ವಿಷಯಕ್ಕೆ ಹೋಗಿ

ಮಕ್ಕಳ ಪ್ರತಿಭೆ ಗುರ್ತಿಸುವ ಕೆಲಸ ಶಿಕ್ಷರಿಂದಾಗಬೇಕು.

ಹುಳಿಯಾರು : ಇಂದಿನ ಸ್ಪರ್ಧಾತ್ಮಕ ದಿನದಲ್ಲಿ ಶಿಕ್ಷಣಕ್ಕೆ ಮಹತ್ವವಿದ್ದು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಬೇಕು.ಕಲಿತ ವಿದ್ಯೆ ನಮ್ಮೊಂದಿಗೆ ಕಡೆಯತನಕವಿರುತ್ತದೆ.ಮಕ್ಕಳಲ್ಲಿನ ಪ್ರತಿಭೆ ಗುರ್ತಿಸಿ ಅವರನ್ನು ಮುಂದೆ ತರುವ ಕೆಲಸ ಶಿಕ್ಷರಿಂದಾಗಬೇಕು ಎಂದು ಉಚ್ಚನ್ಯಾಯಾಲಯದ ನ್ಯಾಯವಾದಿ ಆರ್.ರಾಮಚಂದ್ರಪ್ಪ ಹೇಳಿದರು.
ಹುಳಿಯಾರಿನ ಎಂಪಿಎಸ್ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ ಪ್ರಾಥಮಿಕ ಶಾಲೆಗಳ ಹುಳಿಯಾರು ‘ಬಿ’ ವಿಭಾಗದ ಹೋಬಳಿ ಮಟ್ಟದ ಕ್ರೀಡಾಕೂಟದ ತಂಡಗಳನ್ನು ನ್ಯಾಯವಾದಿ ಆರ್.ರಾಮಚಂದ್ರಪ್ಪ ಪರಿಚಯ ಮಾಡಿಕೊಂಡರು.ತಾಪಂ ಸದಸ್ಯ ಹೆಚ್.ಎನ್.ಕುಮಾರ್ ,ಗ್ರಾ.ಪಂ ಅಧ್ಯಕ್ಷೆ ಸರಸ್ವತಿ ಭಾಯಿ,ಎಸ್‌ಡಿಎಮ್‌ಸಿ ಅಧ್ಯಕ್ಷ ರಾಜಶೇಖರ್,ಶಿಕ್ಷಣ ಸಂಯೋಜಕರಾದ ಶಾಂತಪ್ಪ,ಪ್ರಕಾಶ್ ಮೊದಲಾದವರಿದ್ದರು.
         ಹುಳಿಯಾರಿನ ಎಂಪಿಎಸ್ ಶಾಲಾ ಮೈದಾನದಲ್ಲಿ ಮೇಲನಹಳ್ಳಿಯ ಹಿರಿಯ ಪ್ರಾಥಮಿಕ ಪಾಠಶಾಲೆಯ ಆತಿಥ್ಯದಲ್ಲಿ ಏರ್ಪಡಿಸಿದ್ದ ಪ್ರಾಥಮಿಕ ಶಾಲೆಗಳ ಹುಳಿಯಾರು ‘ಬಿ’ ವಿಭಾಗದ ಹೋಬಳಿ ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

              ಸರ್ಕಾರವಿಂದು ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಿದ್ದು ಜಿಲ್ಲೆಯ ಗಡಿ ಭಾಗದ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿದ್ದು ಈ ಬಗ್ಗೆ ಗಮನ ಹರಿಸಬೇಕೆಂದರು.ನಾನು ಕೂಡ ತೀರಾಪುಟ್ಟಹಳ್ಳಿಯಿಂದ ಬಂದಿದ್ದು ಈ ಎತ್ತರ ತಲುಪಲು ಶಿಕ್ಷಣ ಕಾರಣವಾಗಿದ್ದು ನನ್ನೂರಿನ ಶಿಕ್ಷಕರಿಗಾಗಿ ಶಿಕ್ಷಣ ಭವನ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದರು.

           ಕ್ರೀಡಾಜ್ಯೋತಿ ಸ್ವೀಕರಿಸಿದ ತಾಪಂ ಸದಸ್ಯ ಹೆಚ್.ಎನ್.ಕುಮಾರ್ ಮಾತನಾಡಿ ಇಂದಿನ ದಿನಗಳಲ್ಲಿ ಮಕ್ಕಳು ಪಠ್ಯದ ಜೊತೆಗೆ ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು.ಪೋಷಕರು ಮಕ್ಕಳಿಗೆ ಕೇವಲ ಪಠ್ಯದಲ್ಲೆ ಆಸಕ್ತಿವಹಿಸುವಂತೆ ಮಾಡದೆ ಕ್ರೀಡೆಯಲ್ಲಿಯೂ ತೊಡಗಿಸಿಕೊಳ್ಳಲು ಹುರಿದುಂಬಿಸಬೇಕು. ಪೋಷಕರು ಮಕ್ಕಳ ಮನಸ್ಥಿತಿ ಅರಿತು ಅವರಿಗೆ ಒಲವಿರುವ ಕಡೆ ಕಲಿಯಲು ಅವಕಾಶ ಕಲ್ಪಿಸಿಕೊಡಬೇಕೆಂದರು.

        ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕ್ ಅಧ್ಯಕ್ಷ ಪರಶಿವಮೂರ್ತಿ ಮಾತನಾಡಿ ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯವಾಗಿದ್ದು ಎಲ್ಲರೂ ಗೆಲ್ಲಲೂ ಸಾಧ್ಯವಿಲ್ಲ.ಸೋತವರು ನಿರಾಶೆ ಹೊಂದದೆ ಸೋಲುಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡೆಯಲ್ಲಿ ಪಾಲ್ಗೊಂಡ ಮಕ್ಕಳಿಗೆ ಯಾವುದೇ ತರಹದ ಭೇದಭಾವ ಮಾಡದೆ ಸಮಾನ ನ್ಯಾಯವನ್ನು ಒದಗಿಸಬೇಕೆಂದು ಹೇಳಿದರು.
ಶಿಕ್ಷಣ ಸಂಯೋಜಕ ಶಾಂತಪ್ಪ ಪ್ರತಿಜ್ಞಾವಿಧಿ ಭೋದಿಸಿ ಮಾತನಾಡಿ ಓದಿನೊಂದಿಗೆ ಕ್ರೀಡೆಯಲ್ಲಿ ಹೆಚ್ಚಾಗಿತೊಡಗಿಸಿಕೊಳ್ಳುವುದರಿಂದ ದಿನವಿಡಿ ಕ್ರಿಯಾಶೀಲರಾಗಿರಬಹುದು.ಇದರಿಂದ ನಾಯಕತ್ವ ಗುಣ ಬೆಳೆಯುತ್ತದೆ ಎಂದರು.

            ಒಟ್ಟು ೨೩ ಶಾಲೆಗಳ ಮಕ್ಕಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು ಗಾಣಧಾಳು ಗ್ರಾ.ಪಂ ಅಧ್ಯಕ್ಷೆ ಸರಸ್ವತಿ ಭಾಯಿ ಅಧ್ಯಕ್ಷತೆ ವಹಿಸಿದ್ದರು. ಮೇಲನಹಳ್ಳಿ ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷ ರಾಜಶೇಖರ್ ,ಗ್ರಾ.ಪಂ. ಅಧ್ಯಕ್ಷೆ ಗೀತಾ ಪ್ರದೀಪ್ , ತಾಲ್ಲೂಕ್ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ , ಪರಶಿವಮೂರ್ತಿ ಮೊದಲಾದವರಿದ್ದರು.

           ಚಿಕ್ಕಕರಿಯಪ್ಪ ಸ್ವಾಗತಿಸಿ ಲೋಕೇಶ್ ನಿರೂಪಿಸಿ ಹನುಮಂತರಾಜು ವಂದಿಸಿದರು.                

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...