ವಿಷಯಕ್ಕೆ ಹೋಗಿ

ಗ್ಯಾಸ್ ಸೋರಿಕೆ ಅವಘಡದ ಗಾಯಾಳುವಿನ ಸಾವು;

ಕೆಂಕೆರೆಯಲ್ಲಿ ಭಾನುವಾರ ನಡೆದ ಅಂತ್ಯಸಂಸ್ಕಾರ :ಸಂಸದ ಸಿದ್ದೇಶ್ ಭಾಗಿ
-------------------------

ಹುಳಿಯಾರು ಸಮೀಪದ ಕೆಂಕೆರೆ ಗ್ರಾಮದಲ್ಲಿ ಅಡಿಗೆ ಅನಿಲ ಸೋರಿಕೆಯಿಂದಾಗಿ ನಡೆದಿದ್ದ ಅಗ್ನಿ ಅವಘಡದಲ್ಲಿ ತೀರ್ವವಾಗಿ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ರವಿಶಂಕರ್ ಶನಿವಾರ ಸಂಜೆ ಮೃತಪಟ್ಟಿದ್ದು ಭಾನುವಾರದಂದು ಕೆಂಕೆರೆಯ ಗ್ರಾಮದಲ್ಲಿ ಅವರ ಅಂತ್ಯಸಂಸ್ಕಾರ ನೆರವೇರಿತು.

ಹಿನ್ನಲೆ: ರವಿಶ೦ಕರ್ ಹಾಗೂ ಪತ್ನಿ ಗಾಯತ್ರಿ ಅವರ ಮನೆಯಲ್ಲಿ ಮಂಗಳವಾರದಂದು ತಡರಾತ್ರಿ ಗ್ಯಾಸ್ ಸೋರಿಕೆಯಾಗಿ ವಾಸನೆ ಹರಡಿದ್ದರಿಂದ ಏನೆಂದು ನೋಡಲು ಎದ್ದ ರವಿಶ೦ಕರ್ ಮೊಬೈಲ್ ಟಾರ್ಚ್ ಆನ್‌ಮಾಡಿ ಅಡುಗೆಕೋಣೆಯ ಬಾಗಿಲು ತೆರೆಯುತ್ತಿದ್ದಂತೆಯೆ ಬೆ೦ಕಿಯ ಜ್ವಾಲೆಯು ಹರಡಿ ದ೦ಪತಿಳಿಬ್ಬರಿಗೂ ತೀವ್ರ ಸುಟ್ಟ ಗಾಯಗಳಾಗಿ ಆ ಕೂಡಲೇ ಅವರನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ೨ ದಿನಗಳ ನಂತರ ಅವರಿಬ್ಬರನ್ನೂ ಅಲ್ಲಿಂದ ಪೆನೇಷಿಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ತೀವ್ರ ಗಾಯಗಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದ ರವಿಶಂಕರ್ ಬದುಕುಳಿಯದೆ ಶನಿವಾರ ಸಂಜೆ ೪ ರ ಸುಮಾರಿಗೆ ಸಾವನ್ನಪ್ಪಿದ್ದರು.ಆತನ ಪತ್ನಿ ಗಾಯಿತ್ರಿಯವರಿಗೂ ಗಂಭೀರ ಗಾಯಗಳಾಗಿದ್ದು ಸಧ್ಯ ಆಕೆಯ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎನ್ನಲಾಗಿದೆ.
ಮೃತ ರವಿಶಂಕರ್ ಅವರಿಗೆ ಇಬ್ಬರು ಮಕ್ಕಳಿದ್ದು ಮೃತರ ಅಂತ್ಯಸಂಸ್ಕಾರ ಭಾನುವಾರದಂದು ಅವರ ತೋಟದಲ್ಲಿ ನಡೆಯಿತು.ದಾವಣಗೆರೆಯ ಸಂಸದ ಸಿದ್ದೇಶ್,ಮಾಜಿ ಶಾಸಕರುಗಳಾದ ಕೆ.ಎಸ್.ಕಿರಣ್ ಕುಮಾರ್,ಜೆ.ಸಿ.ಮಾಧುಸ್ವಾಮಿ,ಬ್ರಹ್ಮಕುಮಾರಿ ಗೀತಕ್ಕ ಸೇರಿದಂತೆ ಸಮಾಜ ಬಾಂಧವರು,ಕುಟುಂಬ ವರ್ಗದವರು ಹಾಗೂ ಗ್ರಾಮದ ಪ್ರಮುಖರು ಪಾಲ್ಗೊಂಡಿದ್ದರು.
--------------
ಗ್ಯಾಸ್ ಕಂಪನಿ ವಿರುದ್ಧ ಆರೋಪ: ಗೃಹಬಳಕೆಯ ಸಿಲಿಂಡರ್ ನಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ರವಿಶಂಕರ್ ಬಲಿಯಾಗಿದ್ದರೂ ಸಹ ಈ ಕ್ಷಣದವರೆಗೂ ಕಂಪನಿ ಪ್ರತಿನಿಧಿಗಳ್ಯಾರು ಘಟನಾ ಸ್ಥಳಕ್ಕೆ ಬಂದಿಲ್ಲ..ವರ್ಷಕ್ಕೆ ಎರಡು ಬಾರಿ ಗ್ರಾಹಕರ ಮನೆಗೆ ಭೇಟಿ ನೀಡಿ ಗ್ಯಾಸ್ ಸಂಪರ್ಕ ಪರಿಶೀಲಿಸಿ ಉಚಿತ ಸರ್ವಿಸ್ ಮಾಡಬೇಕಿದ್ದ ಕಂಪನಿ ನಿರ್ಲಕ್ಷ್ಯತೆ ಮಾಡಿದ್ದರಿಂದ ಇಂದಿನ ಅವಘಡ ಸಂಭವಿಸಲು ಕಾರಣವಾಗಿದೆ. ಕಂಪನಿಯವರು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿ ಸೂಕ್ತ ಪರಿಹಾರ ಹಾಗೂ ಗ್ರಾಹಕನ ವಿಮಾ ಪರಿಹಾರ ಹಣವನ್ನು ನೀಡಬೇಕು :ಕೆಂಕೆರೆ ನವೀನ್, ತಾಪಂ ಮಾಜಿ ಸದಸ್ಯ
-------------
ಕಳೆದ ಮಂಗಳವಾರದಂದು ನಡೆದಿದ್ದ ದುರಂತದ ಬಗ್ಗೆ ಓದಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ

http://huliyarnews.blogspot.in/2016/08/blog-post_17.html

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.