ವಿಷಯಕ್ಕೆ ಹೋಗಿ

ಕೆಲಸಕ್ಕೆ ಅಡ್ಡಿ : ಗ್ರಾಮಸ್ಥರ ವಿರುದ್ದ ಠಾಣೆಯಲ್ಲಿ ದೂರು ದಾಖಲು

ಹುಳಿಯಾರು:ಹೋಬಳಿಯ ಹೊಯ್ಸಳಕಟ್ಟೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕಲ್ಲೇನಹಳ್ಳಿ ಗ್ರಾಮದ ಕೊಳವೆಬಾವಿಯ ಪಂಪ್ ಸೆಟ್ಟನ್ನು ತೆಗೆದು ಬೇರೆ ಗ್ರಾಮಕ್ಕೆ ಅಳವಡಿಸಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಪಂಚಾಯ್ತಿಗೆ ನುಗ್ಗಿ ಬೀಗ ಜಡಿದ ಘಟನೆ ಇದೀಗ ಪೋಲೀಸ್ ಠಾಣೆ ಮೆಟ್ಟಿಲೇರಿದ್ದು ಪಿಡಿಓ ಗ್ರಾಮಸ್ಥರ ವಿರುದ್ಧ ದೂರು ದಾಖಲಿಸುವ ಮೂಲಕ ತಿರುವು ಪಡೆದುಕೊಂಡಿದೆ.
          ಗ್ರಾಪಂ ಕಚೇರಿಯಲ್ಲಿ ಅಧಿಕಾರಿಗಳಿಗೆ ಕರ್ತವ್ಯ ಪಾಲನೆಗೆ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಿ ಹೊಯ್ಸಳಕಟ್ಟೆ ಗ್ರಾಮಪಂಚಾಯಿತಿಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಮೇಶ್ ೧೪ ಜನ ಕಲ್ಲೇನಹಳ್ಳಿ ಗ್ರಾಮಸ್ಥರ ಮೇಲೆ ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
            ಹೊಯ್ಸಳಕಟ್ಟೆ ಗ್ರಾಪಂ ವ್ಯಾಪ್ತಿಯ ಕಲ್ಲೇನಹಳ್ಳಿ ಗ್ರಾಮದ 1] ತಿಮ್ಮಯ್ಯ ಬಿನ್ ತಿಮ್ಮಯ್ಯ, 2] ನವೀನ್ ಬಿನ್ ರಂಗನಾಥಪ್ಪ, 3] ಮಂಜುನಾಥ ಬಿನ್ ಕರಿಯಪ್ಪ, 4] ಕೃಷ್ಣಮೂರ್ತಿ ಬಿನ್ ಸಿದ್ದಯ್ಯ, 5] ಅಂಗಡಿ ಗಂಗಣ್ಣ ಬಿನ್ ರಂಗಣ್ಣ, 6] ನವೀನ್ [ಕುಂಭಿ] ಬಿನ್ ಗೋವಿಂದಪ್ಪ, 7] ಗಿರೀಶ್ ಬಿನ್ ಮಂಜಣ್ಣ, 8] ಕೇಶವಮೂರ್ತಿ ಬಿನ್ ಕಂಬಯ್ಯ, 9] ಶಿವಣ್ಣ [ಅಕ್ಕಿ] ಬಿನ್ ಮಿಲ್ ಗೋವಿಂದಪ್ಪ, 10] ಕಿಟ್ಟಪ್ಪ ಬಿನ್ ದೊಡ್ಡಮಾರಜ್ಜ, 11] ಈರಣ್ಣ ಬಿನ್ ದಾಸಜ್ಜರ ಭೂತಯ್ಯ, 12] ಬಸವರಾಜು ಬಿನ್ ಮುನಿರಂಗಯ್ಯ, 13] ಮಹದೇವ ಬಿನ್ ಕದುರಯ್ಯ, 14] ಪ್ರವೀಣ್ ಬಿನ್ ರಂಗನಾಥಪ್ಪ ಎಂಬ ೧೪ ಜನ ನಿವಾಸಿಗಳ ಗುಂಪೊಂದು ಸೆಪ್ಟೆಂಬರ್ ೧೭ ರಂದು ಗ್ರಾಪಂಕಚೇರಿಗೆ ಬಂದು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತನ್ನನ್ನು ಸೇರಿದಂತೆ ಎಸ್‌ಡಿಎ, ಕಂಪ್ಯೂಟರ್‌ಸಿಬ್ಬಂದಿಯನ್ನು ಕಚೇರಿಯಿಂದ ಅಕ್ರಮವಾಗಿ ಹೊರಗಡೆ ತಳ್ಳಿದ್ದಲ್ಲದೆ, ಕಚೇರಿಯಲ್ಲಿದ್ದ ಕುರ್ಚಿ, ಟೇಬಲ್, ಎಲೆಕ್ಟ್ರಾನಿಕ್ ವಸ್ತುಗಳನ್ನು ಅಸ್ಥವ್ಯಸ್ಥಗೊಳಿಸಿ ಕಛೇರಿಯಲ್ಲಿದ್ದ ಕುರ್ಚಿಗಳನ್ನು ಹೊರಗಡೆ ತಂದು ಹೊಡೆದು ಹಾಕಿ ಗ್ರಾಮ ಪಂಚಾಯಿತಿಯ ಬಾಗಿಲು ಬೀಗ ಹಾಕಿದ್ದಾರೆ ಎಂಬುದು ಆರೋಪಿಸಿದ್ದಾರೆ.
                  ಈ ಸಮಯದಲ್ಲಿ ಹೊಯ್ಸಳಕಟ್ಟೆ ಗ್ರಾಮ ಪಂಚಾಯಿತಿಯ ಸದಸ್ಯರಾದ ರಂಗನಾಥ ರವರು, ಶ್ರೀಮತಿ ರತ್ನಮ್ಮ ರವರು, ನರಸಿಂಹಮೂರ್ತಿ ರವರು ಹಾಗೂ ಮಲ್ಲೇಶ್ ರವರು ಬಂದು ನಮ್ಮನ್ನು ಸಮಾಧಾನಪಡಿಸಿ ಗ್ರಾಪಂ ಕಚೇರಿಗೆ ಹಾಕಿದ್ದ ಬೀಗ ತೆಗೆಸಿದರು ಎಂದು ದೂರು ಸಲ್ಲಿಸಿರುವ ಅವರು ಈ ಗಲಾಟೆ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಗೆ ಅಳವಡಿಸಿದ್ದ ಸಿ.ಸಿ ಕ್ಯಾಮರಾದಲ್ಲಿ ಎಲ್ಲಾ ಘಟನೆಗಳು ದಾಖಲಾಗಿರುತ್ತದೆ ಎಂದಿದ್ದಾರೆ.



         ಹುಳಿಯಾರು ಪೊಲೀಸ್ ಠಾಣಾ ಮೊ.ನಂ 90/2016 ಕಲಂ:- 143, 147, 427, 448, 353, 504, ರೆ/ವಿ 149 ಐಪಿಸಿ ಅಡಿಯಲ್ಲಿ ಹುಳಿಯಾರು ಠಾಣಾಧಿಕಾರಿ ಪ್ರವೀಣ್‌ಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...