ವಿಷಯಕ್ಕೆ ಹೋಗಿ

ಹುಳಿಯಾರಿನಲ್ಲಿ ಕೊಬ್ಬರಿ ಬೆಲೆಗಾಗಿ ರೈತರಿಂದ ರಸ್ತೆ ತಡೆ

ಸರ್ಕಾರದ ವಿರುದ್ಧ ಕಿಡಿಕಾರಿದ ಪ್ರತಿಭಟನಕಾರರು : ನಿರ್ಲಕ್ಷ್ಯದ ವಿರುದ್ಧ ಸಿಡಿದೆದ್ದ ರೈತರು
------------------------------------
ಹುಳಿಯಾರು: ಕೊಬ್ಬರಿಗೆ ಬೆಂಬಲ ಬೆಲೆ ನೀಡಲು ಆಗ್ರಹಿಸಿ ಹುಳಿಯಾರು ಎಪಿಎಂಸಿ ಎದುರು ಕಳೆದ ೧೦ ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿಗೆ ಸರ್ಕಾರವೂ ಸೇರಿದಂತೆ ಜನಪ್ರತಿನಿಧಿಗಳು ಗಮನಹರಿಸದಿದ್ದು ರೈತರ ಶಾಂತಿಯುತ ಧರಣಿ ಮತ್ತೊಂದು ಮಜಲು ತಲುಪಲು ಕಾರಣವಾಗಿ ಸಿಡಿದೆದ್ದ ರೈತರು ಸೋಮವಾರ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

            ಎಪಿಎಂಸಿ ಧರಣಿ ಸ್ಥಳದಿಂದ ರಾಷ್ಟ್ರೀಯ ಹೆದ್ದಾರಿಯವರೆವಿಗೂ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತರು ಹೆದ್ದಾರಿಯಲ್ಲಿ ವಾಹನಗಳಿಗೆ ಅಡ್ಡಲಾಗಿ ನಿಂತು ದ್ವಿಚಕ್ರ ವಾಹನಗಳೂ ಸೇರಿದಂತೆ ಯಾವುದೇ ವಾಹನಗಳನ್ನು ಬಿಡದೆ ರಸ್ತೆ ನಡೆಸಿದರು.ರಸ್ತೆ ತಡೆ ಬಗ್ಗೆ ಮುಂಚಿತವಾಗಿಯೇ ತಿಳಿಸಿದ್ದರಿಂದ ಪಿಎಸ್‌ಐ ಪ್ರವೀಣ್ ಕುಮಾರ್ ಅವನ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.
              ರಾಜ್ಯ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್ ಅವರು ಈ ಸಂದರ್ಭದಲ್ಲಿ ಮಾತನಾಡಿ ಪಾದಯಾತ್ರೆ, ಬೈಕ್ ರ್ಯಾಲಿ, ಅಹೋರಾತ್ರಿ ಧರಣಿ ಸೇರಿದಂತೆ ಕಳೆದ ೩ ತಿಂಗಳಿಂದ ಕೊಬ್ಬರಿ ಬೆಲೆಗಾಗಿ ಪ್ರತಿಭಟನೆ ಮಾಡಲಾಗುತ್ತಿದ್ದರೂ ಜನಪ್ರತಿನಿಧಿಗಳು ಕಿವಿಗೊಡದೆ ನಿರ್ಲಕ್ಷ್ಯ ವಹಿಸಿದ್ದಾರೆ. ಇಂದಿನಿಂದ ಪ್ರಾರಂಭವಾಗುತ್ತಿರುವ ಬೆಳಗಾವಿ ಅಧಿವೇಶನದಲ್ಲಿ ಶಾಸಕರ ಊಟೋಪಚಾರ, ಭತ್ಯೆಗಾಗಿಯೇ ಕೋಟಿಗಟ್ಟಲೆ ಖರ್ಚು ಮಾಡುವ ಸರ್ಕಾರ ಐದಾರು ಕೋಟಿ ಮೀಸಲಿಟ್ಟು ಕೊಬ್ಬರಿಗೆ ಉತ್ತಮ ಬೆಲೆ ಕೊಟ್ಟು ಖರೀದಿಗೆ ಮುಂದಾಗದಿರುವುದು ದುರಂತ ಎಂದು ಆರೋಪಿಸಿದರರು. ಕೊಬ್ಬರಿ ಬೆಳೆಗಾರರ ಗೋಳು ಕೇಳದ ಎಲ್ಲ ಶಾಸಕರು ಹಾಗೂ ಸಂಸದರು ನಮ್ಮ ಪಾಲಿಗೆ ಸತ್ತಿದ್ದು ರೈತರು ಇವರಿಗೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆ ಕರೆ ನೀಡಿದರು.

            ರೈತ ಸಂಘದ ಉಪಾಧ್ಯಕ್ಷ ತಮ್ಮಡಿಹಳ್ಳಿ ಮಲ್ಲಿಕಾರ್ಜುನ್ ಮಾತನಾಡಿ ಕಳೆದ ೧೦ ದಿನಗಳಿಂದ ಮನೆಮಠ ಬಿಟ್ಟು ಅಹೋರಾತ್ರಿ ಧರಣಿ ನಡೆಸುತ್ತಿದ್ದರೂ ಜಿಲ್ಲಾಧಿಕಾರಿಗಳಾಗಲಿ, ತಹಸೀಲ್ದಾರ್ ಅವರಾಗಲಿ ಧರಣಿ ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಆಲಿಸುತ್ತಿಲ್ಲ. ಇನ್ನು ಶಾಸಕ ಸಿ.ಬಿ.ಸುರೇಶ್‌ಬಾಬು ಕ್ಷೇತ್ರದಲ್ಲಿದ್ದರೂ ಧರಣಿ ಕಡೆ ತಿರುಗಿ ನೋಡಿಲ್ಲ. ಮುಖ್ಯಮಂತ್ರಿಗಳು ತಾಲೂಕಿಗೆ ಬಂದರಾದರೂ ಕೊಬ್ಬರಿ ಬೆಳೆಗಾರನ ಕಷ್ಟಕ್ಕೆ ಸ್ಪಂದಿಸದೆ ಅವರು ಇಲ್ಲಿ ಇರುವಷ್ಟು ಕಾಲ ರೈತರನ್ನು ಬಂಧಿಸಿದ್ದು ನಾಚಿಕೆ ಪ್ರಚಾರಕ್ಕೆನ್ನುವಂತೆ ಬರ ವೀಕ್ಷಣೆ ಮಾಡಿ ಹೋದರು. ಇನ್ನು ಪ್ರಧಾನಿ ಮೋದಿ ಅವರಿಗೆ ವಿದೇಶಿ ಪ್ರವಾಸ ಹುಚ್ಚು ಹಿಡಿದಿದ್ದು ದೇಶದ ರೈತನನ್ನು ಸಂಪೂರ್ಣ ಮರೆತಿದ್ದಾರೆ. ಒಟ್ಟಾರೆ ಎಲ್ಲರೂ ರೈತನ ಬದುಕಿನಲ್ಲಿ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.
              ಜಿಲ್ಲಾ ರೈತ ಸಂಘದ ಅಧ್ಯಕ್ಷ ಶಂಕರಪ್ಪ ಅವರು ಮಾತನಾಡಿ ಮಳೆಬೆಳೆಯಿಲ್ಲದೆ ಬರಗಾರದಲ್ಲಿ ತೆಂಗು ರೈತನ ಆಸರೆಯಾಗಿದೆ. ಆದರೆ ಕೊಬ್ಬರಿ ಬೆಲೆ ಪಾತಾಳ ಸೇರಿದ್ದು ಬೆಳೆಯಿದ್ದರೂ ರೈತನ ಬದುಕು ಹಸನಾಗುತ್ತಿಲ್ಲ. ಈ ಸಂದರ್ಭದಲ್ಲಿ ಸರ್ಕಾರಗಳು ರೈತನಿಗೆ ಆಸರೆಯಾಗಬೇಕಿತ್ತು. ಆದರೂ ಜಾಣ ಕಿವುಡು, ಜಾಣ ಕುರುಡುತನ ಪ್ರದರ್ಶಿಸುತ್ತಿವೆ. ಜಿಲ್ಲಾ ಉಸ್ತುವಾರಿ ಸಚಿವ ಜಯಚಂದ್ರರವರು ಕೊಬ್ಬರಿ ಬೆಂಬಲ ಬೆಲೆಯೊಂದಿಗೆ ರಾಜ್ಯದ ಪಾಲಾಗಿ ೨೦೦೦ರೂ ಹೆಚ್ಚುವರಿ ಸಹಾಯಧನ ಘೋಷಿಸಲು ಸರ್ಕಾರ ಸಿದ್ದವಿದ್ದು ಕೇಂದ್ರ ಸರ್ಕರ ತನ್ನ ಪಾಲು ಘೋಷಿಸಲಿ ಎನ್ನುತ್ತಾ ದಿನ ದೂಡುತ್ತಿದ್ದಾರೆ. ನಿಜವಾಗಲೂ ಇವರಿಗೆ ರೈತನ ಮೇಲೆ ಕಾಳಜಿ ಇದ್ದರೆ ರಾಜ್ಯ ಸರ್ಕಾರದ ಹಣ ಘೋಷಿಸಿ ನ್ಯಾಫೆಡ್ ಖರೀದಿ ಕೇಂದ್ರ ಆರಂಭಿಸಲಿ. ಆಗಲೂ ಕೇಂದ್ರ ಮೌನ ತಾಳಿದ್ದರೆ ರಾಜ್ಯದ ಜನ ಕೇಂದ್ರದ ಮೇಲೆ ತಿರುಗಿ ಬೀಳುತ್ತಾರೆ ಎಂದು ಸಲಹೆ ನೀಡಿದರು.


           ಈ ಸಂದರ್ಭದಲ್ಲಿ ತಿಪಟೂರು ತಾಲೂಕು ರೈತ ಸಂಘದ ಅಧ್ಯಕ್ಷ ದೇವರಾಜು,ಚಿಕ್ಕನಾಯಕನಹಳ್ಳಿ ತಾಲ್ಲೂಕು ರೈತ ಸಂಘದ ಅಧ್ಯಕ್ಷ ತಿಮ್ಮನಹಳ್ಳಿ ಲೋಕೇಶ್,ತಿಪಟೂರು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಯೋಗಣ್ಣ, ಶಿರಾ ಅಧ್ಯಕ್ಷ ಆರಾಧ್ಯ, ಹೊಸದುರ್ಗ ಅಧ್ಯಕ್ಷ ಲಿಂಗರಾಜು, ಬುಕ್ಕಾಪಟ್ಟಣ ಬಯಲಪ್ಪ, ಕಾಡಿನರಾಜ ನಾಗರಾಜು, ಹಿರಿಯ ಮುಖಂಡ ಗಂಗಣ್ಣ, ಶಿವಣ್ಣ, ದಾಸಪ್ಪ, ಶಂಕರಪ್ಪ, ಹೂನ್ನಪ್ಪ, ಮೈಲಾರಪ್ಪ ಇತರರು ಹಾಜರಿದ್ದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಸಂಕಷ್ಟದಲ್ಲಿದ್ದ ಬುದ್ಧಿಮಾನ್ಯ ಯುವಕನಿಗೆ ಇಮ್ರಾಜ್ ಬಳಗದಿಂದ ಆಸರೆ; ಮಾನವೀಯತೆ ಮೆರೆದ ಯುವಕರು

ಹುಳಿಯಾರು : " ಮಾನವೀಯತೆ ಎಲ್ಲಕ್ಕಿಂತ ದೊಡ್ಡದು " ಎಂಬ ಮಾತನ್ನು ಹುಳಿಯಾರಿನ ಯುವಕರ ತಂಡವೊಂದು ನಿಜ ಮಾಡಿ ತೋರಿಸಿದೆ.               ಇಲ್ಲಿನ ಎಪಿಎಂಸಿ ಆವರಣದಲ್ಲಿ ದಿಕ್ಕುತೋಚದೆ, ಅಸಹಾಯಕ ಸ್ಥಿತಿಯಲ್ಲಿದ್ದ ಬುದ್ಧಿಮಾನ್ಯ ಯುವಕನೊಬ್ಬನಿಗೆ ಆಸರೆಯಾಗುವ ಮೂಲಕ ಸ್ಥಳೀಯ ಯುವಕರು ಸಮಾಜಕ್ಕೆ ಮಾದರಿ ಸಂದೇಶ ನೀಡಿದ್ದಾರೆ. ಘಟನೆಯ ಹಿನ್ನೆಲೆ :ಹುಳಿಯಾರಿನ ಎಪಿಎಂಸಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬುದ್ಧಿಮಾನ್ಯ ಯುವಕನೊಬ್ಬ ಒಂಟಿಯಾಗಿ ಅಲೆಯುತ್ತಿದ್ದನು. ಸರಿಯಾದ ಆಹಾರ, ನೀರು ಮತ್ತು ಆಶ್ರಯವಿಲ್ಲದೆ ಆತ ತೀವ್ರ ಸಂಕಷ್ಟದಲ್ಲಿದ್ದನು. ಇದನ್ನು ಗಮನಿಸಿದ ಸ್ಥಳೀಯ ಯುವಕ ಇಮ್ರಾಜ್ ಮತ್ತು ಅವರ ಸ್ನೇಹಿತರ ಬಳಗವು ತಕ್ಷಣವೇ ಆತನ ನೆರವಿಗೆ ಧಾವಿಸಿತು. ಸಕಾಲಿಕ ಸ್ಪಂದನೆ :ಯುವಕನ ಸ್ಥಿತಿಯನ್ನು ಕಂಡು ಮನನೊಂದ ಸ್ನೇಹಿತರಾದ ಇಮ್ರಾಜ್, ಜಬಿ ಉಲ್ಲಾಖಾನ್ ಫರ್ಮಾನ್, ಅಬ್ದುಲ್ಲಾ, ನವಾ ಶರೀಫ್, ಜಿಶನ್ ಹಾಗೂ ಫಯಾಜ್ ಅವರು ಮೊದಲು ಆತನಿಗೆ ಆಹಾರದ ವ್ಯವಸ್ಥೆ ಮಾಡಿದರು. ನಂತರ ಆತನ ಸುರಕ್ಷತೆಗಾಗಿ ಕ್ರಮ ಕೈಗೊಂಡರು. ಇಲಾಖೆಯ ಸುಪರ್ದಿಗೆ: ಯುವಕರ ಮನವಿಗೆ ಸ್ಪಂದಿಸಿದ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಧಿಕಾರಿಗಳು, "ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರದಿಂದ ನಾವು ಇಲ್ಲಿಗೆ ಬಂದಿದ್ದು, ...