ವಿಷಯಕ್ಕೆ ಹೋಗಿ

ಹೊಸಳ್ಳಿಯ ರಂಗಪ್ಪ ತಾತನಿಗೆ 105 ನೇ ಹುಟ್ಟುಹಬ್ಬದ ಸಂಭ್ರಮ

         ಹುಳಿಯಾರು ಸಮೀಪದ ಹೊಸಹಳ್ಳಿ ಗ್ರಾಮದ ರಂಗಪ್ಪ ತಾತನಿಗಿಂದು 105 ನೇ ವರ್ಷದ ಹುಟ್ಟುಹಬ್ಬ ಸಂಭ್ರಮ. 
ರಂಗಪ್ಪ ತಾತನಿಗೆ 105 ನೇ ಹುಟ್ಟುಹಬ್ಬದ ಸಂಭ್ರಮ
        ಷಷ್ಟ್ಯಬ್ದಿ ಕಾರ್ಯಕ್ರಮಗಳೆ  ಅಪರೂಪವಾಗುತ್ತಿರುವ ಇಂದಿನ ದಿನದಲ್ಲಿ ಶತಯುಷ್ಯ ಕಳೆದು ಮುನ್ನುಗ್ಗುತ್ತಿರುವ ತಾತನಿಗೆ ಗುರುವಾರದಂದು ಕುಟುಂಬದ ಸದಸ್ಯರು ಹಾಗೂ ಹಿತೈಷಿಗಳು ಸೇರಿ ಹಾರ ಹಾಕಿ ,ಕೇಕ್ ಕಟ್ ಮಾಡಿಸಿ ಹುಟ್ಟುಹಬ್ಬವನ್ನು ಆಚರಿಸಿ ಸಂಭ್ರಮಿಸಿದರು.ಗ್ರಾಮಸ್ಥರೆಲ್ಲ ಸೇರಿ ಹಿರಿಯ ಜೀವಿಗೆ ನಮಸ್ಕರಿಸಿ ಗೌರವಿಸಿದರು.ಅಜ್ಜನ ಬರ್ತ್ ಡೇ ಯಲ್ಲಿ ಕೇಕ್ ತಿಂದು ಊಟ ಮಾಡಿ ಇನ್ನಷ್ಟು ಕಾಲ ಆರೋಗ್ಯವಾಗಿ ಬದುಕಲಿ ಎಂದು ಹಾರೈಸಿದರು. 
                ಹುಟ್ಟುಹಬ್ಬದ ಅಂಗವಾಗಿ ತಾತನ ಮಕ್ಕಳು,ಮೊಮ್ಮಕ್ಕಳು,ಮರಿಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ಸೇರಿಕೊಂಡು ದೊಡ್ಡಗಾತ್ರದ ಕೇಕ್ ತಂದು ರಂಗಪ್ಪನವರ ಕೈಯಿಂದಲೇ ಕತ್ತರಿಸಿ ಶುಭಾಶಯ ಹೇಳಿದರು. ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಆಗಮಿಸಿದ್ದ ಭಗೀರಥ ಉಪ್ಪಾರ ಪೀಠದ ಪುರುಷೋತ್ತಮನಂದಸ್ವಾಮೀಜಿ ಮಾತನಾಡಿ ಹಿರಿಯ ಜೀವಿ ರಂಗಪ್ಪನವರು 105 ವರ್ಷದ ತುಂಬು ಜೀವನವನ್ನು ಪೂರೈಸಿದ್ದಾರೆ. ಕೃಷಿ ವೃತ್ತಿಯನ್ನು ಅವಲಂಸಿದ್ದ ಅವರು ಕಷ್ಟದ ದಿನಗಳನ್ನು ಕಂಡಿದ್ದಾರೆ. ಇಂತಹ ಇಳಿ ವಯಸ್ಸಿನಲ್ಲೂ ಲವಲವಿಕೆಯಾಗಿ ಆರೋಗ್ಯವಾಗಿದ್ದಾರೆ.ಮಿತ ಆಹಾರ ಸೇವನೆ ಹಾಗೂ ಮೈಸೋಲುವವರೆಗೂ ಮಾಡುತ್ತಿದ್ದ ಕಾಯಕವೇ ಅವರ ದೀರ್ಘಾ ಆಯಸ್ಸಿನ ಗುಟ್ಟಾಗಿದೆ ಎಂದರು.
       
ರಂಗಪ್ಪ ತಾತನ 105 ನೇ ವರ್ಷದ ಹುಟ್ಟುಹಬ್ಬದಲ್ಲಿ ಭಗೀರಥ ಉಪ್ಪಾರ ಪೀಠದ ಪುರುಷೋತ್ತಮನಂದಸ್ವಾಮೀಜಿ ಪಾಲ್ಗೊಂಡಿದ್ದರು.
ರಂಗಪ್ಪ ತಾತನಿಗೆ ಈಗಲೂ ಕಣ್ಣು ಚುರುಕಾಗಿದ್ದು ಕಿವಿಯ 
ಸ್ವಲ್ಪ ಸಮಸ್ಯೆಯಿದೆ ಬಿಟ್ಟರೆ ಮತೆಲ್ಲ ಆರೋಗ್ಯವಾಗಿದ್ದಾರೆ.ಜೋರಾಗಿ ಹೇಳಿದರೆ ಕೇಳುತ್ತೆ.ಅವರ ಕಾಲದಲ್ಲಿ ಬಡತನದಿಂದ ಹಾಗೂ ವಿದ್ಯಾಭ್ಯಾಸಕ್ಕೆ ಅಷ್ಟಾಗಿ ಗಮನ ಕೊಡದಿದ್ದ ಕಾರಣದಿಂದಾಗಿ ಶಾಲೆ ಮೆಟ್ಟಿಲು ಏರಲಾಗಲಿಲ್ಲವಂತೆ.ಆರಂಭದಲ್ಲಿ ತೊಡಗಿಕೊಂಡಿದ್ದ ರಂಗಪ್ಪ ಓಡಾಡಲು ಕುದುರೆ ಸಾಕಿದ್ದರಂತೆ.ಕಿರಿ ವಯಸ್ಸಿನಲ್ಲಿ ಮದುವೆಯಾದ ಇವರಿಗೆ 12 ಮಕ್ಕಳು ಆದರೂ ಸಹ ಯಾರೊಬ್ಬರೂ ಬದುಕುಳಿಯದ ಕಾರಣ ಮತ್ತೊಂದು ಮದುವೆಯಾದರಂತೆ.ಹಾಗಾಗಿ ಅವರಿಗೆ 4 ಜನ ಗಂಡು ಮತ್ತು ಒಬ್ಬರು ಹೆಣ್ಣು ಮಕ್ಕಳಾಗಿ ಇದೀಗ 40 ಮಂದಿ ಮೊಮ್ಮಕ್ಕಳು, ಮರಿಮಕ್ಕಳು ಇದ್ದು ಇಬ್ಬರು ಪತ್ನಿಯರ ಪೈಕಿ ಮೊದನೆ ಪತ್ನಿ ತೀರಿ ಹೋಗಿದ್ದಾರೆ.
ರಂಗಪ್ಪ ತಾತನ 105 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಕುಟುಂಬ ವರ್ಗದವರು.
          ಈಗಲೂ ಸಹ ಚಟುವಟಿಕೆಯಿಂದಿರುವ ರಂಗಪ್ಪನವರು ತುಮಕೂರಿನ ಸಿದ್ದಗಂಗಾ ಶಿವಕುಮಾರಸ್ವಾಮೀಜಿಗಳ ಓರಗೆಯವರಂತೆ.ಅವರಂತೆ ತಾವು ಸಹ ಧೀರ್ಘಾಯುಷಿಯಾಗಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ತಾತ ಅವರು ನಮ್ಮ ಭಾಗಕ್ಕೆ ಬಂದಾಗ ಅವರನ್ನು ಕಂಡಿದ್ದೆ ಎಂದು ಸ್ವಾಮೀಜಿಯವರನ್ನು ಕಂಡಿದ್ದನ್ನು ಜ್ಞಾಪಿಸಿಕೊಂಡರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...