ವಿಷಯಕ್ಕೆ ಹೋಗಿ

ಭದ್ರಾ ಮೇಲ್ದಂಡೆ ಯೋಜನೆ ಪರಿಸರಕ್ಕೆ ಪೂರಕ :ಜಿಲ್ಲಾಧಿಕಾರಿ

ಯೋಜನೆಯಿಂದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ೧೯ ಕೆರೆಗಳಿಗೆ ನೀರು: ೭೧ ಹಳ್ಳಿಗೆ ಲಾಭ
----------------------------------
ಹುಳಿಯಾರು: ಭದ್ರಾ ಮೇಲ್ದಂಡೆ ಯೋಜನೆಯ ಉದ್ದೇಶಿತ ೨ನೇ ಹಂತದ ಯೋಜನೆಯಲ್ಲಿ ತಾಲ್ಲೂಕಿನ ಗಡಿಭಾಗದ ಪ್ರದೇಶವಾದ ಹೆಗ್ಗೆರೆ ಗ್ರಾಮದ ಮುಖಾಂತರ ಪ್ರವೇಶಿಸುವ ಭದ್ರಾ ಯೋಜನೆಯ ನೀರಿನಿಂದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ೧೯ ಕೆರೆಗಳಿಗೆ ನೀರು ಹರಿಯಲಿದ್ದು ಒಟ್ಟು ೭೧ ಹಳ್ಳಿಗಳಿಗೆ ಈ ಯೋಜನೆಯಿಂದ ಲಾಭವಾಗಲಿದೆ ಎಂದು ಭದ್ರಾ ಮೇಲ್ದಂಡೆ ಯೋಜನೆಯ ಚೀಫ್ ಇಂಜಿನೀಯರ್ ಆರ್.ಚೆಲುವರಾಜು ತಿಳಿಸಿದರು.
ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ಭದ್ರಾಮೇಲ್ದಂಡೆ ಏತ ನೀರಾವರಿ ಯೋಜನೆ ಕುರಿತಂತೆ ನಡೆದ ಪರಿಸರ ಸಾರ್ವಜನಿಕ ಸಭೆಯಲ್ಲಿ ತುಮಕೂರು ಜಿಲ್ಲಾಧಿಕಾರಿ ಮೋಹನ್ ರಾಜ್ ಮಾತನಾಡಿದರು.

              ಭದ್ರಾಮೇಲ್ದಂಡೆ ಏತ ನೀರಾವರಿ ಯೋಜನೆ ಕುರಿತಂತೆ ಹುಳಿಯಾರಿನ ಅಂಬೇಡ್ಕರ್ ಭವನದಲ್ಲಿ ಬುಧವಾರ ಮಧ್ಯಾಹ್ನ ತುಮಕೂರು ಜಿಲ್ಲಾಧಿಕಾರಿ ಮೋಹನ್ ರಾಜ್ ಅಧ್ಯಕ್ಷತೆಯಲ್ಲಿ ನಡೆದ ಪರಿಸರ ಸಾರ್ವಜನಿಕ ಸಭೆಯಲ್ಲಿ ಅವರು ಮಾಹಿತಿ ನೀಡಿದರು.

          .ಸಭೆಯ ಮೊದಲಿಗೆ ಭದ್ರಾಮೇಲ್ದಂಡೆ ಯೋಜನೆಯ ಕರಡು ಪರಿಸರ ಅಘಾತ ಅಂದಾಜೀಕರಣ ವರದಿಯ ಸಾರಂಶವನ್ನು ಮಂಡಿಸಲಾಯಿತು. ಸದರಿ ಯೋಜನೆ ಉದ್ದೇಶ ಹಾಗೂ ಯೋಜನೆಯಿಂದ ತುಂಬಲಿರುವ ಕೆರೆಗಳ ಪಟ್ಟಿ ಹಾಗು ಹಂತ ೨ರ ಕಾಮಗಾರಿಯ ವಿಸ್ತೃತ ವರದಿ ನೀಡಲಾಯಿತು.

                ಕುಡಿಯುವ ನೀರಿನ ಬೇಡಿಕೆ ಪೂರೈಸಲು ಹಾಗು ತುಮಕೂರು ಮತ್ತು ದಾವಣಗೆರೆ ಜಿಲ್ಲೆಗೆ ನೀರಾವಾರಿ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಹಾಲಿಯಿರುವ ಯೋಜನೆಯ ೧,೦೭,೨೬೫ ಹೆಕ್ಟೇರ್ ಪ್ರದೇಶದಿಂದ ೨,೨೫,೫೧೫ ಹೆಕ್ಟೇರ್ ಪ್ರದೇಶಕ್ಕೆ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ.ಭದ್ರಾ ಜಲಶಾಯದಿಂದ ೨೯,೯ ಟಿಎಂಸಿ ನೀರನ್ನು ಎತ್ತಿ ಚಿಕ್ಕಮಗಳೂರು, ಚಿತ್ರದುರ್ಗ ,ತುಮಕೂರು ಮತ್ತು ದಾವಣಗೆರೆ ಜಿಲ್ಲೆಯ ೭೮೭ ಹಳ್ಳಿಗಳಿಗೆ ನೀರಾವರಿ ಸೌಲಭ್ಯ ಒದಗಿಸಲು ಉದ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು.

           ಹೊಸದುರ್ಗದಿಂದ ಹರಿದುಬರುವ ಭದ್ರಾ ಹೆಗ್ಗೆರೆ ಮೂಲಕ ಚಿಕ್ಕನಾಯಕನಹಳ್ಳಿಗೆ ಪ್ರವೇಶವಾಗಲಿದ್ದು ಅಲ್ಲಿಂದ ಹುಳಿಯಾರು ಹೋಬಳಿಯ ಮೋಟ್ಟಿಹಳ್ಳಿ, ಸಿಂಗಾಪುರ , ಯಳನಾಡು, ಹುಳಿಯಾರು, ಚಿಕ್ಕಬಿದರೆ, ತಿಮ್ಮನಹಳ್ಳಿ, ಗಾಣದಾಳು ಮಾರ್ಗವಾಗಿ ಬೆಳ್ಳಾರ ಮೂಲಕ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಸೇರಲಿದೆ.
          ಹುಳಿಯಾರು ಹೋಬಳಿಯ ಕೆರೆಸೂರಗೊಂಡನಹಳ್ಳಿ, ಹುಳಿಯಾರು, ತಿಮ್ಲಾಪುರ, ಮರೆನಾಡು, ಸಿಂಗಾಪುರ, ಯಳನಾಡು, ಕುರಿಹಟ್ಟಿ, ಕೆಂಕೆರೆ ತೊರೆಸೂರಗೊಂಡಹಳ್ಳಿ, ಬೋರನಕಣಿವೆ, ದಸೂಡಿ, ಗುರುವಾಪುರ, ಚಿಕ್ಕಬಿದರೆ ಕೆರೆಗಳಿಗೆ ನೀರು ಹರಿಯಲ್ಲಿದೆ ಎಂದು ಮಾಹಿತಿ ನೀಡಿದರು.

         ನಂತರ ಸಾರ್ವಜನಿಕರ ಪರವಾಗಿ ರೈತಸಂಘದ ತಮ್ಮಡಿಹಳ್ಳಿ ಮಲ್ಲಿಕಣ್ಣ, ದಬ್ಬಗುಂಟೆ ರುದ್ರೇಶ್, ಯಳನಾಡಿನ ಗುರುಪ್ರಸಾದ್, ವೈ.ಆರ್.ಮಲ್ಲಿಕಾರ್ಜುನಯ್ಯ ಮತ್ತು ದಯಾನಂದ್, ಹುಳಿಯಾರು ಎಲ್.ಆರ್.ಚಂದ್ರಶೇಖರ್ ಮತ್ತಿತರರು ಮಾತನಾಡಿ ಯೋಜನೆಯ ಒಟ್ಟು ಕಾಲಾವಧಿ, ಯೋಜನೆಗೆ ಸ್ವಾಧೀನಕ್ಕೆ ಒಳಗಾಗುವ ಭೂಮಿಯ ವಿವರ, ರೈತರಿಗೆ ಸಿಗಲಿರುವ ಪರಿಹಾರದ ಮೊತ್ತ , ವಸತಿಕಳೆದುಕೊಳ್ಳಲಿರುವ ರೈತರಿಗೆ ಪುರ್ನವಸತಿ, ಹಾಗೂ ಕಾಲುವೆ ಹಾದುಹೋಗುವ ಜಾಗದಲ್ಲಿ ಕೆಲವೊಂದು ಗ್ರಾಮಗಳ ಕೆರೆಗಳನ್ನ ಕೈಬಿಟ್ಟಿರುವ ಬಗ್ಗೆ ಚರ್ಚೆ ನಡೆಸಿ ಜಿಲ್ಲಾಧಿಕಾರಿಗಳ ಗಮನ ಸೆಳೆದರು.

            ಸಾರ್ವಜನಿಕರ ಅಕ್ಷೇಪಣೆಯನ್ನ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಯೋಜನೆಯು ಇಲ್ಲಿನ ಪರಿಸರಕ್ಕೆ ಪೂರಕವಾಗಿದ್ದು ಯಾವುದೆ ಹಾನಿಯಾಗುವುದಿಲ್ಲ.ಭೂ ಸ್ವಾಧೀನ ಪಡಿಸಿಕೊಳ್ಳುವ ರೈತರಿಗೆ ೨೦೧೩ರ ಹೊಸ ಕಾಯ್ದೆಯಂತೆ ಪರಿಹರ ನೀಡಲಾಗುವುದು.ಕೆಲವೊಂದು ಗ್ರಾಮಗಳ ಕೆರೆಯನ್ನು ತುಂಬಿಸಲು ಅವಕಾಶವಿದ್ದಾಗ್ಯೂ ಕೈಬಿಟ್ಟಿರುವುದನ್ನು ಮತ್ತೆ ಸೇರ್ಪಡೆ ಮಾಡುವಂತೆ ಸಲಹೆ ನೀಡಿದರು. ರೈತರಿಗೆ ಸಮರ್ಪಕವಾದ ಮಾಹಿತಿ ನೀಡುವುದು ನಿಮ್ಮಗಳ ಜವಬ್ದಾರಿಯಾಗಿದ್ದು ಮತ್ತೊಂದು ಸಭೆ ನಡೆಸಿ ಯೋಜನೆಯಿಂದ ಬಾಧಿತವಾಗಲಿರುವ ಗ್ರಾಮಗಳ ಬಗ್ಗೆ ಮಾಹಿತಿ ನೀಡುವಂತೆ ಹಾಗೂ ಭೂಸ್ವಾಧಿನದ ಬಗ್ಗೆ ತಾಲ್ಲೂಕ್ ವ್ಯಾಪ್ತಿಯಲ್ಲಿ ಕಛೇರಿ ತೆರೆಯುವಂತೆ ತಿಳಿಸಿದರು.

         ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಮುಖ್ಯ ಇಂಜಿನೀಯರ್ ಆರ್.ಚೆಲುವರಾಜು,ಯೋಜನಾಧಿಕಾರಿ ಎಸ್.ಎಲ್.ಮೋಹನ್ ಕುಮಾರ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ಎಂ.ಕೆ.ಪ್ರಭುದೇವ್, ತುಮಕೂರು ಪ್ರಾದೇಶಿಕ ಅಧಿಕಾರಿ ಭೀಮಸಿಂಗ್ ಗೋಗಿ, ಉಪವಿಭಾಗಾಧಿಕಾರಿ ಪ್ರಜ್ಞಾ ಅಮ್ಮೆಂಬಳ, ತಹಸೀಲ್ದಾರ್ ಗಂಗೇಶ್, ಜಿ.ಪಂ.ಸದಸ್ಯ ಸಿದ್ದರಾಮಣ್ಣ, ಗ್ರಾಪಂ ಅಧ್ಯಕ್ಷೆ ಗೀತಾಪ್ರದೀಪ್, ಉಪಾಧ್ಯಕ್ಷ ಗಣೇಶ್ ಸೇರಿದಂತೆ ಗ್ರಾಪಂ ಸದಸ್ಯರು, ರೈತಸಂಘದ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
-----------------
ಭದ್ರಾ ಮೇಲ್ದಂಡೆ ಯೋಜನೆಯಿಂದ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಹೋಬಳಿಯಲ್ಲಿಯೇ ಹೆಚ್ಚಿನ ನೀರು ಹರಿಯಲಿದ್ದು. ೧೯ ಕೆರೆಗಳು ನೀರು ತುಂಬಲಿದ್ದು ಒಟ್ಟು ೭೧ ಹಳ್ಳಿಗಳು ಈ ಯೋಜನೆ ಲಾಭವನ್ನು ಪಡೆಯಲಿವೆ.
-------------------
ಹುಳಿಯಾರು ಹೊರತುಪಡಿಸಿದರೆ ಹೋಬಳಿಯ ಇನ್ನಿತರ ೯ ಗ್ರಾಪಂ ವ್ಯಾಪ್ತಿಯ ಯಾವುದೆ ಹಳ್ಳಿಗಳಿಗೆ ಮಾಹಿತಿ ತಿಳಿಸಿಲ್ಲ. ಸದರಿ ಗ್ರಾಮದ ರೈತರುಗಳಿಗೆ ಯೋಜನೆ ಬಗ್ಗೆ ಮತ್ತೊಂದು ಸಭೆ ನಡೆಸಿ ಮಾಹಿತಿ ನೀಡಿ.ಯೋಜನೆ ಹಾದುಹೋಗಲಿರುವ ಗ್ರಾಮಗಳ ನಕ್ಷೆ ನೀಡಿ : ರುದ್ರೇಶ್, ಕೃಷಿ ಮಾರುಕಟ್ಟೆ ನಿದೇರ್ಶಕ .

------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...