ವಿಷಯಕ್ಕೆ ಹೋಗಿ

ಶಿಕ್ಷಕರ ನೇಮಕಾತಿಗೆ ಒತ್ತಾಯಿಸಿ ಎರಡನೇ ದಿನವೂ ಮುಂದುವರಿದ ಧರಣಿ

ಶುಕ್ರವಾರದಿಂದಲೂ ೩೨ ಶಾಲೆಗಳಿಗೆ ಬೀಗ;ಮಕ್ಕಳಿಗೆ ಸಾಮೂಹಿಕ ರಜೆ
---------------------------------
ಹುಳಿಯಾರು:ಹೋಬಳಿಯ ಗಡಿಭಾಗದ ಶಾಲೆಗಳ ಶಿಕ್ಷಕರ ಸಮಸ್ಯೆ ನಿವಾರಿಸುವಂತೆ ಶುಕ್ರವಾರದಿಂದ ನಡೆಯುತ್ತಿರುವ ಧರಣಿ ಶನಿವಾರದಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಇಲಾಖೆಯ ಯಾರೊಬ್ಬ ಅಧಿಕಾರಿಗಳು ಇತ್ತ ತಲೆಹಾಕಿಲ್ಲದಿರುವುದು ಪ್ರತಿಭಟನೆಯ ಕಾವೇರಲೂ ಕಾರಣವಾಗಿದ್ದು ಇದೇ ಕಾರಣಕ್ಕೆ ಈ ಭಾಗದ ಎಲ್ಲಾ ೩೨ ಶಾಲೆಗಳಿಗೂ ಬೀಗ ಹಾಕಿದ್ದು ಮಕ್ಕಳಿಗೆ ರಜೆ ಘೋಷಿಸಲಾಗಿದೆ.ಸಧ್ಯ ಶಾಂತ ರೀತಿಯಲ್ಲಿ ಧರಣಿ ಮುಂದುವರೆದಿದೆ.
ಹುಳಿಯಾರು ಹೋಬಳಿಯ ಹೊಯ್ಸಳಕಟ್ಟೆ,ದಸೂಡಿ ಮತ್ತು ಗಾಣಧಾಳು ಕ್ಲಸ್ಟರ್ ಗೆ ಸೇರಿದ ಶಾಲೆಗಳಿಗೆ ಶಿಕ್ಷಕರನ್ನು ನೇಮಿಸುವಂತೆ ಒತ್ತಾಯಿಸಿ ಹೊಯ್ಸಳಕಟ್ಟೆಯ ಬಸ್ ನಿಲ್ದಾಣದ ಮುಂಭಾಗ ನಡೆದಿರುವ ಅಹೋರಾತ್ರಿ ಧರಣಿ
ಪ್ರತಿಭಟನೆಯ ಇಂದಿನ ನೇತೃತ್ವ ವಹಿಸಿಕೊಂಡಿದ್ದ ಹೊಯ್ಸಳಕಟ್ಟೆ ಗ್ರಾಮಪಂಚಾಯ್ತಿ ಸದಸ್ಯ ಗಿರೀಶ್ ಮಾತನಾಡಿ ಈ ಭಾಗದಲ್ಲಿ ಕಳೆದ ಮೂರು ವರ್ಷಗಳಿಂದಲೂ ಶಿಕ್ಷಕರ ಕೊರತೆ ಇದ್ದೇಯಿದ್ದು ಸಮಸ್ಯೆಯಿಂದಾಗಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿದ್ದು ಕೆಲವೊಂದು ಶಾಲೆಗಳು ಮುಚ್ಚಿದ ಉದಾಹರಣೆ ಕೂಡ ಇದೆ.ಹೊಯ್ಸಳಕಟ್ಟೆ ಕ್ಲಸ್ಟರ್ ವ್ಯಾಪ್ತಿಯಲ್ಲಿನ ೭೩೧ ವಿದ್ಯಾರ್ಥಿಗಳಿಗೆ ೩೧ ಶಿಕ್ಷಕರಿದ್ದು ೧೦ ಶಿಕ್ಷಕರ ಕೊರತೆಯಿದೆ.ದಸೂಡಿ ಕ್ಲಸ್ಟರ್ ವ್ಯಾಪ್ತಿಯಲ್ಲಿನ ೮೫೦ ವಿದ್ಯಾರ್ಥಿಗಳಿಗೆ ೧೯ ಶಿಕ್ಷಕರಿದ್ದು ೨೦ ಶಿಕ್ಷಕರ ಕೊರತೆಯಿದೆ.ಅದೇರೀತಿ ೫೪೮ ವಿದ್ಯಾರ್ಥಿಗಳಿರುವ ಗಾಣಧಾಳು ಕ್ಲಸ್ಟರ್ ನಲ್ಲಿ ೨೭ ಶಿಕ್ಷಕರಿದ್ದು ೧೩ ಶಿಕ್ಷಕರ ಕೊರತೆಯಿದ ಎಂದು ಸಮಸ್ಯೆ ಬಿಚ್ಚಿಟ್ಟರು.

ಸುವರ್ಣ ವಿದ್ಯಾಚೇತನದ ಅಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ ಇಲಾಖೆಯ ಕೌನ್ಸೆಲಿಂಗ್ ಸಮಸ್ಯೆ ಏನೇಯಿದ್ದರೂ ನಮಗದು ಬೇಡ. ಸ್ಥಳಕ್ಕೆ ಖುದ್ದು ಆಯುಕ್ತರೇ ಬರಬೇಕು.ಇಲ್ಲಿನ ಶಾಲೆಗಳಲ್ಲಿನ ಸ್ಥಿತಿಗತಿ ಅರಿಯಬೇಕು.ಎಲ್ಲಾ ಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಶಿಕ್ಷಕರನ್ನು ನೇಮಿಸಬೇಕು. ಅಲ್ಲಿಯವರೆಗೂ ಎಲ್ಲಾ ೩೨ ಶಾಲೆಗಳನ್ನು ತೆರಯಲು ಬಿಡುವುದಿಲ್ಲ ಎಂದು ಖಡಕ್ಕಾಗಿ ನುಡಿದರು.
                 ನೇಮಕಾತಿ ಆದೇಶ ಬರುವವರೆಗೂ ಅಹೋರಾತ್ರಿ ಧರಣಿ ನಿಲ್ಲುವುದಿಲ್ಲವೆಂದು ಪಟ್ಟುಹಿಡಿದಿರುವ ಪ್ರತಿಭಟನಾಕಾರರು ಅಲ್ಲೆ ಊಟತಿಂಡಿ ಮಾಡಿ ರಾತ್ರಿ ಕಳೆದಿದ್ದಾರೆ.
ಅಹೋರಾತ್ರಿ ಧರಣಿಯಲ್ಲಿ ಕೊರೆಯುವ ಛಳಿಯಲ್ಲಿ ರಾತ್ರಿ ಕಳೆದ ಮುಖಂಡರುಗಳು 
ಮಾಜಿ ಗ್ರಾಪಂ ಅಧ್ಯಕ್ಷ ದಬ್ಬಗುಂಟೆ ರವಿಕುಮಾರ್ ,ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸನ್ನಕುಮಾರ್, ಹೊಯ್ಸಳಕಟ್ಟೆ ತಾ.ಪಂ ಸದಸ್ಯ ಆರ್.ಕೆ.ಪುಟ್ಟಣ್ಣ,ರೈತ ಸಂಘದ ರಾಜ್ಯ ಸಂಚಾಲಕ ಕೆಂಕೆರೆ ಸತೀಶ್, ಗ್ರಾಪಂ ಸದಸ್ಯರುಗಳಾದ ಮಧುಸೂದನ್ ,ರಘುವೀರ್,ಕಾಂತರಾಜು,ರಂಗನಾಥ್, ವಕೀಲರಾದ ಮೋಹನ್, ದಸೂಡಿ ಗ್ರಾ.ಪಂ ಉಪಾಧ್ಯಕ್ಷ ಹನುಮಂತರಾಯಪ್ಪ,ಸದಸ್ಯ ಕಾಂತರಾಜು, ಯುವರಾಜು ಸೇರಿದಂತೆ ಎಸ್ಡಿಎಂಸಿ ಸದಸ್ಯರು,ಗ್ರಾಮಸ್ಥರು ಹಾಗೂ ಮಕ್ಕಳು ಪಾಲ್ಗೊಂಡಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.