ವಿಷಯಕ್ಕೆ ಹೋಗಿ

ಹುಳಿಯಾರು:ರಾಷ್ಟ್ರಪತಿಗಳ ನಾಗಸಾಧುಗಳ ಆಗಮನದ ಹಿನ್ನಲೆ

ಕಂಕಾಳಿ ದೇವಸ್ಥಾನದಲ್ಲಿ ಪೂರ್ವಸಿದ್ಧತಾ ಸಭೆ
-----------------------
ಹುಳಿಯಾರು:ಪಟ್ಟಣದ ಮಾತಾ ಛಾರಿಟಬಲ್ ಟ್ರಸ್ಟ್ ಕೋಡಿಪಾಳ್ಯದಲ್ಲಿ ನಿರ್ಮಿಸುತ್ತಿರುವ ಶ್ರೀ ಕಂಕಾಳಿ ಮತ್ತು ತುಳಜಾ ಭವಾನಿ ದೇವಸ್ಥಾನದ ಪ್ರಾರಂಭೋತ್ಸವಕ್ಕೆ ಭಾರತದ ಘನತೆವೆತ್ತ ರಾಷ್ಟ್ರಪತಿಗಳು ಮತ್ತಿತರೆ ಗಣ್ಯರು ಪಾಲ್ಗೊಳ್ಳುವ ನಿರೀಕ್ಷೆಯಿದ್ದು ಇದರ ಪೂರ್ವಸಿದ್ಧತೆಗಾಗಿ ದೇವಾಲಯದ ಆವರಣದಲ್ಲಿ ಸಾರ್ವಜನಿಕರ,ಸಂಘಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಭಾನುವಾರದಂದು ಪೂರ್ವಭಾವಿ ಸಭೆ ನಡೆಯಿತು.

ಬೆಂಗಳೂರಿನ ಉದ್ಯಮಿ ನರಸಿಂಹ ಮೂರ್ತಿ ನಾಯಕ್ ಅಧ್ಯಕ್ಷತೆಯಲ್ಲಿ ಇಂದು ಕರೆಯಲಾಗಿದ್ದ ಸಭೆಯಲ್ಲಿ ಜನಪ್ರತಿನಿಧಿಗಳು ,ಸಂಘಸಂಸ್ಥೆಗಳ ಪದಾಧಿಕಾರಿಗಳು,ದೇವಾಲಯಗಳ ಮುಖ್ಯಸ್ಥರು,ಸಮುದಾಯಗಳ ಮುಖಂಡರು, ಹುಳಿಯಾರು ಮತ್ತು ಸುತ್ತಮುತ್ತಲ ಗ್ರಾಮಸ್ಥರು ಚರ್ಚೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ತಮ್ಮ ಅಮೂಲ್ಯವಾದ ಸಲಹೆ ಸೂಚನೆಗಳನ್ನು ನೀಡಿದರು.
        ಸಮಾರಂಭದ ಪ್ರಾರಂಭೋತ್ಸವಕ್ಕೆ ರಾಷ್ಟ್ರಪತಿಗಳನ್ನು ಆಹ್ವಾನಿಸಲಾಗಿದ್ದು ಒಪ್ಪಿಗೆ ದೊರೆತಿದ್ದು ಮುಂದಿನ ವರ್ಷದ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ದಿನಾಂಕ ನೀಡಿದ್ದು ಅವರು ನೀಡುವ ದಿನಾಂಕದ ಮೇರೆಗೆ ಕಾರ್ಯಕ್ರಮ ಅಂತಿಮಗೊಳ್ಳಲಿದೆ.ಉತ್ತರ ಭಾರತದಿಂದ ಐವತ್ತಕ್ಕೂ ಹೆಚ್ಚು ನಾಗಸಾಧುಗಳು ಕೂಡ ಆಗಮಿಸಲಿದ್ದಾರೆ.ಗಣ್ಯಾತಿಗಣ್ಯರು ಆಗಮಿಸಲಿರುವ ಹಿನ್ನಲೆಯಲ್ಲಿ ವಿವಿಧ ಸಮಿತಿಗಳು ಹಾಗೂ ಮೇಲ್ವಿಚಾರಣ ಸಮಿತಿಯನ್ನು ರಚಿಸಲಾಯಿತು.ವಿವಿಧ ಸಮಿತಿಗಳನ್ನು ರಚಿಸುವ ಬಗ್ಗೆ ಚರ್ಚೆ ಸಾಗಿ ನ.27ರಂದು ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಪಟ್ಟಿಯನ್ನು ಅಂತಿಮಗೊಳಿಸಲು ತೀರ್ಮಾನಿಸಲಾಯಿತು.
        ಪ್ರಾರಂಭೋತ್ಸವದ ನೆನಪಿಗಾಗಿ ೨೫ಜೋಡಿಗಳ ಸಾಮೂಹಿಕ ವಿವಾಹ ನಡೆಯಲಿದ್ದು ಒಟ್ಟು ಮೂರುದಿನಗಳ ಕಾಲ ನಡೆಯಲಿರುವ ಅದ್ದೂರಿ ಕಾರ್ಯಕ್ರಮದಲ್ಲಿ ಪ್ರತಿಷ್ಟಾಪನೆ ಸಂಬಂಧ ಹೋಮಹವನಗಳು,ಅಂತರಾಷ್ಟ್ರೀಯ ಕಲಾವಿದರಿಂದ ಸಾಂಸ್ಕೃತಿಕಕಾರ್ಯಕ್ರಮ, ಸ್ಥಳಿಯರಿಂದ ಮನರಂಜನಾ ಕಾರ್ಯಕ್ರಮಗಳು ನಡೆಯಲಿದ್ದು ಖ್ಯಾತ ಚಲನಚಿತ್ರ ಕಲಾವಿದರುಗಳು ಪಾಲ್ಗೊಳ್ಳಲಿದ್ದಾರೆ.
ಮುಂದಿನ ಸಭೆ ಬೆಂಗಳೂರಿನ ಸಾಮ್ರಾಟ್ ಹೋಟೆಲಿನಲ್ಲಿ ನಡೆಯಲಿದ್ದು ಸಮಾರಂಭದ ರೂಪುರೇಷೆಗಳನ್ನು ಅಂತಿಮಗೊಳಿಸಲಾಗುವುದು.
ಭಾನುವಾರದಂದು ನಡೆದ ಪೂರ್ವಭಾವಿ ಸಭೆಯಲ್ಲಿ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್,ಜಯರಾಮ್ ನಾಯಕ್ ಹಾಗೂ ಗಣೇಶ್ ಮಾಹಿತಿ ನೀಡಿದರು.


          ಸಭೆಯಲ್ಲಿ ಮಾತಾ ಛಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಗಂಗಾಧರ್, ತಾಪಂ ಸದಸ್ಯ ಕುಮಾರ್,ಗ್ರಾಪಂ ಉಪಾಧ್ಯಕ್ಷ ಗಣೇಶ್,ವರ್ತಕರ ಸಂಘದ ಅಧ್ಯಕ್ಷ ಎಂ.ಎಸ್.ನಟರಾಜು,ಬ್ಯಾಂಕ್ ಮರುಳಯ್ಯ, ನಂಜುಂಡಪ್ಪ,ನಂದಿಹಳ್ಳಿ ಶಿವಣ್ಣ,ಜಲಾಲ್ ಸಾಬ್,ದಾಸಪ್ಪ,ಅನಂತಕುಮಾರ್, ಟಿ.ಆರ್.ರಂಗನಾಥ್ ಶೆಟ್ರು, ಬಡಗಿ ರಾಮಣ್ಣ.ಉಮೇಶ್ ನಾಯಕ್,ಕೆಂಕೆರೆ ಸತೀಶ್,ಎಬಿವಿಪಿ ನರೇಂದ್ರ ಬಾಬು,ವಿಜಯಣ್ಣ,ನಿಂಗಣ್ಣ ಮತ್ತಿತರರು ಸೇರಿದಂತೆ ಎಲ್ಲಾ ದೇವಾಲಯ ಸಮಿತಿಯ, ಸಂಘಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.


       ಆನಂದ್ ಸ್ವಾಗತಿಸಿ,ಜಯರಾಮ್ ನಾಯಕ್ ನಿರೂಪಿಸಿ ವಂದಿಸಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.