ವಿಷಯಕ್ಕೆ ಹೋಗಿ

ಕನ್ನಡ ಕಟ್ಟುವವರು ಕೇವಲ ಸಾಹಿತಿಗಳಷ್ಟೆ ಅಲ್ಲ: ಬಿಳಿಗೆರೆ ಕೃಷ್ಣಮೂರ್ತಿ

ಹುಳಿಯಾರು:ಕನ್ನಡ ಕಟ್ಟುವವರು ಕೇವಲ ಸಾಹಿತಿಗಳಷ್ಟೆ ಅಲ್ಲ. ಬೀದಿಗಳಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳುವಂತಹ ಜನ ಕೂಡ ಕನ್ನಡಕ್ಕೆ ಹೋರಾಟ ಮಾಡುತ್ತಿದ್ದಾರೆ.ಕನ್ನಡವನ್ನು,ಕನ್ನಡ ನಾಡನ್ನು ಕೇವಲ ಭಾಷೆಯನ್ನಾಗಿ ನೋಡಬಾರದು.ಇದು ಒಂದು ಬದುಕು.ಕನ್ನಡದ ಬದುಕು ಕೃಷಿಯ ಬದುಕು,ಗಾಳಿಯ ಬದುಕು,ನೀರಿನ ಬದುಕು.ಸಾಹಿತಿಗಳು,ರಂಗಭೂಮಿಯವರು, ಸಿನಿಮಾದವರಷ್ಟೆ ಕನ್ನಡದ ಬಗ್ಗೆ ಕಾಳಜಿಯಿರುವವರು ಎಂದಲ್ಲ .ಪ್ರಾಮಾಣಿಕವಾಗಿ ಎಲ್ಲರು ಅವರವರ ವೃತ್ತಿಯನ್ನು ನಿಭಾಯಿಸಿದರೆ ಅದು ಕನ್ನಡ ನಾಡಿಗೆ ಕೊಡುವ ಕೊಡುಗೆ ಎಂದು ಸಾಹಿತಿ ಬಿಳಿಗೆರೆ ಕೃಷ್ಣಮೂರ್ತಿ ತಿಳಿಸಿದರು.

         ಹುಳಿಯಾರಿನ ಕರ್ನಾಟಕ ರಕ್ಷಣಾವೇದಿಕೆವತಿಯಿಂದ ಮಂಗಳವಾರದಂದು ಆಚರಿಸಲಾದ ಕನ್ನಡರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
         ಕನ್ನಡ ಎಂಬುದು ಕೇವಲ ಭಾಷೆಯಲ್ಲ.ಅದು ನೆಲ ಜಲಕ್ಕೆ ಸಂಬಂಧಿಸಿದ ವಿಚಾರ.ನಾವು ಕೇವಲ ಭಾಷೆಗೆ ಅಧ್ಯತೆ ಕೊಡುತ್ತಿದ್ದು ಭಾಷೆ ಎನ್ನುವುದು ಕೇವಲ ಸಂಪರ್ಕಕ್ಕೆ ಬೇಕಾಗಿರುವ ವಿನಿಮಯ ಸಾಧನವಷ್ಟೆ.ಇಂಗ್ಲೀಷನ್ನು ಕೂಡ ಜಗತ್ತನ್ನು ಅರಿಯುವ ಭಾಷೆಯನ್ನಾಗಿ ನೋಡಬೇಕೆಂದರು.ಹಳ್ಳಿಯಲ್ಲಿ ಮಾತ್ರ ಕನ್ನಡ ತೇರನ್ನೆಳೆಯಿರಿ ಎನ್ನುವ ಜನ ನಗರದದಲ್ಲಿ ಇಂಗ್ಲಿಷ್ ಭಾಷೆಗೆ ಅಡಿಯಾಳಾಗಿ ವರ್ತಿಸುತ್ತಾ ಕನ್ನಡವನ್ನು ಎರಡನೇ ಸ್ಥಾನಕ್ಕೆ ತಳ್ಳಿರುವುದು ಸರಿಯಲ್ಲ ಎಂದರು.
           ಕುವೆಂಪು ,ಬೇಂದ್ರೆ ಹೆಸರು ಹೇಳುತ್ತಾ ಕನ್ನಡ ಬಾವುಟ ಹಾರಿಸುತ್ತಾ ,ಜಯಘೋಷಗಳನ್ನು ಕೂಗಿದರೆ ಪ್ರಯೋಜನವಿಲ್ಲ. ಅವರ ಹಾಡುಗಳನ್ನು ಕಲಿಯಬೇಕು.ಅವರ ಸಾಹಿತ್ಯವನ್ನು ಓದಬೇಕು. ಕನ್ನಡ ಭಾಷೆಯ ಏಳಿಗೆಗಾಗಿ, ಉಳಿವಿಗಾಗಿ ಕನ್ನಡ ಪತ್ರಿಕೆಗಳನ್ನು,ಪುಸ್ತಕಗಳನ್ನು ಕೊಂಡು ಓದುವುದನ್ನು ಪ್ರತಿಯೊಬ್ಬರು ರೂಢಿಸಿಕೊಳ್ಳಬೇಕೆಂದರು.ಓದುವ ಸಂಸ್ಕೃತಿಯನ್ನು ದೊಡ್ಡಪ್ರಮಾಣದಲ್ಲಿ ಬೆಳಸಿಕೊಳ್ಳಬೇಕು.ಹಾಗಾದಾಗ ಮಾತ್ರ ಕನ್ನಡ ಕಟ್ಟುವ ಕೆಲಸವಾಗುತ್ತದೆ ಎಂದರು.
          ಇಂಗ್ಲೀಷ್ ಭಾಷೆಯ ವ್ಯಾಮೋಹ ಬಿಟ್ಟು ನಮ್ಮ ಮಾತೃ ಭಾಷೆ ಕನ್ನಡ ನಶಿಸದ ರೀತಿಯಲ್ಲಿ ಕಾಪಾಡಿಕೊಳ್ಳವ ಮೂಲಕ ಪ್ರತಿಯೊಬ್ಬ ಕನ್ನಡಿಗರು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಂತ ಕಾರ್ಯವನ್ನು ಮಾಡಬೇಕಿದೆ.ಕನ್ನಡದ ಬಗೆಗಿನ ಕಾಳಜಿವಹಿಸಿ ಕನ್ನಡ ಉಳಿಸಿ ಬೆಳಸುವ ಕಾರ್ಯವನ್ನು ಮಾಡುತ್ತಿರುವ ಕರವೇಯಂತಹ ಸಂಘಟನೆಯ ಕಾರ್ಯ ಶ್ಲಾಘನೀಯ ಎಂದರು.

         ಸಮಾರಂಭದಲ್ಲಿ ಕರವೇ ಅಧ್ಯಕ್ಷ ಕೋಳಿ ಶ್ರೀನಿವಾಸ್,ಜಯಕನಾಟಕದ ಮೋಹನ್ ಕುಮಾರ್, ಪದಾಧಿಕಾರಿಗಳಾದ ಮೆಡಿಕಲ್ ಚನ್ನಬಸವಯ್ಯ,ಬಾಳೆಕಾಯಿ ಲಕ್ಷ್ಮೀಕಾಂತ್, ಕಲಾವಿದ ಗೌಡಿ,ರಂಗಸ್ವಾಮಿ,ಕುಮಾರ್,ಚನ್ನಕೇಶವ ಮಂಜುನಾಥ್, ಅಂಜನಕುಮಾರ್, ಮುರಳಿ, ರಘು, ಸಂತೋಷ್, ಪರಪ್ಪ ಮುಂತಾದವರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...

​ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ

ಹುಳಿಯಾರು ಕಸ ವಿಲೇವಾರಿ ಬಿಕ್ಕಟ್ಟು: ನಾಡಕಚೇರಿ ಮುಂದೆ ಕಸ ಸುರಿಯುವ ಯತ್ನ, ಅಧಿಕಾರಿಗಳಿಂದ 15 ದಿನಗಳಲ್ಲಿ ಶಾಶ್ವತ ಪರಿಹಾರದ ಭರವಸೆ ವರದಿ : ಡಿ.ಆರ್‌.ನರೇಂದ್ರಬಾಬು-ಹುಳಿಯಾರು ​ ಹುಳಿಯಾರು : ದೀರ್ಘಕಾಲದಿಂದ ಬಗೆಹರಿಯದ ಕಸ ವಿಲೇವಾರಿ ಘಟಕದ ಸಮಸ್ಯೆ ಹಾಗೂ ಪಟ್ಟಣದ ಮೂಲಸೌಕರ್ಯಗಳ ಕೊರತೆ ಖಂಡಿಸಿ, ಹುಳಿಯಾರಿನ ರೈತ ಸಂಘ ಕಳೆದ 19 ದಿನಗಳಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ನಡೆಯುತ್ತಿರುವ ಅಹೋರಾತ್ರ ಧರಣಿಗೆ ಬೆಂಬಲಿಸಿ ಇಂದು ವಿವಿಧ ಸಂಘ-ಸಂಸ್ಥೆಗಳು ಮತ್ತು ನಾಗರಿಕರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಬಂದು ನಾಡಕಚೇರಿ ಮುಂದೆ ಸುರಿಯಲು ಯತ್ನಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು . ​ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್.) ಪಕ್ಷ ಸೇರಿದಂತೆ ಹಲವು ಸಂಘಟನೆಗಳ ಬೆಂಬಲದೊಂದಿಗೆ ನಡೆದ ಈ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಪಟ್ಟಣ ಪಂಚಾಯಿತಿ ಮುಂದೆ ತಹಸಿಲ್ದಾರ್ ,ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿಗಳು ಸೇರಿಕೊಂಡು ಪ್ರತಿಭಟನಾಕಾರದೊಂದಿಗೆ ಗಂಟಗಟ್ಟಲೆ ಸಮಾಲೋಚಿಸಿದರು. ಮೂರು ಬೇಡಿಕೆಗಳಲ್ಲಿ ಎರಡು ಬೇಡಿಕೆ ಈಡೇರಿಸುವ ಭರವಸೆ ನೀಡಿದರೂ ಸಹ ಪ್ರತಿಭಟನಾಕಾರರು ಒಪ್ಪದೇ ನಾಡಕಚೇರಿ ಮುಂದೆ ಕಸ ಸುರಿಯುವ ಪ್ರಯತ್ನಕ್ಕೆ ಮುಂದಾದರು. ​ ಪ್ರತಿಭಟನೆ ಹಾದಿ ಮತ್ತು ಪೊಲೀಸ್ ಸರ್ಪಗಾವಲು :  ​ಪ್ರತಿಭಟನಾಕಾರರು ಟ್ರ್ಯಾಕ್ಟರ್‌ನಲ್ಲಿ ಕಸ ತುಂಬಿಕೊಂಡು ಮೊದಲು ದ...