ವಿಷಯಕ್ಕೆ ಹೋಗಿ

ಹೊರಬಿತ್ತು ೧೮ ಶಿಕ್ಷಕರ ಸ್ಥಳ ನಿಯುಕ್ತಿ ಆದೇಶ

ಅಂತ್ಯಗೊಂಡ ಧರಣಿ : ೩೩ ಶಾಲೆಗಳ ಪುನರಾರಂಭ
--------------------------------------
ಹುಳಿಯಾರು: ಹುಳಿಯಾರು ಹೋಬಳಿ ಗಡಿ ಗ್ರಾಮಗಳ ಶಾಲೆಗಳಿಗೆ ಸೋಮವಾರದಂದು ನಡೆದ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ೧೮ ಶಿಕ್ಷಕರನ್ನು ನೇಮಿಸಿರುವ ಆದೇಶ ಹೊರಬೀಳುತ್ತಿದ್ದಂತೆಯೇ ಹೊಯ್ಸಲಕಟ್ಟೆ ಸರ್ಕಲ್‌ನಲ್ಲಿ ಕಳೆದ ಐದು ದಿನಗಳಿಂದ ನಡೆಯುತ್ತಿದ ಧರಣಿ ಮಂಗಳವಾರದಂದು ಅಂತ್ಯಗೊಂಡಿತು.
                 ಹುಳಿಯಾರು ಹೋಬಳಿಯ ಗಡಿಭಾಗದ ಹೊಯ್ಸಳಕಟ್ಟೆ,ದಸೂಡಿ ಮತ್ತು ಗಾಣಧಾಳು ಕ್ಲಸ್ಟರ್ ಗೆ ಸೇರಿದ ಎಲ್ಲಾ ಸರ್ಕಾರಿ ಕಿರಿಯ ಹಾಗೂ ಹಿರಿಯ ಶಾಲೆಗಳಿಗೆ ಖಾಲಿಯಿರುವ ಹುದ್ದೆಗಳಿಗೆ ಶಿಕ್ಷಕರನ್ನು ಕೂಡಲೇ ನೇಮಿಸುವಂತೆ ಒತ್ತಾಯಿಸಿ ಆ ಭಾಗದ ೩೩ ಸರ್ಕಾರಿ ಶಾಲೆಗಳಿಗೆ ಸಾಮೂಹಿಕ ಬೀಗ ಹಾಕುವ ಮೂಲಕ ಹೊಯ್ಸಳಕಟ್ಟೆಯ ಬಸ್ ನಿಲ್ದಾಣದ ಮುಂಭಾಗ ಶುಕ್ರವಾರದಿಂದ ಅಹೋರಾತ್ರಿ ಧರಣಿ ಆರಂಭಿಸಲಾಗಿತ್ತು.

                    ಹೋರಾಟಗಾರ ದಬ್ಬಗುಂಟೆ ರವಿಕುಮಾರ್ ಮುಂದಾಳತ್ವದಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್ ಕುಮಾರ್,ಹೊಯ್ಸಳಕಟ್ಟೆ ಜಿಪಂ ಸದಸ್ಯ ಎಸ್.ಟಿ.ಮಹಾಲಿಂಗಯ್ಯ,ತಾಪಂ ಅಧ್ಯಕ್ಷೆ ಹೊನ್ನಮ್ಮ,ರೈತ ಸಂಘದ ಕೆಂಕೆರೆ ಸತೀಶ್ ಸೇರಿದಂತೆ ಆ ಭಾಗದ ಎಲ್ಲಾ ಜನಪ್ರತಿನಿಧಿಗಳ ಬೆಂಬಲದೊಂದಿಗೆ ಆರಂಭವಾದ ಪ್ರತಿಭಟನೆ ದಿನೇದಿನೇ ತೀವ್ರವಾಗುತ್ತಿದ್ದಂತೆಯೇ ಎಚ್ಚೆತ್ತ ಇಲಾಖೆ ಸಮಸ್ಯೆ ಪರಿಹರಿಸಲು ಮುಂದಾಯಿತು. ಸ್ಥಳಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರೆ ಬಂದು ಅತಿಥಿ ಶಿಕ್ಷಕರ ಹುದ್ದೆ ನೀಡುವ ಮೂಲಕ ಉಂಟಾಗಿರುವ ಶಿಕ್ಷಕರ ಕೊರತೆ ನಿವಾರಿಸುವುದಾಗಿ ಭರವಸೆ ನೀಡಿದ್ದರು.
          ಅಂತೆಯೇ ಸೋಮವಾರದಂದು ಚಿಕ್ಕನಾಯಕನಹಳ್ಳಿಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೆಚ್ಚುವರಿ ಕೌನ್ಸಿಲಿಂಗ್ ಮಾಡಿ ೧೮ ಶಿಕ್ಷಕರನ್ನು ಆ ಭಾಗಕ್ಕೆ ಆಯ್ಕೆ ಮಾಡಿಕೊಂಡು ಸ್ಥಳ ನಿಯುಕ್ತಿ ಆದೇಶ ಕೂಡ ಹೊರಡಿಸಿದ್ದಾರೆ.ಈ ಬಗ್ಗೆ ಧರಣಿನಿರತರಿಗೆ ಮಾಹಿತಿ ನೀಡಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಉಳಿದ ಹುದ್ದೆಗಳನ್ನು ಜಿಲ್ಲಾ ಮಟ್ಟದಲ್ಲಿ ನಡೆಯಲಿರುವ ಕೌನ್ಸಿಲಿಂಗ್ ನಲ್ಲಿ ಕರೆಯಲಾಗುವುದು.ಅಲ್ಲದೆ ಜಿಲ್ಲಾ ಮಟ್ಟದ ಕೌನ್ಸಿಲಿಂಗ್ ಮುಗಿಯ್ಯುತ್ತಿದ್ದಂತೆ ರಾಜ್ಯಮಟ್ಟದಿಂದ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲಾಗುವ ಭರವಸೆಯಿತ್ತು ಪ್ರತಿಭಟನೆ ಹಿಂಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
                 ಇದರೊಟ್ಟಿಗೆ ಧರಣಿನಿರತರ ಸಮಸ್ಯೆಗೆ ಸ್ಪಂದಿಸಿದ ಸಾಸಲು ಸತೀಶ್ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲು ಸರ್ಕಾರದ ಹಣಕಾಸು ಇಲಾಖೆಯ ಅನುಮತಿ ಪಡೆದಿದ್ದು ಅತಿಥಿ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಅನುಕೂಲವಾಗಿ ಕೌನ್ಸಿಲಿಂಗ್ ಯಶಸ್ವಿಯಾಗಿ ನಡೆಯಲು ಸಹಕಾರಿಯಾಯಿತು ಎನ್ನಲಾಗಿದೆ..

           ಒಟ್ಟಾರೆ ಶಿಕ್ಷಣ ಇಲಾಖೆಯ ಕ್ರಮದಿಂದಾಗಿ ಕಳೆದ ನಾಲ್ಕು ದಿನಗಳಿಂದ ಸರ್ಕಾರಿ ಶಾಲೆಗಳು ಇಂದು ತೆರೆದು ಪಾಠ ಪ್ರವಚನ ಎಂದಿನಂತೆ ಶುರುವಾಯಿತು.

             ಮಂಗಳವಾರ ಮಧ್ಯಾಹ್ನ ಜನಪ್ರತಿನಿಧಿಗಳು,ಪೋಷಕರು,ಗ್ರಾಮಸ್ಥರ ಸಮ್ಮುಖದಲ್ಲಿ ಸಭೆ ನಡೆದು ಧರಣಿ ಹಿಂಪಡೆಯಲು ಒಪ್ಪಲಾಯಿತು .ದಸೂಡಿ ಕ್ಷೇತ್ರದ ತಾ.ಪಂ ಸದಸ್ಯ ಪ್ರಸನ್ನಕುಮಾರ್, ಹೊಯ್ಸಳಕಟ್ಟೆ ತಾ.ಪಂ ಸದಸ್ಯ ಆರ್.ಕೆ.ಪುಟ್ಟಣ್ಣ,ಸುವರ್ಣವಿದ್ಯಾ ಚೇತನದ ಅಧ್ಯಕ್ಷ ರಾಮಕೃಷ್ಣಪ್ಪ,ರೈತ ಸಂಘದ ರಾಜ್ಯ ಸಂಚಾಲಕ ಕೆಂಕೆರೆ ಸತೀಶ್,ಗ್ರಾ.ಪಂ ಸದಸ್ಯರುಗಳಾದ ಗಿರೀಶ್,ರಘುವೀರ್,ರಂಗನಾಥ್,ವಕೀಲರಾದ ಮೋಹನ್,ಗಾಣಧಾಳು ಗ್ರಾಪಂ ಸದಸ್ಯ ಮಧುಸೂದನ್ ,ಸದಸ್ಯ ಕಾಂತರಾಜು,ಯುವರಾಜು ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...