ವಿಷಯಕ್ಕೆ ಹೋಗಿ

ಕಂಚಿಸ್ವಾಮಿಗೆ ಕಾಂಚಾಣದ ಮಳೆ

ಕಂಚೀವರದರಾಜ ಸ್ವಾಮಿಯ ಉತ್ತರೆ ಮಳೆ ಅಂಬಿನೋತ್ಸವ
----------------------
ಹುಳಿಯಾರು:ಹುಳಿಯಾರು ಗಡಿಭಾಗದ ಕಂಚೀಪುರದಲ್ಲಿನ ಕಂಚೀವರದರಾಜ ಸ್ವಾಮಿಯ ಉತ್ತರೆ ಮಳೆ ಅಂಬಿನೋತ್ಸವದ ಆರಂಭವಾಗಿದ್ದು ಪ್ರಯುಕ್ತ ಸೆ.೨೦ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.


ಐತಿಹ್ಯ:ಹೊಸದುರ್ಗ ತಾಲ್ಲೂಕಿನಿಂದ 28 ಕಿ.ಮೀ ದೂರದಲ್ಲಿರುವ ಕಂಚೀಪುರದ ಶ್ರೀ ಕಂಚೀವರದರಾಜ ಸ್ವಾಮಿ ಈ ಭಾಗದಲ್ಲಿ ಬಲು ಪ್ರಸಿದ್ದಿಯಾಗಿದ್ದು ಈ ದೇವರ ಉತ್ಸವಮೂರ್ತಿ ಗುಡಿಯಿಂದ ಹೊರ ನಡೆದರೆ ಸಾಕು, ಕಾಂಚಾಣದ ಮಳೆಯೇ ಸುರಿಯುತ್ತದೆ! ಇದು ಈ ದೇವರ ವಿಶೇಷ.

          ಎಲ್ಲೆಡೆ ಜಾತ್ರೆ ಅಂದ್ರೆ ದೇವರ ಮೇಲೆ ಬಾಳೆಹಣ್ಣು ,ಪುರಿ ತೂರಿದರೆ ಕಂಚೀಪುರದ ಜಾತ್ರೆಯಲ್ಲಿ ಕಂಚೀವರದರಾಜ ಸ್ವಾಮಿಗೆ ಭಕ್ತರು ಹರಕೆ ಮಾಡಿಕೊಂಡ ಹಣವನ್ನು ಹುಂಡಿಗೆ ಸಮರ್ಪಿಸುವ ಬದಲು ಚಿಲ್ಲರೆ ರೂಪದಲ್ಲಿ ಸ್ವಾಮಿಯ ಮೇಲೆ ತೂರುವುದು ವಾಡಿಕೆ.

       ಪೌರಾಣಿಕ ಕಥೆ ಹಿನ್ನಲೆಯಲ್ಲಿ ಭಕ್ತರು ಸ್ವಾಮಿಯ ಮೇಲೆ ಹಣ ತೂರಿ ಹರಕೆ ತೀರಿಸುವ ಪದ್ಧತಿ ರೂಢಿಗೆ ಬಂದಿದ್ದು ಭಕ್ತರು ತಮ್ಮ ಶಕ್ತ್ಯಾನುಸಾರ ನೂರು ರೂಪಾಯಿಯಿಂದ ಸಹಸ್ರಾರು ರೂಪಾಯಿವರೆಗೂ ಚಿಲ್ಲರೆ ಹಣ ತೂರುವುದು ನಡೆಯುತ್ತದೆ.ಸ್ವಾಮಿಯ ಮೇಲೆ ತೂರಿದ ಹಣವನ್ನು ಯಾರು ಬೇಕಾದರೂ ಆರಿಸಿಕೊಳ್ಳಬಹುದಿದ್ದು ನೋಡುಗರಿಗೆ ಕಾಂಚಣದ ಮಳೆ ಸುರಿದಂತೆ ಭಾಸವಾಗುತ್ತದೆ.
           ಉತ್ತರೆ ಮಳೆ ಅಂಬಿನೋತ್ಸವ ಹಾಗೂ ಏಪ್ರಿಲ್ ತಿಂಗಳಿನಲ್ಲಿ ನಡೆಯುವ ರಥೋತ್ಸವವನ್ನು ಹೆಚ್ಚು ವಿಜೃಂಭಣೆಯಿಂದ ಆಚರಿಸಲಾಗುವುದಿದ್ದು ಈ ಬಾರಿಯ ಅಂಬಿನೋತ್ಸವ ಅಂಗವಾಗಿ ಕಂಚೀಸ್ವಾಮಿಯನ್ನು ಕಳೆದ ಗುರುವಾರದಂದು ಪಟ್ಟಕ್ಕೆ ಕೂರಿಸಿದ್ದು ನಿತ್ಯ ಮಹಾಮಂಗಳಾರತಿ ನಂತರ ಭಜನೆ ನಡೆಯುತ್ತಿದೆ.

        ಉತ್ತರೆಮಳೆಯ ಸಮಯದಲ್ಲಿ ಐದು ದಿನಗಳ (ಉತ್ತರೆಮಳೆ ಹುಟ್ಟಿದ ಮೊದಲ ಗುರುವಾರದಿಂದ - ಸೋಮವಾರದವರಗೆ) ಕಾಲ ಪಟ್ಟಕ್ಕೆ ಕೂರುವ ಸ್ವಾಮಿ ಐದನೇ ದಿನವಾದ ಸೋಮವಾರದಂದು ಅಂಬಿನೋತ್ಸವದ ಮೂಲಕ ಶ್ರೀಕ್ಷೇತ್ರ ಗುರು ಸನ್ನಿದಾನ ಶ್ರೀಧಶರಥರಾಮೇಶ್ವರಸ್ವಾಮಿಯ ವಜ್ರಕ್ಕೆ ದಯಮಾಡಿಸುವುದು ನಡೆದು ಬಂದಿದೆ.

              ಸೆ.೧೮ರ ಭಾನುವಾರದಂದು ರಾತ್ರಿ ಮಹಾಮಂಗಳಾರತಿ ನಂತರ ಬುತ್ತಿಬಾನದ ಸೇವೆ ನಡೆಯಲಿದೆ.ಆ ಸಮಯದಲ್ಲಿ ತಯಾರಿಸುವ ಮೊಸರನ್ನ ಮೂರು ದಿನಗಳ ನಂತರ ತೆಗೆದು ಪ್ರಸಾದವಾಗಿ ಹಂಚುವುದಿದ್ದು ಒಂದಿಷ್ಟು ಕೆಡದೆ ಘಮಘಮಿಸುವುದು ಇಲ್ಲಿನ ಪವಾಡವಾಗಿದೆ.

        ಸೆ.೧೯ರ ಸೋಮವರದಂದು ಮಧ್ಯಾಹ್ನ ೩ ಗಂಟೆಯಿಂದ ಬುತ್ತಿಬಾನದೊಂದಿಗೆ ಸ್ವಾಮಿಯನ್ನು ಉತ್ಸವದ ಮೂಲಕ ದಶರಥರಾಮೇಶ್ವರ ಸ್ವಾಮಿಯ ವಜ್ರಕ್ಕೆ ಕರೆದೊಯ್ಯಲಾಗುವುದು.

         ಸೆ.೨೦ ರ ಮಂಗಳವಾರದಂದು ಶ್ರೀ ಕ್ಷೇತ್ರ ವಜ್ರದಲ್ಲಿ ಗಂಗಾಸ್ನಾನ ಹಾಗೂ ಭೇಟಿ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.

     ಸೆ.೨೩ರಂದು ಶುಕ್ರವಾರ ರಾತ್ರಿ ಮುಳ್ಳುಪಾದುಕಾ ಸೇವೆ ನಂತರ ಸ್ವಸ್ಥಾನಕ್ಕೆ ವಾಪಸ್ಸಾಗುವ ಮೂಲಕ ಜಾತ್ರೆಗೆ ತೆರೆಬೀಳಲಿದೆ.

        ಹೀಗೆ ಶ್ರೀಸ್ವಾಮಿಯವರ ಬುತ್ತಿಬಾನ, ಉತ್ತರೆಗುಡ್ಡ ಶ್ರೀಧಶರಥರಾಮೇಶ್ವರಸ್ವಾಮಿ ವಜ್ರದ ಸೇವೆಗಳಲ್ಲಿ ಪಾಲ್ಗೂಂಡರೆ ಸರ್ವ ಇಷ್ಟರ್ಥಗಳು ಸಿದ್ದಿಸುತ್ತವೆ ಎನ್ನುವ ನಂಬಿಕೆಯಿದ್ದು ಇಂತಹ ವಿಶೇಷ ಸಮಯದ ಉತ್ಸವದಲ್ಲಿ ಶ್ರೀಕಂಚೀವರದರಾಜಸ್ವಾಮಿಯವರಿಗೆ ದುಡ್ಡು ತೂರಿ ಭಕ್ತಿ ಸಮರ್ಪಿಸುವುದು ಸಂಪ್ರದಾಯವಾಗಿದೆ.

ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
https://m.facebook.com/story.php?story_fbid=1769875773255745&id=100007000188371


ಕಂಚೀಪುರದ ಕಂಚೀದೇವರ ಇತಿಹಾಸವನ್ನು ಸಂಪೂರ್ಣವಾಗಿ ತಿಳಿಸುವ ಈ ವಿಡಿಯೋ ಕ್ಲಿಪ್ಪಿಂಗ್ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ.....
https://m.facebook.com/story.php?story_fbid=1769289446647711&id=100007000188371

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.