ವಿಷಯಕ್ಕೆ ಹೋಗಿ

ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮ

ಹುಳಿಯಾರು: ಆದಾಯ ತೆರಿಗೆ ಪಾವತಿದಾರರು ತಮ್ಮ ಅಘೋಷಿತ ಸ್ಥಿರಾಸ್ತಿ ಹಾಗೂ ಚರಾಸ್ತಿಗಳನ್ನು ಆದಾಯ ತೆರಿಗೆಯ ಐಡಿಎಸ್‌-2016 ಯೋಜನೆಯಡಿ ಘೋಷಿಸಿಕೊಂಡು ಈ ಯೋಜನೆಯಡಿ ಶೇ.45 ರಷ್ಟು ಆದಾಯ ತೆರಿಗೆ ಪಾವತಿಸಿ ನಿಮ್ಮ ಸಂಪಾದನೆಯನ್ನು ಘೋಷಿಸಬಹುದೆಂದು ತಿಪಟೂರು ವಲಯದ ಆದಾಯ ತೆರಿಗೆ ಅಧಿಕಾರಿ ನಿರ್ಮಲ ಸಲಹೆ ನೀಡಿದರು.
                      ಹುಳಿಯಾರಿನ ವಾಸವಿ ಕಲ್ಯಾಣ ಮಂಟಪದಲ್ಲಿ ಮಂಗಳವಾರದಂದು ಆದಾಯ ತೆರಿಗೆ ಇಲಾಖೆಯಿಂದ ಏರ್ಪಡಿಸಿದ್ದ ಆದಾಯ ತೆರಿಗೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಯೋಜನೆಯ ಅವಧಿ ಜೂ.1 ರಿಂದ ಸೆ. 30ರ ವರೆಗೆ ಇದ್ದು ತೆರಿಗೆ ಪಾವತಿದಾರರು ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸಿ ಈ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕೆಂದರು.
                 ನೀವು ಈ ಹಿಂದೆ ನಿಮ್ಮ ಆದಾಯ ಘೋಷಣೆ ಮಾಡಿರದಿದ್ದರೆ, ಸರ್ಕಾರಕ್ಕೆ ತೆರಿಗೆ ಕಟ್ಟಿರದಿದ್ದರೆ ಇದು ಒಂದು ಬಾರಿಯ ಕೊನೆಯ ಅವಕಾಶವಾಗಿದ್ದು ಈ ಯೋಜನೆಯಡಿ ನೀವು ಆದಾಯ ತೆರಿಗೆ ಕಟ್ಟಿ ನಿಮ್ಮ ಸಂಪಾದನೆಯನ್ನು ಘೋಷಿಸಿ ನಿಶ್ಚಿಂತರಾಗಬಹುದು.ಎಲ್ಲಾ ತೆರಿಗೆ ಪಾವತಿದಾರರು ಐಡಿಎಸ್‌ 2016ರ ಯೋಜನೆಯಡಿ ಅಘೋಷಿತ ಆಸ್ತಿ ಘೋಷಿಸಿಕೊಂಡು ಯೋಜನೆ ಲಾಭ ಪಡೆದುಕೊಳ್ಳಬೇಕೆಂದರು.

             ಈ ಯೋಜನೆಯನ್ವಯ ಯಾರು ಅಘೋಷಿತ ಆಸ್ತಿಗಳ ರೂಪದಲ್ಲಿ ಆದಾಯವನ್ನು ಘೋಷಣೆ ಮಾಡಿಕೊಳ್ಳಲು ಬಯಸುತ್ತಾರೋ ಅಂತವರು ಯಾವುದೇ ತರಹದ ವಿಚಾರಣೆ ಅಥವಾ ದಂಡ, ಜುಲ್ಮಾನೆಗೆ ಒಳಪಡುವುದಿಲ್ಲ.ಸಂಘ ಸಂಸ್ಥೆಗಳು, ತೆರಿಗೆ ಸಲಹೆಗಾರರು ಈ ಯೋಜನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.
           ವಿವಿಧ ವ್ಯಾಪಾರವ್ಯವಹಾರ ನಡೆಸುತ್ತಿರುವ ಸಾಕಷ್ಟು ವ್ಯಾಪಾರಸ್ಥರು ಸರಕಾರಕ್ಕೆ ಕಟ್ಟ ಬೇಕಾಗಿರುವ ಆದಾಯ ತೆರಿಗೆಯನ್ನ ಕಟ್ಟದಿರುವುದು ಕಾನೂನು ಬಾಹಿರ ಅಪರಾಧವಾಗಿದ್ದು ಈಗಲಾದರು ಎಚ್ಚೆತ್ತುಕೊಂಡು ತಾವು ನಡೆಸುತ್ತಿರುವ ವ್ಯಾಪರದ ಆದಾಯದ ತೆರಿಗೆಯನ್ನ ಈ ತಿಂಗಳ ಸೆಪ್ಟೆಂಬರ್ ೩೦ರೊಳಗೆ ಕಡ್ಡಾಯವಾಗಿ ಕಟ್ಟುವಂತೆ ಹಾಗೊಂದು ವೇಳೆ ತೆರಿಗೆಯನ್ನ ಕಟ್ಟದಿದ್ದರೆ ಶಿಕ್ಷೆಗೆ ಗುರಿಯಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು.
              ಟಿ.ಡಿ.ಎಸ್.ಪಾವತಿ ಮಾಡುವಾಗ ಕಳ್ಳಮಾರ್ಗ ಅನುಸರಿಸದೆ ಪ್ರಾಮಾಣಿಕವಾಗಿ ಸಮಪರ್ಕವಾದ ಮಾಹಿತಿಯನ್ನ ನೀಡುವಂತೆ ತಿಳಿಸಿದ ಅವರು ಪ್ರತಿವರ್ಷವು ಸಹಾ ತಮ್ಮ ಆದಾಯ ತೆರಿಗೆಯನ್ನ ಸರಿಯಾದ ಸಮಯಕ್ಕೆ ಸರಕಾರಕ್ಕೆ ಪಾವತಿ ಮಾಡುವ ಮೂಲಕ ದೇಶದ ಪ್ರಗತಿಗೆ ಕೈಜೋಡಿಸಿ.ನೀವು ಸರಕಾರಕ್ಕೆ ಕಟ್ಟುವ ತೆರಿಗೆಯು ದೇಶದ ಮತ್ತು ಜನಸಾಮಾನ್ಯರ ಅಭಿವೃದ್ದಿ ಕಾರ್ಯಗಳಿಗೆ ಬಳಕೆಯಾಗುತ್ತದೆ ಎಂದರು.
               ಈ ಕಾರ್ಯಕ್ರಮದಲ್ಲಿ ತಿಪಟೂರು ಆದಾಯ ತೆರಿಗೆ ಇಲಾಖೆಯ ಯೋಗೇಶ್ , ವರ್ತಕರ ಸಂಘದ ಅಧ್ಯಕ್ಷ ಎಂ.ಎಸ್.ನಟರಾಜು,ಗ್ರಾಪಂ ಸದಸ್ಯ ಶಂಕರ್ ಸೇರಿದಂತೆ ಎಪಿಎಂಸಿ ವರ್ತಕರು,ದಿನಸಿ ವರ್ತಕರು,ಚಿನ್ನ ಬೆಳ್ಳಿ ವರ್ತಕರು,ಕಬ್ಬಿಣದ ಅಂಗಡಿ ವರ್ತಕರು,ಬಟ್ಟೆ ಅಂಗಡಿ ವರ್ತಕರು ಪಾಲ್ಗೊಂಡಿದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...