ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಆಯುಧಪೂಜೆ ಸಂಭ್ರಮ

ಹೂವಿನ ದರ ಗಗನಕ್ಕೆ : ಬೂದುಗುಂಬಳ ಬೇಡಿಕೆ
-------------------------
ಹುಳಿಯಾರು:ಪಟ್ಟಣದಲ್ಲಿ ಆಯುಧಪೂಜೆಯ ಹಿನ್ನಲೆಯಲ್ಲಿ ಬೂದು ಕುಂಬಳಕಾಯಿ, ಹೂವಿನ, ಬಾಳೆ ಕಂದು, ಅಲಂಕಾರಿಕ ಹೂಗಳ ವ್ಯಾಪಾರ ಜೋರಾಗಿತ್ತು. ಬೆಲೆ ಹೆಚ್ಚಿದರೂ ಅನಿವಾರ್ಯವಾಗಿ ಕೊಳ್ಳುವ ಸ್ಥಿತಿ ಗ್ರಾಹಕನದಾಗಿತ್ತು.ಭಾನುವಾರದಂದು ವಿಶೇಷ ಹಬ್ಬದ ಸಂತೆ ಕೂಡ ನಡೆಯಿತು. ಸಂತೆಗೆ ಆಗಮಿಸಿದ ಪಟ್ಟಣದ ಸುತ್ತಮುತ್ತಲಿನ ಹಳ್ಳಿಗಳ ರೈತರು ಹಬ್ಬಕ್ಕೆ ಬೇಕಾದ ಹೂ,ಹಣ್ಣು ಸೇರಿದಂತೆ ಇನ್ನಿತರ ವಸ್ತುಗಳನ್ನು ಕೊಂಡೊಯ್ಯುತ್ತಿದುದ್ದು ಸಾಮಾನ್ಯವಾಗಿತ್ತು. ಆಯುಧಪೂಜೆ ಪ್ರಯುಕ್ತ ಎಲ್ಲೆಡೆ ರಾಶಿರಾಶಿ ಬೂದುಗುಂಬಳ ಕಂಡುಬಂತು.

                 ನವರಾತ್ರಿಯಲ್ಲಿ ಆಯುಧಪೂಜೆ, ಅಂಗಡಿಪೂಜೆ ಮತ್ತು ವಾಹನ ಪೂಜೆಗಾಗಿ ಹೆಚ್ಚಿನ ಪ್ರಮಾಣದಲ್ಲಿ ಬೂದು ಕುಂಬಳಕಾಯಿ ಬೇಡಿಕೆಯಿತ್ತು.ಕುಂಬಳಕಾಯಿಬೆಲೆ ಕಳೆದ ಬಾರಿಗಿಂತ ಕಡಿಮೆಯಾಗಿದ್ದು ಸಣ್ಣ ಗಾತ್ರಕ್ಕೆ ೨೦ ರಿಂದ ೩೦ ಇದ್ದರೆ, ಭಾರಿ ಗಾತ್ರದವಕ್ಕೆ ೧೦೦ ರೂ ಇತ್ತು. ಹಬ್ಬಕ್ಕೆ ಎರಡುದಿನ ಮುಂಚಿತವಾಗಿಯೇ ರೈತರು ಕುಂಬಳಕಾಯಿಯನ್ನು ಮಾರಲು ತಂದಿದ್ದರು. ಪಟ್ಟಣದ ಅನೇಕ ಕಡೆ ಕುಂಬಳಕಾಯಿಯ ರಾಶಿರಾಶಿಯೇ ಇದ್ದು ಗ್ರಾಹಕರಿಗಾಗಿ ಕಾದುಕೂರುವಂತೆ ಪರಿಸ್ಥಿತಿ ಮಾರಾಟಗಾರನದಾಗಿತ್ತು.

              ಸಂತೆ ಹಾಗೂ ಬಸ್ ನಿಲ್ದಾಣದಲ್ಲಿ ಹೂವಿನ ವ್ಯಾಪಾರ ಜೋರಾಗಿತ್ತು.ಗೌರಿ ಶಾವಂತಿಗೆ,ಮಾರಿಗೋಲ್ಡ್, ಚೆಂಡುಹೂ ಬೆಲೆ ಗಗನಕ್ಕೇರಿತ್ತು.ಶಾವಂತಿಗೆ ಮಾರೊಂದಕ್ಕೆ ೮೦ ಇದ್ದರೆ,ಚೆಂಡು ಹೂ ಮಾರಿಗೆ ೫೦ ಹಾಗೂ ಮಾರಿಗೋಲ್ಡ್ ಕೇಜಿಗೆ ೧೫೦ ರಂತೆ ಮಾರಾಟವಾಯ್ತು.ಹೆಚ್ಚಿನ ಪ್ರಮಾಣದಲ್ಲಿ ಬಾಳೆ ಕಂದು ಬಂದಿದ್ದು ಬಾಳೆಕಂದುಜೋಡಿಗೆ ೨೦ ರೂ,ಮಧ್ಯಮ ಗಾತ್ರದ್ದಕ್ಕೆ ೩೦ರೂ ನಂತೆ ಮಾರಾಟವಾಯ್ತು.ಸೇಬು,ದ್ರಾಕ್ಷಿ,ಮೊಸುಂಬೆ ಸೇರಿದಂತೆ ಇತರೆ ಹಣ್ಣುಗಳ ಬೆಲೆ ಎಂದಿನಂತೆ ಇದ್ದು ಪಚ್ಚಬಾಳೆ ಕೇಜಿಗೆ ೨೦ ರೂ,ನಾಟಿ ಬಾಳೆ ಕೇಜಿಗೆ ೪೦ರೂ ಹಾಗೂ ಪುಟ್ಟಬಾಳೆ ಕೇಜಿಗೆ 60 ರೂಗೆ ಬಿಕರಿಯಾಗುತ್ತಿತ್ತು.
                  ಮಕ್ಕಳು ಹಾಗೂ ವಾಹನ ಮಾಲೀಕರು ತಮ್ಮ ವಾಹನವನ್ನು ಅಲಂಕರಿಸಲು ಬೇಕಾದ ಮಿಂಚಿನ ಹಾರ, ಟೇಪ್,ಬಲೂನು ಸೇರಿದಂತೆ ಇತರ ಅಲಂಕಾರಿಕ ವಸ್ತುಗಳನ್ನು ಕೊಂಡುಕೊಳ್ಳಲು ಮುಗಿಬಿಳುತ್ತಿದ್ದರೆ, ಗ್ಯಾರೇಜ್, ಮ್ಯಾಕಾನಿಕ್ ಅಂಗಡಿಯವರು, ಲೇತ್ ನವರು, ವೆಲ್ಡಿಂಗ್ ಶಾಪ್ ನವರು ತಮ್ಮ ಅಂಗಡಿಯಲ್ಲಿನ ಹಳೆವಸ್ತುಗಳನ್ನು ಒಂದೆಡೆ ಹಾಕಿ ಅಂಗಡಿಗಳನ್ನು ಸ್ವಚ್ಚ ಮಾಡಿಕೊಳ್ಳುತ್ತಿರುವುದರಲ್ಲಿ ಮಗ್ನರಾಗಿದ್ದರು. ಒಟ್ಟಾರೆ ಪಟ್ಟಣದೆಲ್ಲೆಡೆ ಆಯುಧಪೂಜೆಯ ಸಂಭ್ರಮ ತುಂಬಿತುಳುಕುತ್ತಿತ್ತು.
             ಮೂರ್ನಾಲ್ಕು ದಿನ ಸಾಲು ರಜೆ ಇರುವುದರಿಂದ ಬೆಂಗಳೂರು ಸೇರಿದಂತೆ ಇನ್ನಿತರ ಊರುಗಳಲ್ಲಿ ಕೆಲಸ ಮಾಡಿಕೊಂಡಿದ್ದ ಜನ ತಮ್ಮ ತಮ್ಮ ಊರುಗಳಿಗೆ ಬರುತ್ತಿದ್ದು ಬಸ್ ಗಳೆಲ್ಲಾ ರಷಾಗಿದ್ದವಲ್ಲದೆ, ಪಟ್ಟಣದ ಬಸ್ ನಿಲ್ದಾಣ ಜನಜಂಗುಳಿಯಿಂದ ಕೂಡಿತ್ತು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...