ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಬಂದ್‌ಗೆ ನೀರಸ ಪ್ರತಿಕ್ರಿಯೆ

ಮೂರು ಸಂಘಟನೆಗಳಿಂದ ಪ್ರತ್ಯೇಕವಾಗಿ ಮನವಿ ಸಲ್ಲಿಕೆ
-------------------------------------
ಹುಳಿಯಾರು:     ಕಾವೇರಿ ನೀರಿಗೆ ಸಂಬಂಧಿಸಿದಂತೆ ಇಂದು ನಡೆದ ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಪಟ್ಟಣದಲ್ಲಿ ವರ್ತಕರುಗಳು ಸ್ವಯಂಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿದ್ದರಾದರೂ ಯಾವುದೇ ಪ್ರತಿಭಟನೆಯಾಗಲಿ,ರ್ಯಾಲಿಯಾಗಲಿ ನಡೆಯದೆ ಕೇವಲ ಮನವಿ ಅರ್ಪಿಸುವುದಕ್ಕೆ ಸೀಮಿತಗೊಳ್ಳುವ ಮುಖಾಂತರ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಬಿಕೋ ಎನ್ನುತ್ತಿರುವ ಹುಳಿಯಾರಿನ ಬಸ್ ನಿಲ್ದಾಣ
          ಮುಂಜಾನೆಯಿಂದಲೇ ಪಟ್ಟಣ ಸ್ತಬ್ಧವಾಗಿತ್ತು.ಬಂದ್‌ ಹಿನ್ನೆಲೆಯಲ್ಲಿ ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್‌ಗಳು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಪಟ್ಟಣದಲ್ಲಿ ಜನ ಸಂಚಾರ ವಿರಳವಾಗಿತ್ತು.ಬಂದ್ ಬಗ್ಗೆ ಮುಂಚಿತವಾಗಿ ತಿಳಿದಿದ್ದರಿಂದ ಪ್ರಾಯಾಣ ಮಾಡುವವರೆ ಇಲ್ಲವಾಗಿ ಬಸ್ ನಿಲ್ದಾಣ ನಿರ್ಜನವಾಗಿತ್ತು.ಆಟೋ,ಟ್ಯಾಕ್ಸಿ ಸಂಚಾರ ಕೂಡ ಕಂಡುಬರಲಿಲ್ಲಾ.ಶಾಲಾ ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿತ್ತು.ಮೆಡಿಕಲ್ ಸ್ಟೋರ್,ಆಸ್ಪತ್ರೆ ಎಂದಿನಂತೆ ತೆರದಿತ್ತು.ಕೆಲವು ದಿನಸಿ ವರ್ತಕರು ವ್ಯಾಪಾರದಲ್ಲಿ ತೊಡಗಿದ್ದನ್ನು ಬಿಟ್ಟರೆ ಅಂಗಡಿ ಮುಗ್ಗಟ್ಟುಗಳು,ಹೋಟೆಲ್‍ ಗಳು,ಪೆಟ್ರೋಲ್ ಬಂಕ್‍ ಗಳು,ಚಿತ್ರಮಂದಿರ,ಸರ್ಕಾರಿ ಕಛೇರಿಗಳು, ಬ್ಯಾಂಕ್‌ಗಳು,ಪೋಸ್ಟ್ ಆಫೀಸ್ ಸಂಪೂರ್ಣ ಬಂದ್ ಆಗಿದ್ದವು.

             ಸಂಘ ಸಂಸ್ಥೆಗಳ ಮೌನ: ಯಾವುದೇ ಬಂದ್‌ ಆಚರಣೆಯ ಸಮಯದಲ್ಲಿ ಮುಂಚೂಣಿಯಲ್ಲಿದ್ದು ಹುಳಿಯಾರು ಬಂದ್‌ಗೆ ಮುಂದಾಗುತ್ತಿದ್ದ ಇಲ್ಲಿನ ಕರವೇ,ಜಯಕರ್ನಾಟಕ ಹಾಗೂ ರೈತಸಂಘದ ಕೆಂಕೆರೆ ಸತೀಶ್ ಬಣದವರು ಶುಕ್ರವಾರದ ರಾಜ್ಯ ಬಂದ್‌ಗೆ ಮುಂದಾಗದೆ ಮೌನಕ್ಕೆ ಶರಣಾಗಿದ್ದು ಸಾರ್ವಜನಿಕ ಚರ್ಚೆಗೆ ಗ್ರಾಸವಾಯಿತು.
             ಪಟ್ಟಣದಲ್ಲಿ ಸುಮಾರು ೪೦ ಕ್ಕೂ ಹೆಚ್ಚು ಸಂಘಟನೆಗಳಿದ್ದಾಗ್ಯೂ ಇಂದಿನ ಬಂದ್ ಆಚರಣೆಯಲ್ಲಿ ಒಗ್ಗೂಡದೆ ಕೇವಲ ಮೂರು ಸಂಘಟನೆಗಳು ಮಾತ್ರ ಪ್ರತ್ಯೇಕವಾಗಿ ಆಗಮಿಸಿ ಮನವಿ ಸಲ್ಲಿಸಿದವು
ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಹುಳಿಯಾರಿನ ಕರವೇ ಕಾರ್ಯಕರ್ತರು ನಾಡಕಚೇರಿಗೆ ತೆರಳಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು.  
                ಕರವೇ ಸಂಘಟನೆಯವರು ,ಟಿಪ್ಪುಸುಲ್ತಾನ್ ಯುವಕ ಸಂಘದವರು ನಾಡಕಚೇರಿಯಲ್ಲಿ ಮನವಿ ಸಲ್ಲಿಸಿದರೆ,ಜಿಲ್ಲಾ ರೈತಸಂಘದ ಹೊಸಹಳ್ಳಿ ಚಂದ್ರಣ್ಣ ಬಣದ ಪದಾಧಿಕಾರಿಗಳು ಪ್ರತ್ಯೆಕವಾಗಿ ಮೆರವಣಿಗೆಯಲ್ಲಿ ನಾಡಕಚೇರಿಗೆ ಆಗಮಿಸಿ ಗ್ರಾಮಲೆಕ್ಕಿಗ ಸುಬ್ರಾಯಪ್ಪಗೆ ಮನವಿ ಸಲ್ಲಿಸಿದ್ದರು.
            ಬಂದ್ ಬಗ್ಗೆ ಕಂಡುಬಂದ ನೀರಸ ಪ್ರತಿಕ್ರಿಯೆಯಿಂದಗಿ ಪ್ರತಿ ಬಾರಿಯ ಬಂದ್ ಸಮಯದಲ್ಲಿ ಕಂಡುಬರುತ್ತಿದ್ದ ಬಿಗಿ ಪೊಲೀಸ್‌ ಬಂದೋಬಸ್ತ್ ಕೂಡ ಅಷ್ಟಾಗಿ ಕಂದುಬರಲಿಲ್ಲಾ.

         ಒಟ್ಟಾರೆಯಾಗಿ ರಾಜ್ಯದ ನೆಲೆ-ಜಲ,ಭಾಷೆ ವಿಚಾರದಲ್ಲಿ ಅನ್ಯಾಯವಾದಾಗ ಹಾಗೂ ರೈತರ ಸಂಕಷ್ಟಗಳಿಗೆ ಸ್ಪಂದಿಸಿ ನಾವೆಲ್ಲ ಒಂದೇ ಎಂಬ ಒಗ್ಗಟ್ಟು ಹಾಗೂ ಹೋರಾಟಕ್ಕೆ ಸಾಥ್ ನೀಡುತ್ತಿದ್ದ ಸಂಘಸಂಸ್ಥಗಳ ಧ್ವನಿ ಇಂದು ಪ್ರತಿಧ್ವನಿಸದೆ ಕಾವೇರಿ ಹೋರಾಟದ ಕಾವು ಕಾಣದಿದ್ದು ವಿಪರ್ಯಾಸವಾಗಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...