ವಿಷಯಕ್ಕೆ ಹೋಗಿ

ಹುಳಿಯಾರು ಶೀಘ್ರ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೆ :ಸಂಸದ ಮುದ್ದ ಹನುಮೇಗೌಡ

ಹುಳಿಯಾರು:ಹಿಂದುಳಿದಿರುವ ಪ್ರದೇಶವೆಂಬ ಹಣೆಪಟ್ಟಿಯಿರುವ ಹುಳಿಯಾರಿನ ಅಭಿವೃದ್ಧಿಗೆ ತಾನು ಕಟ್ಟಿಬದ್ಧನಾಗಿದ್ದು ಆ ನಿಟ್ಟಿನಲ್ಲಿ ಹುಳಿಯಾರು ಗ್ರಾಪಂ ಯನ್ನ ಪಟ್ಟಣಪಂಚಾಯ್ತಿಮಾಡುವುದು ನನ್ನ ಆದ್ಯ ಕರ್ತವ್ಯವೆಂದು ಸಂಸದ ಮುದ್ದ ಹನುಮೇಗೌಡ ತಿಳಿಸಿದರು.

          ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಶಂಕುಸ್ಥಾಪನೆ ಹಾಗೂ ವಿಜಯನಗರ ಬಡವಣೆಯಲ್ಲಿ ಅಂಗನವಾಡಿ ಶಂಕುಸ್ಥಾಪನೆ ನೇರವೆರಿಸಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
         ಹುಳಿಯಾರು ಪಟ್ಟಣ ಪಂಚಾಯ್ತಿಯಾಗುವ ಬಗ್ಗೆ ತಾವು ಮುಖ್ಯಮಂತ್ರಿಗಳೊಂದಿಗೆ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಒಪ್ಪಿಗೆ ಪಡೆದಿದ್ದು ಸಚಿವ ಸಂಪೂಟದ ಅನುಮೋದನೆಯಷ್ಟೆ ಬಾಕಿ ಉಳಿದಿದೆ ಎಂದರು.
           ಸಂಸದರ ನಡೆ ಹಳ್ಳಿಗಳ ಕಡೆ ಎಂಬ ಪರಿಕಲ್ಪನೆಯಡಿಯಲ್ಲಿ ಜನರ ಸಮಸ್ಯೆಗಳನ್ನ ಖುದ್ದಾಗಿ ಆಲಿಸಿ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ನಾನೇ ನೇರವಾಗಿ ಜನರ ಬಳಿಗೆ ಹೋಗುತ್ತಿದ್ದು , ಕ್ಷೇತ್ರ ವ್ಯಾಪ್ತಿಯ ಎಲ್ಲಾ ಹಳ್ಳಿಗೆ ಪಕ್ಷದ ಮುಖಂಡರು, ಸದಸ್ಯರೊಂದಿಗೆ ತೆರಳಿ ಅಹವಾಲು ಸ್ವೀಕರಿಸುತ್ತಿರುವುದಾಗಿ ತಿಳಿಸಿದರು.

             ಇಂದು ನನ್ನ ಅನುದಾನದಲಿ ಚಿಕ್ಕನಾಯಕನಹಳ್ಳಿ ವಿಧಾನ ಸಭಾ ವ್ಯಾಪ್ತಿಯಲ್ಲಿ ೧೭ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರವೇರಿಸಿದ್ದು ಬಹುತೇಕ ಕಡೆ ಶುದ್ಧ ನೀರಿನ ಘಟಕಕ್ಕೆ ಅದ್ಯತೆ ನೀಡಲಾಗಿದೆ. ಹುಳಿಯಾರಿನಲ್ಲಿನ ನೀರಿನ ಸಮಸ್ಯೆ ತಿಳಿದಿದ್ದು ಮುಂದಿನ ದಿನದಲ್ಲಿ ಈ ಭಾಗದಲ್ಲಿ ಇನ್ನಷ್ಟು ಶುದ್ಧನೀರಿನ ಘಟಕ ಸ್ಥಾಪಿಸಲು ಮುಂದಾಗುವುದಾಗಿ ತಿಳಿಸಿದರು. ಹುಳಿಯಾರಿನ ಅಂಛೇಕಛೇರಿಗೆ ಸ್ವಂತ ಕಟ್ಟಡಕ್ಕೆ ಅನುದಾನ,ಹುಳಿಯಾರು ಮತ್ತು ನಿರುವಗಲ್ ನಲ್ಲಿ ಅಂಗನವಾಡಿ, ಕಂದಿಕೆರೆ ಹೋಬಳಿಯಲ್ಲಿ ಪೋಸ್ಟ್ ಆಫಿಸ್ ಮತ್ತು ಹಾಲು ಉತ್ಪಾದಕರ ಸಂಘದ ಕಟ್ಟಡಕ್ಕೆ ಹಾಗೂ ಉಳಿದೆಡೆ ಶುದ್ಧನೀರಿನ ಘಟಕದ ಶಂಕುಸ್ಥಾಪನೆ ನೆರವೇರಿಸಿರುವುದಾಗಿ ತಿಳಿಸಿದರು.ಪಶುವೈದ್ಯಕೀಯ ಇಲಾಖೆಯಿಂದ ಲೋಕಸಭಾ ಕ್ಷೇತ್ರಕ್ಕೆ ದೊರೆಯಲ್ಲಿರುವ ಸಂಚಾರಿ ಪಶು ಚಿಕಿತ್ಸಾ ಸೌಲಭ್ಯವನ್ನು ಹಂದನಕೆರೆಗೆ ದೊರಕಿಸಿಕೊಡುವುದಾಗಿ ತಿಳಿಸಿದರು.

           ಹೇಮಾವತಿ ಯೋಜನೆಯ ಮೂಲಕ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುವ ಕೆಲಸ ಚುರುಕಾಗಬೇಕಿದೆ ಎಂದ ಅವರು ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕೂಡ ಈ ಭಾಗದ ಕೆರೆಗಳಿಗೆ ನೀರು ಹರಿಯುವುದರಿಂದ ಈ ಭಾಗದ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.ಹುಳಿಯಾರಿನ ಬೀರಲಿಂಗೇಶ್ವರ ಸ್ವಾಮಿಯ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡುವುದಲ್ಲದೆ ರಾಜ್ಯ ಸರ್ಕಾರದಿಂದ ದೊರೆಯುವ ಸೌಲಭ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
         ರಾಷ್ಟಿಯ ಹೆದ್ದಾರಿ ೨೩೪ ಹುಳಿಯಾರಿನಿಂದ ಶಿರಾದವರೆಗೆ ೨೫೫ ಕೋಟಿ ರೂಗಳಿಗೆ ಟಂಡರ್ ಆಗಿದ್ದು ೨೦೦ ಕೋಟಿ ರಸ್ತೆ ನಿರ್ಮಾಣಕ್ಕೆ ಹಾಗೂ ೫೫ ಕೋಟಿ ಭೂಸ್ವಾಧೀನದ ಪರಿಹಾರಕ್ಕೆ ಮೀಸಲಿಟ್ಟಿರುವುದಗಿ ತಿಳಿಸಿದರು.ಹುಳಿಯಾರು, ಹೊಯ್ಸಳಕಟ್ಟೆ ಹೊನ್ನೇನಹಳ್ಳಿಗಳಲ್ಲಿ ೪ ಪಥದ ರಸ್ತೆಗಳು ನಿರ್ಮಾಣಗೊಳಲಿದ್ದು ಉಳಿದೆಡೆ ೨ ಪಥದ ರಸ್ತೆಗಳಾಗಲಿದೆ ಎಂದರು.ಬರುವ ನವೆಂಬರ್ ತಿಂಗಳಿನಲ್ಲಿ ಹೆದ್ದಾರಿ ಕಾಮಗಾರಿಯ ಶಂಕುಸ್ಥಾಪನೆ ನೆರವೇರಲಿದ್ದು ಕೇಂದ್ರ ಭೂ ಸಾರಿಗೆ ಸಚಿವರು ಹಾಗೂ ರಾಜ್ಯಸಚಿವರನ್ನು ಆಹ್ವಾನಿಸುತ್ತಿರುವುದಾಗಿ ತಿಳಿಸಿದರು.

         ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಸಾಸಲು ಸತೀಶ್, ಜಿಪಂ ಸದಸ್ಯ ಸಿದ್ದರಾಮಣ್ಣ, ಬಗರ್ ಹುಕ್ಕುಂ ಸಮಿತಿಯ ಸದಸ್ಯ ಹೊಸಳ್ಳಿ ಅಶೋಕ್, ಜಾಫರ್ ಸಾಬ್, ಗ್ರಾಪಂ ಅಧ್ಯಕ್ಷೆ ಗೀತಾಪ್ರದೀಪ್, ಸದಸ್ಯರುಗಳಾದ ದಯಾನಂದ್, ಸಿದ್ದಗಂಗಮ್ಮ, ಜಬೀಉಲ್ಲಾ,ದಬ್ಬಗುಂಟೆ ರುದ್ರೇಶ್, ಸೀಗೆಬಾಗಿ ಶಂಕರ್, ಲ.ಪು ಕರಿಯಪ್ಪ ಹೊಯ್ಸಳಕಟ್ಟೆ ಗಿರೀಶ್ ಮತ್ತಿತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...