ವಿಷಯಕ್ಕೆ ಹೋಗಿ

ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಿದ್ದ ಪಿಂಚಣಿ ಭರವಸೆ ಈಡೇರಿಸಿ

ಹುಳಿಯಾರು ಹೋಬಳಿ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಜಿ.ಎಸ್.ವೆಂಕಟಾಚಲಪತಿ ಶೆಟ್ಟಿ
ಹುಳಿಯಾರು:ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯಹೋರಾಟಗಾರರಿಗೆ ಪಿಂಚಣಿಯನ್ನು ಪ್ರತಿ ವರ್ಷವೂ ಎರಡು ಸಾವಿರದಂತೆ ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದು ಅದರಂತೆ ಪಿಂಚಣಿಯನ್ನು ವಾರ್ಷಿಕವಾಗಿ ಹೆಚ್ಚಳ ಮಾಡುವಂತೆ ಹುಳಿಯಾರು ಹೋಬಳಿ ಸ್ವಾತಂತ್ರ್ಯ ಹೋರಾಟಗಾರರ ಸಂಘದ ಅಧ್ಯಕ್ಷ ಜಿ.ಎಸ್.ವೆಂಕಟಾಚಲಪತಿ ಶೆಟ್ಟಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.
            ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಅಧಿಕಾರ ವಹಿಸಿಕೊಂಡ ಪ್ರಥಮದಲ್ಲಿ ಚಿತ್ರದುರ್ಗದಲ್ಲಿ ನಡೆದ ಸ್ವಾತಂತ್ರ್ಯ ಯೋಧರ ಮತ್ತು ಉತರಾಧಿಕಾರಿಗಳ ರಾಜ್ಯ ಸಮ್ಮೇಳನದಲ್ಲಿ ಹೋರಾಟಗಾರರಿಗೆ ಹಾಲಿ ಆರು ಸಾವಿರವಿರುವ ಪಿಂಚಣಿಯನ್ನು ಪ್ರತಿ ವರ್ಷವೂ ಎರಡು ಸಾವಿರದಂತೆ ಏರಿಕೆ ಮಾಡುವುದಾಗಿ ಹಾಗೂ ಹೋರಾಟಗಾರರ ಪತ್ನಿಯರಿಗೂ ಉಚಿತ ಬಸ್ ಪಾಸ್ ವಿತರಿಸುವುದಾಗಿ ಭರವಸೆ ನೀಡಿದ್ದರು. ಮುಂದಿನ ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ, ಇಳಿ ವಯಸ್ಸಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರು ನೆಮ್ಮದಿಯಾಗಿ ಜೀವಿಸುವ ಸಲುವಾಗಿ ಪಿಂಚಣಿ ಹೆಚ್ಚಳ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದರು.
             ಅದರಂತೆ ಎರಡುಸಾವಿರ ಒಮ್ಮೆ ಮಾತ್ರ ಏರಿಕೆ ಮಾಡಿ ಆನಂತರ ೨೦೧೪-೧೫ರಲ್ಲಿ ಹೆಚ್ಚಿಳ ಮಾಡಿಲ್ಲ.ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಅನೇಕ ಬಾರಿ ಜೈಲು ವಾಸ ಅನುಭವಿಸಿದ ಸ್ವಾತಂತ್ರ್ಯ ಹೋರಾಟಗಾರರು ಯಾರು ಪಿಂಚಣಿಗಾಗಿ ಹೋರಾಡಿದವರಲ್ಲ. ಅದನ್ನು ಸರ್ಕಾರಗಳು ಅರ್ಥ ಮಾಡಿಕೊಳ್ಳಬೇಕು. ನಿಮ್ಮ ವಾಗ್ದಾನದಂತೆ ಸರ್ಕಾರ ಸ್ವಾತಂತ್ರ ಹೋರಾಟಗಾರರಿಗೆ ಮೊದಲ ವರ್ಷ ಮಾತ್ರ ಹೆಚ್ಚಳ ಮಾಡಿ ಆರು ಸಾವಿರದ ಬದಲು ಎಂಟು ಸಾವಿರ ನೀಡಿದ್ದು ಸರಿಯಷ್ಟೆ.ಆ ಪ್ರಕಾರವಾಗಿ ಈಗ ಬರುತ್ತಿರುವ ರೂ. 8 ಸಾವಿರ ಪಿಂಚಣಿಯನ್ನು ರೂ10 ಸಾವಿರಕ್ಕೆ ಹೆಚ್ಚಿಸಬೇಕಿತ್ತು.ಅಲ್ಲದೆ ರಾಜ್ಯ ಸರ್ಕಾರದ ಹಾಗೂ ಕೇಂದ್ರ ಸರ್ಕಾರದ ಪಿಂಚಣಿಯಲ್ಲಿ ವ್ಯತ್ಯಾಸವಿದ್ದು ಕೇಂದ್ರ ಸರ್ಕಾರ ನೀಡುವಷ್ಟೆ ಪಿಂಚಣಿಯನ್ನು ಮತ್ತಿತರೆ ಸೌಲಭ್ಯವನ್ನು ರಾಜ್ಯಸರ್ಕಾರವೂ ನೀಡಬೇಕೆಂದರು.

            ಈ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿಯಾದರೂ ಪಿಂಚಣಿ ಹೆಚ್ಚಳ ಘೋಷಿಸುವಂತೆಯೂ ಹಾಗೂ ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಉಚಿತ ವೈದ್ಯಕೀಯ ಸೇವೆ ನೀಡುವಂತೆಯೂ ಹಾಗೂ ಪಟ್ಟಣದಲ್ಲಿ ನಿರ್ಮಿಸುತ್ತಿರುವ ಗಾಂಧಿ ಭವನದ ಬಾಕಿ ಉಳಿದಿರುವ ಕಾಮಗಾರಿ ಮುಗಿಸಲು ಅಗತ್ಯ ಅನುದಾನವನ್ನು ಮಂಜೂರು ಮಾಡುವಂತೆಯೂ ಅವರು ಮನವಿ ಮಾಡಿದರು. ಸ್ವಾತಂತ್ರ ಹೋರಾಟಗಾರರ ಉತ್ತರಾಧಿಗಳ ಸಂಘದ ಬಸ್ ಏಜೆಂಟ್ ಗಂಗಣ್ಣ ಇದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...