ಸಂಸ್ಕೃತಿ ವಿದ್ಯಾಕೇಂದ್ರದ ಸಹಯೋಗದೊಂದಿಗೆ ಹುಳಿಯಾರಿನ ಹೊಸಹಳ್ಳಿ ಕೈಮರದಲ್ಲಿರುವ ಸಿದ್ಧಶ್ರೀ ಭವನದಲ್ಲಿ ಸಿದ್ಧಿಸಮಾಧಿ ಯೋಗ (SSY)ಶಿಬಿರ ಉದ್ದೇಶಿಸಿ ಅವರು ಮಾತನಾಡಿದರು.

                 ಮನುಷ್ಯ ಯಾವಾಗಲೂ ಉತ್ತಮ ಆಲೋಚನೆಗಳನ್ನು ಮಾಡಬೇಕು. ನಾನು ಚೆನ್ನಾಗಿದ್ದೇನೆ,ಎಲ್ಲರೂ ಚೆನ್ನಾಗಿದ್ದಾರೆ,ಎಲ್ಲವೂ ಸರಿಯಾಗಿದೆ ಎಂದು ತಿಳಿಯಪಡಿಸುವುದೇ ಸಿದ್ಧಿಸಮಾಧಿ ಯೋಗದ ಸಂದೇಶ.ಧ್ಯಾನ ಮಾರ್ಗ ವ್ಯಕ್ತಿಯ ಆಂತರಿಕ ಪ್ರಯಾಣಕ್ಕೆ ರಹದಾರಿಯಗಿದೆ. ಕೆಟ್ಟ ಆಲೋಚನೆಗಳಿಂದ ಮನಸ್ಸು ಸಂಕುಚಿತವಾಗುವುದರ ಜೊತೆ ದೇಹದ ಆರೋಗ್ಯಕ್ಕೂ ಮಾರಕವಾಗುತ್ತದೆ. ನಿಯಮಿತವಾಗಿ ಉತ್ತಮ ಆಹಾರ ಸೇವನೆಯಿಂದ ರೋಗಗಳನ್ನು ತಡೆಯಬಹುದು ಎಂದರು.

           ವಿಜ್ಞಾನ ಮುಂದುವರಿದಂತೆ ಸುತ್ತಲಿನ ಪರಿಸರ ಹದಗೆಡುತ್ತಿದೆ.ನಾವು ಸೇವಿಸುವ ಆಹಾರ,ನೀರು ಕಲ್ಮಶವಾಗುತ್ತಿದ್ದು ಅವುಗಳ ಸೇವನೆಯಿಂದ ನಮ್ಮ ಆಯುಸ್ಸು ಕ್ಷೀಣಿಸುತ್ತಿದೆ.ಸದ್ಯ ಶುದ್ಧ ಕುಡಿಯುವ ನೀರು ಬೇಕೆಂದು ಬಾಟಲ್ ನಲ್ಲಿ ನೀರುನ್ನು ಹೇಗೆ ಒಯ್ಯುತ್ತಿದ್ದೇವೊ ಹಾಗೆಯೇ ಮುಂದೊಂದು ದಿನ ಶುದ್ಧಗಾಳಿ ಸೇವನೆಗೆ ಆಕ್ಸಿಜನ್ ಒಯ್ಯಬೇಕಾಗಬಹುದೆಂದರು.

         ಇಂದ್ರೀಯಗಳ ಮೇಲೆ ನಿಯಂತ್ರಣ ಸಾಧಿಸುವುದೇ ಯೋಗ.ಬರಿಯ ಯೋಗಾಸನವನ್ನು ರೂಢಿಸಿಕೊಳ್ಳುವುದರಿಂದ ಏನೂ ಪ್ರಯೋಜನವಿಲ್ಲ.ಆಟ,ಧ್ಯಾನ,ಯೋಗ,ಸಂಗೀತದಿಂದ ಮನಸ್ಸು ಉಲ್ಲಾಸಿತವಾಗಿ ಮನುಷ್ಯ ಲವಲವಿಕೆಯಿಂದಿರಲೂ ಸಾಧ್ಯವೆಂದರು.

         ಅನುಭವಪೂರ್ವಕವಾಗಿ ಪಡೆದಿದ್ದು ಸದಾ ನೆನಪಿನಲ್ಲಿ ಉಳಿಯುವುದಿದ್ದು ಸ್ಥಿರವಾದ ಬುದ್ಧಿಯೇ ಯೋಗವೆಂದರು.ಸಿಕ್ಕ ಜ್ಞಾನವನ್ನು ಹಂಚಿಕೊಳ್ಳುಅಬೇಕು.ಗುರು ಸ್ಥಾನದ ಅರ್ಹತೆ ಯೆಂದರೆ ನಮಗೆ ಸಿಕ್ಕಿದ್ದನು ಇನ್ನೊಬ್ಬರಿಗೆ ಕೊಡುವುದು.ನಮ್ಮಲ್ಲಿನ ವಿಶೇಷ ವ್ಯಕ್ತಿಯನ್ನು ನಮಗೆ ನಾವೇ ತಿಳಿಯಪಡಿಸುವುದೇ ಸಿದ್ಧಿಸಮಾಧಿ ಯೋಗದ ಉದ್ದೇಶ ಎಂದರು.ಪ್ರತಿಯೊಬ್ಬರಿಗೂ ನೆಮ್ಮದಿಯೊಂದಿಗೆ ಅರೋಗ್ಯ ಪೂರ್ಣ ಜೀವನ ನಡೆಸುವ ಹಂಬಲವಿರುತ್ತದೆ.ಆದರೆ ಅದು ಸಿದ್ಧಿ ಸಮಾಧಿ ಯೋಗದ ಪ್ರಕಾರಗಳಿಂದ ಮಾತ್ರ ಸಾಧ್ಯ .ಸಮಯವಿಲ್ಲ ಎನ್ನುವ ಬದಲು ಸಿಕ್ಕ ಸಮಯವನ್ನೇ ಬಳಸಿಕೊಂಡು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ಆಹಾರ ಪದ್ಧತಿ, ಯೋಗ, ಧ್ಯಾನ, ಪ್ರಾಣಾಯಾಮ ಸೇರಿದಂತೆ ವ್ಯಕ್ತಿತ್ವ ವಿಕಸನ ಶಿಬಿರಗಳ ಪ್ರಯೋಜನ ಪಡೆಯಬೇಕೆಂದು ಕರೆ ನೀಡಿದರು.

           ಮಾಜಿ ತಾಪಂ ಸದಸ್ಯ ಮಲ್ಲಿಕಾರ್ಜುನಯ್ಯ,ಸಿಆರ್ಪಿ ಪ್ರೇಮಲೀಲಾ,ಪಂಡಿತ ಬಸವರಾಜು,ಶಿಕ್ಷಕ ಮಲ್ಲಿಕಾರ್ಜುನಯ್ಯ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...