ವಿಷಯಕ್ಕೆ ಹೋಗಿ

ನ. 6ರಂದು ಶ್ರೀತೀರ್ಥಲಿಂಗೇಶ್ವರ ಸ್ವಾಮಿ ದೇವಾಲಯ ಉದ್ಘಾಟನೆ

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕಂದಿಕೆರೆ ಹೋಬಳಿ ತೀರ್ಥಪುರದ ಶ್ರೀತೀರ್ಥಲಿಂಗೇಶ್ವರ ಸ್ವಾಮಿಯ ನೂತನ ದೇವಾಲಯದ ಪ್ರವೇಶ ಹಾಗೂ ವಿಗ್ರಹ ಪ್ರತಿಷ್ಠಾಪನೆ ನೂತನ ಶಿಖರಕ್ಕೆ ಕಳಸ ಪ್ರತಿಷ್ಠಾಪನೆ ಮತ್ತು 108 ಕುಂಬಾಭಿಷೇಕ ಮಹೋತ್ಸವ ನ. 6ರಿಂದ 7 ರವರೆಗೆ ನಡೆಯಲಿದೆ.

  6ರಂದು ಸಂಜೆ ಗೋಧೋಳಿ ಲಗ್ನದಲ್ಲಿ ಧ್ವಜಾರೋಹಣ, ಗಂಗಾ ಪೂಜೆ, 108 ಕುಂಭಾಪೂಜೆ, ಗಣಪತಿಪೂಜೆ, ರುದ್ರಪೂಜೆ ಕಾರ್ಯಕ್ರಮಗಳು ಶ್ರೀಕ್ಷೇತ್ರ ವಜ್ರದಿಂದ ಆರಂಭವಾಗಲಿದೆ.

       7ರಂದು ಬೆಳಗಿನಜಾವ 4 ರಿಂದ 5 ಗಂಟೆಗೆ ಸಲ್ಲುವ ಬ್ರಾಹ್ಮಿ ಲಗ್ನದಲ್ಲಿ ಪೂಜಾ ಆಲಯ ಪ್ರವೇಶ, ಮಹಾಗಣಪತಿ ಪೂಜೆ, ಸ್ವಾಸ್ತು ಪೂಜೆ, ಮಂಡಲಕಳಸ ಸೇರಿದಂತೆ ನೂತನ ವಿಗ್ರಹಗಳಿಗೆ ಕ್ಷೀರದಿವಾಸ, ಜಲಧಿವಾಸ ಸೇರಿದಂತೆ ನಾನಾ ಪೂಜಾಧಿ ಕಾರ್ಯಗಳು ನಡೆಯಲಿವೆ.


        ತಮ್ಮಡಿಹಳ್ಳಿಯ ಡಾ.ಅಭಿನವ ಮಲ್ಲಿಕಾರ್ಜುನ ದೇಶೀಕೇಂದ್ರಸ್ವಾಮಿಜಿಯ ಅಮೃತ ಹಸ್ತದಿಂದ ವಿಗ್ರಹ ಪ್ರತಿಷ್ಠಪನೆ, ಪ್ರಾಣ ಪ್ರತಿಪ್ಠಾಪನೆ, ನೂತನ ಶಿಖರಕ್ಕೆ ಕಳಸ ಪ್ರತಿಷ್ಠಾಪನೆ, ರುದ್ರಾಭಿಷೇಕ ನಡೆಯಲಿದೆ. 8ಗಂಟೆಗೆ ನವಗ್ರಹ ಮೃತ್ಯುಂಜಯ ಹೋಮ ರುದ್ರಹೋಮ ಪೂರ್ಣಾಹುತಿ ನಂತರ ಮಹಾಮಂಗಳಾರತಿ ನಡೆಯಲಿದೆ.


       ಪೂಜಾ ಕಾರ್ಯಕ್ರಮದಲ್ಲಿ ಕೆರೆಗೋಡಿ ರಂಗಾಪುರದ ಗುರುಪರ ದೇಶಿಕೇಂದ್ರಸ್ವಾಮೀಜಿ, ತಮ್ಮಡಿಹಳ್ಳೀ ಡಾ.ಶ್ರೀ.ಅಭಿನವ ಮಲ್ಲಿಕಾರ್ಜುನಸ್ವಾಮೀಜಿ, ಗೋಡೆಕೆರೆಯ ಸಿದ್ದರಾಮೇಶ್ವರ ದೇಶೀಕೇಂದ್ರಸ್ವಾಮೀಜಿ ಹಾಗೂ ಮೃತ್ಯುಂಜಯ ದೇಶೀಕೇಂದ್ರಸ್ವಾಮೀಜಿ, ಕುಪ್ಪೂರು ಗದ್ದಿಗೆ ಮಠದ ಡಾ.ಯತೀಶ್ವರ ಶಿವಾಚಾರ್ಯಸ್ವಾಮೀಜಿ, ಹೊನ್ನವಳ್ಳಿಯ ಶಿವಪ್ರಕಾಶ ಶಿವಾಚಾರ್ಯಸ್ವಾಮೀಜಿ ಕಾರ್ಯಕ್ರಮದ ದಿವ್ಯ ಸಾನಿದ್ಯ ವಹಿಸುವರು. ಬೆಲಗೂರಿನ ಬಿಂದುಮಾದವ ಶರ್ಮಸ್ವಾಮೀಜಿ ಹಾಗೂ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರಹೆಗ್ಗಡೆರವರು ಪಾಲ್ಗೊಳ್ಳಲಿದ್ದಾರೆ.


       11ಗಂಟೆಗೆ ನಡೆಯುವ ಧಾರ್ಮಿಕ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ, ಸಂಸದ ಎಸ್.ಪಿ.ಮುದ್ದಹನುಮೇಗೌಡ, ಮಾಜಿ ಸಂಸದ ಜಿ.ಎಸ್.ಬಸವರಾಜು, ಶಾಸಕ ಸಿ.ಬಿ.ಸುರೇಶ್‍ಬಾಬು ಮಾಜಿ ಶಾಸಕರಾದ ಜೆ.ಸಿ.ಮಾಧುಸ್ವಾಮಿ, ಕೆ.ಎಸ್.ಕಿರಣ್‍ಕುಮಾರ್, ಕಾಂಗ್ರೆಸ್ ಮುಖಂಡ ಸಾಸಲು ಸತೀಶ್ ಮತ್ತಿತರರು ಭಾಗವಹಿಸಲಿದ್ದಾರೆ.


        ತೀರ್ಥಲಿಂಗೇಶ್ವರ ದೇವಾಲಯಕ್ಕೆ 500 ವರ್ಷಗಳ ಇತಿಹಾಸವಿದ್ದು ದೇವಾಲಯವನ್ನು ಹಾಗಲವಾಡಿ ಪಾಳೆಗಾರ ಮುದ್ದಿಯಪ್ಪನಾಯಕ ಕಟ್ಟಿಸಿದ್ದಾರೆ. ತೀರ್ಥರಾಮಲಿಂಗೇಶ್ವರ ದೇವಾಲಯ ಗ್ರಾಮದ ಮಧ್ಯಭಾಗದಲ್ಲಿ ದೇವಾಲಯ ಶಿಥಿಲಾವಸ್ಥೆ ಇದ್ದುದರಿಂದ ಸುತ್ತಮುತ್ತಲ ಗ್ರಾಮಸ್ಥರು ಸೇರಿ 50 ಲಕ್ಷಕ್ಕೂ ಹೆಚ್ಚು ಹಣವನ್ನು ದಾನಿಗಳಿಂದ ಸಂಗ್ರಹಿಸಿ ದೇವಾಲಯ ನಿರ್ಮಾಣ ಮಾಡಲಾಗಿದೆ. ದೇವಾಲಯದ ಮುಂಭಾಗ 16 ಅಡಿ ಎತ್ತರದ ನೂತನ ಗರಡುಕಂಬ ಸ್ಥಾಪಿಸಲಾಗಿದೆ. ತೀರ್ಥರಾಮಲಿಂಗೇಶ್ವರ ದೇವಾಲಯ ಮುಜುರಾಯಿ ಇಲಾಖೆಗೆ ಸೇರಿಲ್ಲವಾದ್ದರಿಂದ ಗ್ರಾಮಸ್ಥರೆ ದೇವಾಲಯದ ಅಭಿವೃದ್ದಿಗೆ ಶ್ರಮಿಸಿ ಭಕ್ತಾಧಿಗಳಿಂದ ದೇಣಿಗೆ ಸ್ವೀಕರಿಸಿ ದೇವಾಲಯ ನಿರ್ಮಿಸಲಾಗಿದೆ. ದೇವಾಲಯಕ್ಕೆ ಸುತ್ತಮುತ್ತಲ ಗ್ರಾಮಸ್ಥರು ಸೇರಿದಂತೆ ಬೆಂಗಳೂರು, ಗುಬ್ಬಿ, ತುಮಕೂರು, ಚಿ.ನಾ.ಹಳ್ಳಿ, ತಿಪಟೂರಿನಲ್ಲಿ ನೆಲೆಸಿರುವ ದೇವಾಲಯದ ಭಕ್ತರು ದೇವಾಲಯಕ್ಕೆ ಧನಸಹಾಯ ಮಾಡಿದ್ದಾರೆ.

       ನ. 6 ಮತ್ತು 7ರಂದು ನಡೆಯುವ ನೂತನ ದೇವಾಲಯ ಪ್ರಾರಂಭೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸುವಂತೆ ದೇವಾಲಯದ ಸಮಿತಿ ಮನವಿ ಮಾಡಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...