ವಿಷಯಕ್ಕೆ ಹೋಗಿ

ಕಂದಾಯ ಅಧಿಕಾರಿಗಳು ಪೇಪರ್ ಟೈಗರ್ಸ್ :ಆರ್‌ಟಿಐ ಕಾರ್ಯಕರ್ತ ಕೆಂಕೆರೆ ಹೊನ್ನಪ್ಪ ಆರೋಪ

ಪ್ರಭಾವಿಗಳ ಒಂದಿಂಚೂ ಒತ್ತೂವರಿ ಭೂಮಿ ವಶಪಡಿಸಿಕೊಡ ನಿದರ್ಶನವಿಲ್ಲ 
--------------------------
ಸುದ್ದಿ ಲೇಖಕರು :ಹೆಚ್.ಬಿ.ಕಿರಣ್ ಕುಮಾರ್
ಹುಳಿಯಾರು: ಸರ್ಕಾರಿ ಜಮೀನನ್ನು ಆಕ್ರಮವಾಗಿ ಒತ್ತುವರಿ ಮಾಡಿರುವವರ ವಿರುದ್ದ ಕ್ರಿಮಿನಲ್ ಕೇಸ್ ಹಾಕುವುದಾಗಿ ಮಾದ್ಯಮದಲ್ಲಿ ಬಹು ದೂಡ್ಡ ಪ್ರಚಾರವನ್ನು ತಿಪಟೂರು ಎ.ಸಿ.ಹಾಗೂ ಚಿ.ನಾ.ಹಳ್ಳಿ ತಹಶಿಲ್ದಾರ್ ಪ್ರಚಾರ ಪಡಿಸುತ್ತಿದ್ದಾರೆ. ಆದರೆ ಇವರಿಬ್ಬರ ಅಸಲಿ ಬಣ್ಣವೇ ಬೇರೆಯಾಗಿದೆ ಎಂದು ಆರ್‌ಟಿಐ ಕಾರ್ಯಕರ್ತ ಕೆಂಕೆರೆ ಹೊನ್ನಪ್ಪ ಅವರು ಗಂಭೀರ ಆರೋಪ ಮಾಡಿದ್ದಾರೆ.
        ಹುಳಿಯಾರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿ ಹುಳಿಯಾರು ಹೋಬಳಿ ಗೌಡಗೆರೆ ಗ್ರಾಮದ ಸರ್ವೆ ನಂ ೨೦ ರಲ್ಲಿ ೧೨ ಎಕರೆ ೧೩ ಗುಂಟೆ ಗೋಮಾಳವಿದ್ದು ಇಷ್ಟು ಜಮೀನು ಸಹ ಅಕ್ರಮವಾಗಿ ಒತ್ತುವರಿಯಾಗಿದೆ. ಈ ವಿಷಯ ತಿಳಿದಿದ್ದರೂ ಸಹ ಯಾರೂಬ್ಬರ ಮೇಲು ಕ್ರಿಮಿನಲ್ ಕೇಸ್ ಹಾಕುವುದಿರಲಿ ತೆರವುಗೂಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಆರೋಪಿಸಿದ್ದಾರೆ.
           ಈ ಸರ್ಕಾರಿ ಜಾಗದಲ್ಲಿ ಕೆಲ ಪ್ರಭಾವಿಗಳು ಇಟ್ಟಿಗೆ ಕಾರ್ಖಾಗಳನ್ನು ಅಕ್ರಮವಾಗಿ ನೆಡೆಸುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೂಳ್ಳುವಂತೆ ಕರಡಿ ಬರಪಾಳ್ಯದ ಜನರು ೧-೪-೨೦೧೬ ರಲ್ಲಿ ಎ.ಸಿ.ಕಚೇರಿಗೆ ಖುದ್ದು ಭೇಟಿ ನೀಡಿ ದೂರು ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ನಂತರ ಪದೇ ಪದೇ ಹುಳಿಯಾರಿಗೆ ಎ.ಸಿ ಯವರು ಆಗಮಿಸಿದಾಗ ಭಾರೀ ಒತ್ತಡ ತಂದರೂ ಸಹ ಕರಡಿಸಾಬರಪಾಳ್ಯದ ಜನರಿಗೆ ಕಣ್ಣು ಒರೆಸುವ ತಂತ್ರವಾಗಿ ಕೇವಲ ನೋಟಿಸ್ ನೀಡಿದ್ದಾರೆ ಎಂದು ವಿವರಿಸಿದರು.
              ಈ ವಿಚಾರ ಪತ್ರಿಕೆಯಲ್ಲಿ ಪ್ರಕಟಗೂಂಡ ನಂತರ ಮೇಲಾಧಿಕಾರಿಗಳಿಗೆ ತೆರವುಗೋಳಿಸುವುದಾಗಿ ಸುಳ್ಳು ವರದಿ ಸಲ್ಲಿಸಿ ಪ್ರಕರಣಕ್ಕೆ ಇತಿಶ್ರೀ ಹಾಡಿದ್ದಾರೆ. ಆದರೆ ಈಗಲೂ ಕೂಡ ಆಕ್ರಮವಾಗಿ ಇಟ್ಟಿಗೆ ಕಾರ್ಖಾನೆಗಳನ್ನು ನೆಡೆಯುತ್ತಿದೆಯಲ್ಲದೆ ಜಮೀನಿಗೆ ತಂತಿಬೇಲಿಯನ್ನು ಕೂಡ ಉದ್ಯಮಿಗಳು ಹಾಕಿಸಿಕೂಂಡಿದ್ದಾರೆ. ಇದೆಲ್ಲಾ ಗಮಿನಿಸಿದರೆ ಆಕ್ರಮ ಒತ್ತುವರಿದಾರರ ವಿರುದ್ದ ಕ್ರಮ ಕೈಗೊಳ್ಳುವ ನೈತಿಕ ದೈರ್ಯ ಇವರಿಬ್ಬರಿಗೆ ಇಲ್ಲಾ ಪತ್ರಿಕೆಗಳಲ್ಲಿ ಹೇಳಿಕೆ ಕೂಟ್ಟು ಪೇಪರ್ ಟೈಗರ ಆಗಿದ್ದಾರೆ ವಿನಃ ಕಾರ್ಯರೂಪಕ್ಕೆ ತಂದ ಒಂದು ನಿದರ್ಶನವಿಲ್ಲ. ಎಂದು ಕುಹಕವಾಡಿದರು.
        ಜೀವನೋಪಾಯಕ್ಕಾಗಿ ಕೃಷಿ ಮಾಡುತ್ತಿರುವ ಬಡಪಾಯಿ ರೈತರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ಕೈಗೂಳ್ಳತ್ತಾರೆ ವಿನಃ ಪ್ರಭಾವಿಗಳು, ಹಣವಂತರ ವಿರುದ್ದ ಇವರ ಅಧಿಕಾರದ ಅಸ್ತ್ರಗಳು ಕಸದ ಬುಟ್ಟಿ ಸೇರಿವೆ. ಇನ್ನಾದರೂ ಎಸಿ ಮೇಡಂ ಹಾಗೂ ತಹಸೀಲ್ದಾರ್ ಅವರಿಗೆ ಪತ್ರಿಕೆಯಲ್ಲಿ ನೀಡಿರುವ ಹೇಳಿಕೆಗೆ ಬದ್ಧರಾಗಿರಬೇಕೆಂದರೆ ಮೊದಲು ಗೌಡಗೆರೆ ವ್ಯಾಪ್ತಿಯ ಅಕ್ರಮ ಒತ್ತುವರಿದಾರರ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.