ವಿಷಯಕ್ಕೆ ಹೋಗಿ

ಒತ್ತಡಕ್ಕೆ ಮಣಿದು ಶಿಕ್ಷಕರ ಕೌನ್ಸೆಲ್ಲಿಂಗ್ ಪಟ್ಟಿಯಲ್ಲಿ ಮಾರ್ಪಾಡು:ತನಿಖೆಗೆ ಸಾಸಲು ಸತೀಶ್ ಆಗ್ರಹ

ಶಿಕ್ಷಕರ ಕೌನ್ಸೆಲ್ಲಿಂಗ್ ಪಟ್ಟಿಯಲ್ಲಿ ಅವ್ಯವಹಾರ ನಡೆದಿದ್ದು ತನಿಖೆ ನಡೆಸಬೇಕೆಂದು ಹುಳಿಯಾರಿನ ಪ್ರವಾಸಿಮಂದಿರದಲ್ಲಿ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಾಸಲು ಸತೀಶ್ ಪತ್ರಿಕಾಗೋಷ್ಟಿ ನಡೆಸಿದರು.
ಹುಳಿಯಾರು:ತಾಲ್ಲೂಕಿನಲ್ಲಿ ಗಡಿಭಾಗದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಶಿಕ್ಷಕರ ಕೌನ್ಸೆಲ್ಲಿಂಗ್ ಮಾಡಿ ಕೊರತೆಯಿದ್ದ ಹುದ್ದೆಗಳಿಗೆ ಶಿಕ್ಷಕರನ್ನು ನಿಯೋಜನೆ ಮೂಲಕ ವರ್ಗಾವಣೆ ಮಾಡಲಾಗಿದ್ದ ಪಟ್ಟಿಯಲ್ಲಿ ಕೆಲವು ಪ್ರಭಾವಿ ಶಿಕ್ಷಕರ ಮರ್ಜಿಗೆ,ಒತ್ತಡಕ್ಕೆ ಒಳಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೆಲ ರಾಜಕೀಯ ಬೆಂಬಲಿತ ಶಿಕ್ಷಕರ ವರ್ಗಾವಣೆಯನ್ನು ತಡೆಹಿಡಿದ್ದಿದ್ದಾರೆಂದು ಚಿಕ್ಕನಾಯಕನಹಳ್ಳಿ ಕ್ಷೇತ್ರದ ಕಾಂಗ್ರೆಸ್ ಮುಖಂಡ ಹಾಗೂ ತುಮಕೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಾಸಲು ಸತೀಶ್ ಆರೋಪಿಸಿದ್ದಾರೆ.

             ಹುಳಿಯಾರಿನ ಪ್ರವಾಸಿಮಂದಿರದಲ್ಲಿ ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿದ ಅವರು ತಾಲ್ಲೂಕಿನ ಗಡಿಭಾಗದ ಶಾಲಾ ಶಿಕ್ಷಕರ ಸಮಸ್ಯೆ ಪರಿಹರಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಸಮರ್ಥರಾಗಿದ್ದು ಶಾಸಕರ ಹಾಗೂ ಕೆಲ ಅರೆ ರಾಜಕಾರಣಿ ಶಿಕ್ಷಕರ ತಾಳಕ್ಕೆ ತಕ್ಕಂತೆ ಕುಣಿದು ಡೆಪ್ಯೂಟೇಷನ್ ಪಟ್ಟಿಯಲ್ಲಿ ಅದಲು ಬದಲು ಮಾಡಿ ತಮಗೆ ಬೇಕಾದಂತೆ ಮಾರ್ಪಾಟು ಮಾಡಿದ್ದಾರೆ.ಪ್ರಭಾವಿಗಳ ಒತ್ತಡಕ್ಕೆ ಒಳಗಾಗಿ ಗಡಿಭಾಗಕ್ಕೆ ವರ್ಗಾವಣೆ ಮಾಡಿದ್ದ ಕೆಲ ಶಿಕ್ಷಕರನ್ನು ಹಾಗೆಯೇ ಉಳಿಸಿದ್ದಾರೆ ಎಂದು ಆರೋಪಿಸಿದರು.

                ಅಸಹಾಯಕರನ್ನು ಗಡಿಭಾಗಕ್ಕೆ ಡೆಪ್ಯೂಟ್ ಮಾಡಿ,ಪ್ರಭಾವಿಗಳನ್ನು ಮಾತ್ರ ಅವರಿಗೆ ಬೇಕಾದ ಕಡೆ ಹಾಕಿಕೊಟ್ಟಿರುವುದು ಎಷ್ಟರ ಮಟ್ಟಿಗೆ ಸರಿ.ಇದರಲ್ಯಾಕೆ ರಾಜಕೀಯ,ತಾರತಮ್ಯ ಎಂದ ಅವರು ಅಸಹಾಯಕರ ಪರ ತಾವಿದ್ದು ಇಂತಹ ಅನ್ಯಾಯವನ್ನು ಖಂಡಿಸುವುದಾಗಿ ತಿಳಿಸಿದರು.

                 ತಾಲ್ಲೂಕಿನಲ್ಲಿ ಕೆಲವು ಶಿಕ್ಷಕರು ತಮ್ಮ ವೃತ್ತಿ ಜವಬ್ದಾರಿ ಮರೆತು ರಾಜಕಾರಣ ಮಾಡಿತ್ತಿದ್ದು ರಾಜಕೀಯ ಸಭೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ.ಶಿಕ್ಷಕರ ರಾಜಕಾರಣ ನೋಡಿಕೊಂಡು ಗ್ರಾಮಸ್ಥರು, ಪೋಷಕರು ಮೌನವಾಗಿರುವ ಕಾರಣವಾದರೂ ಏನು,ಯಾರ ಮರ್ಜಿಗೆ ಒಳಗಾಗಿ ಪ್ರಶ್ನಿಸಲು ಮುಂದಾಗುತ್ತಿಲ್ಲ. ಶಾಸಕರು ಶಿಕ್ಷಕರನ್ನು ರಾಜಕೀಯಕ್ಕೆ ತೊಡಗಿಸಿಕೊಂಡು ದುರುಪಯೋಗ ಮಾಡಿಕೊಳ್ಳುತ್ತಿದ್ದು ಇಂತಹ ತೊಗಲಕ್ ದರ್ಬಾರ್ ನಿಲ್ಲಬೇಕು ಎಂದರು.

            ರಾಜಕಾರಣ ಮಾಡುವ ಕೆಲ ಶಿಕ್ಷಕರಿಂದ ವೃತ್ತಿ ಗೌರವ ಹಾಳಾಗುತ್ತಿದ್ದು ಶಿಕ್ಷಕರು ಪಡೆಯುವ ಸಂಬಳ ತಕ್ಕ ಕನಿಷ್ಟ ಪಾಠವನ್ನಾದರೂ ಮಾಡಬೇಕು.ಪಾಠಮಾಡುವುದರ ಬದಲು ರಾಜಕಾರಣದಲ್ಲಿ ತೊಡಗಿಕೊಳ್ಳುವ ಶಿಕ್ಷಕರುಗಳು ಹುದ್ದೆಗೆ ರಾಜೀನಾಮೆ ನೀಡಿ ಪೂರ್ಣಾವಧಿ ರಾಜಕಾರಣಕ್ಕೆ ಬಂದು .ಚುನಾವಣೆಗೆ ಸ್ಪರ್ಧೆಮಾಡಿ ಎಂದರು.ಸರ್ಕಾರಿ ಸಂಬಳ ಪಡೆದು ರಾಜಕೀಯ ಮಾಡಿಕೊಂಡು ಓಡಾದುವುದನ್ನು ಬಿಡಿ ಎಂದು ಲೇವಡಿ ಮಾಡಿದರು.
        ಗಡಿ ಭಾಗಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕರು ಬದಲು ಮಾಡಿಕೊಳ್ಳಲು ಬೋಗಸ್ ಮೆಡಿಕಲ್ ಸರ್ಟಿಫಿಕೇಟ್ ಕೊಟ್ಟಿದ್ದು ಈ ಸುಳ್ಳು ವರದಿಗಳನ್ನು ತನಿಖೆಮಾಡಬೇಕು.ನಕಲಿ ಆರೋಗ್ಯ ತಪಾಸಣ ಪಟ್ಟಿಯನ್ನು ಕೊಟ್ಟಿರುವವರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.
        ಕ್ಷೇತ್ರ ಶಿಕ್ಷಣಾಧಿಕಾರಿಗಳೇ,ಡೆಪ್ಯೂಟೇಷನ್ ಆದಮೇಲೆ ಎಷ್ಟು ಜನ ಶಿಕ್ಷಕರನ್ನು ರಿಟೈನ್ ಮಾಡಿದ್ದೀರಾ,ಯಾರ್ಯಾರನ್ನು ಮಾಡಿದ್ದೀರಿ,ಯಾರ ಒತ್ತಡಕ್ಕೆ ಒಳಗಾಗಿ ಮಾಡಿದ್ದೀರಾ ಉತ್ತರಿಸಬೇಕು.ನೀವು ಇಂತಹ ಅಪವಿತ್ರ ಮೈತ್ರಿಗೆ ಮಣಿದು ಪಟ್ಟಿಯಲ್ಲಿದ್ದ ಯಾರ್ಯಾರನ್ನು ಇಂಟರ್ ಚೇಂಜ್ ಮಾಡಿದ್ದಿರೋ ಅಂಥವರನ್ನು ಡೆಪ್ಯೂಟೇಷನ್ ಮಾಡಿರುವ ಜಾಗಕ್ಕೆ ಹತ್ತುದಿನದೊಳಗೆ ವಾಪಸ್ಸು ಹಾಕಬೇಕು.ಇಲ್ಲದಿದ್ದಲ್ಲಿ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಸಿದರು.
        ಪತ್ರಿಕಾಗೋಷ್ಟಿಯಲ್ಲಿ ತಾಲ್ಲೂಕ್ ಬಗರ್ ಹುಕ್ಕುಂ ಕಮಿಟಿ ಸದಸ್ಯ ಹೊಸಳ್ಳಿ ಅಶೋಕ್,ಗ್ರಾಪಂ ಸದಸ್ಯರುಗಳಾದ ದಸೂಡಿ ಚಂದ್ರಣ್ಣ,ದಯಾನಂದ್, ವೆಂಕಟೇಶ್, ಎಪಿಎಂಸಿ ಸದಸ್ಯ ರುದ್ರೇಶ್,ಈರುಳ್ಳಿ ಮಂಜು,ಜಯಕರ್ನಾಟಕ ಸಂಘಟನೆಯ ಮೋಹನ್ ಕುಮಾರ್ ರೈ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...