ವಿಷಯಕ್ಕೆ ಹೋಗಿ

ಜಗ್ಗತ್ತನ್ನು ಸಂಪರ್ಕಿಸಬೇಕಾದರೆ ಇಂಗ್ಲೀಷ್ ಕಲಿಕೆ ಅಗತ್ಯ:ಡಾ.ದಳವಾಯಿ ರಾಜಪ್ಪ

ಹುಳಿಯಾರು:ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ.ನಿಮ್ಮಲ್ಲಿ ಪ್ರತಿಭೆಯ ದೊಡ್ಡ ಶಕ್ತಿಯಿದ್ದು ನಿಮ್ಮನ್ನು ನೀವು ಸರಿಯಾಗಿ ಪ್ರಮೋಟ್ ಮಾಡಿಕೊಳ್ಳದಿದ್ದರೆ ಉದ್ಯೋಗ ಅವಕಾಶಗಳು ಕೈತಪ್ಪುತ್ತದೆ ಎಂದು ಖ್ಯಾತ ವಿಮರ್ಶಕ ಡಾ.ರಾಜಪ್ಪದಳವಾಯಿ ಅಭಿಪ್ರಾಯಪಟ್ಟರು
ಹುಳಿಯಾರು ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಯಲು ಆಲಯದಲ್ಲಿ ಬುಧವಾರ ನಡೆದ ಔಷಧಿ ವನ ಹಾಗೂ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ವಿಮರ್ಶಕ ಡಾ.ರಾಜಪ್ಪದಳವಾಯಿ ಮಾತನಾಡಿದರು.
                      ಹುಳಿಯಾರು ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಯಲು ಆಲಯದಲ್ಲಿ ಬುಧವಾರ ನಡೆದ ಔಷಧಿ ವನ ಹಾಗೂ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸವಾಲುಗಳನ್ನು ಎದುರಿಸುವುದನ್ನು ಕಲಿಸುವುದೇ ಶಿಕ್ಷಣ.ಕನ್ನಡದ ಮೇಲಿನ ಪ್ರೀತಿ,ಅಭಿಮಾನ,ವಿಶ್ವಾಸ ಎಷ್ಟು ಮುಖ್ಯವೋ ಇಂಗ್ಲೀಷ್ ಕಲಿಕೆ ಕೂಡ ಅಷ್ಟೆ ಮುಖ್ಯ.ಜಗ್ಗತ್ತೇ ಅಂಗೈನಲ್ಲಿರುವ ಇಂದಿನ ದಿನದಲ್ಲಿ ನೀವು ಈ ಜಗತ್ತಿನ ಸಂಪರ್ಕ ಹೊಂದಬೇಕಾದರೆ ಇಂಗ್ಲೀಷ್ ಭಾಷೆಜ್ಞಾನ ಅಗತ್ಯವಾಗಿದ್ದು ಕಲಿಯದಿದ್ದಲ್ಲಿ ಒಳ್ಳೆಯ ಅವಕಾಶ ಸಿಗುವುದಿಲ್ಲವೆಂದರು.

              ಭಾರತದಲ್ಲಿ ಸಮಾಜ ವ್ಯವಸ್ಥೆ ಬಹಳ ಸಂಕೀರ್ಣವಾಗಿದ್ದು ಒಬ್ಬರಿಗೆ ಸಮಸ್ಯೆಯಾಗಿರುವುದು ಮತ್ತೊಬ್ಬರಿಗೆ ಸಮಸ್ಯೆಯೆ ಅಲ್ಲವಾಗಿರುತ್ತೆ.ಒಬ್ಬರಿಗೆ ಮಹತ್ವದ ವಿಷಯವಾಗಿದ್ದು ಮತ್ತೊಬ್ಬರಿಗೆ ಏನೂ ಅಲ್ಲವಾಗಿರುತ್ತದೆ.ಅನೇಕ ಬಗೆಯೆ ಸವಾಲುಗಳ ನಡುವೆ ಬದುಕಿನ ಕಷ್ಟ ಕೋಟಲೆಗಳಲ್ಲಿ ಆಸೆಯೇ ಜೀವಂತಿಕೆಯ ಲಕ್ಷಣ.ನಮಗೆ ಬಂದಿರುವ ಕಷ್ಟ,ಸಮಸ್ಯೆ ಸವಾಲು ನಮಗೆ ಮಾತ್ರ ದೊಡ್ಡವಾಗಿರುತ್ತೆ.ವ್ಯವಸ್ಥೆ ಹುಲಿಯಿದ್ದ ಹಾಗೆ.ಶ್ರಮ ಜಾಣ್ಮೆಯಿದಲ್ಲಿ ಸುಲಭವಾಗಿ ಸಮಸ್ಯೆ ಎದುರಿಸಬಹುದು.ನಮ್ಮ ದಾರಿಯನ್ನು ನಾವೇ ಕಂಡುಕೊಳ್ಳಬೇಕು. ನೂರು ಮೈಲಿನ ಹಾದಿಗೆ ಮೊದಲಿನ ಹೆಜ್ಜೆ ಮುಖ್ಯ ಎಂದರು.

               ಜನಪದ ಕಲಾವಿದ ಯುಗಧರ್ಮ ರಾಮಣ್ಣ ಮಾತನಾಡಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಒಬ್ಬ ವಿದ್ಯಾರ್ಥಿಯ ಕಾಲೇಜು ಶಿಕ್ಷಣ ಮುಗಿಯುವವರೆಗೂ ೩,೯೬,೩೪೩ ವೆಚ್ಚ ಮಾಡುತ್ತಿದ್ದು ಇದನ್ನರಿತು ವೃಥಾ ಕಾಲಕಳೆಯದೆ ಉತ್ತಮವಾಗಿ ಓದಬೇಕೆಂದರು.ವಿದ್ಯೆ ಕಲಿಯುವುದೊಂದೆ ಬಾಳಿನ ಪುರಿಯಾಗಬಾರದು.ಕಲಿತ ವಿದ್ಯೆ ಸಮಾಜಕ್ಕೆ ಉಪಯೋಗವಾಗಬೇಕು.ವಿಜ್ಞಾನ ಇಂದು ಎಷ್ಟೆ ಮುಂದುವರಿದರೂ ಸಹ ರಾಗಿ ತಯಾರು ಮಾಡುವುದಿಕ್ಕಾಗುವುದಿಲ್ಲ.ರೈತ ಮಾತ್ರ ತನ್ನ ಹೊಲವೆಂಬ ಕಾರ್ಖಾನೆಯಲ್ಲಿ ಇದನ್ನು ತಯಾರು ಮಾಡಬಲ್ಲ ಎಂದರು.

      ಇದಕ್ಕೂ ಮುನ್ನ ಕಾಲೇಜು ಆವರಣದಲ್ಲಿ ಬಸವರಾಜ ಪಂಡಿತ್ ಅವರ ಹೆಸರಿನಲ್ಲಿ ಔಷಧಿವನಕ್ಕೆ ಚಾಲನೆ ನೀಡಲಾಯಿತು.

            ಪ್ರಾಂಶುಪಾಲ ಬಿಳಿಗೆರೆ ಕೃಷ್ಣ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು.ಪಾರಂಪರಿಕ ವೈದ್ಯರಾಗಿರುವ ವೈದ್ಯ ಬಸವರಾಜ ಪಂಡಿತ್,ಹುಳಿಯಾರು ಗ್ರಾಮಪಂಚಾಯ್ತಿ ಅಧ್ಯಕ್ಷೆ ಗೀತಾಪ್ರದೀಪ್,ಕಾಲೇಜು ಅಭಿವೃದ್ಧಿಸಮಿತಿಯ ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್,ಪರ್ವಿನ್ ತಾಜ್ ,ಡಾ.ಬಾಳಪ್ಪ ಸೇರಿದಂತೆ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.
----------------------------
ಬಹು ಸಂಸ್ಕೃತಿಯ ಸಂಕೀರ್ಣವಾದ ಸಮಾಜದಲ್ಲಿ ನಾವಿಂದು ಬದುಕುತ್ತಿದ್ದೇವೆ.ಮಾಂಸಹಾರ ತಿನ್ನುವವರನ್ನು ಅಪಾಯಾಕಾರಿಯಾಗಿ ನೋಡುವ ಸಂದಿಗ್ಧಸ್ಥಿತಿ ಎದುರಾಗಿದೆ.ವಿಚಿತ್ರವಾದ ಜಾತಿ ಅಸಮಾನತೆಯ ಈ ಸಮಾಜದಲ್ಲಿ ಆಹಾರ ಪದ್ದತಿಯಲ್ಲಿ ತಾರತಮ್ಯವಿದೆ,ಲಿಂಗ ತಾರತಮ್ಯವಿದೆ,ಪ್ರಾದೇಶಿಕ ಅಸಮಾನತೆಯಿದೆ,ಇದೆಲ್ಲದರ ನಡುವೆ ಸಾಮಾನ್ಯರ ಜನಜೀವನದ ಬದುಕು ದುಸ್ತರವಾಗಿದೆ.ಇದು ನಾವೇ ಸೃಷ್ಟಿಸಿಕೊಂಡಿರುವ ನರಕ :ಡಾ.ದಳವಾಯಿ ರಾಜಪ್ಪ , ಖ್ಯಾತ ವಿಮರ್ಶಕ

----------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...