ವಿಷಯಕ್ಕೆ ಹೋಗಿ

ಕಂದಾಯದ ನಕಲಿ ರಸೀತಿ ನೀಡಿ ವಂಚನೆ: ಕರ ವಸೂಲಿಗಾರನ ವಿರುದ್ಧ ಕ್ರಮಕ್ಕೆ ಮುಂದಾಗದ ಪಂಚಾಯ್ತಿ

ಹುಳಿಯಾರು: ನಕಲಿ ಬಿಲ್ ನೀಡಿ ಕಂದಾಯ ವಸೂಲಿ ಮಾಡಿ ತನ್ನ ಜೇಬಿಗೆ ಇಳಿಸಿದ ಕರ ವಸೂಲಿಗಾರರನನ್ನು ವಜಾಗೊಳಿಸಲು ಸಭೆಯಲ್ಲಿ ನಿರ್ಣಯ ಕೈಗೊಂಡು ಅತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸದಸ್ಯ ಶ್ರೀನಿವಾಸ್ ಹಾಗು ಕೆಲವು ಸದಸ್ಯರು ಪಟ್ಟು ಹಿಡಿದ ಘಟನೆ ಸಮೀಪದ ದೊಡ್ಡಎಣ್ಣೆಗೆರೆ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಜರುಗಿತು.
ಹುಳಿಯಾರು ಸಮೀಪದ ದೊಡ್ಡ ಎಣ್ಣೆಗೆರೆ ಗ್ರಾಮಪಂಚಾಯಿತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಕಲಿ ಬಿಲ್                 ನೀಡಿ ಕಂದಾಯ ವಸೂಲಿ ಮಾಡಿದ ಬಿಲ್ ಕಲೆಕ್ಟರ್‌ನನ್ನು ವಜಾ ಗೊಳಿಸುವಂತೆ ಚರ್ಚೆ ನಡೆಯಿತು.            
                   ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೋಭಾರವರ ಅಧ್ಯಕ್ಷತೆಯಲ್ಲಿ ೨೦೧೬-೧೭ ನೇ ಸಾಲಿನ ಬಸವ ವಸತಿ ಯೋಜನೆಯ ಅರ್ಹ ಫಲಾನುಭವಿಗಳ ಆಯ್ಕೆ ಮಾಡಲು ಸಾಮಾನ್ಯ ಸಭೆ ಕರೆಯಲಾಗಿತ್ತು. ಸಭೆಯ ಪ್ರಾರಂಭದಲ್ಲಿ ಸದಸ್ಯ ಶ್ರೀನಿವಾಸ್ ಮತ್ತಿತರರು ನಕಲಿ ಬಿಲ್ ನೀಡಿ ೬೫೦೦ ರೂಗಳನ್ನು ಸರ್ಕಾರಕ್ಕೆ ವಂಚಿಸಿದ ಕರ ವಸೂಲಿಗಾರನ ವಿರುದ್ಧ ಕ್ರಮ ತೆಗೆದುಕೊಂಡು ನಂತರ ಸಭೆಯನ್ನು ಮುಂದುವರೆಸುವಂತೆ ಪಟ್ಟು ಹಿಡಿದರು. ಈ ಬಗ್ಗೆ ಪರ ವಿರೋಧ ಚರ್ಚೆ ನಡೆದು ಕಾರ್ಯದರ್ಶಿ ನಾಗರಾಜು ಸದಸ್ಯರನ್ನು ಸಮಾಧಾನ ಪಡಿಸಲು ಪ್ರಯತ್ನಿಸಿದರೂ ಸದಸ್ಯರ ಆಕ್ರೋಶ ಕಡಿಮೆಯಾಗಲಿಲ್ಲ, ಕೊನೆಗೆ ಕರ ವಸೂಲಿಗಾರಿನಿಂದ ತಪ್ಪು ಒಪ್ಪಿಗೆ ಪಡೆದು ಇನ್ನು ಮುಂದೆ ಈ ರೀತಿ ಆಗದಂತೆ ಮುಚ್ಚಳಿಕೆ ಪಡೆದುಕೊಳ್ಳುವುದಾಗಿ ತಿಳಿಸಿದ ನಂತರ ಸದಸ್ಯರೆಲ್ಲರೂ ಇನ್ನು ಮುಂದೆ ಈ ರೀತಿ ತಪ್ಪು ಜರುಗದಂತೆ ಆತನಿಂದ ತಪ್ಪೊಪ್ಪಿಗೆ ಪಡೆದು ಎಚ್ಚರಿಕೆ ನೀಡುವ ನಿರ್ಣಯ ಕೈಗೊಂಡರು.

          ನಂತರ ಸಾಮಾನ್ಯ ಸಭೆಗೆ ಅವಕಾಶ ದೊರೆತು ಕಾರ್ಯದರ್ಶಿಯು ಕೆಲವು ಅರ್ಜಿಗಳನ್ನು ಸದಸ್ಯರ ಅನುಮೋದನೆಗೆ ಇಟ್ಟರು. ನಂತರ ಕಳೆದ ವರ್ಷ ನಿರ್ಮಿಸಿರುವ ಶೌಚಾಲಯಗಳಿಗೆ ಮಾತ್ರ ಬಿಲ್ ಪಾವತಿ ಮಾಡುವುದು, ನಿವೇಶನ ರಹಿತರಿಗೆ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಸರ್ಕಾರಿ ಜಾಗವನ್ನು ನಿವೇಶನಗಳಾಗಿ ಮಾರ್ಪಾಡಿಸಿ ಅವರಿಗೆ ಹಂಚುವುದು ಹಾಗೂ ಆಕ್ರಮವಾಗಿ ರಸ್ತೆಗಳಲ್ಲಿ ತೆಗೆದಿರುವ ಶೌಚಾಲಯ ಗುಂಡಿಗಳನ್ನು ತೆರವುಗೊಳಿಸುವುದು, ಬಸವ ಯೋಜನೆ ಯೋಜನೆಗಳನ್ನು ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ನೀಡುವುದು ಹೀಗೆ ಹತ್ತು ಹಲವು ಯೋಜನೆಗಳಿಗೆ ಅನುಮೋದನೆ ನೀಡಲಾಯಿರು. 
          ಈ ಸಂದರ್ಭದಲ್ಲಿ ಉಪಧ್ಯಾಕ್ಷೆ ಲಲಿತಮ್ಮ ಸೇರಿದಂತೆ ಸರ್ವಸದಸ್ಯರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...