ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ದೇಶದಲ್ಲೆ ಪ್ರಥಮವಾಗಲಿರುವ ಬೃಹತ್ ಅನಂತಪದ್ಮನಾಭ ಸ್ವಾಮಿಯ ಮೂರ್ತಿ.

ಲೋಕಾರ್ಪಣೆಗೆ ರಾಷ್ಟ್ರಪತಿಗಳಿಗೆ ಆಹ್ವಾನ
--------------------
ಹುಳಿಯಾರು:ಹುಳಿಯಾರಿನ ಕೋಡಿಪಾಳ್ಯದಲ್ಲಿ ನಿರ್ಮಾಣವಾಗುತ್ತಿರುವ ಕಂಕಾಳಿ ಹಾಗೂ ತುಳಜಾ ಭವಾನಿ ಅಮ್ಮನವರ ಶಕ್ತಿ ಪೀಠ ಹಾಗೂ ಭಾರತದಲ್ಲಿಯೇ ಪ್ರಪ್ರಥಮವಾದ ೬೧ ಅಡಿ ಅಗಲ ಹಾಗೂ ೩೩ ಅಡಿ ಎತ್ತರದ ಶ್ರೀ ಅನಂತಪದ್ಮನಾಭ ಸ್ವಾಮಿಯ ಬೃಹತ್ ಮೂರ್ತಿಯ ಉದ್ಘಾಟನ ಸಮಾರಂಭಕ್ಕೆ ದೇಶದ ಪ್ರಥಮ ಪ್ರಜೆಯಾಗಿರುವ ರಾಷ್ಟ್ರಪತಿಗಳನ್ನು ಆಹ್ವಾನಿಸಲಾಗುವುದು ಎಂದು ಶ್ರೀ ಮಾತಾ ಛಾರಿಟಬಲ್ ಟ್ರಸ್ಟ್ ನ ಅಧ್ಯಕ್ಷರಾದ ಗಂಗಾಧರ್ ತಿಳಿಸಿದರು.

         ಈ ನಿಮಿತ್ತ ಹುಳಿಯಾರಿನ ಸಮಸ್ತ ಸಂಘಸಂಸ್ಥೆಗಳ,ಪುರ ಪ್ರಮುಖರ ಉಪಸ್ಥಿತಿಯಲ್ಲಿ ಕೋಡಿಪಾಳ್ಯದ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತಂತೆ ನಡೆದ ಪೂರ್ವ ಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಹುಳಿಯಾರಿನ ಸಮಸ್ತ ಸಂಘಸಂಸ್ಥೆಗಳ,ಪುರ ಪ್ರಮುಖರ ಉಪಸ್ಥಿತಿಯಲ್ಲಿ ಕೋಡಿಪಾಳ್ಯದ ದೇವಸ್ಥಾನದ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸುವ ಕುರಿತಂತೆ ನಡೆದ ಪೂರ್ವ ಭಾವಿಸಭೆ 
                ೨೦೧೭ ರ ಏಪ್ರಿಲ್ ತಿಂಗಳಿನಲ್ಲಿ ಪ್ರತಿಷ್ಠಾಪನೆ ಹಮ್ಮಿಕೊಳ್ಳಲಾಗುವುದಿದ್ದು ಐದು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳು ಹಾಗೂ ೫೧ ಮಂದಿ ನಾಗಸಾಧುಗಳನ್ನು ಆಹ್ವಾನಿಸುವುದರ ಜೊತೆಗೆ ಅಂತರಾಷ್ಟ್ರೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಅಲ್ಲದೆ ಪ್ರತಿದಿನ ದೇಶಿಯ ಸಂಸ್ಕೃತಿ ಬಿಂಬಿಸುವ ಜಾನಪದ ಕಲೆಗೆ ಒತ್ತುನೀಡಲಾಗುವುದು ಎಂದರು.
             ದೇಶದಲ್ಲಿಯೆ ಪ್ರಥಮವಾದ ಅನಂತಪದ್ಮನಾಭನ ಮೂರ್ತಿ ಅನಾವರಣಗೊಳಿಸಲು ದೇಶದ ಪ್ರಥಮ ಪ್ರಜೆಯನ್ನು ಆಹ್ವಾನಿಸುವ ಪ್ರಯತ್ನ ಸಾಗಿದ್ದು ರಾಷ್ಟ್ರಪತಿಗಳ ಕಾರ್ಯಾಲಯದೊಂದಿಗೆ ಪತ್ರವ್ಯವಹರ ನಡೆದಿದ್ದು ಒಪ್ಪಿಗೆ ದೊರೆತ ನಂತರ ಅಧಿಕೃತ ಆಹ್ವಾನಪತ್ರಿಕೆ ಮುದ್ರಿಸಲಾಗುವುದು ಎಂದರು.
           ಹುಳಿಯಾರು ಕೋಡಿಪಾಳ್ಯವನ್ನು ದಕ್ಷಿಣ ಭಾರತದ ಪುಣ್ಯ ಕ್ಷೇತ್ರವನ್ನಾಗಿಸುವ ಗುರಿಹೊಂದಿದ್ದು ಈ ನಿಟ್ಟಿನಲ್ಲಿ ನಡೆದಿರುವ ದೇವಾಲಯ ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳ ಬಗ್ಗೆ ಸ್ಥೂಲನೋಟ ನೀಡಿದರು.
            ದೇವರ ನಾಡು ಎಂದೇ ಪ್ರಸಿದ್ಧಿಯಾಗಿರುವ ನಮ್ಮ ನಾಡಿನಲ್ಲಿ ಹುಳಿಯಾರು ಪಟ್ಟಣವನ್ನು ಅತ್ಯಂತ ವಿಶಿಷ್ಟ ಧಾರ್ಮಿಕ ಕ್ಷೇತ್ರವನ್ನಾಗಿ ಗುರ್ತಿಸಬೇಕೆನ್ನುವ ಆಶಯದೊಂದಿಗೆ ಶಕ್ತಿ ದೇವತೆಗಳಾದ ಕಂಕಾಳಿ ಹಾಗೂ ತುಳಜಾ ಭವಾನಿ ಅಮ್ಮನವರ ಶಕ್ತಿ ಪೀಠವನ್ನು ಇಲ್ಲಿ ಸ್ಥಾಪಿಸುತ್ತಿದ್ದು ಸಮಸ್ತ ಹಿಂದೂ ಸಮುದಾಯದ ಪವಿತ್ರ ಯಾತ್ರಾಸ್ಥಳವನ್ನಾಗಿ ಮಾಡುವ ಗುರಿಹೊಂದಲಾಗಿದೆ ಎಂದರು.
          ಹುಳಿಯಾರು ಸಮೀಪದ ಕೋಡಿಪಾಳ್ಯದಲ್ಲಿ ಐದು ಎಕರೆ ಪ್ರದೇಶದಲ್ಲಿ ಶಕ್ತಿ ಮಾತೆ ಕಂಕಾಳಿ ಹಾಗೂ ಏಳು ಶಕ್ತಿಪೀಠಗಳಲ್ಲಿ ಒಂದಾದ ತುಳಜಭವಾನಿ ಮಾತೆಯವರನ್ನು ಸಾಂಪ್ರದಾಯಿಕ ಶೈಲಿಯಲ್ಲಿ ನಿರ್ಮಾಣಮಾಡುತ್ತಿರುವ ಭವ್ಯ ದೇವಾಲಯದಲ್ಲಿ ಒಂದೇ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗುತ್ತಿದೆ ಎಂದರು.
         ಇಲ್ಲಿ ಶ್ವೇತವರ್ಣದ ಬೆಲೆಬಾಳುವ ಕಲ್ಲಿನಲ್ಲಿ ದೇವಾಲಯ ಸೇರಿದಂತೆ ೮೫೦ ಜನರಿಗೆ ಆಸನ ವ್ಯವಸ್ಥೆಯಿರುವ ಸೇವಾಲಾಲ್ ಸಾಂಸ್ಕೃತಿಕ ಸದನ,೨೦೦ಜನರು ಏಕಕಾಲದಲ್ಲಿ ಕುಳಿತು ಧ್ಯಾನಮಾಡಬಹುದಾದ ಪಿರಮಿಡ್ ಆಕಾರದ ಧ್ಯಾನಮಂದಿರ,ಧರ್ಮದರ್ಶಿಗಳ ಕುಟೀರ ಶ್ರೀ ಅನಂತಪದ್ಮನಾಭ ಸ್ವಾಮಿಯ ೬೧ ಅಡಿ ಅಗಲ ಹಾಗೂ ೩೩ ಅಡಿ ಎತ್ತರದ ಬೃಹತ್ ಮೂರ್ತಿ ಹಾಗೂ ಆಗಮಿಸುವ ಯಾತ್ರಾರ್ತಿಗಳಿಗೆ ಸಂಪೂರ್ಣ ಸೌಕರ್ಯವಿರುವ ಶ್ರೀ ಮಾತಾ ಯಾತ್ರಿ ನಿವಾಸ ಸ್ಥಾಪಿಸಲಾಗುತ್ತಿದೆ ಎಂದರು.
ಪೂರ್ವ ಭಾವಿಸಭೆಯಲ್ಲಿ ಮಾತನಾಡುತ್ತಿರುವ ಶ್ರೀ ಮಾತಾ ಛಾರಿಟಬಲ್ ಟ್ರಸ್ಟ್ ನ ಉಪಾಧ್ಯಕ್ಷ ಜಯರಾಂ ನಾಯಕ್.ಟ್ರಸ್ಟ್ ಪದಾಧಿಕಾರಿಗಳಿದ್ದಾರೆ.
         ಅಲ್ಲದೆ ಯಾತ್ರಾರ್ಥಿಗಳು ವಿಹರಿಸಲು ಸುಂದರ ಉದ್ಯಾನವನ ಹಾಗೂ ಅದೇ ಆವರಣದಲ್ಲಿ ಬಲಮುರಿ ಗಣಪತಿ ದೇವಾಲಯ ಕೂಡ ಸ್ಥಾಪಿಸಲಾಗುತ್ತಿದೆ ಎಂದರು.ಈಗಾಗಲೇ ಕೆಲವೊಂದು ಕಾಮಗಾರಿಗಳು ಪೂರ್ಣಗೊಂಡಿದ್ದು ಮತ್ತೆ ಕೆಲವು ಶೇ ೭೦ ರಷ್ಟು ಪ್ರಗತಿಯಲ್ಲಿದೆ ಎಂದರು.

        ಈ ಸಂದರ್ಭದಲ್ಲಿ ಪಟ್ಟಣದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,ಪಂಚಾಯ್ತಿ ಸದಸ್ಯರುಗಳು,ದೇವಾಲಯ ಸಮಿತಿಯ ಸದಸ್ಯರುಗಳು,ರೈತ ಸಂಘದವರು,ಸ್ವಯಂ ಸೇವಾ ಸದಸ್ಯರುಗಳು ,ಮಾಧ್ಯಮ ಪ್ರತಿನಿಧಿಗಳು, ಹುಳಿಯಾರು,ಕೆಂಕೆರೆ, ಕೋಡಿಪಾಳ್ಯ, ಲಿಂಗಪ್ಪನಪಾಳ್ಯ, ಸೋಮಜ್ಜನಪಾಳ್ಯದ ಗ್ರಾಮಸ್ಥರುಗಳು ಉಪಸ್ಥಿತರಿದ್ದು ಸಲಹೆ ,ಸೂಚನೆ ನೀಡಿದರು.

            ಶ್ರೀ ಮಾತಾ ಛಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್,ಉಪಾಧ್ಯಕ್ಷ ಜಯರಾಂ ನಾಯಕ್,ಚಂದ್ರ ಶೇಖರ್, ಶ್ರೀನಿವಾಸ್,ಕುಮಾರ್,ಉಮೇಶ್ ನಾಯಕ್,ಜಯಣ್ಣ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.