ವಿಷಯಕ್ಕೆ ಹೋಗಿ

ಜಗ್ಗತ್ತನ್ನು ಸಂಪರ್ಕಿಸಬೇಕಾದರೆ ಇಂಗ್ಲೀಷ್ ಕಲಿಕೆ ಅಗತ್ಯ:ಡಾ.ದಳವಾಯಿ ರಾಜಪ್ಪ

ಹುಳಿಯಾರು:ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ.ನಿಮ್ಮಲ್ಲಿ ಪ್ರತಿಭೆಯ ದೊಡ್ಡ ಶಕ್ತಿಯಿದ್ದು ನಿಮ್ಮನ್ನು ನೀವು ಸರಿಯಾಗಿ ಪ್ರಮೋಟ್ ಮಾಡಿಕೊಳ್ಳದಿದ್ದರೆ ಉದ್ಯೋಗ ಅವಕಾಶಗಳು ಕೈತಪ್ಪುತ್ತದೆ ಎಂದು ಖ್ಯಾತ ವಿಮರ್ಶಕ ಡಾ.ರಾಜಪ್ಪದಳವಾಯಿ ಅಭಿಪ್ರಾಯಪಟ್ಟರು
ಹುಳಿಯಾರು ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಯಲು ಆಲಯದಲ್ಲಿ ಬುಧವಾರ ನಡೆದ ಔಷಧಿ ವನ ಹಾಗೂ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ವಿಮರ್ಶಕ ಡಾ.ರಾಜಪ್ಪದಳವಾಯಿ ಮಾತನಾಡಿದರು.
                      ಹುಳಿಯಾರು ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಯಲು ಆಲಯದಲ್ಲಿ ಬುಧವಾರ ನಡೆದ ಔಷಧಿ ವನ ಹಾಗೂ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸವಾಲುಗಳನ್ನು ಎದುರಿಸುವುದನ್ನು ಕಲಿಸುವುದೇ ಶಿಕ್ಷಣ.ಕನ್ನಡದ ಮೇಲಿನ ಪ್ರೀತಿ,ಅಭಿಮಾನ,ವಿಶ್ವಾಸ ಎಷ್ಟು ಮುಖ್ಯವೋ ಇಂಗ್ಲೀಷ್ ಕಲಿಕೆ ಕೂಡ ಅಷ್ಟೆ ಮುಖ್ಯ.ಜಗ್ಗತ್ತೇ ಅಂಗೈನಲ್ಲಿರುವ ಇಂದಿನ ದಿನದಲ್ಲಿ ನೀವು ಈ ಜಗತ್ತಿನ ಸಂಪರ್ಕ ಹೊಂದಬೇಕಾದರೆ ಇಂಗ್ಲೀಷ್ ಭಾಷೆಜ್ಞಾನ ಅಗತ್ಯವಾಗಿದ್ದು ಕಲಿಯದಿದ್ದಲ್ಲಿ ಒಳ್ಳೆಯ ಅವಕಾಶ ಸಿಗುವುದಿಲ್ಲವೆಂದರು.

              ಭಾರತದಲ್ಲಿ ಸಮಾಜ ವ್ಯವಸ್ಥೆ ಬಹಳ ಸಂಕೀರ್ಣವಾಗಿದ್ದು ಒಬ್ಬರಿಗೆ ಸಮಸ್ಯೆಯಾಗಿರುವುದು ಮತ್ತೊಬ್ಬರಿಗೆ ಸಮಸ್ಯೆಯೆ ಅಲ್ಲವಾಗಿರುತ್ತೆ.ಒಬ್ಬರಿಗೆ ಮಹತ್ವದ ವಿಷಯವಾಗಿದ್ದು ಮತ್ತೊಬ್ಬರಿಗೆ ಏನೂ ಅಲ್ಲವಾಗಿರುತ್ತದೆ.ಅನೇಕ ಬಗೆಯೆ ಸವಾಲುಗಳ ನಡುವೆ ಬದುಕಿನ ಕಷ್ಟ ಕೋಟಲೆಗಳಲ್ಲಿ ಆಸೆಯೇ ಜೀವಂತಿಕೆಯ ಲಕ್ಷಣ.ನಮಗೆ ಬಂದಿರುವ ಕಷ್ಟ,ಸಮಸ್ಯೆ ಸವಾಲು ನಮಗೆ ಮಾತ್ರ ದೊಡ್ಡವಾಗಿರುತ್ತೆ.ವ್ಯವಸ್ಥೆ ಹುಲಿಯಿದ್ದ ಹಾಗೆ.ಶ್ರಮ ಜಾಣ್ಮೆಯಿದಲ್ಲಿ ಸುಲಭವಾಗಿ ಸಮಸ್ಯೆ ಎದುರಿಸಬಹುದು.ನಮ್ಮ ದಾರಿಯನ್ನು ನಾವೇ ಕಂಡುಕೊಳ್ಳಬೇಕು. ನೂರು ಮೈಲಿನ ಹಾದಿಗೆ ಮೊದಲಿನ ಹೆಜ್ಜೆ ಮುಖ್ಯ ಎಂದರು.

               ಜನಪದ ಕಲಾವಿದ ಯುಗಧರ್ಮ ರಾಮಣ್ಣ ಮಾತನಾಡಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಒಬ್ಬ ವಿದ್ಯಾರ್ಥಿಯ ಕಾಲೇಜು ಶಿಕ್ಷಣ ಮುಗಿಯುವವರೆಗೂ ೩,೯೬,೩೪೩ ವೆಚ್ಚ ಮಾಡುತ್ತಿದ್ದು ಇದನ್ನರಿತು ವೃಥಾ ಕಾಲಕಳೆಯದೆ ಉತ್ತಮವಾಗಿ ಓದಬೇಕೆಂದರು.ವಿದ್ಯೆ ಕಲಿಯುವುದೊಂದೆ ಬಾಳಿನ ಪುರಿಯಾಗಬಾರದು.ಕಲಿತ ವಿದ್ಯೆ ಸಮಾಜಕ್ಕೆ ಉಪಯೋಗವಾಗಬೇಕು.ವಿಜ್ಞಾನ ಇಂದು ಎಷ್ಟೆ ಮುಂದುವರಿದರೂ ಸಹ ರಾಗಿ ತಯಾರು ಮಾಡುವುದಿಕ್ಕಾಗುವುದಿಲ್ಲ.ರೈತ ಮಾತ್ರ ತನ್ನ ಹೊಲವೆಂಬ ಕಾರ್ಖಾನೆಯಲ್ಲಿ ಇದನ್ನು ತಯಾರು ಮಾಡಬಲ್ಲ ಎಂದರು.

      ಇದಕ್ಕೂ ಮುನ್ನ ಕಾಲೇಜು ಆವರಣದಲ್ಲಿ ಬಸವರಾಜ ಪಂಡಿತ್ ಅವರ ಹೆಸರಿನಲ್ಲಿ ಔಷಧಿವನಕ್ಕೆ ಚಾಲನೆ ನೀಡಲಾಯಿತು.

            ಪ್ರಾಂಶುಪಾಲ ಬಿಳಿಗೆರೆ ಕೃಷ್ಣ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು.ಪಾರಂಪರಿಕ ವೈದ್ಯರಾಗಿರುವ ವೈದ್ಯ ಬಸವರಾಜ ಪಂಡಿತ್,ಹುಳಿಯಾರು ಗ್ರಾಮಪಂಚಾಯ್ತಿ ಅಧ್ಯಕ್ಷೆ ಗೀತಾಪ್ರದೀಪ್,ಕಾಲೇಜು ಅಭಿವೃದ್ಧಿಸಮಿತಿಯ ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್,ಪರ್ವಿನ್ ತಾಜ್ ,ಡಾ.ಬಾಳಪ್ಪ ಸೇರಿದಂತೆ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.
----------------------------
ಬಹು ಸಂಸ್ಕೃತಿಯ ಸಂಕೀರ್ಣವಾದ ಸಮಾಜದಲ್ಲಿ ನಾವಿಂದು ಬದುಕುತ್ತಿದ್ದೇವೆ.ಮಾಂಸಹಾರ ತಿನ್ನುವವರನ್ನು ಅಪಾಯಾಕಾರಿಯಾಗಿ ನೋಡುವ ಸಂದಿಗ್ಧಸ್ಥಿತಿ ಎದುರಾಗಿದೆ.ವಿಚಿತ್ರವಾದ ಜಾತಿ ಅಸಮಾನತೆಯ ಈ ಸಮಾಜದಲ್ಲಿ ಆಹಾರ ಪದ್ದತಿಯಲ್ಲಿ ತಾರತಮ್ಯವಿದೆ,ಲಿಂಗ ತಾರತಮ್ಯವಿದೆ,ಪ್ರಾದೇಶಿಕ ಅಸಮಾನತೆಯಿದೆ,ಇದೆಲ್ಲದರ ನಡುವೆ ಸಾಮಾನ್ಯರ ಜನಜೀವನದ ಬದುಕು ದುಸ್ತರವಾಗಿದೆ.ಇದು ನಾವೇ ಸೃಷ್ಟಿಸಿಕೊಂಡಿರುವ ನರಕ :ಡಾ.ದಳವಾಯಿ ರಾಜಪ್ಪ , ಖ್ಯಾತ ವಿಮರ್ಶಕ

----------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.