ವಿಷಯಕ್ಕೆ ಹೋಗಿ

ಹುಳಿಯಾರು ಶೀಘ್ರ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೆ :ಸಂಸದ ಮುದ್ದ ಹನುಮೇಗೌಡ

ಹುಳಿಯಾರು:ಹಿಂದುಳಿದಿರುವ ಪ್ರದೇಶವೆಂಬ ಹಣೆಪಟ್ಟಿಯಿರುವ ಹುಳಿಯಾರಿನ ಅಭಿವೃದ್ಧಿಗೆ ತಾನು ಕಟ್ಟಿಬದ್ಧನಾಗಿದ್ದು ಆ ನಿಟ್ಟಿನಲ್ಲಿ ಹುಳಿಯಾರು ಗ್ರಾಪಂ ಯನ್ನ ಪಟ್ಟಣಪಂಚಾಯ್ತಿಮಾಡುವುದು ನನ್ನ ಆದ್ಯ ಕರ್ತವ್ಯವೆಂದು ಸಂಸದ ಮುದ್ದ ಹನುಮೇಗೌಡ ತಿಳಿಸಿದರು.

          ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಶಂಕುಸ್ಥಾಪನೆ ಹಾಗೂ ವಿಜಯನಗರ ಬಡವಣೆಯಲ್ಲಿ ಅಂಗನವಾಡಿ ಶಂಕುಸ್ಥಾಪನೆ ನೇರವೆರಿಸಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
         ಹುಳಿಯಾರು ಪಟ್ಟಣ ಪಂಚಾಯ್ತಿಯಾಗುವ ಬಗ್ಗೆ ತಾವು ಮುಖ್ಯಮಂತ್ರಿಗಳೊಂದಿಗೆ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ ಒಪ್ಪಿಗೆ ಪಡೆದಿದ್ದು ಸಚಿವ ಸಂಪೂಟದ ಅನುಮೋದನೆಯಷ್ಟೆ ಬಾಕಿ ಉಳಿದಿದೆ ಎಂದರು.
           ಸಂಸದರ ನಡೆ ಹಳ್ಳಿಗಳ ಕಡೆ ಎಂಬ ಪರಿಕಲ್ಪನೆಯಡಿಯಲ್ಲಿ ಜನರ ಸಮಸ್ಯೆಗಳನ್ನ ಖುದ್ದಾಗಿ ಆಲಿಸಿ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ನಾನೇ ನೇರವಾಗಿ ಜನರ ಬಳಿಗೆ ಹೋಗುತ್ತಿದ್ದು , ಕ್ಷೇತ್ರ ವ್ಯಾಪ್ತಿಯ ಎಲ್ಲಾ ಹಳ್ಳಿಗೆ ಪಕ್ಷದ ಮುಖಂಡರು, ಸದಸ್ಯರೊಂದಿಗೆ ತೆರಳಿ ಅಹವಾಲು ಸ್ವೀಕರಿಸುತ್ತಿರುವುದಾಗಿ ತಿಳಿಸಿದರು.

             ಇಂದು ನನ್ನ ಅನುದಾನದಲಿ ಚಿಕ್ಕನಾಯಕನಹಳ್ಳಿ ವಿಧಾನ ಸಭಾ ವ್ಯಾಪ್ತಿಯಲ್ಲಿ ೧೭ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರವೇರಿಸಿದ್ದು ಬಹುತೇಕ ಕಡೆ ಶುದ್ಧ ನೀರಿನ ಘಟಕಕ್ಕೆ ಅದ್ಯತೆ ನೀಡಲಾಗಿದೆ. ಹುಳಿಯಾರಿನಲ್ಲಿನ ನೀರಿನ ಸಮಸ್ಯೆ ತಿಳಿದಿದ್ದು ಮುಂದಿನ ದಿನದಲ್ಲಿ ಈ ಭಾಗದಲ್ಲಿ ಇನ್ನಷ್ಟು ಶುದ್ಧನೀರಿನ ಘಟಕ ಸ್ಥಾಪಿಸಲು ಮುಂದಾಗುವುದಾಗಿ ತಿಳಿಸಿದರು. ಹುಳಿಯಾರಿನ ಅಂಛೇಕಛೇರಿಗೆ ಸ್ವಂತ ಕಟ್ಟಡಕ್ಕೆ ಅನುದಾನ,ಹುಳಿಯಾರು ಮತ್ತು ನಿರುವಗಲ್ ನಲ್ಲಿ ಅಂಗನವಾಡಿ, ಕಂದಿಕೆರೆ ಹೋಬಳಿಯಲ್ಲಿ ಪೋಸ್ಟ್ ಆಫಿಸ್ ಮತ್ತು ಹಾಲು ಉತ್ಪಾದಕರ ಸಂಘದ ಕಟ್ಟಡಕ್ಕೆ ಹಾಗೂ ಉಳಿದೆಡೆ ಶುದ್ಧನೀರಿನ ಘಟಕದ ಶಂಕುಸ್ಥಾಪನೆ ನೆರವೇರಿಸಿರುವುದಾಗಿ ತಿಳಿಸಿದರು.ಪಶುವೈದ್ಯಕೀಯ ಇಲಾಖೆಯಿಂದ ಲೋಕಸಭಾ ಕ್ಷೇತ್ರಕ್ಕೆ ದೊರೆಯಲ್ಲಿರುವ ಸಂಚಾರಿ ಪಶು ಚಿಕಿತ್ಸಾ ಸೌಲಭ್ಯವನ್ನು ಹಂದನಕೆರೆಗೆ ದೊರಕಿಸಿಕೊಡುವುದಾಗಿ ತಿಳಿಸಿದರು.

           ಹೇಮಾವತಿ ಯೋಜನೆಯ ಮೂಲಕ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುವ ಕೆಲಸ ಚುರುಕಾಗಬೇಕಿದೆ ಎಂದ ಅವರು ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಕೂಡ ಈ ಭಾಗದ ಕೆರೆಗಳಿಗೆ ನೀರು ಹರಿಯುವುದರಿಂದ ಈ ಭಾಗದ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.ಹುಳಿಯಾರಿನ ಬೀರಲಿಂಗೇಶ್ವರ ಸ್ವಾಮಿಯ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ನೀಡುವುದಲ್ಲದೆ ರಾಜ್ಯ ಸರ್ಕಾರದಿಂದ ದೊರೆಯುವ ಸೌಲಭ್ಯ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದರು.
         ರಾಷ್ಟಿಯ ಹೆದ್ದಾರಿ ೨೩೪ ಹುಳಿಯಾರಿನಿಂದ ಶಿರಾದವರೆಗೆ ೨೫೫ ಕೋಟಿ ರೂಗಳಿಗೆ ಟಂಡರ್ ಆಗಿದ್ದು ೨೦೦ ಕೋಟಿ ರಸ್ತೆ ನಿರ್ಮಾಣಕ್ಕೆ ಹಾಗೂ ೫೫ ಕೋಟಿ ಭೂಸ್ವಾಧೀನದ ಪರಿಹಾರಕ್ಕೆ ಮೀಸಲಿಟ್ಟಿರುವುದಗಿ ತಿಳಿಸಿದರು.ಹುಳಿಯಾರು, ಹೊಯ್ಸಳಕಟ್ಟೆ ಹೊನ್ನೇನಹಳ್ಳಿಗಳಲ್ಲಿ ೪ ಪಥದ ರಸ್ತೆಗಳು ನಿರ್ಮಾಣಗೊಳಲಿದ್ದು ಉಳಿದೆಡೆ ೨ ಪಥದ ರಸ್ತೆಗಳಾಗಲಿದೆ ಎಂದರು.ಬರುವ ನವೆಂಬರ್ ತಿಂಗಳಿನಲ್ಲಿ ಹೆದ್ದಾರಿ ಕಾಮಗಾರಿಯ ಶಂಕುಸ್ಥಾಪನೆ ನೆರವೇರಲಿದ್ದು ಕೇಂದ್ರ ಭೂ ಸಾರಿಗೆ ಸಚಿವರು ಹಾಗೂ ರಾಜ್ಯಸಚಿವರನ್ನು ಆಹ್ವಾನಿಸುತ್ತಿರುವುದಾಗಿ ತಿಳಿಸಿದರು.

         ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಸಾಸಲು ಸತೀಶ್, ಜಿಪಂ ಸದಸ್ಯ ಸಿದ್ದರಾಮಣ್ಣ, ಬಗರ್ ಹುಕ್ಕುಂ ಸಮಿತಿಯ ಸದಸ್ಯ ಹೊಸಳ್ಳಿ ಅಶೋಕ್, ಜಾಫರ್ ಸಾಬ್, ಗ್ರಾಪಂ ಅಧ್ಯಕ್ಷೆ ಗೀತಾಪ್ರದೀಪ್, ಸದಸ್ಯರುಗಳಾದ ದಯಾನಂದ್, ಸಿದ್ದಗಂಗಮ್ಮ, ಜಬೀಉಲ್ಲಾ,ದಬ್ಬಗುಂಟೆ ರುದ್ರೇಶ್, ಸೀಗೆಬಾಗಿ ಶಂಕರ್, ಲ.ಪು ಕರಿಯಪ್ಪ ಹೊಯ್ಸಳಕಟ್ಟೆ ಗಿರೀಶ್ ಮತ್ತಿತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...