ವಿಷಯಕ್ಕೆ ಹೋಗಿ

ಕೊಬ್ಬರಿ ಬೆಂಬಲ ಬೆಲೆ ಆಗ್ರಹಿಸಿ ಆಹೋರಾತ್ರಿ ಧರಣಿ ಶುರು

------------------------------
೧೫೦೦೦ರೂ ಬೆಂಬಲ ಬೆಲೆ ಘೋಷಣೆಯಾಗುವವರೆಗೂ ಸ್ಥಳದಿಂದ ಕದಲುವುದಿಲ್ಲ
--------------------------
ಹುಳಿಯಾರು:ರಾಜ್ಯದಲ್ಲಿ ತೆಂಗು ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದು ಸತತ ಬರಗಾಲದ ಹಿನ್ನೆಲೆಯಲ್ಲಿ ತೆಂಗಿನ ಬೆಳೆಯಲ್ಲಿ ಹಾಗೂ ಬೆಲೆಯಲ್ಲೂ ಕೂಡ ಕುಸಿತವಾಗಿದೆ. ಆದ್ದರಿಂದ ಹಾಲಿಯಿರುವ ೬೨೪೦ ರೂ ಗಳ ಬೆಂಬಲಬೆಲೆಯನ್ನು ೧೫೦೦೦ ರೂ ಗಳಿಗೆ ಏರಿಸುವ ಮೂಲಕ ರೈತರ ನೆರವಿಗೆ ಕೇಂದ್ರ ಹಾಗೂ ರಾಜ್ಯ ಸರಕಾರ ಬರಬೇಕು ಎಂದು ಒತ್ತಾಯಿಸಿ ಹುಳಿಯಾರಿನ ಎಪಿಎಂಸಿ ಮುಂದೆ ನ.೧೧ ರ ಶುಕ್ರವಾರದಿಂದ ಕರ್ನಾಟಕ ರಾಜ್ಯ ರೈತಸಂಘದ ವಿವಿಧ ತಾಲ್ಲೂಕಿನ ರೈತರು ಅಹೋರಾತ್ರಿ ಧರಣಿ ಆರಂಭಿಸಿದ್ದು ಯಾವುದೇ ಕಾರಣಕ್ಕೂ ಬೆಂಬಲಬೆಲೆ ಘೋಷಣೆಯಾಗುವವರೆಗೂ ಸ್ಥಳದಿಂದ ಕದಲುವುದಿಲ್ಲ ಎಂದು ಎಚ್ಚರಿಸಿದ್ದಾರೆ.

         ಪ್ರವಾಸಿಮಂದಿರದ ಬಳಿ ಸೇರಿದ್ದ ನೂರಾರು ರೈತರು ಸರ್ಕರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಮೂಲಕ ಎಪಿಎಂಸಿಗೆ ಆಗಮಿಸಿದರು.ಎಪಿಎಂಸಿಯ ಮುಖ್ಯದ್ವಾರದಲ್ಲಿ ಷಾಮಿಯಾನ ಹಾಕಿರುವ ರೈತರು ಪಾತ್ರೆಪಡಗಳನ್ನು ತಂದು ಅಡುಗೆ ಮಾಡಿ ಸ್ಥಳದಲ್ಲೆ ಮೊಕ್ಕಾಂ ಹೂಡಿದ್ದಾರೆ.

      ನಂತರ ಮಾತನಾಡಿದ ರಾಜ್ಯ ರೈತಸಂಘದದ ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧನಂಜಯಾರಾಧ್ಯ ನಿನ್ನೆ ನಡೆದ ಗುರುವಾರದ ಹರಾಜಿನಲ್ಲಿ ೬೧೧೧ರಂತೆ ಕೊಬ್ಬರಿ ಖರೀದಿಸಲಾಗಿದ್ದು ಇದು ಸರ್ಕಾರದ ಹಾಲಿ ಬೆಲೆ ಬೆಂಬಲ ಬೆಲೆಗಿಂತ ೧೨೯ ರೂ ಕಡಿಮೆಯಾಗಿದೆ.ಬೆಂಬಲ ಬೆಲೆಗಿಂತ ಕಡಿಮೆಗೆ ಕೊಬ್ಬರಿ ಮಾರಾಟವಾದರೆ ಸರ್ಕಾರ ಮಧ್ಯಪ್ರವೇಶಿಸಿ ನಾಫೆಡ್‌ ಮೂಲಕ ಕೊಬ್ಬರಿ ಖರೀದಿಸಬೇಕಿದ್ದು ಈ ಬಾರಿ ಬೆಂಬಲ ಬೆಲೆಯನ್ನು ೬೨೪೦ರ ಬದಲು ೧೫೦೦೦ ದರ ನಿಗದಿಪಡಿಸಿ ಖರೀದಿಸಬೇಕು .ಇದಕೊಪ್ಪದಿದ್ದಲ್ಲಿ ಎಪಿಎಂಸಿಯಲ್ಲಿ ಒಂದು ಕೆಜಿಯಷ್ಟು ಕೊಬ್ಬರಿ ಖರೀದಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.
       ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್ ಮಾತನಾಡಿ ಕೊಬ್ಬರಿಗೆ ಬೆಂಬಲ ಬೆಲೆಯ ಬಗ್ಗೆ ಸರ್ಕಾರದ ಭರವಸೆಗಳೆಲ್ಲಾ ಹುಸಿಯಾದ ಹಿನ್ನಲೆಯಲ್ಲಿ ಈ ನಿರಂತರ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದ್ದು ಸರ್ಕಾರವೇ ಸ್ಥಳಕ್ಕೆ ಬಂದು ಕೊಬ್ಬರಿಗೆ ಬೆಂಬಲ ಬೆಲೆ ೧೫ ಸಾವಿರ ರೂ ಘೋಷಣೆ ಮಾಡುವವರೆಗೂ ಈ ಬಾರಿ ಚಳುವಳಿ ನಿಲ್ಲುವುದಿಲ್ಲ ಎಂದರು.

   ಧರಣಿಯಲ್ಲಿ ತಿಪಟೂರು ತಾಲ್ಲೂಕ್ ಜಿಲ್ಲಾಧ್ಯಕ್ಷ ಶಂಕರಪ್ಪ,ಶಿರಾ ತಾಲ್ಲೂಕ್ ಅಧ್ಯಕ್ಷ ಪರಮಶಿವಯ್ಯ,ಉಪಾಧ್ಯಕ್ಷ ದ್ಯಾಮೇಗೌಡ,ಚಿಕ್ಕನಾಯಕನಹಳ್ಳಿ ತಾಲ್ಲೂಕ್ ಅಧ್ಯಕ್ಷ ತಿಮ್ಮನಹಳ್ಳಿ ಲೋಕಣ್ಣ,ಉಪಾಧ್ಯಕ್ಷ ತಮ್ಮಡಿಹಳ್ಳಿ ಮಲ್ಲೀಕಣ್ಣ ,ತಾಲ್ಲೂಕ್ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬರಗೂರು ಬಸವರಾಜು, ಎಪಿಎಂಸಿ ನಿರ್ದೇಶಕ ರುದ್ರೇಶ್,ಕಾಡಿನರಾಜ ನಾಗರಾಜು,ದಬ್ಬಗುಂಟೆ ರವಿಕುಮಾರ್,ರಾಮಕೃಷ್ಣಪ್ಪ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕಿನ ರೈತರುಗಳು ಪಾಲ್ಗೊಂಡಿದ್ದರು. 

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...