ವಿಷಯಕ್ಕೆ ಹೋಗಿ

ರೈತರ ಧರಣಿ ಬೆಂಬಲಿಸಿ ರಸ್ತೆಗಿಳಿದ ಯಳನಾಡು ಸ್ವಾಮೀಜಿ

ಹುಳಿಯಾರು: ಕೊಬ್ಬರಿಗೆ ಬೆಲೆಗಾಗಿ ರೈತರು ಹುಳಿಯಾರಿನ ಕೃಷಿಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿಯು ಮಂಗಳವಾರದಂದು ೧೯ನೇ ದಿನಕ್ಕೆ ಕಾಲಿಟ್ಟಿದ್ದು ದಿನೇದಿನೇ ಧರಣಿಯ ತೀವ್ರತೆ ಹೆಚ್ಚಾಗುತ್ತಿದ್ದು ಹಳ್ಳಿಹಳ್ಳಿಗೆ ವ್ಯಾಪಿಸುತ್ತಿದ್ದು ಇಂದಿನ ಧರಣಿಗೆ ಸ್ವಾಮೀಜಿಗಳೆ ಬೀದಿಗಿಳಿದು ನೇತೃತ್ವ ವಹಿಸಿದ್ದು ವಿಶೇಷವಾಗಿತ್ತು.

            ಇಂದಿನ ಧರಣಿಯಲ್ಲಿ ಯಳನಾಡು ಅರಸೀಕೆರೆ ಸಂಸ್ಥಾನದಶ್ರೀಗಳಾದ ಜ್ಞಾನಪ್ರಭು ಸಿದ್ಧರಾಮದೇಶಿಕೇಂದ್ರ ಸ್ವಾಮಿಗಳ ನೇತೃತ್ವದಲ್ಲಿ ಬೈಕ್ ರ್ಯಾಲಿ ನಡೆಸಿದ ಯಳನಾಡು ಭಾಗದ ರೈತರುಗಳು ನಂತರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಅರ್ಧಗಂಟೆ ಸಮಯ ರಸ್ತೆ ತಡೆನಡೆಸಿ ನಂತರ ಧರಣಿ ಸ್ಥಳಕ್ಕೆ ಆಗಮಿಸಿ ಧರಣಿನಿರತರೊಂದಿಗೆ ಪಾಲ್ಗೊಂಡರು.

         ಈ ಸಮಯದಲ್ಲಿ ವರ್ತಕರ ಸೋಗಲಾಡಿತನದ ಬಗ್ಗೆ ಪ್ರಶ್ನಿಸಿದ ರೈತ ನಾಗಣ್ಣನ ಮಾತು ಸ್ಥಳದಲ್ಲಿ ಜೋರುಗದ್ದಲಕ್ಕೆ ಕಾರಣವಾಯಿತು.ಸ್ವಾಮೀಜಿಗಳ ಉಪಸ್ಥಿತಿಯಲ್ಲಿಯೇ ನಫೆಡ್ ಪ್ರಾರಂಭವಾಗದಂತೆ ಕೊಬ್ಬರಿ ಬೆಲೆ ಏರಿಸಿರುವ ವರ್ತಕರ ಕ್ರಮದ ಬಗ್ಗೆ ರೈತ ಹೋರಾಟಗಾರರು ಮತ್ತು ಕೃಷಿಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರ ನಡುವೆ ಕೆಲವು ಸಮಯ ಮಾತಿನ ಜಟಾಪಟಿ ನಡೆದು ಎಲ್ಲರಲ್ಲೂ ಗೊಂದಲ ಮೂಡಿಸಿತು.

            ರೈತ ಸಂಘದ ನಾಗಣ್ಣ ಮಾತನಾಡಿ ನಾವು ಧರಣಿ ಪ್ರಾರಂಭಿಸುವಾಗ ೫೦೧೧ ರೂ ಕುಸಿತಕಂಡಿದ್ದ ಕೊಬ್ಬರಿಯ ಬೆಲೆಗೆ ನಮ್ಮ ಹೋರಾಟ ನಡೆದು ಅದರ ಫಲವಾಗಿ ನಫೇಡ್ ಪ್ರಾರಂಭಿಸುವುದಾಗಿ ಸರಕಾರವು ಘೋಷಿಸಿದೆ ಹೀಗಿರುವಾಗ ಈಗ ಏಕಾಏಕಿ ವರ್ತಕರು ಕೊಬ್ಬರಿ ಬೆಲೆಗೆ ೬೫೩೬ ರೂ ನಿಗದಿ ಪಡಿಸಿ ದರ ಪ್ರಕಟಿಸಿರುವುದು ಸರಕಾರದವರು ನಫೇಡ್ ತೆರೆಯದಂತೆ ಮಾಡಿರುವ ತಂತ್ರವಾಗಿದೆ.ವರ್ತಕರು ಮಾಡಿರುವ ಈ ಕ್ರಮ ಸರಿಯೇ ಎಂದು ಹರಿಹಾಯ್ದ ಅವರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಮಂಡಳಿಯು ಇದಕ್ಕೆ ಸಹಕಾರ ನೀಡಿ ಈಗ ಮೌನವಹಿಸಿರುವುದು ಸರಿಯಲ್ಲವೆಂದು ಅಕ್ರೋಶ ವ್ಯಕ್ತಪಡಿಸಿದರು.

           ಇದಕ್ಕೆ ಧ್ವನಿಗೂಡಿಸಿದ ಯಳನಾಡು ಲೊಕೇಶ್ ಸುಮ್ಮನೆ ಕೂತು ಧರಣಿ ನಡೆಸಿದರೆ ಪ್ರಯೋಜನವಿಲ್ಲಾ. ಮಾರುಕಟ್ಟೆಯಲ್ಲಿನ ವರ್ತಕರು ಅಂಗಡಿಗಳನ್ನ ತೆಗೆದು ವ್ಯಾಪಾರ ನಡೆಸದಂತೆ ಅಂಗಡಿಗಳನ್ನು ಬಂಧ್ ಮಾಡಿಸಿ ಎಂದು ಸಿಡಿದೆದ್ದರು.

           ಧರಣಿ ಸ್ಥಳದಲ್ಲಿಯೆ ಇದ್ದ ಮಾರುಕಟ್ಟೆಯ ಆಡಳಿತ ಮಂಡಳಿಯ ಅಧ್ಯಕ್ಷ ಬರಗೂರುಬಸವರಾಜು ಪ್ರತಿಕ್ರಿಯಿಸಿ ಮಾರುಕಟ್ಟೆಯಲ್ಲಿ ಕೊಬ್ಬರಿಗೆ ಬೆಲೆ ನಿಗದಿಪಡಿಸುವುದು ವರ್ತಕರೆ ವಿನ: ಮಾರುಕಟ್ಟೆಯ ಆಡಳಿತಮಂಡಳಿಯ ಸದಸ್ಯರಲ್ಲ.ಈ ಕಚೇರಿಯ ಮುಂದೆನೆ ನೀವು ಧರಣಿ ನಡೆಸಲು ನಾವು ಸಹಕಾರ ನೀಡುತ್ತಿದ್ದು ನಾವು ಸಹ ನಿಮ್ಮೊಂದಿಗೆ ನಿತ್ಯ ಧರಣಿಯಲ್ಲಿ ಪಾಲ್ಗೊಳ್ಳುತ್ತಿದ್ದು ನಿಮ್ಮ ಅಪಾದನೆಯಲ್ಲಿ ಹುರುಳಿಲ್ಲ.ತೆಂಡರ್ ನಲ್ಲಿ ಕೊಬ್ಬರಿ ಬೆಲೆಯನ್ನು ವರ್ತಕರು ಹೆಚ್ಚಿಸದಂತೆ ನೀವೇ ತಡೆಯಬೇಕಿತ್ತು ಎಂದರಲ್ಲದೆಮಾರುಕಟ್ಟೆಯಲ್ಲಿನ ವರ್ತಕರ ಅಂಗಡಿಗಳನ್ನು ನಾವು ಬಂದ್ ಮಾಡಿಸಲು ಸಾಧ್ಯವಿಲ್ಲ. ನೀವೆ ಬಂದ್ ಮಾಡಿಸಿ, ನಾವು ಸಹಾ ನಿಮ್ಮ ಜೊತೆಯಲ್ಲಿ ಬರುತ್ತೇವೆ. ನಮ್ಮ ಆಡಳಿತ ಮಂಡಳಿಯು ರೈತರ ಪರವಾಗಿಯೇ ನಿಲ್ಲುತ್ತದೆ ಎಂದರು.

         ನಂತರ ಜ್ಞಾನಪ್ರಭು ಸಿದ್ದರಾಮದೇಶಿಕೇಂದ್ರ ಸ್ವಾಮೀಜಿ ಮಾತನಾಡಿ ರೈತರು ತಮ್ಮಲ್ಲಿನ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಮೊದಲು ಸಂಘಟಿತರಾಗಿ .ರೈತರು ಬೆಳೆದ ಬೆಳೆಗೆ ಸಮರ್ಪಕವಾದ ಬೆಲೆ ಸಿಗದಿದ್ದ ಮೇಲೆ ಏಕೆ ಕೃಷಿ ಕಾರ್ಯ ನಿರ್ವಹಿಸ ಬೇಕು, ರೈತರೆಲ್ಲಾ ಒಟ್ಟಾಗಿ ಕೃಷಿ ಕಾರ್ಯವನ್ನು ತ್ಯಜಿಸಿದರೆ ಮುಂದೊಂದು ದಿನ ದೇಶದಲ್ಲಿ ಆಹಾರ ಉತ್ಪಾದನೆಯ ಸಮಸ್ಯೆ ತಲೆದೋರಿ ಸರಕಾರಗಳೆ ರೈತರನ್ನ ಹುಡುಕಿಕೊಂಡು ಬರುವಂತ ದಿನಗಳು ಬರಲಿವೆ.ಆದುದರಿಂದ ಸರಕಾರಗಳು ಈಗಲಾದರು ಎಚ್ಚೆತ್ತುಕೊಂಡು ರೈತರು ಬೆಳೆಯುವ ಬೆಲೆಗೆ ಸಮಪರ್ಕವಾದ ಬೆಲೆಯನ್ನು ನೀಡಲು ಮುಂದಾಗುವಂತೆ ತಿಳಿಸಿದರು.
            ರೈತರು ಅವರಿವರ ಮೇಲೆ ಆರೋಪ ಮಾಡುವುದನ್ನು ಬಿಟ್ಟು ಎಲ್ಲರೂ ಒಗ್ಗಟಾಗಿ ಮಾರುಕಟ್ಟೆಗೆ ಕೊಬ್ಬರಿಯ ತರುವುದನ್ನು ನಿಲ್ಲಿಸಿ, ಆಗ ವರ್ತಕರು ನಿಮ್ಮ ದಾರಿಗೆ ಬರುತ್ತಾರೆಂದರು.ಇಂದು ನಾವು ಕುಡಿಯುವ ನೀರಿನ ಬಾಟಲ್ ಬೆಲೆ ೧೫ರೂ ಇದೆ ಆದರೆ ರೈತರು ವರ್ಷಗಟ್ಟೆಲೆ ಬೆವರು ಸುರಿಸಿ ಬೆಳೆಯುವ ಎಳನೀರಿನ ಬೆಲೆ ಮತ್ತು ಕಾಯಿ ೮ ರೂ ಅಂದರೆ ರೈತರ ಶ್ರಮಕ್ಕೆ ಬೆಲೆ ಎಲ್ಲಿದೆ ಎಂದರು.


              ರೈತರು ಬೆಳೆದ ಬೆಳೆಗೆ ನ್ಯಾಯಯುತವಾದ ಬೆಲೆಸಿಗದಂತ ಸ್ಥಿತಿ ಇಂದು ನಿರ್ಮಾಣಗೊಂಡಿದೆ.ಇದೇ ಪರಿಸ್ಥಿತಿ ಮುಂದುವರಿದಲ್ಲಿ ಹಳ್ಳಿಯಲ್ಲಿ ಇರುವ ಅಲ್ಪಸ್ವಲ್ಪ ರೈತರು ಸಹಾ ಕೃಷಿಯನ್ನ ಬಿಟ್ಟು ನಗರ ಪ್ರದೇಶಗಳಿಗೆ ವಲಸೆ ಹೋಗುವಂತಹ ಸ್ಥಿತಿ ನಿರ್ಮಾಣಗೊಳ್ಳಲಿದೆ ಎಂದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...