ವಿಷಯಕ್ಕೆ ಹೋಗಿ

ಹುಳಿಯಾರುಗೆ ಪಟ್ಟಣ ಪಂಚಾಯ್ತಿ ಪ್ರಸ್ತಾಪ

ದಾಖಲೆ ಸಲ್ಲಿಸಲು ಪಂಚಾಯ್ತಿ ನಿರ್ಲಕ್ಷ್ಯ:ಪಟ್ಟಣ ಪಂಚಾಯ್ತಿ ಭಾಗ್ಯಕ್ಕೆ ಹಿನ್ನಡೆ
ವರದಿ: ಡಿ.ಆರ್.ನರೇಂದ್ರಬಾಬು
ಹುಳಿಯಾರು: ಬರೋಬ್ಬರಿ ೩೯ ಸದಸ್ಯರನ್ನೊಳಗೊಂಡು ಜಿಲ್ಲೆಯಲ್ಲಿಯಲ್ಲಿಯೇ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಅತಿ ದೊಡ್ಡ ಪಂಚಾಯ್ತಿಯೆಂಬ ಹೆಗ್ಗಳಿಕೆಯ ಹುಳಿಯಾರು ಗ್ರಾಮಪಂಚಾಯ್ತಿಯನ್ನು ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತ ಪ್ರಸ್ತಾಪ ಸರ್ಕಾರದ ಮುಂದಿದ್ದು ,ಕಳೆದ ಮೂರ್ನಾಲು ವರ್ಷಗಳಿಂದ ಅಗತ್ಯ ದಾಖಲೆಗಳನ್ನು ಕೋರಿ ಪತ್ರ ವ್ಯವಹಾರ ನಡೆಯುತ್ತಿದ್ದರು ಸಹ ದಾಖಲೆಗಳನ್ನು ಕಳುಹಿಸುವಲ್ಲಿ ಪಂಚಾಯ್ತಿ ಅನಗತ್ಯ ವಿಳಂಬ ತೋರುತ್ತಿರುವ ಪರಿಣಾಮ ನೆನೆಗುದಿಗೆ ಬೀಳಲು ಕಾರಣವಾಗಿದೆ.
                 ಪುರಸಭೆ ಅಧಿನಿಯಮದ ಪ್ರಕಾರ ಪಟ್ಟಣ ಪಂಚಾಯ್ತಿಯನ್ನಾಗಿ ಮೇಲ್ದರ್ಜೆಗೇರಿಸಲು ಗ್ರಾ.ಪಂ. ಜನಸಂಖ್ಯೆ 10,000ಕ್ಕೆ ಕಡಿಮೆಯಿಲ್ಲದಂತೆ ಹಾಗೂ 20,000ಕ್ಕೆ ಹೆಚ್ಚಿಲ್ಲದಂತೆ ಇರಬೇಕು. ಜನಸಾಂದ್ರತೆ ಆ ಪ್ರದೇಶದ ಒಂದು ಚ.ಕಿ.ಮೀ ವೀಸ್ತೀರ್ಣಕ್ಕೆ 400ಕ್ಕಿಂತ ಕಡಿಮೆ ಇಲ್ಲದಿರುವುದು ಹಾಗೂ ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗಾವಕಾಶಗಳ ಶೇಕಡವಾರು ಪ್ರಮಾಣ ಒಟ್ಟು ಉದ್ಯೋಗದ ಪ್ರಮಾಣದ ಶೇ.50ಕ್ಕಿಂತ ಕಡಿಮೆ ಇಲ್ಲದಂತೆ ಇರಬೇಕು. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಅಂದಾಜು ಇಪ್ಪತ್ತು ಸಾವಿರ ದಾಟಿರುವ ಜನ ಸಂಖ್ಯೆ ಹೊಂದಿರುವ ಹುಳಿಯಾರು ಎಂದೋ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರುವ ಎಲ್ಲಾ ಲಕ್ಷಣಗಳನ್ನು ಹೊಂದಿದ್ದರು ಸಹ ಗ್ರಾಮಪಂಚಾಯ್ತಿಯಾಗಿಯೇ ಮುಂದುವರಿದಿರುವುದು ಸೋಜಿಗವಾಗಿದೆ.

ಪ್ರಸ್ತಾವನೆ: ಜಿಲ್ಲೆಯ ಹುಳಿಯಾರು ಪಪಂ ಆಗಿ ಮೇಲ್ದರ್ಜೆಗೇರಿಸುವ ಕುರಿತಂತೆ ಕೆಲವು ಅಗತ್ಯ ದಾಖಲೆಗಳನ್ನು ಸಲ್ಲಿಸುವಂತೆ ಪೌರಾಡಳಿತ ನಿರ್ದೇಶನಾಲಯ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಅ.೨ರಂದು ಸುತ್ತೋಲೆ ಕಳಿಸಿದೆ.ಈ ರೀತಿಯ ಸುತ್ತೋಲೆ ಬರುತ್ತಿರುವುದು ಇದೇ ಮೊದಲಲ್ಲ.ಕಳೆದ ಮೂರು ವರ್ಷಗಳಿಂದ ಅಗತ್ಯ ಮಾಹಿತಿ ನೀಡುವಂತೆ ಕೋರಿ ಬರೆದಿರುವ ಪತ್ರಗಳು ಅದೆಷ್ಟೊ.ಮತ್ತೆ ಬಂದಿರುವ ಪತ್ರ ದಲ್ಲಿ ಜನಸಾಂದ್ರತೆ,ಕೃಷಿಯೇತರ ಚಟುವಟಿಕೆಗಳಲ್ಲಿನ ಉದ್ಯೋಗಾವಕಾಶಗಳ ಶೇಕಡವಾರು ಪ್ರಮಾಣ ಹಾಗೂ ಆಯಾವರ್ಷದಲ್ಲಿನ ಜನಸಂಖ್ಯಾ ವಿವರ ಕೋರಿದ್ದು ತುರ್ತಾಗಿ ಮಾಹಿತಿ ಪೂರೈಸುವಂತೆ ಕೋರಿದ್ದಾರೆ.
              ಗ್ರಾಪಂ ಸಾಮಾನ್ಯ ಸಭೆಯಲ್ಲಿ ಈ ವಿಚಾರ ಪ್ರಸ್ತಾಪವಾಗಿ ಹುಳಿಯಾರನ್ನು ಪಟ್ಟಣ ಪಂಚಾಯ್ತಿಯನ್ನಾಗಿ ಮಾಡಲು ಸರ್ಕಾರ ಮುಂದಾಗಿದ್ದರು ಸಹ ಇಲ್ಲಿನ ಆಡಳಿತಯಂತ್ರ ಮಾಹಿತಿ ಸಲ್ಲಿಸಲು ನಿರಾಸಕ್ತಿವಹಿಸಿದೆ ಎಂದು ಗಂಭೀರ ಆರೋಪ ಕೇಳಿಬಂದಿದೆ.ನಮ್ಮಲ್ಲಿನ ಸದಸ್ಯರು ಒಟ್ಟಾಗಿ ಹೋಗುವುದರ ಬದಲು ಅವರವರದ್ದೆ ಗುಂಪು ಮಾಡಿಕೊಂಡು ತಮಗೆ ಬೇಕಾದ ಮಂತ್ರಿಮಾನ್ಯರನ್ನು ಭೇಟಿ ಮಾಡಿ ಹುಳಿಯಾರನ್ನು ಪಟ್ಟಣ ಪಂಚಾಯ್ತಿಯನ್ನಾಗಿ ಮಾಡಿ ಎಂದು ಅಹವಾಲು ಸಲ್ಲಿಸುತ್ತಿರುವುದು ಸರಿಯಲ್ಲ.ಅವರಿವರ ಬಳಿ ತೆರಳಿ ಅರ್ಜಿ ಸಲ್ಲಿಸುವ ಬದಲು ಸರ್ಕಾರ ಕೇಳಿರುವ ಮಾಹಿತಿಯನ್ನು ಆವಾಗಲೇ ಪೂರೈಸಿದ್ದರೆ ಇಷ್ಟರಲ್ಲಾಗಲೆ ಪಟ್ಟಣ ಪಂಚಾಯ್ತಿಯಾಗಿರುತ್ತಿತ್ತು ಎಂಬ ಅಭಿಪ್ರಾಯ ಕೆಲ ಸದಸ್ಯರಿಂದ ವ್ಯಕ್ತವಾಗಿದೆ.
ಸಂಸದ ಮುದ್ದಹನುಮೇಗೌಡರು ಹೇಳಿದಂತೆ ಎಲ್ಲಾ ಸದಸ್ಯರು ರಾಜೀನಾಮೆ ಸಲ್ಲಿಸಿದರೆ ಪಟ್ಟಣ ಪಂಚಾಯ್ತಿಯಾಗುವುದಿಲ್ಲ ಸಂಸದರು,ಸಚಿವರು,ಜಿಲ್ಲಾಧಿಕಾರಿಗಳು ಹೀಗೆ ಯಾರೇ ಹುಳಿಯಾರಿಗೆ ಬಂದಾಗಲೂ ಪ್ರತ್ಯೇಕ ಮನವಿಪತ್ರ ಸಲ್ಲಿಸುವ ಬದಲು ಮೊದಲು ಸರ್ಕಾರಕ್ಕೆ ಪೂರಕ ಮಾಹಿತಿ ಸಲ್ಲಿಸಿದಲ್ಲಿ ಒಳಿತಾಗುವುದು ಎಂಬ ಮಾತು ಸದಸ್ಯರಲ್ಲೆ ಕೇಳಿಬರುತ್ತಿದೆ.
       ಕರ್ನಾಟಕ ಪೌರಸಭೆಗಳ ಅಧಿನಿಯಮ 1964ರ ಕಲಂ 3, 9ಮತ್ತು 349ರ ಪ್ರಕಾರ ಅನುಸರಿಸಬೇಕಾದ ಮಾನದಂಡಗಳ ಪ್ರಕಾರ ಎಲ್ಲಾ ಲಕ್ಷಣಗಳನ್ನು ಹೊಂದಿರುವ ಹುಳಿಯಾರು ಗ್ರಾ.ಪಂ. ಪಟ್ಟಣ ಪಂಚಾಯ್ತಿಯಾಗಲೇಬೇಕಿದೆ.ಸದ್ಯ ಸರ್ಕಾರ ಕೋರಿರುವ ಮಾಹಿತಿ ಸಲ್ಲಿಕೆಯಾದ ನಂತರ ಜನಪ್ರತಿನಿಧಿಗಳು ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ತಂದು ಶೀಘ್ರ ಅನುಮೋದನೆ ದೊರೆಕಿಸಿಕೊಟ್ಟಲ್ಲಿ ಹುಳಿಯಾರು ಪಟ್ಟಣ ಮತ್ತಷ್ಟು ಅಭಿವೃದ್ಧಿಯಾಗುವ ಸಾಧ್ಯತೆ ಹೆಚ್ಚಾಗಿವೆ.
-----------------------------------------------
ಹುಳಿಯಾರನ್ನು ಪಟ್ಟಣ ಪಂಚಾಯ್ತಿಯನ್ನಾಗಿಸುವ ಬಗ್ಗೆ ಸರಕಾರ ಕೇಳಿರುವ ಸಂಪೂರ್ಣ ಮಾಹಿತಿ ಕಳಿಸಲು ಗ್ರಾಪಂ ಅಧಿಕಾರಿಗಳು ಕಳುಹಿಸದೆ ನಿರ್ಲಕ್ಷಮಾಡುತ್ತಿರುವುದರಿಂದ ಪಟ್ಟಣ ಪಂಚಾಯ್ತಿಯಾಗಿ ಮೇಲ್ದರ್ಜೆಗೇರುವ ಭಾಗ್ಯ ವಿಳಂಬವಾಗಲು ಕಾರನವಾಗಿದೆ :ಹೆಚ್.ಎನ್.ರಾಘವೇಂದ್ರ ,ಗ್ರಾಪಂ ಸದಸ್ಯ

-------------------------   

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...