ವಿಷಯಕ್ಕೆ ಹೋಗಿ

ಕಂಚಿಸ್ವಾಮಿಗೆ ಕಾಂಚಾಣದ ಮಳೆ

ಕಂಚೀವರದರಾಜ ಸ್ವಾಮಿಯ ಉತ್ತರೆ ಮಳೆ ಅಂಬಿನೋತ್ಸವ
----------------------
ಹುಳಿಯಾರು:ಹುಳಿಯಾರು ಗಡಿಭಾಗದ ಕಂಚೀಪುರದಲ್ಲಿನ ಕಂಚೀವರದರಾಜ ಸ್ವಾಮಿಯ ಉತ್ತರೆ ಮಳೆ ಅಂಬಿನೋತ್ಸವದ ಆರಂಭವಾಗಿದ್ದು ಪ್ರಯುಕ್ತ ಸೆ.೨೦ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.


ಐತಿಹ್ಯ:ಹೊಸದುರ್ಗ ತಾಲ್ಲೂಕಿನಿಂದ 28 ಕಿ.ಮೀ ದೂರದಲ್ಲಿರುವ ಕಂಚೀಪುರದ ಶ್ರೀ ಕಂಚೀವರದರಾಜ ಸ್ವಾಮಿ ಈ ಭಾಗದಲ್ಲಿ ಬಲು ಪ್ರಸಿದ್ದಿಯಾಗಿದ್ದು ಈ ದೇವರ ಉತ್ಸವಮೂರ್ತಿ ಗುಡಿಯಿಂದ ಹೊರ ನಡೆದರೆ ಸಾಕು, ಕಾಂಚಾಣದ ಮಳೆಯೇ ಸುರಿಯುತ್ತದೆ! ಇದು ಈ ದೇವರ ವಿಶೇಷ.

          ಎಲ್ಲೆಡೆ ಜಾತ್ರೆ ಅಂದ್ರೆ ದೇವರ ಮೇಲೆ ಬಾಳೆಹಣ್ಣು ,ಪುರಿ ತೂರಿದರೆ ಕಂಚೀಪುರದ ಜಾತ್ರೆಯಲ್ಲಿ ಕಂಚೀವರದರಾಜ ಸ್ವಾಮಿಗೆ ಭಕ್ತರು ಹರಕೆ ಮಾಡಿಕೊಂಡ ಹಣವನ್ನು ಹುಂಡಿಗೆ ಸಮರ್ಪಿಸುವ ಬದಲು ಚಿಲ್ಲರೆ ರೂಪದಲ್ಲಿ ಸ್ವಾಮಿಯ ಮೇಲೆ ತೂರುವುದು ವಾಡಿಕೆ.

       ಪೌರಾಣಿಕ ಕಥೆ ಹಿನ್ನಲೆಯಲ್ಲಿ ಭಕ್ತರು ಸ್ವಾಮಿಯ ಮೇಲೆ ಹಣ ತೂರಿ ಹರಕೆ ತೀರಿಸುವ ಪದ್ಧತಿ ರೂಢಿಗೆ ಬಂದಿದ್ದು ಭಕ್ತರು ತಮ್ಮ ಶಕ್ತ್ಯಾನುಸಾರ ನೂರು ರೂಪಾಯಿಯಿಂದ ಸಹಸ್ರಾರು ರೂಪಾಯಿವರೆಗೂ ಚಿಲ್ಲರೆ ಹಣ ತೂರುವುದು ನಡೆಯುತ್ತದೆ.ಸ್ವಾಮಿಯ ಮೇಲೆ ತೂರಿದ ಹಣವನ್ನು ಯಾರು ಬೇಕಾದರೂ ಆರಿಸಿಕೊಳ್ಳಬಹುದಿದ್ದು ನೋಡುಗರಿಗೆ ಕಾಂಚಣದ ಮಳೆ ಸುರಿದಂತೆ ಭಾಸವಾಗುತ್ತದೆ.
           ಉತ್ತರೆ ಮಳೆ ಅಂಬಿನೋತ್ಸವ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆಯುವ ರಥೋತ್ಸವವನ್ನು ಹೆಚ್ಚು ವಿಜೃಂಭಣೆಯಿಂದ ಆಚರಿಸಲಾಗುವುದಿದ್ದು ಈ ಬಾರಿಯ ಅಂಬಿನೋತ್ಸವ ಅಂಗವಾಗಿ ಕಂಚೀಸ್ವಾಮಿಯನ್ನು ಕಳೆದ ಗುರುವಾರದಂದು ಪಟ್ಟಕ್ಕೆ ಕೂರಿಸಿದ್ದು ನಿತ್ಯ ಮಹಾಮಂಗಳಾರತಿ ನಂತರ ಭಜನೆ ನಡೆಯುತ್ತಿದೆ.

        ಉತ್ತರೆಮಳೆಯ ಸಮಯದಲ್ಲಿ ಐದು ದಿನಗಳ (ಉತ್ತರೆಮಳೆ ಹುಟ್ಟಿದ ಮೊದಲ ಗುರುವಾರದಿಂದ - ಸೋಮವಾರದವರಗೆ) ಕಾಲ ಪಟ್ಟಕ್ಕೆ ಕೂರುವ ಸ್ವಾಮಿ ಐದನೇ ದಿನವಾದ ಸೋಮವಾರದಂದು ಅಂಬಿನೋತ್ಸವದ ಮೂಲಕ ಶ್ರೀಕ್ಷೇತ್ರ ಗುರು ಸನ್ನಿದಾನ ಶ್ರೀಧಶರಥರಾಮೇಶ್ವರಸ್ವಾಮಿಯ ವಜ್ರಕ್ಕೆ ದಯಮಾಡಿಸುವುದು ನಡೆದು ಬಂದಿದೆ.

              ಸೆ.೧೮ರ ಭಾನುವಾರದಂದು ರಾತ್ರಿ ಮಹಾಮಂಗಳಾರತಿ ನಂತರ ಬುತ್ತಿಬಾನದ ಸೇವೆ ನಡೆಯಲಿದೆ.ಆ ಸಮಯದಲ್ಲಿ ತಯಾರಿಸುವ ಮೊಸರನ್ನ ಮೂರು ದಿನಗಳ ನಂತರ ತೆಗೆದು ಪ್ರಸಾದವಾಗಿ ಹಂಚುವುದಿದ್ದು ಒಂದಿಷ್ಟು ಕೆಡದೆ ಘಮಘಮಿಸುವುದು ಇಲ್ಲಿನ ಪವಾಡವಾಗಿದೆ.

        ಸೆ.೧೯ರ ಸೋಮವರದಂದು ಮಧ್ಯಾಹ್ನ ೩ ಗಂಟೆಯಿಂದ ಬುತ್ತಿಬಾನದೊಂದಿಗೆ ಸ್ವಾಮಿಯನ್ನು ಉತ್ಸವದ ಮೂಲಕ ದಶರಥರಾಮೇಶ್ವರ ಸ್ವಾಮಿಯ ವಜ್ರಕ್ಕೆ ಕರೆದೊಯ್ಯಲಾಗುವುದು.

         ಸೆ.೨೦ ರ ಮಂಗಳವಾರದಂದು ಶ್ರೀ ಕ್ಷೇತ್ರ ವಜ್ರದಲ್ಲಿ ಗಂಗಾಸ್ನಾನ ಹಾಗೂ ಭೇಟಿ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

     ಸೆ.೨೩ರಂದು ಶುಕ್ರವಾರ ರಾತ್ರಿ ಮುಳ್ಳುಪಾದುಕಾ ಸೇವೆ ನಂತರ ಸ್ವಸ್ಥಾನಕ್ಕೆ ವಾಪಸ್ಸಾಗುವ ಮೂಲಕ ಜಾತ್ರೆಗೆ ತೆರೆಬೀಳಲಿದೆ.

        ಹೀಗೆ ಶ್ರೀಸ್ವಾಮಿಯವರ ಬುತ್ತಿಬಾನ, ಉತ್ತರೆಗುಡ್ಡ ಶ್ರೀಧಶರಥರಾಮೇಶ್ವರಸ್ವಾಮಿ ವಜ್ರದ ಸೇವೆಗಳಲ್ಲಿ ಪಾಲ್ಗೂಂಡರೆ ಸರ್ವ ಇಷ್ಟರ್ಥಗಳು ಸಿದ್ದಿಸುತ್ತವೆ ಎನ್ನುವ ನಂಬಿಕೆಯಿದ್ದು ಇಂತಹ ವಿಶೇಷ ಸಮಯದ ಉತ್ಸವದಲ್ಲಿ ಶ್ರೀಕಂಚೀವರದರಾಜಸ್ವಾಮಿಯವರಿಗೆ ದುಡ್ಡು ತೂರಿ ಭಕ್ತಿ ಸಮರ್ಪಿಸುವುದು ಸಂಪ್ರದಾಯವಾಗಿದೆ.

ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
https://m.facebook.com/story.php?story_fbid=1769875773255745&id=100007000188371


ಕಂಚೀಪುರದ ಕಂಚೀದೇವರ ಇತಿಹಾಸವನ್ನು ಸಂಪೂರ್ಣವಾಗಿ ತಿಳಿಸುವ ಈ ವಿಡಿಯೋ ಕ್ಲಿಪ್ಪಿಂಗ್ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ.....
https://m.facebook.com/story.php?story_fbid=1769289446647711&id=100007000188371

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...