ವಿಷಯಕ್ಕೆ ಹೋಗಿ

ಹುಳಿಯಾರು:ರಾಷ್ಟ್ರಪತಿಗಳ ನಾಗಸಾಧುಗಳ ಆಗಮನದ ಹಿನ್ನಲೆ

ಕಂಕಾಳಿ ದೇವಸ್ಥಾನದಲ್ಲಿ ಪೂರ್ವಸಿದ್ಧತಾ ಸಭೆ
-----------------------
ಹುಳಿಯಾರು:ಪಟ್ಟಣದ ಮಾತಾ ಛಾರಿಟಬಲ್ ಟ್ರಸ್ಟ್ ಕೋಡಿಪಾಳ್ಯದಲ್ಲಿ ನಿರ್ಮಿಸುತ್ತಿರುವ ಶ್ರೀ ಕಂಕಾಳಿ ಮತ್ತು ತುಳಜಾ ಭವಾನಿ ದೇವಸ್ಥಾನದ ಪ್ರಾರಂಭೋತ್ಸವಕ್ಕೆ ಭಾರತದ ಘನತೆವೆತ್ತ ರಾಷ್ಟ್ರಪತಿಗಳು ಮತ್ತಿತರೆ ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು ಇದರ ಪೂರ್ವಸಿದ್ಧತೆಗಾಗಿ ದೇವಾಲಯದ ಆವರಣದಲ್ಲಿ ಸಾರ್ವಜನಿಕರ,ಸಂಘಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಭಾನುವಾರದಂದು ಪೂರ್ವಭಾವಿ ಸಭೆ ನಡೆಯಿತು.

ಬೆಂಗಳೂರಿನ ಉದ್ಯಮಿ ನರಸಿಂಹ ಮೂರ್ತಿ ನಾಯಕ್ ಅಧ್ಯಕ್ಷತೆಯಲ್ಲಿ ಇಂದು ಕರೆಯಲಾಗಿದ್ದ ಸಭೆಯಲ್ಲಿ ಜನಪ್ರತಿನಿಧಿಗಳು ,ಸಂಘಸಂಸ್ಥೆಗಳ ಪದಾಧಿಕಾರಿಗಳು,ದೇವಾಲಯಗಳ ಮುಖ್ಯಸ್ಥರು,ಸಮುದಾಯಗಳ ಮುಖಂಡರು, ಹುಳಿಯಾರು ಮತ್ತು ಸುತ್ತಮುತ್ತಲ ಗ್ರಾಮಸ್ಥರು ಚರ್ಚೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿದರು.
        ಸಮಾರಂಭದ ಪ್ರಾರಂಭೋತ್ಸವಕ್ಕೆ ರಾಷ್ಟ್ರಪತಿಗಳನ್ನು ಆಹ್ವಾನಿಸಲಾಗಿದ್ದು ಒಪ್ಪಿಗೆ ದೊರೆತಿದ್ದು ಮುಂದಿನ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ದಿನಾಂಕ ನೀಡಿದ್ದು ಅವರು ನೀಡುವ ದಿನಾಂಕದ ಮೇರೆಗೆ ಕಾರ್ಯಕ್ರಮ ಅಂತಿಮಗೊಳ್ಳಲಿದೆ.ಉತ್ತರ ಭಾರತದಿಂದ ಐವತ್ತಕ್ಕೂ ಹೆಚ್ಚು ನಾಗಸಾಧುಗಳು ಕೂಡ ಆಗಮಿಸಲಿದ್ದಾರೆ.ಗಣ್ಯಾತಿಗಣ್ಯರು ಆಗಮಿಸಲಿರುವ ಹಿನ್ನಲೆಯಲ್ಲಿ ವಿವಿಧ ಸಮಿತಿಗಳು ಹಾಗೂ ಮೇಲ್ವಿಚಾರಣ ಸಮಿತಿಯನ್ನು ರಚಿಸಲಾಯಿತು.ವಿವಿಧ ಸಮಿತಿಗಳನ್ನು ರಚಿಸುವ ಬಗ್ಗೆ ಚರ್ಚೆ ಸಾಗಿ ನ.27ರಂದು ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಲು ತೀರ್ಮಾನಿಸಲಾಯಿತು.
        ಪ್ರಾರಂಭೋತ್ಸವದ ನೆನಪಿಗಾಗಿ ೨೫ಜೋಡಿಗಳ ಸಾಮೂಹಿಕ ವಿವಾಹ ನಡೆಯಲಿದ್ದು ಒಟ್ಟು ಮೂರುದಿನಗಳ ಕಾಲ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರತಿಷ್ಟಾಪನೆ ಸಂಬಂಧ ಹೋಮಹವನಗಳು,ಅಂತರಾಷ್ಟ್ರೀಯ ಕಲಾವಿದರಿಂದ ಸಾಂಸ್ಕೃತಿಕಕಾರ್ಯಕ್ರಮ, ಸ್ಥಳಿಯರಿಂದ ಮನರಂಜನಾ ಕಾರ್ಯಕ್ರಮಗಳು ನಡೆಯಲಿದ್ದು ಖ್ಯಾತ ಚಲನಚಿತ್ರ ಕಲಾವಿದರುಗಳು ಪಾಲ್ಗೊಳ್ಳಲಿದ್ದಾರೆ.
ಮುಂದಿನ ಸಭೆ ಬೆಂಗಳೂರಿನ ಸಾಮ್ರಾಟ್ ಹೋಟೆಲಿನಲ್ಲಿ ನಡೆಯಲಿದ್ದು ಸಮಾರಂಭದ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು.
ಭಾನುವಾರದಂದು ನಡೆದ ಪೂರ್ವಭಾವಿ ಸಭೆಯಲ್ಲಿ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್,ಜಯರಾಮ್ ನಾಯಕ್ ಹಾಗೂ ಗಣೇಶ್ ಮಾಹಿತಿ ನೀಡಿದರು.


          ಸಭೆಯಲ್ಲಿ ಮಾತಾ ಛಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್, ತಾಪಂ ಸದಸ್ಯ ಕುಮಾರ್,ಗ್ರಾಪಂ ಉಪಾಧ್ಯಕ್ಷ ಗಣೇಶ್,ವರ್ತಕರ ಸಂಘದ ಅಧ್ಯಕ್ಷ ಎಂ.ಎಸ್.ನಟರಾಜು,ಬ್ಯಾಂಕ್ ಮರುಳಯ್ಯ, ನಂಜುಂಡಪ್ಪ,ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್,ದಾಸಪ್ಪ,ಅನಂತಕುಮಾರ್, ಟಿ.ಆರ್.ರಂಗನಾಥ್ ಶೆಟ್ರು, ಬಡಗಿ ರಾಮಣ್ಣ.ಉಮೇಶ್ ನಾಯಕ್,ಕೆಂಕೆರೆ ಸತೀಶ್,ಎಬಿವಿಪಿ ನರೇಂದ್ರ ಬಾಬು,ವಿಜಯಣ್ಣ,ನಿಂಗಣ್ಣ ಮತ್ತಿತರರು ಸೇರಿದಂತೆ ಎಲ್ಲಾ ದೇವಾಲಯ ಸಮಿತಿಯ, ಸಂಘಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.


       ಆನಂದ್ ಸ್ವಾಗತಿಸಿ,ಜಯರಾಮ್ ನಾಯಕ್ ನಿರೂಪಿಸಿ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...