ವಿಷಯಕ್ಕೆ ಹೋಗಿ

ಹುಳಿಯಾರು: ಗೌಜು ಗದ್ದಲದಲ್ಲಿ ನಡೆದ ಪಂಚಾಯ್ತಿ ಸಭೆ

ಗಲಾಟೆಯಲ್ಲಿ ಮಾತನಾಡಲು ಅವಕಾಶವಾಗದೆ ಸಭೆಯಿಂದ ಹೊರನಡೆದ ಮಹಿಳಾ ಸದಸ್ಯರು
----------------------------
ಹುಳಿಯಾರು : ಗ್ರಾ.ಪಂ.ಗೆ ಅಂಟಿದ ಶಾಪವೇನೋ ಎಂಬಂತೆ ಇಲ್ಲಿ ನಡೆಯುವ ಯಾವುದೇ ಸಭೆಗಳು ಎಂದೂ ಶಾಂತ ರೀತಿಯಲ್ಲಿ ನಡೆಯುವುದಿಲ್ಲ. ಅದೇ ರೀತಿ ಬುಧವಾದಂದು ಗೀತಾ ಪ್ರದೀಪ್ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಯೂ ಇದಕ್ಕೆ ಹೊರತಾಗದೆ ಸಭೆಯ ಪ್ರಾರಂಭದಿಂದಲೂ ಅಂತ್ಯದವರೆಗೂ ಗಲಾಟೆ,ಗದ್ದಲ ಮಾತಿನ ಚಕಮಕಿಯಲ್ಲೇ ನಡೆದು ಕಡೆಗೆ ಗಲಾಟೆಯಲ್ಲಿ ಮಾತನಾಡಲು ಅವಕಾಶವಾಗದೆ ಸಭೆಯಿಂದ ಮಹಿಳಾ ಸದಸ್ಯರು ನಿರ್ಗಮಿಸಿದ್ದು ಇದಕ್ಕೆ ಇಂಬು ಕೊಡುವಂತಿತ್ತು.
       ಜಮಾಖರ್ಚಿನ ವಿವರ ಸೇರಿದಂತೆ ಕುಡಿಯುವ ನೀರಿನ ಸಮಸ್ಯೆ,ಬೋರನಕಣಿವೆ ಪೈಪ್ ಲೈನ ದುರಸ್ತಿ ,ವಿವಿಧ ವಾರ್ಡುಗಳಲ್ಲಿನ ಕೈಪಂಪು ರಿಪೇರಿ,ಬಡಾವಣೆಗಳಲ್ಲಿನ ಕಸ ವಿಲೇವಾರಿ,೧೪ ನೇ ಹಣಕಾಸು ಯೋಜನೆ ಕಾಮಗಾರಿಗಳ ಬಗ್ಗೆ ಚರ್ಚಿಸಲು ಬುಧವಾರದಂದು ಗ್ರಾಪಂ ಅಧ್ಯಕ್ಷೆ ಗೀತಾ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು.

ಸಭೆಯಲ್ಲಿ ಕೈಗೊಂಡ ನಿರ್ಣಯಗಳು:ನಾಯಿ ಹಾಗೂ ಹಂದಿ ಕಾಟ ವಿಪರೀತವಾಗಿದ್ದು ಓಡಾಡಲು ಭಯ ಪಡುವ ಸ್ಥಿತಿಯಿದ್ದು ನಾಯಿಗಳನ್ನು ಹಿಡಿಸಲು ಮಿತಿಮೀರಿರುವ ಹಂದಿಗಳನ್ನು ಊರಾಚೆ ಸಾಗಿಸುವಂತೆ ಸೂಚಿಸಲು ತೀರ್ಮಾನಿಸಲಾಯಿತು.
ಚರಂಡಿ ಸ್ವಚ್ಚಗೊಳಿಸಲು ಹಾಗೂ ಬೀದಿಬದಿಯಲ್ಲಿನ ಕಸ ಸಾಗಿಸಲು ಟ್ರಾಕ್ಟರ್ ಬಳಸಿಕೊಂಡು ಊರಾಚೆ ಕಸ ಸಾಗಿಸಲು ಒಪ್ಪಲಾಯಿತು.
       ರಾಂಗೋಪಾಲ್ ಸರ್ಕಲ್ ಹಾಗೂ ಪೆಟ್ರೋಲ್ ಬಂಕ್ ಬಳಿಯಿರುವ ಹೈಮಾಸ್ಟ್ ದೀಪವನ್ನು ಸರಿಪಡಿಸಲು ಸೂಚಿಸಲಾಯಿತು.ಕರವಸೂಲಿಗಾರರನ್ನು ಕರೆಸಿ ಕರವಸೂಲಿಮಾಡಲು ಟಾರ್ಗೆಟ್ ಫಿಕ್ಸ್ ಮಾಡಲಾಯಿತು. ಸಿಬ್ಬಂದಿಗಳ ವೇತನ ಹಾಗೂ ಸದಸ್ಯರ ಗೌರವಧನ ವಿತರಣೆ ಮಾಡಲು ಒಪ್ಪಲಾಯಿತು.
           ಪಂಚಾಯ್ತಿ ಸಿಬ್ಬಂದಿಯಲ್ಲಿನ ಸಾಧಿಕ್,ಬಿಲ್ ಕಲೆಕ್ಟರ್ ಆನಂದ್ ಮತ್ತು ಮಂಜುಳಾ ಎಂಬುವವರು ಸರಿಯಾಗಿ ಕರ್ತವ್ಯ ನಿರ್ವಹಿಸದ ಹಿನ್ನಲೆಯಲ್ಲಿ ಸಂಬಳ ತಡೆಹಿಡಿಯುವಂತೆ ಆದೇಶಿಸಲಾಯಿತು.ಕಳೆದ ಕೆಲ ತಿಂಗಳ ಹಿಂದೆ ಸಾವನ್ನಪ್ಪಿದ್ದ ಪೌರಕಾರ್ಮಿಕ ಮರಿರಂಗಯ್ಯನ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ಅದೇ ಕೆಲಸ ಕೊಡಲು ಒಪ್ಪಿಗೆ ಪಡೆಯಲಾಯಿತು.
ನಡೆದ ಚರ್ಚೆ: ವಾಸವಿ ಶಾಲೆಯ ಬಳಿಯಿರುವ ಮಾರ್ಚುರಿ ಜಾಗವು ಪಂಚಾಯ್ತಿ ಸ್ವತ್ತಾಗಿದ್ದು ಇದನ್ನು ಕುರುಬ ಸಮಾಜಕ್ಕೆ ನೀಡಿರುವದಕ್ಕೆ ದಾಖಲೆಗಳನ್ನು ನೀಡುವಂತೆ ಸದಸ್ಯ ಕೋಳಿ ಶ್ರೀನಿವಾಸ್ ಕೇಳಿದರು.ಹದಿನೈದು ವರ್ಷಗಳ ಹಿಂದೆ ನೀಡಲಾಗಿದ್ದು ಎನ್ನಲಾಗಿರುವ ಜಾಗವನ್ನು ಈ ಹಿಂದೆ ಅಧ್ಯಕ್ಷರಾಗಿದ್ದವರು ಅಂಗನವಾಡಿಗೆ ನೀಡಿ ನಿರ್ಣಯ ಮಾಡಿದ್ದು ಸದರಿ ಜಾಗದ ಬಗ್ಗೆ ವಿವರವಾದ ದಾಖಲೆಗಳು ಬೇಕೆಂದರು.
        ಬಸ್ ನಿಲ್ದಾಣದಲ್ಲಿನ ಕೋಳಿಅಂಗಡಿಗಳವರು ಹಾಗೂ ಆಸ್ಪತ್ರೆ ಮತ್ತು ಕ್ಲಿನಿಕ್ ತ್ಯಾಜ್ಯವನ್ನು ಕೆರೆಅಂಗಳಕ್ಕೆ ತಂದು ಬಿಸಾಡುತ್ತಿದ್ದು ಈ ಬಗ್ಗೆ ಅವರಿಗೆ ಹಲವಾರು ಬಾರಿ ತಿಳಿಹೇಳಿದರೂ ಸಹ ಪುನರಾವರ್ತನೆ ಮಾಡುತ್ತಿರುವ ಕಾರಣ ಅವರಿಗೆ ನೋಟೀಸ್ ನೀಡುವಂತೆ ಸದಸ್ಯ ಹೇಮಂತ್ ಒತ್ತಾಯಿಸಿದರು.
          ಒಟ್ಟಾರೆ ಕೆಲವೊಂದು ನಿರ್ಣಯಗಳನ್ನು ಕೈಗೊಳ್ಳಲಾಯಿತಾದರೂ ಆರಂಭದಿಂದಲೂ ನಡೆದ ಗದ್ದಲಕ್ಕೆ ಬೇಸತ್ತ ಮಹಿಳಾ ಸದಸ್ಯರು ನಮಗೆ ಮಾತಾಡಲಿಕ್ಕೆ ಅವಕಾಶ ನೀಡದೆ ಗಲಾಟೆ ಮಾಡುತ್ತಿರುವುದು ಸರಿಯಲ್ಲವೆಂದು ಕಡೆಯ ಕ್ಷಣದಲ್ಲಿ ಸಭೆಯಿಂದ ಹೊರನಡೆದರು.
          ಉಪಾಧ್ಯಕ್ಷ ಗಣೇಶ್,ಪಿಡಿಓ ಸಿದ್ಧರಾಮಯ್ಯ,ಕಾರ್ಯದರ್ಶಿ ಉಮಾಮಹೇಶ್ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...