ವಿಷಯಕ್ಕೆ ಹೋಗಿ

ಹುಳಿಯಾರು: ಗೌಜು ಗದ್ದಲದಲ್ಲಿ ನಡೆದ ಪಂಚಾಯ್ತಿ ಸಭೆ

ಗಲಾಟೆಯಲ್ಲಿ ಮಾತನಾಡಲು ಅವಕಾಶವಾಗದೆ ಸಭೆಯಿಂದ ಹೊರನಡೆದ ಮಹಿಳಾ ಸದಸ್ಯರು
----------------------------
ಹುಳಿಯಾರು : ಗ್ರಾ.ಪಂ.ಗೆ ಅಂಟಿದ ಶಾಪವೇನೋ ಎಂಬಂತೆ ಇಲ್ಲಿ ನಡೆಯುವ ಯಾವುದೇ ಸಭೆಗಳು ಎಂದೂ ಶಾಂತ ರೀತಿಯಲ್ಲಿ ನಡೆಯುವುದಿಲ್ಲ. ಅದೇ ರೀತಿ ಬುಧವಾದಂದು ಗೀತಾ ಪ್ರದೀಪ್ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಯೂ ಇದಕ್ಕೆ ಹೊರತಾಗದೆ ಸಭೆಯ ಪ್ರಾರಂಭದಿಂದಲೂ ಅಂತ್ಯದವರೆಗೂ ಗಲಾಟೆ,ಗದ್ದಲ ಮಾತಿನ ಚಕಮಕಿಯಲ್ಲೇ ನಡೆದು ಕಡೆಗೆ ಗಲಾಟೆಯಲ್ಲಿ ಮಾತನಾಡಲು ಅವಕಾಶವಾಗದೆ ಸಭೆಯಿಂದ ಮಹಿಳಾ ಸದಸ್ಯರು ನಿರ್ಗಮಿಸಿದ್ದು ಇದಕ್ಕೆ ಇಂಬು ಕೊಡುವಂತಿತ್ತು.
       ಜಮಾಖರ್ಚಿನ ವಿವರ ಸೇರಿದಂತೆ ಕುಡಿಯುವ ನೀರಿನ ಸಮಸ್ಯೆ,ಬೋರನಕಣಿವೆ ಪೈಪ್ ಲೈನ ದುರಸ್ತಿ ,ವಿವಿಧ ವಾರ್ಡುಗಳಲ್ಲಿನ ಕೈಪಂಪು ರಿಪೇರಿ,ಬಡಾವಣೆಗಳಲ್ಲಿನ ಕಸ ವಿಲೇವಾರಿ,೧೪ ನೇ ಹಣಕಾಸು ಯೋಜನೆ ಕಾಮಗಾರಿಗಳ ಬಗ್ಗೆ ಚರ್ಚಿಸಲು ಬುಧವಾರದಂದು ಗ್ರಾಪಂ ಅಧ್ಯಕ್ಷೆ ಗೀತಾ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು.

ಸಭೆಯಲ್ಲಿ ಕೈಗೊಂಡ ನಿರ್ಣಯಗಳು:ನಾಯಿ ಹಾಗೂ ಹಂದಿ ಕಾಟ ವಿಪರೀತವಾಗಿದ್ದು ಓಡಾಡಲು ಭಯ ಪಡುವ ಸ್ಥಿತಿಯಿದ್ದು ನಾಯಿಗಳನ್ನು ಹಿಡಿಸಲು ಮಿತಿಮೀರಿರುವ ಹಂದಿಗಳನ್ನು ಊರಾಚೆ ಸಾಗಿಸುವಂತೆ ಸೂಚಿಸಲು ತೀರ್ಮಾನಿಸಲಾಯಿತು.
ಚರಂಡಿ ಸ್ವಚ್ಚಗೊಳಿಸಲು ಹಾಗೂ ಬೀದಿಬದಿಯಲ್ಲಿನ ಕಸ ಸಾಗಿಸಲು ಟ್ರಾಕ್ಟರ್ ಬಳಸಿಕೊಂಡು ಊರಾಚೆ ಕಸ ಸಾಗಿಸಲು ಒಪ್ಪಲಾಯಿತು.
       ರಾಂಗೋಪಾಲ್ ಸರ್ಕಲ್ ಹಾಗೂ ಪೆಟ್ರೋಲ್ ಬಂಕ್ ಬಳಿಯಿರುವ ಹೈಮಾಸ್ಟ್ ದೀಪವನ್ನು ಸರಿಪಡಿಸಲು ಸೂಚಿಸಲಾಯಿತು.ಕರವಸೂಲಿಗಾರರನ್ನು ಕರೆಸಿ ಕರವಸೂಲಿಮಾಡಲು ಟಾರ್ಗೆಟ್ ಫಿಕ್ಸ್ ಮಾಡಲಾಯಿತು. ಸಿಬ್ಬಂದಿಗಳ ವೇತನ ಹಾಗೂ ಸದಸ್ಯರ ಗೌರವಧನ ವಿತರಣೆ ಮಾಡಲು ಒಪ್ಪಲಾಯಿತು.
           ಪಂಚಾಯ್ತಿ ಸಿಬ್ಬಂದಿಯಲ್ಲಿನ ಸಾಧಿಕ್,ಬಿಲ್ ಕಲೆಕ್ಟರ್ ಆನಂದ್ ಮತ್ತು ಮಂಜುಳಾ ಎಂಬುವವರು ಸರಿಯಾಗಿ ಕರ್ತವ್ಯ ನಿರ್ವಹಿಸದ ಹಿನ್ನಲೆಯಲ್ಲಿ ಸಂಬಳ ತಡೆಹಿಡಿಯುವಂತೆ ಆದೇಶಿಸಲಾಯಿತು.ಕಳೆದ ಕೆಲ ತಿಂಗಳ ಹಿಂದೆ ಸಾವನ್ನಪ್ಪಿದ್ದ ಪೌರಕಾರ್ಮಿಕ ಮರಿರಂಗಯ್ಯನ ಕುಟುಂಬಕ್ಕೆ ಅನುಕಂಪದ ಆಧಾರದ ಮೇಲೆ ಅದೇ ಕೆಲಸ ಕೊಡಲು ಒಪ್ಪಿಗೆ ಪಡೆಯಲಾಯಿತು.
ನಡೆದ ಚರ್ಚೆ: ವಾಸವಿ ಶಾಲೆಯ ಬಳಿಯಿರುವ ಮಾರ್ಚುರಿ ಜಾಗವು ಪಂಚಾಯ್ತಿ ಸ್ವತ್ತಾಗಿದ್ದು ಇದನ್ನು ಕುರುಬ ಸಮಾಜಕ್ಕೆ ನೀಡಿರುವದಕ್ಕೆ ದಾಖಲೆಗಳನ್ನು ನೀಡುವಂತೆ ಸದಸ್ಯ ಕೋಳಿ ಶ್ರೀನಿವಾಸ್ ಕೇಳಿದರು.ಹದಿನೈದು ವರ್ಷಗಳ ಹಿಂದೆ ನೀಡಲಾಗಿದ್ದು ಎನ್ನಲಾಗಿರುವ ಜಾಗವನ್ನು ಈ ಹಿಂದೆ ಅಧ್ಯಕ್ಷರಾಗಿದ್ದವರು ಅಂಗನವಾಡಿಗೆ ನೀಡಿ ನಿರ್ಣಯ ಮಾಡಿದ್ದು ಸದರಿ ಜಾಗದ ಬಗ್ಗೆ ವಿವರವಾದ ದಾಖಲೆಗಳು ಬೇಕೆಂದರು.
        ಬಸ್ ನಿಲ್ದಾಣದಲ್ಲಿನ ಕೋಳಿಅಂಗಡಿಗಳವರು ಹಾಗೂ ಆಸ್ಪತ್ರೆ ಮತ್ತು ಕ್ಲಿನಿಕ್ ತ್ಯಾಜ್ಯವನ್ನು ಕೆರೆಅಂಗಳಕ್ಕೆ ತಂದು ಬಿಸಾಡುತ್ತಿದ್ದು ಈ ಬಗ್ಗೆ ಅವರಿಗೆ ಹಲವಾರು ಬಾರಿ ತಿಳಿಹೇಳಿದರೂ ಸಹ ಪುನರಾವರ್ತನೆ ಮಾಡುತ್ತಿರುವ ಕಾರಣ ಅವರಿಗೆ ನೋಟೀಸ್ ನೀಡುವಂತೆ ಸದಸ್ಯ ಹೇಮಂತ್ ಒತ್ತಾಯಿಸಿದರು.
          ಒಟ್ಟಾರೆ ಕೆಲವೊಂದು ನಿರ್ಣಯಗಳನ್ನು ಕೈಗೊಳ್ಳಲಾಯಿತಾದರೂ ಆರಂಭದಿಂದಲೂ ನಡೆದ ಗದ್ದಲಕ್ಕೆ ಬೇಸತ್ತ ಮಹಿಳಾ ಸದಸ್ಯರು ನಮಗೆ ಮಾತಾಡಲಿಕ್ಕೆ ಅವಕಾಶ ನೀಡದೆ ಗಲಾಟೆ ಮಾಡುತ್ತಿರುವುದು ಸರಿಯಲ್ಲವೆಂದು ಕಡೆಯ ಕ್ಷಣದಲ್ಲಿ ಸಭೆಯಿಂದ ಹೊರನಡೆದರು.
          ಉಪಾಧ್ಯಕ್ಷ ಗಣೇಶ್,ಪಿಡಿಓ ಸಿದ್ಧರಾಮಯ್ಯ,ಕಾರ್ಯದರ್ಶಿ ಉಮಾಮಹೇಶ್ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...