ವಿಷಯಕ್ಕೆ ಹೋಗಿ

ಕೊಬ್ಬರಿ,ಅಡಿಕೆಗೆ ಬೆಲೆ ಹೆಚ್ಚಳಕ್ಕೆ ಒತ್ತಾಯಿಸಿ ವಿಧಾನಸೌಧಕ್ಕೆ ಪಾದಯಾತ್ರೆ

ವಿವಿಧ ಜಿಲ್ಲೆಗಳಿಂದ ೧೫ ಸಾವಿರ ರೈತರು ತಾಲ್ಲೂಕಿನಿಂದ ೬೦೦ ರೈತರು
---------------------------------

ಹುಳಿಯಾರು:ತೀವ್ರ ಬೆಲೆ ಕುಸಿತಕಂಡಿರುವ ತೆಂಗು,ಕೊಬ್ಬರಿ ಹಾಗೂ ಅಡಿಕೆ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ತಿಪಟೂರಿನಿಂದ ವಿಧಾನಸೌಧಕ್ಕೆ ಕಾಲ್ನಡಿಗೆ ಜಾಥಾ ಹಾಗೂ ವಿಧನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಚಿಕ್ಕನಾಯ್ಕನಹಳ್ಳಿ ತಾಲ್ಲೂಕಿನಿಂದ ೭೦೦ ಮಂದಿ ರೈತರು ಪಾಲ್ಗೊಳ್ಳುತ್ತಿರುವುದಾಗಿ ರಾಜ್ಯ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್ ತಿಳಿಸಿದರು.
ಕೊಬ್ಬರಿ,ಅಡಿಕೆಗೆ ಬೆಲೆ ಹೆಚ್ಚಳಕ್ಕೆ ಒತ್ತಾಯಿಸಿ ವಿಧಾನಸೌಧಕ್ಕೆ ಪಾದಯಾತ್ರೆ ತೆರಳಲಿರುವ ವಿಚಾರವಾಗಿ ಹುಳಿಯಾರಿನ ಪ್ರವಾಸಿ ಮಂದಿರದಲ್ಲಿ ರೈತಸಂಘದವರು ಶನಿವಾರದಂದು ನಡೆಸಿದ ಪತ್ರಿಕಾಗೋಷ್ಠಿ.

ಹುಳಿಯಾರಿನ ಪ್ರವಾಸಿ ಮಂದಿರದಲ್ಲಿ ಶನಿವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೃಷಿ ಉತ್ಪನ್ನಮಾರುಕಟ್ಟೆಗಳು ಇಂದು ರೈತರ ಶೋಷಣೆಯ ಕೇಂದ್ರಗಳಾಗಿದೆ. ರೈತರು ಸರ್ಕಾರ ಸಹ ರೈತರ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಕೊಡದೆ, ರೈತರ ಕಷ್ಟಗಳಿಗೆ ಸ್ಪಂದಿಸದೆ ರೈತ ವಿರೋಧಿ ನೀತಿ ತಳೆದಿದ್ದು ಈ ಭ್ರಷ್ಟ ವ್ಯವಸ್ಥೆಯಲ್ಲಿ ಸರ್ಕಾರವನ್ನು ಎಚ್ಚರಗೊಳಿಸಲು ಹೋರಾಟವೊಂದೆ ಮಾರ್ಗವಾಗಿದೆ.ಕಲ್ಪತರು ನಾಡಿನಲ್ಲಿ ತೆಂಗು ಹಾಗೂ ಅಡಿಕೆಗೆ ಬೆಂಬಲ ಬೆಲೆಗಾಗಿ ಇಷ್ಟು ಹೋರಾಟ ಮಾಡಿದರೂ ಸಹ ಹೋರಾಟಕ್ಕೆ ರಾಜ್ಯಸರ್ಕಾರವಾಗಲಿ ಕೇಂದ್ರ ಸರ್ಕಾರವಾಗಲಿ ಬೆಲೆ ಹೆಚಳಕ್ಕೆ ಅಲೋಚನೆ ಮಾಡಿಲ್ಲ. ಕೊಬ್ಬರಿ ನಾಡನಿಂದ ಹೋಗಿರುವ ಹತ್ತುಹನ್ನೆರಡು ಮಂದಿ ಶಾಸಕರಿದ್ದರು ಸಹ ಯಾರೊಬ್ಬರು ವಿಧಾನಸೌಧದಲ್ಲಿ ಬೆಲೆ ಬಗ್ಗೆ ಧ್ವನಿ ಎತ್ತಿಲ್ಲ. ಈ ಕಾರಣಕ್ಕಾಗಿ ತೆಂಗು,ಅಡಿಕೆ ಬೆಳೆಯುವ ರೈತರೆಲ್ಲಾ ಒಮ್ಮನಿಸ್ಸಿನಿಂದ ರಾಜ್ಯ ರೈತ ನಾಯಕರ ನೇತೃತ್ವದಲ್ಲಿ ಪಾದಯಾತ್ರೆ ಹಾಗೂ ವಿಧಾನ ಸೌಧ ಮುತ್ತಿಗೆ ಹಮ್ಮಿಕೊಂಡಿರುವುದಾಗಿ ತಿಳಿಸಿದರು,

ಜೈಲ್ ಭರೋ : ಅಲ್ಲದೆ ಉತ್ತರಕರ್ನಾಟಕದಲ್ಲಿ ನೀರು ಕೊಡಿ ಅಂತ ಕೇಳಿದ ರೈತರ ಮೇಲೆ ಪೋಲೀಸ್ ದೌರ್ಜನ್ಯ ನಡೆದಿದ್ದು ಪ್ರಕರಣದಲ್ಲಿ ಬಂಧಿಸಿರುವ ರೈತರನ್ನು ಕೇಸು ವಗೈರೆ ಇಲ್ಲದಂತೆ ಬಿಡುಗಡೆ ಮಾಡಬೇಕು.ಇಲ್ಲಾಂದ್ರೆ ಜೈಲ್ ಭರೋ ಚಳುವಳಿ ಮಾಡಲಾಗುವುದು.

                ತಿಪಟೂರು ಎಪಿಎಂಸಿಯಿದ ಪಾದಯಾತ್ರೆ ಪ್ರಾರಂಭವಾಗಲಿದ್ದು ತಾಲ್ಲೂಕಿನಿಂದ ಸಹ ೭೦೦ ಜನ ರೈತರು ಪಾಲ್ಗೊಳ್ಳಲಿದ್ದಾರೆ.ಪಾದಯಾತ್ರೆಗೆ ಹಾಲುಒಕ್ಕೂಟ, ವರ್ತಕರ ಸಂಘ, ಕರವೇ, ಜಯಕರ್ನಾಟಕ ಸಂಘಟನೆಯಲ್ಲದೆ ಗ್ರಾಮಪಂಚಾಯ್ತಿ ,ತಾಲ್ಲೂಕ್ ಪಂಚಾಯ್ತಿ ಸದಸ್ಯರು ,ತಿಪಟೂರು ಹಾಗೂ ಚಿಕ್ಕನಾಯಕನಹಳ್ಳಿ ಭಾಗದ ಎಲ್ಲಾ ಮಠಾಧೀಶರುಗಳು ,ಕನ್ನಡಪರ ಸಂಘಟನೆಗಳು ಸಹ ಕೈ ಜೋಡಿಸಲಿದ್ದು ಒಟ್ಟು ೧೩ ಜಿಲ್ಲೆಗಳಿಂದ ಕನಿಷ್ಠ ೧೦ ಸಾವಿರ ರೈತರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದರು.

                   ಪಾದಯಾತ್ರೆಯು ಆ.೧೦ ರ ಬುಧವಾರ ತಿಪಟೂರಿನಿಂದ ಹೊರಟು ಆಗಸ್ಟ್ ೧೫ರ ಸ್ವಾತಂತ್ರ್ಯೋತ್ಸವದಂದು ವಿಧಾನಸೌಧ ತಲುಪಲಿದೆ. ಮಾರ್ಗಮದ್ಯೆ ಬಿಳಿಗೆರೆಯಲ್ಲಿ ಅಲ್ಲಿಂದ ನಿಟ್ಟೂರು, ಭೀಮಸಂದ್ರ, ಸಿದ್ಧಗಂಗೆ ಮಠದಲ್ಲಿ ,ದಾಬಸ್ ಪೇಟೆ ಹೀಗೆ ಕೆಲವೆಡೆ ತಂಗಲು ಹಾಗೂ ಊಟ ಉಪಹಾರಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

                ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕ್ ಉಪಾಧ್ಯಕ್ಷ ತಮ್ಮಡಿಹಳ್ಳಿ ಮಲ್ಲಿಕಾರ್ಜುನಯ್ಯ,ಹುಳಿಯಾರು ಹೋಬಳಿ ಅಧ್ಯಕ್ಷ ಕೆಂಕೆರೆಶಿವಣ್ಣ, ಕಂಪನಹಳ್ಳಿ ಮರುಳಯ್ಯ,ಪಾತ್ರೆ ಸತೀಶ್,ಹೂವಿನ ರಘು,ರಮೇಶ್, ಲಕ್ಷ್ಮೀಪುರ ಶಿವಣ್ಣ, ಪೋಸ್ಟ್ ಮರುಳಯ್ಯ, ದಾಸಪ್ಪ,ಜಯಣ್ಣ,ಸೀಗೆಬಾಗಿ ಲೋಕೇಶ್,ಯೋಗೇಶ್, ಮಂಜುನಾಥ್, ರಂಗಸ್ವಾಮಿ,ಇಂತಿಯಾಜ್ ಮತ್ತಿತರರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...