ವಿಷಯಕ್ಕೆ ಹೋಗಿ

ಮುಂದೂಡಿದ ರೈತ ಸಂಘದ ರ್ಯಾಲಿ

ಅಡಿಕೆ-ಕೊಬ್ಬರಿ ಬೆಂಬಲ ಬೆಲೆ ಹೆಚ್ಚಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
-------------------------------------------
ಹುಳಿಯಾರು: ತೆಂಗು ಹಾಗು ಅಡಕೆಯ ವೈಜ್ಞಾನಿಕ ಬೆಲೆಗೆ ಆಗ್ರಹಿಸಿ ಸೋಮವಾರದಂದು ರಾಜ್ಯ ರೈತಸಂಘ ಕಡೂರಿನಿಂದ ಹಮ್ಮಿಕೊಂಡಿದ್ದ ಬೈಕ್ ಜಾಥಾವನ್ನು ತಡೆದ ಪೊಲೀಸರು ಕಾವೇರಿ ತೀರ್ಪಿನ ಮುನ್ನೆಚರಿಕೆ ಕ್ರಮವಾಗಿ ಐನೂರು ರೈತರನ್ನು ಬಂಧಿಸಿದ ಹಿನ್ನಲೆಯಲ್ಲಿ ಮಂಗಳವಾರದಂದು ಹುಳಿಯಾರಿನಿಂದ ಹೊರಟಿದ್ದ ಬೈಕ್ ರ್ಯಾಲಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಹಸಿರು ಸೇನೆಯ ಕಾರ್ಯದರ್ಶಿ ಕೆಂಕೆರೆ ಸತೀಶ್ ತಿಳಿಸಿದರು.
ಹುಳಿಯಾರಿನ ಪರಿವೀಕ್ಷಣಾ ಮಂದಿರದಲ್ಲಿ ಮಂಗಳವಾರದಂದು ನಡೆದ ಸುದ್ದಿಗೋಷ್ಟಿಯಲ್ಲಿ ರಾಜ್ಯ ಹಸಿರು ಸೇನೆಯ ಕಾರ್ಯದರ್ಶಿ ಕೆಂಕೆರೆ ಸತೀಶ್ ಮಾತನಾಡಿದರು.
           ಹುಳಿಯಾರಿನ ಪರಿವೀಕ್ಷಣಾ ಮಂದಿರದಲ್ಲಿ ಮಂಗಳವಾರದದಂದು ಈ ಕುರಿತು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತೆಂಗು ಹಾಗು ಅಡಕೆಯ ವೈಜ್ಞಾನಿಕ ಬೆಲೆಗೆ ಆಗ್ರಹಿಸಿ ಕಳೆದ ತಿಂಗಳು ತಿಪಟೂರಿನಿಂದ ಕಾಲ್ನಡಿಗೆ ಜಾಥಾದ ಮೂಲಕ ವಿಧಾನ ಸೌಧ ಮುತ್ತಿಗೆ ಹಾಕಲು ಹೊರಟಂತ ಸಂದರ್ಭದಲ್ಲಿ ಸಿದ್ಧಗಂಗಾಮಠದಲ್ಲಿ ನಡೆದ ಸಂಧಾನ ಪ್ರಕ್ರಿಯೆಯಲ್ಲಿ ರೈತರ ಆಶಯಗಳಿಗೆ ಸ್ಪಂದಿಸುವುದಾಗಿ ಹಾಗೂ ಸರ್ವಪಕ್ಷ ಸಭೆ ನಡೆಸಿ, ಪ್ರಧಾನಿ ಬಳಿ ನಿಯೋಗ ಒಯ್ಯುವ ಭರವಸೆ ನೀಡಿದ್ದರು. ಮುಖ್ಯಮಂತ್ರಿಗಳ ಹೇಳಿಕೆಯನ್ನು ಒಪ್ಪಿ ತಾತ್ಕಾಲಿಕವಾಗಿ ಜಾಥಾವನ್ನು ಮೊಟುಕುಗೊಳಿಸಲಾಗಿತ್ತು.ಈ ಭರವಸೆ ನೀಡಿ ತಿಂಗಳಾಗುತ್ತಾ ಬಂದರೂ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳದ ಹಿನ್ನಲೆಯಲ್ಲಿ ಸೆ.೨೧ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
         ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ರೈತರು ಸೆಪ್ಟೆಂಬರ್ ೧೯ರ ಸೋಮವಾರದಂದು ಕಡೂರಿನಿಂದ ಬೆಂಗಳೂರಿಗೆ ಹೊರಟಿದ್ದ ಬೈಕ್‌ ರ್ಯಾಲಿಯನ್ನ ಕಾವೇರಿ ಗಲಭೆ ಹಿನ್ನಲೆಯಲ್ಲಿ ತಡೆದ ಪೊಲೀಸರು ರೈತರನ್ನು ಬಂಧಿಸಿದ್ದರಿಂದ ಪೂರ್ವ ನಿಯೋಜಿತ ಕಾರ್ಯಕ್ರಮದಲ್ಲಿ ಏರುಪೇರಾಗಲು ಕಾರಣವಾಯಿತೆಂದರು.

       ಮಂಗಳವಾರದಂದು ಹುಳಿಯಾರಿನಿಂದ ನೂರಾರು ರೈತರು ತಿಪಟೂರಿಗೆ ತೆರಳಬೇಕಿದ್ದು ಪೋಲಿಸರು ಕಾವೇರಿ ಗಲಭೆ ಹಿನ್ನಲೆಯಲ್ಲಿ ರ್ಯಾಲಿ ಮುಂದೂಡವಂತೆ ಮಾಡಿದ ಮನವಿ ಹಿನ್ನಲೆಯಲ್ಲಿ ರ್ಯಾಲಿ ಮುಂಡೂಡಿರುವುದಾಗಿ ತಿಳಿಸಿದರು.

        ತೆಂಗಿನ ಕೊಬ್ಬರಿ ಮತ್ತು ಅಡಿಕೆ ಬೆಲೆಯನ್ನ ಶೀಘ್ರದಲ್ಲಿಯೆ ಹೆಚ್ಚಿಸದಿದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಎಲ್ಲಾ ಸಂಸದರ, ಸಚಿವರ ಹಾಗೂ ಎಂ.ಎಲ್.ಎ ಗಳ ಮನೆಗಳಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದ ಅವರು ಮುಂದಿನ ಹೋರಾಟದ ಬಗ್ಗೆ ಅಕ್ಟೋಬರ್ ತಿಂಗಳಲ್ಲಿ ನಿರ್ಧರಿಸಲಾಗುವುದು ಎಂದರು.
          ತಾಲ್ಲೂಕು ರೈತಸಂಘದ ಅಧ್ಯಕ್ಷ ತಿಮ್ಮನಹಳ್ಳಿ ಲೋಕಣ್ಣ ಮಾತನಾಡಿ ಈಗಾಗಲೆ ಸರ್ಕಾರವು ರೈತರ ಹಿತವನ್ನ ಬಲಿಕೊಟ್ಟು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ಕ್ರಮ ಸರಿಯಲ್ಲ. ಈ ಬಗ್ಗೆ ಪ್ರಾಧಾನಮಂತ್ರಿಗಳು ಮಧ್ಯೆ ಪ್ರವೇಶಿಸಿ ಕರ್ನಾಟಕ ಮತ್ತು ತಮಿಳುನಾಡಿನ ರೈತರ ಜಂಟಿ ಸಭೆ ಕರೆದು ನೀರಿನ ಸಮಸ್ಯೆಯನ್ನ ಪರಿಹರಿಸಲು ಮುಂದಾಗುವಂತೆ ಮನವಿ ಮಾಡಿದರು.

             ಸುದ್ದಿ ಗೋಷ್ಟಿಯಲ್ಲಿ ರೈತಸಂಘದ ಮುಖಂಡರಾದ ತಾಲ್ಲೂಕ್ ರೈತ ಸಂಘದ ಉಪಾಧ್ಯಕ್ಷ ತಮ್ಮಡಿಹಳ್ಳಿ ಮಲ್ಲೀಕಣ್ಣ,ಚನ್ನಬಸವಯ್ಯ,ಕೆಂಕೆರೆ ನಾಗಣ್ಣ,ಪಾತ್ರೆ ಸತೀಶ್, ರಘು,ಕಂಪನಹಳ್ಳಿ ಮರುಳಪ್ಪ, ಯೋಗಣ್ಣ ,ರಂಗಸ್ವಾಮಿ,ಲಕ್ಶ್ಮೀಪುರ ಶಿವಣ್ಣ, ಗಂಗಣ್ಣ ಇತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...