ವಿಷಯಕ್ಕೆ ಹೋಗಿ

ಉಪವಾಸನಿರತರಲ್ಲಿ ನಾಲ್ಕು ಮಂದಿ ಆಸ್ಪತ್ರೆಗೆ ದಾಖಲು

ಕೆಂಕೆರೆಸತೀಶ್ ರಿಂದ ಮುಂದುವರಿದ ಉಪವಾಸ ಸತ್ಯಾಗ್ರಹ
ಉಳಿದ ರೈತರಿಂದ ಮುಂದುವರಿದ ಧರಣಿ
---------------------------
ಹುಳಿಯಾರು: ಕೊಬ್ಬರಿಗೆ ಬೆಂಬಲ ಬೆಲೆಗೆ ಒತ್ತಾಯಿಸಿ ಹುಳಿಯಾರಿನಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಉಪವಾಸ ಸತ್ಯಾಗ್ರಹ ಹೂಡಿದ್ದ ಐವರು ರೈತರ ಪೈಕಿ ನಾಲ್ಕು ಮಂದಿ ಅಸ್ವಸ್ಥರಾಗಿದ್ದು ಧರಣಿ ಸ್ಥಳಕ್ಕೆ ಆಗಮಿಸಿದ್ದ ಉಪವಿಭಾಗಾಧಿಕಾರಿ ಪ್ರಜ್ಞಾಅಮ್ಮೆಂಬಳ್ ಹಾಗೂ ತಹಸೀಲ್ದಾರ್ ಗಂಗೇಶ್ ಅವರುಗಳ ಆರೋಗ್ಯ ತಪಾಸಣೆ ನಡೆಸಿ ಬಲವಂತವಾಗಿ ಎಳನೀರು ಕುಡಿಸಿ ಉಪವಾಸ ಕೈ ಬಿಡಿಸಿ ಚಿಕ್ಕನಾಯಕನಹಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿ ಚಿಕಿತ್ಸೆ ಕೊಡಿಸಿದ್ದಾರೆ.

            ರಾಜ್ಯ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್, ತಾಲೂಕು ರೈತ ಸಂಘದ ಅಧ್ಯಕ್ಷ ತಿಮ್ಮನಹಳ್ಳಿ ಲೋಕೇಶ್, ಉಪಾದ್ಯಕ್ಷ ಮಲ್ಲಿಕಾರ್ಜುನಯ್ಯ, ಹಿರಿಯ ರೈತ ಮುಖಂಡ ಸೂರಗೊಂಡನಹಳ್ಳಿ ಗಂಗಜ್ಜ,ಕೆಂಕೆರೆ ಗ್ರಾಪಂ ಸದಸ್ಯರಾದ ಕಾಡಿನರಾಜ ನಾಗರಾಜು ಅವರುಗಳೇ ಉಪವಾಸ ಸತ್ಯಗ್ರಹ ಹೂಡೀದವರಾಗಿದ್ದು ಸೋಮವಾರದಿಂದ ಹನಿ ನೀರು ಸಹ ಸೇವಿಸದೆ ಉಪವಾಸ ನಿರಶನ ನಡೆಸಿದ್ದರು.

          ಇವರಲ್ಲಿ ಗ್ರಾಪಂ ಸದಸ್ಯಕಾಡಿನರಾಜ ನಾಗರಾಜು ಹಾಗೂ ಗಂಗಣ್ಣ ಅವರುಗಳು ಮಂಗಳವಾರ ೧೧ ಗಂಟೆಯಷ್ಟರಲ್ಲಿ ಶುಗರ್ ಹಾಗೂ ಬಿಪಿ ಕಡಿಮೆಯಾಗಿ ಅಸ್ವಸ್ಥಗೊಂಡರು. ತಕ್ಷಣ ಆರೋಗ್ಯ ಇಲಾಖೆಯ ಸಿಬ್ಬಂಧಿಗಳು ಸ್ಥಳಕ್ಕೆ ದೌಡಾಯಿಸಿ ಆರೋಗ್ಯ ತಪಾಸಣೆ ನಡೆಸಿದರು. ಆಗಲೂ ಸಹ ನ್ಯಾಫೆಡ್ ಕೇಂದ್ರ ಆರಂಭಿಸದ ವಿನಃ ಒಂದು ಹನಿ ನೀರು ಕುಡಿಯುವುದಿಲ್ಲ ಎಂದು ಪಟ್ಟು ಹಿಡಿದರು. ೩ ತಿಂಗಳಿಂದ ಹೋರಾಟ ಮಾಡುತ್ತಿದ್ದರೂ ಕಿವಿ ಕೊಡದ ಸರ್ಕಾರಕ್ಕೆ ನಮ್ಮ ಸಾವಿನಿಂದಲಾದರೂ ಬುದ್ದಿ ಬಂದು ಕೊಬ್ಬರಿಗೆ ೧೦ ಸಾವಿರ ರೂ. ಬೆಂಬಲ ಬೆಲೆ ಕೊಟ್ಟರೆ ಅದಕ್ಕಿಂತ ಪುಣ್ಯ ಮತ್ಯಾವುದಿದೆ ಎಂದು ಪಟ್ಟು ಹಿಡಿದರು.
            ಎಪಿಎಂಸಿ ಉಪ ನಿರ್ದೆಶಕ ಡಾ.ರಾಜಣ್ಣ ಸ್ಥಳಕ್ಕೆ ಆಗಮಿಸಿ ನ್ಯಾಫೆಡ್ ಆರಂಭಿಸಲು ಕೇಂದ್ರ ಸರ್ಕಾರ ಹಸಿರು ನಿಶಾನೆ ನೀಡಿದ್ದು ಬುಧವಾರದಿಂದ ಖರೀದಿ ಕೇಂದ್ರ ಆರಂಭಿಸುವುದಾಗಿ ಹೇಳಿದ್ದರಿಂದ ಪಟ್ಟುಸಡಿಲಿಸಿದ ಅವರಿಗೆ ಡಾ.ಶೋಭ ಜ್ಯೂಸ್ ಕುಡಿಸಿ ಗ್ಲೂಕೋಸ್ ಬಾಟಲ್ ಹಾಕಿದರು.
           ಸಂಜೆಯಾಗುವಷ್ಟರಲ್ಲಿ ತಿಮ್ಮನಹಳ್ಳಿ ಲೋಕೇಶ್, ತಮ್ಮಡಿಹಳ್ಳಿ ಮಲ್ಲಿಕಾರ್ಜುನ್ ಅವರ ಆರೋಗ್ಯದಲ್ಲೂ ಸಹ ಏರುಪೇರಾಯಿತು. ಸ್ಥಳಕ್ಕಾಗಮಿಸಿದ ಉಪವಿಭಾಗಾಧಿಕಾರಿ ಪ್ರಜ್ಞಾ ಅಮ್ಮೆಂಬಳ್ ಅವರು ತಕ್ಷಣ ವೈದ್ಯರನ್ನು ಕರೆಸಿ ಆರೋಗ್ಯ ತಪಾಸಣೆ ಮಾಡಿಸಿದರು. ನಾಲ್ವರೂ ಸಹ ಉಪವಾಸ ಮುಂದುವರಿಸಿದರೆ ಮತ್ತೊಷ್ಟು ಆರೋಗ ಹದಗೆಡುವ ವಿಷಯ ತಿಳಿದು ತಕ್ಷಣ ಎಳನೀರು ತರಿಸಿ ಕೆಂಕೆರೆ ಸತೀಶ್ ಅವರನ್ನು ಬಿಟ್ಟು ಉಳಿದವರ ಮನವೊಲಿಸಿ ಕುಡಿಸಿ ಉಪವಾಸ ಕೈ ಬಿಡಿಸುವಲ್ಲಿ ಯಶಸ್ವಿಯಾದರು.

             ನಂತರ ಸತೀಶ್ ಅವರಿಗೂ ಸಹ ಉಪವಾಸ ಕೈ ಬಿಟ್ಟು ಅಹೋರಾತ್ರಿ ಧರಣಿ ಮುಂದುವರೆಸಲು ಪರಿಪರಿಯಾಗಿ ಕೇಳಿಕೊಳ್ಳಲಾಯಿತು. ಮುಖಂಡರೆ ಆರೋಗ್ಯ ಹಾಳುಮಾಡಿಕೊಂಡರೆ ಹೋರಾಟ ಕಟ್ಟುವವರಾರು. ನೀವು ಆರೋಗ್ಯದಿಂದಿದ್ದರೆ ಇಂತಹ ನೂರಾರು ಹೋರಾಟ ಮಾಡಬಹುದು ಎಂದು ಅನೇಕ ಸಲಹೆ ನೀಡಿದರಾದರೂ ನ್ಯಾಯ ಸಿಗುವವರೆವಿಗೂ ಅನ್ನನೀರು ಸೇವಿಸುವುದಿಲ್ಲ ಎಂದು ಸತೀಶ್ ಪಟ್ಟು ಹಿಡಿದರು.             
ಸಧ್ಯಕ್ಕೆ ಕೆಂಕೆರೆ ಸತೀಶ್ ಮಾತ್ರ ಉಪವಾಸ ನಿರಶನವನ್ನು ಏಕಾಂಗಿಯಾಗಿ ಮಂದುವರಿಸಿದ್ದು ನೂರಾರು ರೈತರು ಅವರಿಗೆ ಸಾಥ್ ನೀಡಿದ್ದಾರೆ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.