ವಿಷಯಕ್ಕೆ ಹೋಗಿ

ಹೊರಬಿತ್ತು ೧೮ ಶಿಕ್ಷಕರ ಸ್ಥಳ ನಿಯುಕ್ತಿ ಆದೇಶ

ಅಂತ್ಯಗೊಂಡ ಧರಣಿ : ೩೩ ಶಾಲೆಗಳ ಪುನರಾರಂಭ
--------------------------------------
ಹುಳಿಯಾರು: ಹುಳಿಯಾರು ಹೋಬಳಿ ಗಡಿ ಗ್ರಾಮಗಳ ಶಾಲೆಗಳಿಗೆ ಸೋಮವಾರದಂದು ನಡೆದ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ೧೮ ಶಿಕ್ಷಕರನ್ನು ನೇಮಿಸಿರುವ ಆದೇಶ ಹೊರಬೀಳುತ್ತಿದ್ದಂತೆಯೇ ಹೊಯ್ಸಲಕಟ್ಟೆ ಸರ್ಕಲ್‌ನಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ ಧರಣಿ ಮಂಗಳವಾರದಂದು ಅಂತ್ಯಗೊಂಡಿತು.
                 ಹುಳಿಯಾರು ಹೋಬಳಿಯ ಗಡಿಭಾಗದ ಹೊಯ್ಸಳಕಟ್ಟೆ,ದಸೂಡಿ ಮತ್ತು ಗಾಣಧಾಳು ಕ್ಲಸ್ಟರ್ ಗೆ ಸೇರಿದ ಎಲ್ಲಾ ಸರ್ಕಾರಿ ಕಿರಿಯ ಹಾಗೂ ಹಿರಿಯ ಶಾಲೆಗಳಿಗೆ ಖಾಲಿಯಿರುವ ಹುದ್ದೆಗಳಿಗೆ ಶಿಕ್ಷಕರನ್ನು ಕೂಡಲೇ ನೇಮಿಸುವಂತೆ ಒತ್ತಾಯಿಸಿ ಆ ಭಾಗದ ೩೩ ಸರ್ಕಾರಿ ಶಾಲೆಗಳಿಗೆ ಸಾಮೂಹಿಕ ಬೀಗ ಹಾಕುವ ಮೂಲಕ ಹೊಯ್ಸಳಕಟ್ಟೆಯ ಬಸ್ ನಿಲ್ದಾಣದ ಮುಂಭಾಗ ಶುಕ್ರವಾರದಿಂದ ಅಹೋರಾತ್ರಿ ಧರಣಿ ಆರಂಭಿಸಲಾಗಿತ್ತು.

                    ಹೋರಾಟಗಾರ ದಬ್ಬಗುಂಟೆ ರವಿಕುಮಾರ್ ಮುಂದಾಳತ್ವದಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್,ಹೊಯ್ಸಳಕಟ್ಟೆ ಜಿಪಂ ಸದಸ್ಯ ಎಸ್.ಟಿ.ಮಹಾಲಿಂಗಯ್ಯ,ತಾಪಂ ಅಧ್ಯಕ್ಷೆ ಹೊನ್ನಮ್ಮ,ರೈತ ಸಂಘದ ಕೆಂಕೆರೆ ಸತೀಶ್ ಸೇರಿದಂತೆ ಆ ಭಾಗದ ಎಲ್ಲಾ ಜನಪ್ರತಿನಿಧಿಗಳ ಬೆಂಬಲದೊಂದಿಗೆ ಆರಂಭವಾದ ಪ್ರತಿಭಟನೆ ದಿನೇದಿನೇ ತೀವ್ರವಾಗುತ್ತಿದ್ದಂತೆಯೇ ಎಚ್ಚೆತ್ತ ಇಲಾಖೆ ಸಮಸ್ಯೆ ಪರಿಹರಿಸಲು ಮುಂದಾಯಿತು. ಸ್ಥಳಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರೆ ಬಂದು ಅತಿಥಿ ಶಿಕ್ಷಕರ ಹುದ್ದೆ ನೀಡುವ ಮೂಲಕ ಉಂಟಾಗಿರುವ ಶಿಕ್ಷಕರ ಕೊರತೆ ನಿವಾರಿಸುವುದಾಗಿ ಭರವಸೆ ನೀಡಿದ್ದರು.
          ಅಂತೆಯೇ ಸೋಮವಾರದಂದು ಚಿಕ್ಕನಾಯಕನಹಳ್ಳಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೆಚ್ಚುವರಿ ಕೌನ್ಸಿಲಿಂಗ್ ಮಾಡಿ ೧೮ ಶಿಕ್ಷಕರನ್ನು ಆ ಭಾಗಕ್ಕೆ ಆಯ್ಕೆ ಮಾಡಿಕೊಂಡು ಸ್ಥಳ ನಿಯುಕ್ತಿ ಆದೇಶ ಕೂಡ ಹೊರಡಿಸಿದ್ದಾರೆ.ಈ ಬಗ್ಗೆ ಧರಣಿನಿರತರಿಗೆ ಮಾಹಿತಿ ನೀಡಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಉಳಿದ ಹುದ್ದೆಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಕೌನ್ಸಿಲಿಂಗ್ ನಲ್ಲಿ ಕರೆಯಲಾಗುವುದು.ಅಲ್ಲದೆ ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ಮುಗಿಯ್ಯುತ್ತಿದ್ದಂತೆ ರಾಜ್ಯಮಟ್ಟದಿಂದ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವ ಭರವಸೆಯಿತ್ತು ಪ್ರತಿಭಟನೆ ಹಿಂಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
                 ಇದರೊಟ್ಟಿಗೆ ಧರಣಿನಿರತರ ಸಮಸ್ಯೆಗೆ ಸ್ಪಂದಿಸಿದ ಸಾಸಲು ಸತೀಶ್ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಸರ್ಕಾರದ ಹಣಕಾಸು ಇಲಾಖೆಯ ಅನುಮತಿ ಪಡೆದಿದ್ದು ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಅನುಕೂಲವಾಗಿ ಕೌನ್ಸಿಲಿಂಗ್ ಯಶಸ್ವಿಯಾಗಿ ನಡೆಯಲು ಸಹಕಾರಿಯಾಯಿತು ಎನ್ನಲಾಗಿದೆ..

           ಒಟ್ಟಾರೆ ಶಿಕ್ಷಣ ಇಲಾಖೆಯ ಕ್ರಮದಿಂದಾಗಿ ಕಳೆದ ನಾಲ್ಕು ದಿನಗಳಿಂದ ಸರ್ಕಾರಿ ಶಾಲೆಗಳು ಇಂದು ತೆರೆದು ಪಾಠ ಪ್ರವಚನ ಎಂದಿನಂತೆ ಶುರುವಾಯಿತು.

             ಮಂಗಳವಾರ ಮಧ್ಯಾಹ್ನ ಜನಪ್ರತಿನಿಧಿಗಳು,ಪೋಷಕರು,ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆದು ಧರಣಿ ಹಿಂಪಡೆಯಲು ಒಪ್ಪಲಾಯಿತು .ದಸೂಡಿ ಕ್ಷೇತ್ರದ ತಾ.ಪಂ ಸದಸ್ಯ ಪ್ರಸನ್ನಕುಮಾರ್, ಹೊಯ್ಸಳಕಟ್ಟೆ ತಾ.ಪಂ ಸದಸ್ಯ ಆರ್.ಕೆ.ಪುಟ್ಟಣ್ಣ,ಸುವರ್ಣವಿದ್ಯಾ ಚೇತನದ ಅಧ್ಯಕ್ಷ ರಾಮಕೃಷ್ಣಪ್ಪ,ರೈತ ಸಂಘದ ರಾಜ್ಯ ಸಂಚಾಲಕ ಕೆಂಕೆರೆ ಸತೀಶ್,ಗ್ರಾ.ಪಂ ಸದಸ್ಯರುಗಳಾದ ಗಿರೀಶ್,ರಘುವೀರ್,ರಂಗನಾಥ್,ವಕೀಲರಾದ ಮೋಹನ್,ಗಾಣಧಾಳು ಗ್ರಾಪಂ ಸದಸ್ಯ ಮಧುಸೂದನ್ ,ಸದಸ್ಯ ಕಾಂತರಾಜು,ಯುವರಾಜು ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...