ವಿಷಯಕ್ಕೆ ಹೋಗಿ

ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮ

ಹುಳಿಯಾರು: ಆದಾಯ ತೆರಿಗೆ ಪಾವತಿದಾರರು ತಮ್ಮ ಅಘೋಷಿತ ಸ್ಥಿರಾಸ್ತಿ ಹಾಗೂ ಚರಾಸ್ತಿಗಳನ್ನು ಆದಾಯ ತೆರಿಗೆಯ ಐಡಿಎಸ್‌-2016 ಯೋಜನೆಯಡಿ ಘೋಷಿಸಿಕೊಂಡು ಈ ಯೋಜನೆಯಡಿ ಶೇ.45 ರಷ್ಟು ಆದಾಯ ತೆರಿಗೆ ಪಾವತಿಸಿ ನಿಮ್ಮ ಸಂಪಾದನೆಯನ್ನು ಘೋಷಿಸಬಹುದೆಂದು ತಿಪಟೂರು ವಲಯದ ಆದಾಯ ತೆರಿಗೆ ಅಧಿಕಾರಿ ನಿರ್ಮಲ ಸಲಹೆ ನೀಡಿದರು.
                      ಹುಳಿಯಾರಿನ ವಾಸವಿ ಕಲ್ಯಾಣ ಮಂಟಪದಲ್ಲಿ ಮಂಗಳವಾರದಂದು ಆದಾಯ ತೆರಿಗೆ ಇಲಾಖೆಯಿಂದ ಏರ್ಪಡಿಸಿದ್ದ ಆದಾಯ ತೆರಿಗೆಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಯೋಜನೆಯ ಅವಧಿ ಜೂ.1 ರಿಂದ ಸೆ. 30ರ ವರೆಗೆ ಇದ್ದು ತೆರಿಗೆ ಪಾವತಿದಾರರು ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸಿ ಈ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕೆಂದರು.
                 ನೀವು ಈ ಹಿಂದೆ ನಿಮ್ಮ ಆದಾಯ ಘೋಷಣೆ ಮಾಡಿರದಿದ್ದರೆ, ಸರ್ಕಾರಕ್ಕೆ ತೆರಿಗೆ ಕಟ್ಟಿರದಿದ್ದರೆ ಇದು ಒಂದು ಬಾರಿಯ ಕೊನೆಯ ಅವಕಾಶವಾಗಿದ್ದು ಈ ಯೋಜನೆಯಡಿ ನೀವು ಆದಾಯ ತೆರಿಗೆ ಕಟ್ಟಿ ನಿಮ್ಮ ಸಂಪಾದನೆಯನ್ನು ಘೋಷಿಸಿ ನಿಶ್ಚಿಂತರಾಗಬಹುದು.ಎಲ್ಲಾ ತೆರಿಗೆ ಪಾವತಿದಾರರು ಐಡಿಎಸ್‌ 2016ರ ಯೋಜನೆಯಡಿ ಅಘೋಷಿತ ಆಸ್ತಿ ಘೋಷಿಸಿಕೊಂಡು ಯೋಜನೆ ಲಾಭ ಪಡೆದುಕೊಳ್ಳಬೇಕೆಂದರು.

             ಈ ಯೋಜನೆಯನ್ವಯ ಯಾರು ಅಘೋಷಿತ ಆಸ್ತಿಗಳ ರೂಪದಲ್ಲಿ ಆದಾಯವನ್ನು ಘೋಷಣೆ ಮಾಡಿಕೊಳ್ಳಲು ಬಯಸುತ್ತಾರೋ ಅಂತವರು ಯಾವುದೇ ತರಹದ ವಿಚಾರಣೆ ಅಥವಾ ದಂಡ, ಜುಲ್ಮಾನೆಗೆ ಒಳಪಡುವುದಿಲ್ಲ.ಸಂಘ ಸಂಸ್ಥೆಗಳು, ತೆರಿಗೆ ಸಲಹೆಗಾರರು ಈ ಯೋಜನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.
           ವಿವಿಧ ವ್ಯಾಪಾರವ್ಯವಹಾರ ನಡೆಸುತ್ತಿರುವ ಸಾಕಷ್ಟು ವ್ಯಾಪಾರಸ್ಥರು ಸರಕಾರಕ್ಕೆ ಕಟ್ಟ ಬೇಕಾಗಿರುವ ಆದಾಯ ತೆರಿಗೆಯನ್ನ ಕಟ್ಟದಿರುವುದು ಕಾನೂನು ಬಾಹಿರ ಅಪರಾಧವಾಗಿದ್ದು ಈಗಲಾದರು ಎಚ್ಚೆತ್ತುಕೊಂಡು ತಾವು ನಡೆಸುತ್ತಿರುವ ವ್ಯಾಪರದ ಆದಾಯದ ತೆರಿಗೆಯನ್ನ ಈ ತಿಂಗಳ ಸೆಪ್ಟೆಂಬರ್ ೩೦ರೊಳಗೆ ಕಡ್ಡಾಯವಾಗಿ ಕಟ್ಟುವಂತೆ ಹಾಗೊಂದು ವೇಳೆ ತೆರಿಗೆಯನ್ನ ಕಟ್ಟದಿದ್ದರೆ ಶಿಕ್ಷೆಗೆ ಗುರಿಯಾಗ ಬೇಕಾಗುತ್ತದೆ ಎಂದು ಎಚ್ಚರಿಸಿದರು.
              ಟಿ.ಡಿ.ಎಸ್.ಪಾವತಿ ಮಾಡುವಾಗ ಕಳ್ಳಮಾರ್ಗ ಅನುಸರಿಸದೆ ಪ್ರಾಮಾಣಿಕವಾಗಿ ಸಮಪರ್ಕವಾದ ಮಾಹಿತಿಯನ್ನ ನೀಡುವಂತೆ ತಿಳಿಸಿದ ಅವರು ಪ್ರತಿವರ್ಷವು ಸಹಾ ತಮ್ಮ ಆದಾಯ ತೆರಿಗೆಯನ್ನ ಸರಿಯಾದ ಸಮಯಕ್ಕೆ ಸರಕಾರಕ್ಕೆ ಪಾವತಿ ಮಾಡುವ ಮೂಲಕ ದೇಶದ ಪ್ರಗತಿಗೆ ಕೈಜೋಡಿಸಿ.ನೀವು ಸರಕಾರಕ್ಕೆ ಕಟ್ಟುವ ತೆರಿಗೆಯು ದೇಶದ ಮತ್ತು ಜನಸಾಮಾನ್ಯರ ಅಭಿವೃದ್ದಿ ಕಾರ್ಯಗಳಿಗೆ ಬಳಕೆಯಾಗುತ್ತದೆ ಎಂದರು.
               ಈ ಕಾರ್ಯಕ್ರಮದಲ್ಲಿ ತಿಪಟೂರು ಆದಾಯ ತೆರಿಗೆ ಇಲಾಖೆಯ ಯೋಗೇಶ್ , ವರ್ತಕರ ಸಂಘದ ಅಧ್ಯಕ್ಷ ಎಂ.ಎಸ್.ನಟರಾಜು,ಗ್ರಾಪಂ ಸದಸ್ಯ ಶಂಕರ್ ಸೇರಿದಂತೆ ಎಪಿಎಂಸಿ ವರ್ತಕರು,ದಿನಸಿ ವರ್ತಕರು,ಚಿನ್ನ ಬೆಳ್ಳಿ ವರ್ತಕರು,ಕಬ್ಬಿಣದ ಅಂಗಡಿ ವರ್ತಕರು,ಬಟ್ಟೆ ಅಂಗಡಿ ವರ್ತಕರು ಪಾಲ್ಗೊಂಡಿದ್ದರು

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...