ವಿಷಯಕ್ಕೆ ಹೋಗಿ

ಪತ್ತಿನ ಸಂಘಗಳು ಗ್ರಾಮೀಣ ಪ್ರದೇಶದ ಜನರ ಕಾಮಧೇನುವಾಗಬೇಕು:ಎಂವಿಎನ್

ಹುಳಿಯಾರು:ಬ್ಯಾಂಕ್,ಪತ್ತಿನ ಸಂಘಗಳು ವ್ಯವಹಾರಿಕವಾಗಿ ಲಾಭದಾಯಕವಾಗಿ ನಡೆಯುವುದರ ಜೊತೆಗೆ ಹಣದ ಅಗತ್ಯತೆಯಿರುವವರಿಗೆ ,ದುರ್ಭಲರಿಗೆ ಅವಶ್ಯಕತೆ ಪೂರೈಸುವ ಕಾಮಧೇನುವಾಗಬೇಕು ಎಂದು ಸಾಹಿತಿ ಎಂ.ವಿ.ನಾಗರಾಜ್ ರಾವ್ ಅಭಿಪ್ರಾಯಪಟ್ಟರು.
ಹುಳಿಯಾರು ಪಟ್ಟಣದ ಗಾಯತ್ರಿ ಪತ್ತಿನ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಸಾಹಿತಿ ಎಂ.ವಿ.ನಾಗರಾಜ್ ರಾವ್ ಮಾತನಾಡಿದರು.
         ಹುಳಿಯಾರಿನಲ್ಲಿ ಶನಿವಾರದಂದು ನಡೆದ ಗಾಯತ್ರಿ ಪತ್ತಿನ ಸಹಕಾರ ಸಂಘದ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಶ್ರೀಮಂತರ ಹಣವನ್ನು ಬ್ಯಾಂಕುಗಳು ಹತ್ತಾರು ಜನಕ್ಕೆ ಸಾಲ ನೀಡುವುದರ ಮುಖಾಂತರ ಆರ್ಥಿಕವಾಗಿ ಹಿಂದುಳಿದವರಿಗೆ ವರದಾನವಾಗಿದ್ದು ,ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಮುಖಾಂತರ ಬ್ಯಾಂಕಿನ ಅಭಿವೃದ್ಧಿಗೆ ನೆರವಾಗಬೇಕು ಎಂದರು.ಶೇರುದಾರರ ನಂಬಿಕೆ ,ವಿಶ್ವಾಸ ಬೆಳಸಿಕೊಂಡಲ್ಲಿ ಮಾತ್ರವೇ ಪತ್ತಿನ ಸಂಘಗಳು ಅಭಿವೃದ್ಧಿಯಾಗಲು ಸಾಧ್ಯವೆಂದರು.
        ಸೇವಾ ಸಂಘದಲ್ಲಿ ಅಭಿಪ್ರಾಯ,ಭಿನ್ನಾಭಿಪ್ರಾಯ,ಟೀಕೆ ಟಿಪ್ಪಣೆ ಸಹಜವಾಗಿದ್ದು ಟೀಕೆ ಎದುರಿಸಿ ಪ್ರಶಂಸೆ ಸ್ವೀಕರಿಸಿದಲ್ಲಿ ಮಾತ್ರವೇ ಬೆಳವಣಿಗೆ ಸಾಧ್ಯ ಎಂದು ಕಿವಿಮಾತು ಹೇಳಿದರು.
          ತುಮಕೂರಿನ ಗಾಯತ್ರಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಿ.ಎನ್.ರಮೇಶ್ ಮಾತನಾಡಿ ಹುಳಿಯಾರಿನ ಗಾಯತ್ರಿ ಪತ್ತಿನ ಸಹಕಾರ ಸಂಘ ಪ್ರಾರಂಭವಾದ ಅಲ್ಪ ಅವಧಿಯಲ್ಲೆ ಪ್ರಗತಿ ಸಾಧಿಸಿರುವುದು ಶ್ಲಾಘನೀಯ.ಶೇರುದಾರರ,ಹೂಡಿಕೆದಾರರ ಹಣವನ್ನು ಸಾಲದ ರೂಪದಲ್ಲಿ ವಹಿವಾಟು ನಡೆಸಿ ಬಂದ ಆದಾಯವನ್ನು ಡಿವಿಡೆಂಟ್ ರೂಪದಲ್ಲಿ ಶೇರುದಾರರಿಗೆ ನೀಡುವುದು ಸಂಘದ ಅಧ್ಯಕ್ಷರ ಹೊಣೆಗಾರಿಕೆ ಎಂದರು.
          ಬ್ಯಾಂಕುಗಳಲ್ಲಿ ಪಡೆದ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡುವ ಜನ ಸೊಸೈಟಿ ಸಾಲವೆಂದರೆ ಉದಾಸೀನ ಮಾಡಿ ಸಾಲಕಟ್ಟದೆ ಸತಾಯಿಸುವ ಮನೋಭಾವ ಬಿಡಬೇಕು. ಸೊಸೈಟಿಯ ಆಸ್ತಿ ನಮ್ಮನಿಮ್ಮಲ್ಲರ ಆಸ್ತಿಯಾಗಿದ್ದು ಸಂಘ ಅಭಿವೃದ್ಧಿ ಪಡಿಸುವ ಕಡೆ ಗಮನ ಹರಿಸಬೇಕೆಂದು ಸಲಹೆ ನೀಡಿದರು.

          ತುಮಕೂರಿನ ಗಾಯತ್ರಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷ ಅನಂತರಾಮಯ್ಯ, ನಿರ್ದೇಶಕ ರಾದ ಸತ್ಯನಾರಾಯಣ್ ಮಾತನಾಡಿದರು.

            ಸಂಘದ ಕಾರ್ಯದರ್ಶಿ ಮಂಜುನಾಥ್ ಆರ್ಥಿಕ ಸಾಲಿನ ಜಮಾಖರ್ಚಿನ ವಿವರ ನೀಡಿದರು. ಸಭೆಯಲ್ಲಿ ಪ್ರಸಕ್ತ ಸಾಲಿನ ಹಾಗೂ ಮುಂಬರುವ ಸಾಲಿನ ಯೋಜನೆಗಳ ಬಗ್ಗೆ ಒಪ್ಪಿಗೆ ಪಡೆಯಲಾಯಿತು.


          ಎಂ.ಎ.ಲೋಕೇಶ್ ಅಧ್ಯಕ್ಷತೆ ವಹಿಸಿದ್ದರು.ಅನಂತಯ್ಯ ಸ್ವಾಗತಿಸಿ,ಶ್ರೀಮತಿ ಸುಧಾ  ನಿರೂಪಿಸಿ,ರಾಜೀವ್ ವಂದಿಸಿದರು. 
                 ಹುಳಿಯಾರು, ಚಿಕ್ಕನಾಯಕನಹಳ್ಳಿ, ಹಂದನಕೆರೆ, ಶೆಟ್ಟಿಕೆರೆ, ಸಾಲಾಪುರ, ಎಣ್ಣೆಗೆರೆ, ತಿಮ್ಲಾಪುರ ಭಾಗದ ಶೇರುದಾರರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...