ವಿಷಯಕ್ಕೆ ಹೋಗಿ

ನಶಿಸುತ್ತಿರುವ ನಾಟಕ ಕಲೆಯನ್ನ ಉಳಿಸಿ ಬೆಳೆಸಿ:ಬಿಂಧುಮಾಧವ ಶ್ರೀ

ಹುಳಿಯಾರು: ಟೀವಿ ಮಾಧ್ಯಮಗಳ ಹಾವಳಿಯಿಂದ ಇಂದು ಹರಿಕಥೆ,ನಾಟಕ,ಭಜನೆ ಮುಂತಾದ ದೇಸಿ ಕಲೆ ನಶಿಸುತ್ತಿರುವ ಹಿನ್ನಲೆಯಲ್ಲಿ ಗ್ರಾಮೀಣ ಪ್ರದೇಶದ ಕಲೆಯನ್ನು ಉಳಿಸಿ ಬೆಳೆಸುವ ಕೆಲಸವನ್ನು ಪ್ರತಿಯೊಬ್ಬರು ನಿರ್ವಹಿಸಬೇಕಿದೆ ಎಂದು ಬೆಲಗೂರು ಶ್ರೀಬಿಂಧುಮಾಧವ ಸ್ವಾಮಿಗಳು ತಿಳಿಸಿದರು.
ಹುಳಿಯಾರಿನಲ್ಲಿ ರಂಗಭೂಮಿ ಕಲಾವಿದರ ಸಂಘದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಬೆಲಗೂರು ಶ್ರೀಬಿಂಧುಮಾಧವ ಸ್ವಾಮಿಗಳು ಆರ್ಶೀವಚನ ನೀಡಿದರು.
        ಹುಳಿಯಾರಿನ ಬಿಂಧುಮಾಧವ ಕಾಂಪ್ಲೆಕ್ಸ್ ನಲ್ಲಿ ತಾಲೂಕು ರಂಗಭೂಮಿ ಕಲಾವಿದರ ಸಂಘದಿಂದ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿ ಕಲೆ, ಸಂಸ್ಕೃತಿ, ಸಂಸ್ಕಾರವೇ ಭಾರತ ದೇಶದ ಆಸ್ತಿ. ಆದರೆ ಪಾಶ್ಚಾತ್ಯ ಸಂಸ್ಕೃತಿಗೆ ಭಾರತೀಯರು ಮಾರುಹೋಗುತ್ತಿರುವುದರಿಂದ ದೇಸಿ ಕಲೆಗಳಾದ ನಾಟಕಕಲೆ, ಸಂಗೀತ, ಜಾನಪದ, ಗಮಕಕಲೆ ಅವಸಾನದತ್ತ ಸಾಗಿದೆ ಎಂದು ವಿಷಾದಿಸಿದರು.

           ನಾಟಕ ಕಲೆ ಎಂಬುದು ನಮ್ಮ ಸನಾತನ ಧರ್ಮದಿಂದಲೂ ಬಂದಿರುವಂತಹ ಉತ್ತಮ ಕಲೆಯಾಗಿದ್ದು ರಾಮಾಯಣ, ಮಹಾಭಾರತ ಹಾಗೂ ಹರಿದಾಸರ ಕೀರ್ತನೆಗಳಲ್ಲಿ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಂತಹ ಒಳ್ಳೆಯ ಸತ್ವ ಅಡಗಿದೆ ಎಂದರು.

         ನಾಟಕ ಪ್ರದರ್ಶನದಲ್ಲಿ ಅಭಿನಯಿಸುವ ಕಲಾವಿದರು ಸಮಯ ಪ್ರಜ್ಞೆಯನ್ನ ಹೊಂದಿ ಪ್ರದರ್ಶನದಲ್ಲಿ ಆಕಸ್ಮಿಕವಾಗಿ ಎದುರಾಗುವ ಲೋಪದೋಷಗಳನ್ನ ಸರಿಪಡಿಸಿಕೊಂಡು ಪ್ರದರ್ಶನ ನೀಡುವ ಕಲೆಯನ್ನ ಕರಗತ ಮಾಡಿಕೊಳ್ಳುವಂತೆ ಸಲಹೆ ನೀಡಿದರು.

            ಎಲೆಮರೆಯ ಕಾಯಿಯಂತಿರುವ ರಂಗಭೂಮಿಯ ಕಲಾವಿದರನ್ನ ಗುರುತಿಸಿ ಗೌರವಿಸುತ್ತಿರುವ ತಾಲೂಕು ರಂಗಭೂಮಿ ಕಲಾವಿದರ ಸಂಘ ಮತ್ತಷ್ಟು ಬೆಳಯಲಿ ಎಂದು ಹಾರೈಸಿದರು
.
             ತಾಲ್ಲೂಕು ರಂಗಭೂಮಿ ಕಲಾವಿದರ ಸಂಘದ ಖಜಾಂಜಿ ಸಿದ್ದು ಜಿ.ಕೆರೆ ಅವರು ಮಾತ ನಾಡಿ ಕಲಾವಿದರಲ್ಲಿ ಸಂಘಟನೆ ಕೊರತೆಯಿಂದ ಸರ್ಕಾರದ ಸೌಲಭ್ಯ ಪಡೆಯುವಲ್ಲಿ ವಿಫಲರಾಗಿದ್ದಾರೆ. ತಾಲ್ಲೂಕಿನ ಶೇ.೯೦ ರಷ್ಟು ಅರ್ಹ ಕಲಾವಿದರಿಗೆ ಇಂದು ಮಾಶಾಸನ ಸಿಗದಾಗಿದೆ. ಹಾಗಾಗಿ ರಂಗಭೂಮಿ ಕಲಾವಿದರ ಸಂಘ ರಚಿಸಲಾಗಿದ್ದು ಸದಸ್ಯತ್ವ ಪಡೆದ ಕಲಾವಿದರಿಗೆ ಸರಕಾರದಿಂದ ಸಿಗುವ ಮಾಸಿಕ ವೇತನ ಸೇರಿದಂತೆ ಎಲ್ಲಾ ರೀತಿ ಸೌಲಭ್ಯ ಕಲ್ಪಿಸಿಕೊಡುವ ಕೆಲಸವನ್ನು ನಮ್ಮ ಸಂಘದಿಂದ ನಿರ್ವಹಿಸಲಾಗುವುದು ಎಂದರು.

              ಈ ವೇಳೆ ತಾಲ್ಲೂಕಿನ ಎಲ್ಲಾ ಹಿರಿಯ ಕಲಾವಿದರನ್ನು ಗೌರವಿಸಿ ಸನ್ಮಾನಿಸಲಾಯಿತು.
                 ಕಾರ್ಯಕ್ರಮದಲ್ಲಿ ಕಾವಲಟ್ಟಿ ಗುರುಗಳಾದ ಹಜರತ್ ಮಹಮದ್ ಅನ್ವರ್ ಬಾಬ, ಗ್ರಾಪಂ ಅಧ್ಯಕ್ಷೆ ಗೀತಾಪ್ರದೀಪ್, ಕಾರ್ಯಕ್ರಮದ ಸಂಘಟಕ ಖಲಂದರ್ ಸಾಬ್, ರಂಗಭೂಮಿ ಸಂಘದ ಶಂಕರಲಿಂಗಪ್ಪ, ಜಿ.ಎಲ್. ಮಹೇಶ್, ಕೆ.ಬಿ.ಕ್ರಾಸ್ ರಂಗಸ್ವಾಮಿ, ಕೆಎಸ್‌ಆರ್‌ಟಿಸಿ ಕೆಂಪರಾಜು, ಬರಗೂರುಶಿವಲಿಂಗಪ್ಪ, ದಕ್ಷಿಣ ಮೂರ್ತಿ, ನಂದಿಹಳ್ಳಿ ರಾಜಣ್ಣ,ಗ್ರಾಪಂ ಸದಸ್ಯರಾದ ರಂಗನಾಥ್, ಪುಟ್ಟಣ್ಣ, ಗೀತಾಬಾಬು, ಕಿರುತೆರೆಯ ಕಲಾವಿದ ಗೌಡಿ, ಬಿ.ಗೋಪಾಲಸ್ವಾಮಿ,ಭವಾನಿರಮೇಶ್, ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಇತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...