ವಿಷಯಕ್ಕೆ ಹೋಗಿ

ಯಳನಾಡು ಶ್ರೀ ಸಿದ್ಧರಾಮೇಶ್ವರ ಸ್ವಾಮಿಯ ದಸರಾ ಆಚರಣೆ : ಗ್ರಾಮಸ್ಥರ ತೀರ್ಮಾನಕ್ಕೆ

ಬಗೆಹರಿಯದ ವಿವಾದ :ಒಮ್ಮತಕ್ಕೆ ಬರಲು ಕರೆ
---------------------------------------------------------
ಹುಳಿಯಾರು:ಸಮೀಪದ ಯಳನಾಡು ಶ್ರೀ ಸಿದ್ಧರಾಮೇಶ್ವರ ಸ್ವಾಮಿಯ ಶ್ರೀ ಕ್ಷೇತ್ರದಲ್ಲಿ ಆರಂಭವಾಗಬೇಕಿರುವ ದಸರಾ ಜಾತ್ರಾಮಹೋತ್ಸವದ ಆಚರಣೆಯ ಬಗ್ಗೆ ತಹಸಿಲ್ದಾರ್ ಸಮಕ್ಷಮದಲ್ಲಿ ನಡೆದ ಗ್ರಾಮಸ್ಥರ ಸಭೆಯಲ್ಲಿ ಹಿಂದಿನ ಸಮಸ್ಯೆಯೇ ಮರುಕಳಿಸಿ ಯಾವೊಂದು ತಿರ್ಮಾನಕ್ಕೆ ಬಾರದೆ ಕಡೆಗೆ ತಹಸೀಲ್ದಾರ್ ಅವರು ಗ್ರಾಮಸ್ಥರೇ ಸೇರಿ ತಾತ್ಕಾಲಿಕ ಸಮಿತಿ ರಚಿಸಿಕೊಂಡು ಒಮ್ಮತದ ತೀರ್ಮಾನ ಕೈಗೊಂಡು ಆಚರಿಸುವಂತೆಯೂ ಇಲ್ಲದಿದ್ದ ಪಕ್ಷದಲ್ಲಿ ಮೇಲಾಧಿಕಾರಿಗಳ ತೀರ್ಮಾನದಂತೆ ನಿರ್ಣಯ ಕೈಗೊಳ್ಳುವುದಾಗಿಯೂ ತಿಳಿಸಿ ಸಭೆ ಮುಗಿಸಿದ ಘಟನೆ ಗುರುವಾರ ರಾತ್ರಿ ನಡೆಯಿತು.






           ಶ್ರೀಕ್ಷೇತ್ರದಲ್ಲಿ ನಡೆಯುವ ದಸರಾ ಮಹೋತ್ಸವಕ್ಕೆ ತನ್ನದೆ ಆದ ಇತಿಹಾಸವಿದ್ದು ಇಲ್ಲಿ ನಡೆಯುವ ಸ್ವಾಮಿಯ ಹನ್ನೊಂದು ದಿನಗಳ ಕಾಲದ ದಸರಾ ಮಹೋತ್ಸವಕ್ಕೆ ದೂರದ ಅನೇಕ ಜಿಲ್ಲೆಗಳಿಂದ ಭಕ್ತರು ಆಗಮಿಸಿ ಧಾರ್ಮಿಕ ಆಚರಣೆಯಲ್ಲಿ ಪಾಲ್ಗೊಂಡು ಪೂಜೆ ಸಲ್ಲಿಸಿಕೊಂಡು ಹೋಗುವ ಪರಿಪಾಠ ನಡೆದು ಬಂದಿದೆ. ಈವೊಂದು ಸಂಪ್ರದಾಯಕ್ಕೆ ಕೆಲತಿಂಗಳಿನ ಹಿಂದೆ ಗ್ರಾಮದಲ್ಲಿ ದೇವರು ಕರೆದೊಯ್ಯುವ ವಿಚಾರವಾಗಿ ಎರಡು ಗುಂಪುಗಳ ನಡುವೆ ಉಂಟಾದ ವೈಮನಸ್ಯದಿಂದ ಗ್ರಾಮಸ್ಥರಲ್ಲಿ ಒಗ್ಗಟ್ಟಿಲ್ಲದೆ ನಿತ್ಯದ ಪೂಜಾಕಾರ್ಯದಲ್ಲೂ ಅಡಚಣೆಯುಂಟಾಗಿದ್ದು ದಸರಾ ಜಾತ್ರಾ ಮಹೋತ್ಸವದ ಮೇಲೂ ಪರಿಣಾಮ ಬೀರಿ ದಸರಾ ಜಾತ್ರೆ ನಡೆಯುವ ವಿಚಾರವೇ ಕಗ್ಗಂಟಾಗಿ ಪರಿಣಮಿಸಿದೆ.

               ಗ್ರಾಮದಲ್ಲಿ ಪೂಜಾ ಕಾರ್ಯದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದ್ದು ಕೆಲವೊಂದು ಪೂಜಾಕೈಂಕರ್ಯಗಳನ್ನು ಕೈಬಿಟ್ಟಿರುವುದು ಸಮಸ್ಯೆ ಬಗೆಹರಿಯದೆ ಮುಂದುವರಿಕೆಗೆ ಅವಕಾಶವಾಗಿದೆ.ಕಳೆದ ಹಲವಾರು ದಿನಗಳಿಂದಲೂ ಹೊಗೆಯಾಡುತ್ತಿದ್ದ ಸಮಸ್ಯೆ ಬಗೆಹರಿಸಿ ದಸರಾ ಆಚರಣೆಗೆ ಅನುವು ಮಾಡಲು ತಹಸೀಲ್ದಾರ್ ಗಂಗೇಶ್ ಇಂದು ಗ್ರಾಮಸ್ಥರ ಸಭೆ ಸೇರಿಸಿ ಎಲ್ಲರ ಅಹವಾಲು ಕೇಳಿದರು.

              ಸಭೆ ಪ್ರಾರಂದಲ್ಲಿಯೇ ಅಧಿಕಾರಿಗಳ ವಿರುದ್ಧ ಆರೋಪ ಮಾಡಿದ ಗ್ರಾಮಸ್ಥರು ಕಳೆದ ಮೂರು ತಿಂಗಳ ಹಿಂದೆ ನಡೆದ ದೊಡ್ಡ ಜಾತ್ರೆಯ ಉಸ್ತುವಾರಿ ಸಮಿತಿ ವಜಾಮಾಡುವುದರ ಜೊತೆಗೆ ಜಾತ್ರೆಗೆ ವಸೂಲಿಯಾದ ಹಣ,ದವಸ ಧಾನ್ಯ ಹಾಗೂ ಜಾತ್ರೆಯ ಖರ್ಚುವೆಚ್ಚದ ತಪಸೀಲು ನೀಡುವಂತೆ ಒತ್ತಾಯಿಸಿದರು.

         ನಂತರ ದಸರಾ ಆಚರಣೆಯ ಬಗ್ಗೆ ಚರ್ಚೆ ತಾರಕಕ್ಕೇರಿ ಹಿಂದಿನ ಸಮಸ್ಯೆ ಬಗ್ಗೆ ಎರಡು ಗುಂಪಿನ ನಡುದೆ ಹೊಗೆಯಡುತ್ತಿದ್ದ ಸಮಸ್ಯೆ ಅನಾವರಣಗೊಂಡಿತು. ಉತ್ಸವ ಸಾಗುವ ಸಮಸ್ಯೆ ಬಗೆಹರಿಸದೆ ದಿಢೀರನೇ ಸಭೆ ಕರೆದು ಜಾತ್ರೆ ನಡೆಸಿ ಎಂದರೆ ಹೇಗೆ ಸಾಧ್ಯ.ಈ ದಿನಕ್ಕಾಗಲೇ ಜಾತ್ರಾ ಮಹೋತ್ಸವದ ಕರಪತ್ರ ಸಿದ್ಧಗೊಂಡು ಅಮವಾಸ್ಯೆ ಮರುದಿನದಿಂದ ಪೂಜಾ ಕಾರ್ಯಕ್ರಮ ಆರಂಭಗೊಳ್ಳಬೇಕಿತ್ತು.ಈ ಬಗ್ಗೆ ತಾವು ತಾತ್ಸಾರ ಮಾಡಿದ್ದೀರೆಂದು ಗ್ರಾಮಸ್ಥರು ತಹಸೀಲ್ದಾರ್ ಮೇಲೆ ಹರಿಹಾಯ್ದರು.

             ನಂತರ ಮಾತನಾಡಿದ ತಹಸಿಲ್ದಾರ್ ಭಿನ್ನಾಭಿಪ್ರಾಯ ಕೈ ಬಿಟ್ಟು ದಸರಾ ಆಚರಣೆಗೆ ಮುಂದಾಗುವಂತೆ ಹಾಗೂ ಗ್ರಾಮದ ಎಲ್ಲಾ ಭಕ್ತರು ಒಂದಾಗಿ ಸ್ವಾಮಿ ಕಾರ್ಯ ನಡೆಸಿಕೊಂಡುಹೋಗುವಂತೆ ಮನವಿ ಮಾಡಿದರು.

          ಇಷ್ಟಾದರೂ ಸಹ ಎರಡು ಗುಂಪುಗಳ ನಡುವೆ ಮಾತಿನ ಚಕಮುಖಿ ಕೊನೆಗೊಳ್ಳದ ಹಿನ್ನಲೆಯಲ್ಲಿ ಜಾತ್ರೆ ಮಹೋತ್ಸವಕ್ಕೆ ಮುಜರಾಯಿ ಇಲಾಖೆಯಿಂದ ಅಪ್ಪಣೆ ನೀಡಿದ್ದು ನೀವುಗಳೇ ಸೇರಿ ಸಮಿತಿ ರಚಿಸಿಕೊಂಡು ಜಾತ್ರೆ ನಡೆಸಿ ಎಂದು ಜವಬ್ದಾರಿ ನೀಡಿದರು.

          ಇದಕ್ಕೂ ನೀವು ತೀರ್ಮಾನಕ್ಕೆ ಬಾರದಿದ್ದ ಪಕ್ಷದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತಂದು ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿ ಸಭೆ ಮುಕ್ತಾಯಗೊಳಿಸಿದರು.


        ಸಭೆಯಲ್ಲಿ ಕಂದಾಯ ತನಿಖಾಧಿಕಾರಿ ಹನುಮಂತನಾಯಕ್,ಗ್ರಾಮಲೆಖ್ಖಿಗ ಶ್ರೀನಿವಾಸ್, ಮುಖಂಡರುಗಳಾದ ವೈ.ಆರ್.ಮಲ್ಲೀಕಾರ್ಜುನಯ್ಯ, ಸುರೇಶ್, ಪ್ರಕಾಶ್, ರಾಮಯ್ಯ, ಲೋಕೇಶ್, ಜಯಸಿಂಹ, ಕೃಷ್ಣಪ್ಪ,ಜಗದೀಶ್,ದೇವರಾಜು,ನಂದಿಹಳ್ಳಿ ಶಿವಣ್ಣ ಮೊದಲಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...