ವಿಷಯಕ್ಕೆ ಹೋಗಿ

ಮುಂದೂಡಿದ ರೈತ ಸಂಘದ ರ್ಯಾಲಿ

ಅಡಿಕೆ-ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
-------------------------------------------
ಹುಳಿಯಾರು: ತೆಂಗು ಹಾಗು ಅಡಕೆಯ ವೈಜ್ಞಾನಿಕ ಬೆಲೆಗೆ ಆಗ್ರಹಿಸಿ ಸೋಮವಾರದಂದು ರಾಜ್ಯ ರೈತಸಂಘ ಕಡೂರಿನಿಂದ ಹಮ್ಮಿಕೊಂಡಿದ್ದ ಬೈಕ್ ಜಾಥಾವನ್ನು ತಡೆದ ಪೊಲೀಸರು ಕಾವೇರಿ ತೀರ್ಪಿನ ಮುನ್ನೆಚರಿಕೆ ಕ್ರಮವಾಗಿ ಐನೂರು ರೈತರನ್ನು ಬಂಧಿಸಿದ ಹಿನ್ನಲೆಯಲ್ಲಿ ಮಂಗಳವಾರದಂದು ಹುಳಿಯಾರಿನಿಂದ ಹೊರಟಿದ್ದ ಬೈಕ್ ರ್ಯಾಲಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಹಸಿರು ಸೇನೆಯ ಕಾರ್ಯದರ್ಶಿ ಕೆಂಕೆರೆ ಸತೀಶ್ ತಿಳಿಸಿದರು.
ಹುಳಿಯಾರಿನ ಪರಿವೀಕ್ಷಣಾ ಮಂದಿರದಲ್ಲಿ ಮಂಗಳವಾರದಂದು ನಡೆದ ಸುದ್ದಿಗೋಷ್ಟಿಯಲ್ಲಿ ರಾಜ್ಯ ಹಸಿರು ಸೇನೆಯ ಕಾರ್ಯದರ್ಶಿ ಕೆಂಕೆರೆ ಸತೀಶ್ ಮಾತನಾಡಿದರು.
           ಹುಳಿಯಾರಿನ ಪರಿವೀಕ್ಷಣಾ ಮಂದಿರದಲ್ಲಿ ಮಂಗಳವಾರದದಂದು ಈ ಕುರಿತು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತೆಂಗು ಹಾಗು ಅಡಕೆಯ ವೈಜ್ಞಾನಿಕ ಬೆಲೆಗೆ ಆಗ್ರಹಿಸಿ ಕಳೆದ ತಿಂಗಳು ತಿಪಟೂರಿನಿಂದ ಕಾಲ್ನಡಿಗೆ ಜಾಥಾದ ಮೂಲಕ ವಿಧಾನ ಸೌಧ ಮುತ್ತಿಗೆ ಹಾಕಲು ಹೊರಟಂತ ಸಂದರ್ಭದಲ್ಲಿ ಸಿದ್ಧಗಂಗಾಮಠದಲ್ಲಿ ನಡೆದ ಸಂಧಾನ ಪ್ರಕ್ರಿಯೆಯಲ್ಲಿ ರೈತರ ಆಶಯಗಳಿಗೆ ಸ್ಪಂದಿಸುವುದಾಗಿ ಹಾಗೂ ಸರ್ವಪಕ್ಷ ಸಭೆ ನಡೆಸಿ, ಪ್ರಧಾನಿ ಬಳಿ ನಿಯೋಗ ಒಯ್ಯುವ ಭರವಸೆ ನೀಡಿದ್ದರು. ಮುಖ್ಯಮಂತ್ರಿಗಳ ಹೇಳಿಕೆಯನ್ನು ಒಪ್ಪಿ ತಾತ್ಕಾಲಿಕವಾಗಿ ಜಾಥಾವನ್ನು ಮೊಟುಕುಗೊಳಿಸಲಾಗಿತ್ತು.ಈ ಭರವಸೆ ನೀಡಿ ತಿಂಗಳಾಗುತ್ತಾ ಬಂದರೂ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳದ ಹಿನ್ನಲೆಯಲ್ಲಿ ಸೆ.೨೧ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
         ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ರೈತರು ಸೆಪ್ಟೆಂಬರ್ ೧೯ರ ಸೋಮವಾರದಂದು ಕಡೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬೈಕ್‌ ರ್ಯಾಲಿಯನ್ನ ಕಾವೇರಿ ಗಲಭೆ ಹಿನ್ನಲೆಯಲ್ಲಿ ತಡೆದ ಪೊಲೀಸರು ರೈತರನ್ನು ಬಂಧಿಸಿದ್ದರಿಂದ ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಏರುಪೇರಾಗಲು ಕಾರಣವಾಯಿತೆಂದರು.

       ಮಂಗಳವಾರದಂದು ಹುಳಿಯಾರಿನಿಂದ ನೂರಾರು ರೈತರು ತಿಪಟೂರಿಗೆ ತೆರಳಬೇಕಿದ್ದು ಪೋಲಿಸರು ಕಾವೇರಿ ಗಲಭೆ ಹಿನ್ನಲೆಯಲ್ಲಿ ರ್ಯಾಲಿ ಮುಂದೂಡವಂತೆ ಮಾಡಿದ ಮನವಿ ಹಿನ್ನಲೆಯಲ್ಲಿ ರ್ಯಾಲಿ ಮುಂಡೂಡಿರುವುದಾಗಿ ತಿಳಿಸಿದರು.

        ತೆಂಗಿನ ಕೊಬ್ಬರಿ ಮತ್ತು ಅಡಿಕೆ ಬೆಲೆಯನ್ನ ಶೀಘ್ರದಲ್ಲಿಯೆ ಹೆಚ್ಚಿಸದಿದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಎಲ್ಲಾ ಸಂಸದರ, ಸಚಿವರ ಹಾಗೂ ಎಂ.ಎಲ್.ಎ ಗಳ ಮನೆಗಳಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ ಅವರು ಮುಂದಿನ ಹೋರಾಟದ ಬಗ್ಗೆ ಅಕ್ಟೋಬರ್ ತಿಂಗಳಲ್ಲಿ ನಿರ್ಧರಿಸಲಾಗುವುದು ಎಂದರು.
          ತಾಲ್ಲೂಕು ರೈತಸಂಘದ ಅಧ್ಯಕ್ಷ ತಿಮ್ಮನಹಳ್ಳಿ ಲೋಕಣ್ಣ ಮಾತನಾಡಿ ಈಗಾಗಲೆ ಸರ್ಕಾರವು ರೈತರ ಹಿತವನ್ನ ಬಲಿಕೊಟ್ಟು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮ ಸರಿಯಲ್ಲ. ಈ ಬಗ್ಗೆ ಪ್ರಾಧಾನಮಂತ್ರಿಗಳು ಮಧ್ಯೆ ಪ್ರವೇಶಿಸಿ ಕರ್ನಾಟಕ ಮತ್ತು ತಮಿಳುನಾಡಿನ ರೈತರ ಜಂಟಿ ಸಭೆ ಕರೆದು ನೀರಿನ ಸಮಸ್ಯೆಯನ್ನ ಪರಿಹರಿಸಲು ಮುಂದಾಗುವಂತೆ ಮನವಿ ಮಾಡಿದರು.

             ಸುದ್ದಿ ಗೋಷ್ಟಿಯಲ್ಲಿ ರೈತಸಂಘದ ಮುಖಂಡರಾದ ತಾಲ್ಲೂಕ್ ರೈತ ಸಂಘದ ಉಪಾಧ್ಯಕ್ಷ ತಮ್ಮಡಿಹಳ್ಳಿ ಮಲ್ಲೀಕಣ್ಣ,ಚನ್ನಬಸವಯ್ಯ,ಕೆಂಕೆರೆ ನಾಗಣ್ಣ,ಪಾತ್ರೆ ಸತೀಶ್, ರಘು,ಕಂಪನಹಳ್ಳಿ ಮರುಳಪ್ಪ, ಯೋಗಣ್ಣ ,ರಂಗಸ್ವಾಮಿ,ಲಕ್ಶ್ಮೀಪುರ ಶಿವಣ್ಣ, ಗಂಗಣ್ಣ ಇತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.