ವಿಷಯಕ್ಕೆ ಹೋಗಿ

ಹೊಸಳ್ಳಿಯ ರಂಗಪ್ಪ ತಾತನಿಗೆ 105 ನೇ ಹುಟ್ಟುಹಬ್ಬದ ಸಂಭ್ರಮ

         ಹುಳಿಯಾರು ಸಮೀಪದ ಹೊಸಹಳ್ಳಿ ಗ್ರಾಮದ ರಂಗಪ್ಪ ತಾತನಿಗಿಂದು 105 ನೇ ವರ್ಷದ ಹುಟ್ಟುಹಬ್ಬ ಸಂಭ್ರಮ. 
ರಂಗಪ್ಪ ತಾತನಿಗೆ 105 ನೇ ಹುಟ್ಟುಹಬ್ಬದ ಸಂಭ್ರಮ
        ಷಷ್ಟ್ಯಬ್ದಿ ಕಾರ್ಯಕ್ರಮಗಳೆ  ಅಪರೂಪವಾಗುತ್ತಿರುವ ಇಂದಿನ ದಿನದಲ್ಲಿ ಶತಯುಷ್ಯ ಕಳೆದು ಮುನ್ನುಗ್ಗುತ್ತಿರುವ ತಾತನಿಗೆ ಗುರುವಾರದಂದು ಕುಟುಂಬದ ಸದಸ್ಯರು ಹಾಗೂ ಹಿತೈಷಿಗಳು ಸೇರಿ ಹಾರ ಹಾಕಿ ,ಕೇಕ್ ಕಟ್ ಮಾಡಿಸಿ ಹುಟ್ಟುಹಬ್ಬವನ್ನು ಆಚರಿಸಿ ಸಂಭ್ರಮಿಸಿದರು.ಗ್ರಾಮಸ್ಥರೆಲ್ಲ ಸೇರಿ ಹಿರಿಯ ಜೀವಿಗೆ ನಮಸ್ಕರಿಸಿ ಗೌರವಿಸಿದರು.ಅಜ್ಜನ ಬರ್ತ್ ಡೇ ಯಲ್ಲಿ ಕೇಕ್ ತಿಂದು ಊಟ ಮಾಡಿ ಇನ್ನಷ್ಟು ಕಾಲ ಆರೋಗ್ಯವಾಗಿ ಬದುಕಲಿ ಎಂದು ಹಾರೈಸಿದರು. 
                ಹುಟ್ಟುಹಬ್ಬದ ಅಂಗವಾಗಿ ತಾತನ ಮಕ್ಕಳು,ಮೊಮ್ಮಕ್ಕಳು,ಮರಿಮಕ್ಕಳು ಸೇರಿದಂತೆ ಕುಟುಂಬ ಸದಸ್ಯರು ಸೇರಿಕೊಂಡು ದೊಡ್ಡಗಾತ್ರದ ಕೇಕ್ ತಂದು ರಂಗಪ್ಪನವರ ಕೈಯಿಂದಲೇ ಕತ್ತರಿಸಿ ಶುಭಾಶಯ ಹೇಳಿದರು. ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಆಗಮಿಸಿದ್ದ ಭಗೀರಥ ಉಪ್ಪಾರ ಪೀಠದ ಪುರುಷೋತ್ತಮನಂದಸ್ವಾಮೀಜಿ ಮಾತನಾಡಿ ಹಿರಿಯ ಜೀವಿ ರಂಗಪ್ಪನವರು 105 ವರ್ಷದ ತುಂಬು ಜೀವನವನ್ನು ಪೂರೈಸಿದ್ದಾರೆ. ಕೃಷಿ ವೃತ್ತಿಯನ್ನು ಅವಲಂಸಿದ್ದ ಅವರು ಕಷ್ಟದ ದಿನಗಳನ್ನು ಕಂಡಿದ್ದಾರೆ. ಇಂತಹ ಇಳಿ ವಯಸ್ಸಿನಲ್ಲೂ ಲವಲವಿಕೆಯಾಗಿ ಆರೋಗ್ಯವಾಗಿದ್ದಾರೆ.ಮಿತ ಆಹಾರ ಸೇವನೆ ಹಾಗೂ ಮೈಸೋಲುವವರೆಗೂ ಮಾಡುತ್ತಿದ್ದ ಕಾಯಕವೇ ಅವರ ದೀರ್ಘಾ ಆಯಸ್ಸಿನ ಗುಟ್ಟಾಗಿದೆ ಎಂದರು.
       
ರಂಗಪ್ಪ ತಾತನ 105 ನೇ ವರ್ಷದ ಹುಟ್ಟುಹಬ್ಬದಲ್ಲಿ ಭಗೀರಥ ಉಪ್ಪಾರ ಪೀಠದ ಪುರುಷೋತ್ತಮನಂದಸ್ವಾಮೀಜಿ ಪಾಲ್ಗೊಂಡಿದ್ದರು.
ರಂಗಪ್ಪ ತಾತನಿಗೆ ಈಗಲೂ ಕಣ್ಣು ಚುರುಕಾಗಿದ್ದು ಕಿವಿಯ 
ಸ್ವಲ್ಪ ಸಮಸ್ಯೆಯಿದೆ ಬಿಟ್ಟರೆ ಮತೆಲ್ಲ ಆರೋಗ್ಯವಾಗಿದ್ದಾರೆ.ಜೋರಾಗಿ ಹೇಳಿದರೆ ಕೇಳುತ್ತೆ.ಅವರ ಕಾಲದಲ್ಲಿ ಬಡತನದಿಂದ ಹಾಗೂ ವಿದ್ಯಾಭ್ಯಾಸಕ್ಕೆ ಅಷ್ಟಾಗಿ ಗಮನ ಕೊಡದಿದ್ದ ಕಾರಣದಿಂದಾಗಿ ಶಾಲೆ ಮೆಟ್ಟಿಲು ಏರಲಾಗಲಿಲ್ಲವಂತೆ.ಆರಂಭದಲ್ಲಿ ತೊಡಗಿಕೊಂಡಿದ್ದ ರಂಗಪ್ಪ ಓಡಾಡಲು ಕುದುರೆ ಸಾಕಿದ್ದರಂತೆ.ಕಿರಿ ವಯಸ್ಸಿನಲ್ಲಿ ಮದುವೆಯಾದ ಇವರಿಗೆ 12 ಮಕ್ಕಳು ಆದರೂ ಸಹ ಯಾರೊಬ್ಬರೂ ಬದುಕುಳಿಯದ ಕಾರಣ ಮತ್ತೊಂದು ಮದುವೆಯಾದರಂತೆ.ಹಾಗಾಗಿ ಅವರಿಗೆ 4 ಜನ ಗಂಡು ಮತ್ತು ಒಬ್ಬರು ಹೆಣ್ಣು ಮಕ್ಕಳಾಗಿ ಇದೀಗ 40 ಮಂದಿ ಮೊಮ್ಮಕ್ಕಳು, ಮರಿಮಕ್ಕಳು ಇದ್ದು ಇಬ್ಬರು ಪತ್ನಿಯರ ಪೈಕಿ ಮೊದನೆ ಪತ್ನಿ ತೀರಿ ಹೋಗಿದ್ದಾರೆ.
ರಂಗಪ್ಪ ತಾತನ 105 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಕುಟುಂಬ ವರ್ಗದವರು.
          ಈಗಲೂ ಸಹ ಚಟುವಟಿಕೆಯಿಂದಿರುವ ರಂಗಪ್ಪನವರು ತುಮಕೂರಿನ ಸಿದ್ದಗಂಗಾ ಶಿವಕುಮಾರಸ್ವಾಮೀಜಿಗಳ ಓರಗೆಯವರಂತೆ.ಅವರಂತೆ ತಾವು ಸಹ ಧೀರ್ಘಾಯುಷಿಯಾಗಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ತಾತ ಅವರು ನಮ್ಮ ಭಾಗಕ್ಕೆ ಬಂದಾಗ ಅವರನ್ನು ಕಂಡಿದ್ದೆ ಎಂದು ಸ್ವಾಮೀಜಿಯವರನ್ನು ಕಂಡಿದ್ದನ್ನು ಜ್ಞಾಪಿಸಿಕೊಂಡರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...