ವಿಷಯಕ್ಕೆ ಹೋಗಿ

ಜಗ್ಗತ್ತನ್ನು ಸಂಪರ್ಕಿಸಬೇಕಾದರೆ ಇಂಗ್ಲೀಷ್ ಕಲಿಕೆ ಅಗತ್ಯ:ಡಾ.ದಳವಾಯಿ ರಾಜಪ್ಪ

ಹುಳಿಯಾರು:ಗ್ರಾಮೀಣ ಪ್ರದೇಶದಲ್ಲಿ ಪ್ರತಿಭೆಗಳಿಗೆ ಕೊರತೆಯಿಲ್ಲ.ನಿಮ್ಮಲ್ಲಿ ಪ್ರತಿಭೆಯ ದೊಡ್ಡ ಶಕ್ತಿಯಿದ್ದು ನಿಮ್ಮನ್ನು ನೀವು ಸರಿಯಾಗಿ ಪ್ರಮೋಟ್ ಮಾಡಿಕೊಳ್ಳದಿದ್ದರೆ ಉದ್ಯೋಗ ಅವಕಾಶಗಳು ಕೈತಪ್ಪುತ್ತದೆ ಎಂದು ಖ್ಯಾತ ವಿಮರ್ಶಕ ಡಾ.ರಾಜಪ್ಪದಳವಾಯಿ ಅಭಿಪ್ರಾಯಪಟ್ಟರು
ಹುಳಿಯಾರು ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಯಲು ಆಲಯದಲ್ಲಿ ಬುಧವಾರ ನಡೆದ ಔಷಧಿ ವನ ಹಾಗೂ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ವಿಮರ್ಶಕ ಡಾ.ರಾಜಪ್ಪದಳವಾಯಿ ಮಾತನಾಡಿದರು.
                      ಹುಳಿಯಾರು ಕೆಂಕೆರೆ ಬಿ.ಎಂ.ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಯಲು ಆಲಯದಲ್ಲಿ ಬುಧವಾರ ನಡೆದ ಔಷಧಿ ವನ ಹಾಗೂ ಸಾಂಸ್ಕೃತಿಕ, ಕ್ರೀಡೆ, ಎನ್.ಎಸ್.ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ಸವಾಲುಗಳನ್ನು ಎದುರಿಸುವುದನ್ನು ಕಲಿಸುವುದೇ ಶಿಕ್ಷಣ.ಕನ್ನಡದ ಮೇಲಿನ ಪ್ರೀತಿ,ಅಭಿಮಾನ,ವಿಶ್ವಾಸ ಎಷ್ಟು ಮುಖ್ಯವೋ ಇಂಗ್ಲೀಷ್ ಕಲಿಕೆ ಕೂಡ ಅಷ್ಟೆ ಮುಖ್ಯ.ಜಗ್ಗತ್ತೇ ಅಂಗೈನಲ್ಲಿರುವ ಇಂದಿನ ದಿನದಲ್ಲಿ ನೀವು ಈ ಜಗತ್ತಿನ ಸಂಪರ್ಕ ಹೊಂದಬೇಕಾದರೆ ಇಂಗ್ಲೀಷ್ ಭಾಷೆಜ್ಞಾನ ಅಗತ್ಯವಾಗಿದ್ದು ಕಲಿಯದಿದ್ದಲ್ಲಿ ಒಳ್ಳೆಯ ಅವಕಾಶ ಸಿಗುವುದಿಲ್ಲವೆಂದರು.

              ಭಾರತದಲ್ಲಿ ಸಮಾಜ ವ್ಯವಸ್ಥೆ ಬಹಳ ಸಂಕೀರ್ಣವಾಗಿದ್ದು ಒಬ್ಬರಿಗೆ ಸಮಸ್ಯೆಯಾಗಿರುವುದು ಮತ್ತೊಬ್ಬರಿಗೆ ಸಮಸ್ಯೆಯೆ ಅಲ್ಲವಾಗಿರುತ್ತೆ.ಒಬ್ಬರಿಗೆ ಮಹತ್ವದ ವಿಷಯವಾಗಿದ್ದು ಮತ್ತೊಬ್ಬರಿಗೆ ಏನೂ ಅಲ್ಲವಾಗಿರುತ್ತದೆ.ಅನೇಕ ಬಗೆಯೆ ಸವಾಲುಗಳ ನಡುವೆ ಬದುಕಿನ ಕಷ್ಟ ಕೋಟಲೆಗಳಲ್ಲಿ ಆಸೆಯೇ ಜೀವಂತಿಕೆಯ ಲಕ್ಷಣ.ನಮಗೆ ಬಂದಿರುವ ಕಷ್ಟ,ಸಮಸ್ಯೆ ಸವಾಲು ನಮಗೆ ಮಾತ್ರ ದೊಡ್ಡವಾಗಿರುತ್ತೆ.ವ್ಯವಸ್ಥೆ ಹುಲಿಯಿದ್ದ ಹಾಗೆ.ಶ್ರಮ ಜಾಣ್ಮೆಯಿದಲ್ಲಿ ಸುಲಭವಾಗಿ ಸಮಸ್ಯೆ ಎದುರಿಸಬಹುದು.ನಮ್ಮ ದಾರಿಯನ್ನು ನಾವೇ ಕಂಡುಕೊಳ್ಳಬೇಕು. ನೂರು ಮೈಲಿನ ಹಾದಿಗೆ ಮೊದಲಿನ ಹೆಜ್ಜೆ ಮುಖ್ಯ ಎಂದರು.

               ಜನಪದ ಕಲಾವಿದ ಯುಗಧರ್ಮ ರಾಮಣ್ಣ ಮಾತನಾಡಿ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ಒಬ್ಬ ವಿದ್ಯಾರ್ಥಿಯ ಕಾಲೇಜು ಶಿಕ್ಷಣ ಮುಗಿಯುವವರೆಗೂ ೩,೯೬,೩೪೩ ವೆಚ್ಚ ಮಾಡುತ್ತಿದ್ದು ಇದನ್ನರಿತು ವೃಥಾ ಕಾಲಕಳೆಯದೆ ಉತ್ತಮವಾಗಿ ಓದಬೇಕೆಂದರು.ವಿದ್ಯೆ ಕಲಿಯುವುದೊಂದೆ ಬಾಳಿನ ಪುರಿಯಾಗಬಾರದು.ಕಲಿತ ವಿದ್ಯೆ ಸಮಾಜಕ್ಕೆ ಉಪಯೋಗವಾಗಬೇಕು.ವಿಜ್ಞಾನ ಇಂದು ಎಷ್ಟೆ ಮುಂದುವರಿದರೂ ಸಹ ರಾಗಿ ತಯಾರು ಮಾಡುವುದಿಕ್ಕಾಗುವುದಿಲ್ಲ.ರೈತ ಮಾತ್ರ ತನ್ನ ಹೊಲವೆಂಬ ಕಾರ್ಖಾನೆಯಲ್ಲಿ ಇದನ್ನು ತಯಾರು ಮಾಡಬಲ್ಲ ಎಂದರು.

      ಇದಕ್ಕೂ ಮುನ್ನ ಕಾಲೇಜು ಆವರಣದಲ್ಲಿ ಬಸವರಾಜ ಪಂಡಿತ್ ಅವರ ಹೆಸರಿನಲ್ಲಿ ಔಷಧಿವನಕ್ಕೆ ಚಾಲನೆ ನೀಡಲಾಯಿತು.

            ಪ್ರಾಂಶುಪಾಲ ಬಿಳಿಗೆರೆ ಕೃಷ್ಣ ಮೂರ್ತಿ ಅಧ್ಯಕ್ಷತೆ ವಹಿಸಿದ್ದರು.ಪಾರಂಪರಿಕ ವೈದ್ಯರಾಗಿರುವ ವೈದ್ಯ ಬಸವರಾಜ ಪಂಡಿತ್,ಹುಳಿಯಾರು ಗ್ರಾಮಪಂಚಾಯ್ತಿ ಅಧ್ಯಕ್ಷೆ ಗೀತಾಪ್ರದೀಪ್,ಕಾಲೇಜು ಅಭಿವೃದ್ಧಿಸಮಿತಿಯ ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್,ಪರ್ವಿನ್ ತಾಜ್ ,ಡಾ.ಬಾಳಪ್ಪ ಸೇರಿದಂತೆ ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.
----------------------------
ಬಹು ಸಂಸ್ಕೃತಿಯ ಸಂಕೀರ್ಣವಾದ ಸಮಾಜದಲ್ಲಿ ನಾವಿಂದು ಬದುಕುತ್ತಿದ್ದೇವೆ.ಮಾಂಸಹಾರ ತಿನ್ನುವವರನ್ನು ಅಪಾಯಾಕಾರಿಯಾಗಿ ನೋಡುವ ಸಂದಿಗ್ಧಸ್ಥಿತಿ ಎದುರಾಗಿದೆ.ವಿಚಿತ್ರವಾದ ಜಾತಿ ಅಸಮಾನತೆಯ ಈ ಸಮಾಜದಲ್ಲಿ ಆಹಾರ ಪದ್ದತಿಯಲ್ಲಿ ತಾರತಮ್ಯವಿದೆ,ಲಿಂಗ ತಾರತಮ್ಯವಿದೆ,ಪ್ರಾದೇಶಿಕ ಅಸಮಾನತೆಯಿದೆ,ಇದೆಲ್ಲದರ ನಡುವೆ ಸಾಮಾನ್ಯರ ಜನಜೀವನದ ಬದುಕು ದುಸ್ತರವಾಗಿದೆ.ಇದು ನಾವೇ ಸೃಷ್ಟಿಸಿಕೊಂಡಿರುವ ನರಕ :ಡಾ.ದಳವಾಯಿ ರಾಜಪ್ಪ , ಖ್ಯಾತ ವಿಮರ್ಶಕ

----------------------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...